ETV Bharat / state

ಅತ್ಯಾಚಾರ ಪ್ರಕರಣ: ಅಪ್ರಾಪ್ತೆ ಪ್ರಾಪ್ತರಾಗ್ತಿದ್ದಂತೆ ಮದುವೆಯಾಗುವೆ ಎಂದ ಆರೋಪಿಗೆ ಜಾಮೀನು ​

author img

By

Published : Oct 28, 2022, 7:56 PM IST

ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಪ್ರಾಪ್ತರಾಗುತ್ತಿದ್ದಂತೆ ಮದುವೆಯಾಗುವುದಾಗಿ ಆರೋಪಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆ ಪ್ರಾಪ್ತರಾಗುತ್ತಿದ್ದಂತೆ ವಿವಾಹವಾಗುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಆರೋಪಿಯೊಬ್ಬನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ರಾಮನಗರದ 22 ವರ್ಷದ ಯುವಕ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರಿದ್ದ ನ್ಯಾಯಪೀಠ, ಜಾಮೀನು ನೀಡಿತು. ಅಲ್ಲದೆ, ಸಂತ್ರಸ್ತೆ ಪ್ರಾಪ್ತ ವಯಸ್ಸಿಗೆ ಬಂದ ತಕ್ಷಣ ಆರೋಪಿಯು ಸಂತ್ರಸ್ತೆಯನ್ನು ವಿವಾಹವಾಗಬೇಕು. ವಿವಾಹ ನೋಂದಣಿ ಮಾಡಿಸಿ, ನೋಂದಣಿ ದಾಖಲೆಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂಬ ಷರತ್ತನ್ನು ಕೋರ್ಟ್ ವಿಧಿಸಿದೆ.

ಆರೋಪಿಯ ಜೊತೆ ಸಂಬಂಧ ಹೊಂದಿರುವುದಾಗಿ ಸಂತ್ರಸ್ತೆಯು ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ. ಆಕೆ ಅಪ್ರಾಪ್ತೆಯಾಗಿದ್ದು, ಸ್ವಇಚ್ಛೆಯಿಂದ ದೈಹಿಕ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ, ದೈಹಿಕ ಸಂಬಂಧದ ಕುರಿತು ಅಪ್ರಾಪ್ತೆಯ ಹೇಳಿಕೆಯು ಅಪ್ರಸ್ತುತ. 17 ವರ್ಷದ ಆಕೆಗೆ ಯಾವುದು ಸರಿ ಮತ್ತು ತಪ್ಪು ಎಂಬುದನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವಿದೆ. ಸಂತ್ರಸ್ತೆಯು ಪ್ರಾಪ್ತ ವಯಸ್ಸಿಗೆ ಬಂದ ತಕ್ಷಣ ಮದುವೆಯಾಗುವುದಾಗಿ ಆರೋಪಿ ಹೇಳಿದ್ದಾನೆ ಎಂಬುದನ್ನು ಪೀಠವು ಆದೇಶದಲ್ಲಿ ದಾಖಲಿಸಿದೆ.

ಪ್ರಾಸಿಕ್ಯೂಷನ್​ ಪರ ವಕೀಲರು ವಾದ ಮಂಡಿಸಿ, ಆರೋಪಿಯು ಸಂತ್ರಸ್ತೆಯನ್ನು ವಿವಾಹವಾಗಬೇಕು ಎಂಬ ಷರತ್ತು ವಿಧಿಸಬೇಕು ಎಂದು ಮನವಿ ಮಾಡಿದರು.

ಪ್ರಕರಣದ ಹಿನ್ನೆಲೆ ಏನು?: ಆರೋಪಿ ಮತ್ತು ಸಂತ್ರಸ್ತೆ ಸಂಬಂಧಿಕರಾಗಿದ್ದು, ಇಬ್ಬರ ನಡುವೆ ಸ್ನೇಹ ಬೆಳೆದು ಪ್ರೇಮಕ್ಕೆ ತಿರುಗಿತ್ತು. ಈ ನಡುವೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಸಂತ್ರಸ್ತೆಯನ್ನು ಆರೋಪಿ ತನ್ನ ಮನೆಗೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ಬೆಳೆಸಿದ್ದನು. ಘಟನೆ ನಡೆದ ಕೆಲ ದಿನಗಳ ಬಳಿಕ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡು ಪರೀಕ್ಷೆಗೆ ಒಳಪಡಿಸಿದಾಗ ಗರ್ಭಿಣಿಯಾಗಿರುವ ಅಂಶ ಬೆಳಕಿಗೆ ಬಂದಿತ್ತು.

ತಕ್ಷಣ ಸಂತ್ರಸ್ತೆಯ ಪೋಷಕರು ರಾಮನಗರದ ಮಹಿಳಾ ಪೊಲೀಸ್ ​ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದನು.

ಇದನ್ನೂ ಓದಿ: ಮೃತ ಮಗನ ಪಾಲಿನ ಆಸ್ತಿಯಲ್ಲಿ ವಿಧವೆ ತಾಯಿಗೂ ಪಾಲು ನೀಡಬೇಕು: ಹೈಕೋರ್ಟ್

ಬೆಂಗಳೂರು: ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆ ಪ್ರಾಪ್ತರಾಗುತ್ತಿದ್ದಂತೆ ವಿವಾಹವಾಗುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಆರೋಪಿಯೊಬ್ಬನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ರಾಮನಗರದ 22 ವರ್ಷದ ಯುವಕ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರಿದ್ದ ನ್ಯಾಯಪೀಠ, ಜಾಮೀನು ನೀಡಿತು. ಅಲ್ಲದೆ, ಸಂತ್ರಸ್ತೆ ಪ್ರಾಪ್ತ ವಯಸ್ಸಿಗೆ ಬಂದ ತಕ್ಷಣ ಆರೋಪಿಯು ಸಂತ್ರಸ್ತೆಯನ್ನು ವಿವಾಹವಾಗಬೇಕು. ವಿವಾಹ ನೋಂದಣಿ ಮಾಡಿಸಿ, ನೋಂದಣಿ ದಾಖಲೆಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂಬ ಷರತ್ತನ್ನು ಕೋರ್ಟ್ ವಿಧಿಸಿದೆ.

ಆರೋಪಿಯ ಜೊತೆ ಸಂಬಂಧ ಹೊಂದಿರುವುದಾಗಿ ಸಂತ್ರಸ್ತೆಯು ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ. ಆಕೆ ಅಪ್ರಾಪ್ತೆಯಾಗಿದ್ದು, ಸ್ವಇಚ್ಛೆಯಿಂದ ದೈಹಿಕ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ, ದೈಹಿಕ ಸಂಬಂಧದ ಕುರಿತು ಅಪ್ರಾಪ್ತೆಯ ಹೇಳಿಕೆಯು ಅಪ್ರಸ್ತುತ. 17 ವರ್ಷದ ಆಕೆಗೆ ಯಾವುದು ಸರಿ ಮತ್ತು ತಪ್ಪು ಎಂಬುದನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವಿದೆ. ಸಂತ್ರಸ್ತೆಯು ಪ್ರಾಪ್ತ ವಯಸ್ಸಿಗೆ ಬಂದ ತಕ್ಷಣ ಮದುವೆಯಾಗುವುದಾಗಿ ಆರೋಪಿ ಹೇಳಿದ್ದಾನೆ ಎಂಬುದನ್ನು ಪೀಠವು ಆದೇಶದಲ್ಲಿ ದಾಖಲಿಸಿದೆ.

ಪ್ರಾಸಿಕ್ಯೂಷನ್​ ಪರ ವಕೀಲರು ವಾದ ಮಂಡಿಸಿ, ಆರೋಪಿಯು ಸಂತ್ರಸ್ತೆಯನ್ನು ವಿವಾಹವಾಗಬೇಕು ಎಂಬ ಷರತ್ತು ವಿಧಿಸಬೇಕು ಎಂದು ಮನವಿ ಮಾಡಿದರು.

ಪ್ರಕರಣದ ಹಿನ್ನೆಲೆ ಏನು?: ಆರೋಪಿ ಮತ್ತು ಸಂತ್ರಸ್ತೆ ಸಂಬಂಧಿಕರಾಗಿದ್ದು, ಇಬ್ಬರ ನಡುವೆ ಸ್ನೇಹ ಬೆಳೆದು ಪ್ರೇಮಕ್ಕೆ ತಿರುಗಿತ್ತು. ಈ ನಡುವೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಸಂತ್ರಸ್ತೆಯನ್ನು ಆರೋಪಿ ತನ್ನ ಮನೆಗೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ಬೆಳೆಸಿದ್ದನು. ಘಟನೆ ನಡೆದ ಕೆಲ ದಿನಗಳ ಬಳಿಕ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡು ಪರೀಕ್ಷೆಗೆ ಒಳಪಡಿಸಿದಾಗ ಗರ್ಭಿಣಿಯಾಗಿರುವ ಅಂಶ ಬೆಳಕಿಗೆ ಬಂದಿತ್ತು.

ತಕ್ಷಣ ಸಂತ್ರಸ್ತೆಯ ಪೋಷಕರು ರಾಮನಗರದ ಮಹಿಳಾ ಪೊಲೀಸ್ ​ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದನು.

ಇದನ್ನೂ ಓದಿ: ಮೃತ ಮಗನ ಪಾಲಿನ ಆಸ್ತಿಯಲ್ಲಿ ವಿಧವೆ ತಾಯಿಗೂ ಪಾಲು ನೀಡಬೇಕು: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.