ETV Bharat / state

ವಿವಾದಿತ ನಿವೇಶನದಲ್ಲಿ ಪೊಲೀಸ್ ಠಾಣೆ ನಿರ್ಮಿಸದಂತೆ ಹೈಕೋರ್ಟ್ ಸೂಚನೆ

author img

By

Published : Feb 12, 2020, 4:15 AM IST

ವಿವಾದಿತ ನಿವೇಶನದಲ್ಲಿ ಗಿರಿನಗರ ಪೊಲೀಸ್ ಠಾಣೆ ನಿರ್ಮಾಣ ಮಾಡದಂತೆ ಹಾಗೂ ಆ ಪ್ರದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಸೂಚಿಸಿದೆ.

high-court
high-court

ಬೆಂಗಳೂರು: ವಿವಾದಿತ ನಿವೇಶನದಲ್ಲಿ ಗಿರಿನಗರ ಪೊಲೀಸ್ ಠಾಣೆ ನಿರ್ಮಾಣ ಮಾಡದಂತೆ ಹಾಗೂ ಆ ಪ್ರದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಮಂಗಳವಾರ ಸೂಚಿಸಿದೆ.

ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘವು ಉಚಿತವಾಗಿ ನೀಡಿರುವ ನಿವೇಶನದಲ್ಲಿ ಪೊಲೀಸ್ ಠಾಣೆ ನಿರ್ಮಿಸಲು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸುವಂತೆ ಕೋರಿ ಹನುಮಂತನಗರ ನಿವಾಸಿ ಜಿ.ಆರ್.ಅನಿಲ್ ಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿ ಸಂಬಂಧ ಕೆಲಕಾಲ ವಾದ ಪ್ರತಿವಾದ ಆಲಿಸಿದ ಪೀಠ, ವಿವಾದಿತ ಜಾಗವು ನಗರ ಪೊಲೀಸ್ ಆಯುಕ್ತರ ವಶದಲ್ಲಿಯೇ ಇದ್ದು, ಅದರ ಸುತ್ತ ತಂತಿಬೇಲಿ ಅಳವಡಿಸಲಾಗಿದೆ. ಆದ್ದರಿಂದ ನ್ಯಾಯಾಲಯದ ಮುಂದಿನ ಆದೇಶದವರೆಗೆ ಯಾವುದೇ ಕಾಮಗಾರಿ ಕೈಗೊಳ್ಳಬಾರದು. ಅದೇ ರೀತಿ ನಿವೇಶವನ್ನು ಯಥಾಸ್ಥಿತಿ ಸಂರಕ್ಷಣೆ ಮಾಡಬೇಕು ಎಂದು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತು.

ಅರ್ಜಿದಾರರ ಬೇಡಿಕೆ:

ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘವು 1994ರ ಜೂನ್ 18ರಂದು 60x120 ವಿಸ್ತೀರ್ಣದ ನಿವೇಶನದ ಎರಡು ನಿವೇಶನಗಳನ್ನು ಗಿರಿನಗರದಲ್ಲಿ ಪೊಲೀಸ್ ಠಾಣೆ ನಿರ್ಮಿಸಲು ನಗರ ಪೊಲೀಸ್ ಆಯುಕ್ತರಿಗೆ ದಾನ ನೀಡಿತ್ತು. ಆದರೆ, ಆ ಸ್ಥಳದಲ್ಲಿ ಈವರೆಗೆ ಪೊಲೀಸ್ ಠಾಣೆ ನಿರ್ಮಿಸಿಲ್ಲ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಜಾಗ ಕಬಳಿಸುವ ಸಾಧ್ಯತೆಯಿದ್ದು ಪೊಲೀಸ್ ಠಾಣೆ ನಿರ್ಮಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿದ್ದಾರೆ.

ಅದರಂತೆ, ವಿವಾದಿತ ನಿವೇಶನದಲ್ಲಿ ಗಿರಿನಗರ ಪೊಲೀಸ್ ಠಾಣೆ ನಿರ್ಮಾಣ ಮಾಡಲು ಕಳೆದ 2019ರ ಮೇ ತಿಂಗಳಲ್ಲಿ ಭೂಮಿ ಪೂಜೆ ನೆರವೇರಿಸಲಾಗಿತ್ತು. ಆದರೆ, ಸ್ಥಳೀಯ ಶಾಸಕರು ಮತ್ತವರ ಬೆಂಬಲಿಗರು ಕಾಮಗಾರಿಗೆ ಅಡ್ಡಿಪಡಿಸಿದ್ದು, ಜಾಗವನ್ನು ಬೇರಾವುದೇ ಸಾರ್ವಜನಿಕ ಬಳಕೆಗೆ ಮೀಸಲಿರಿಸುವಂತೆ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಾನ ನೀಡಲಾಗಿರುವ ನಿವೇಶನ ವಿವಾದದ ಕೇಂದ್ರವಾಗಿದೆ.

ಬೆಂಗಳೂರು: ವಿವಾದಿತ ನಿವೇಶನದಲ್ಲಿ ಗಿರಿನಗರ ಪೊಲೀಸ್ ಠಾಣೆ ನಿರ್ಮಾಣ ಮಾಡದಂತೆ ಹಾಗೂ ಆ ಪ್ರದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಮಂಗಳವಾರ ಸೂಚಿಸಿದೆ.

ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘವು ಉಚಿತವಾಗಿ ನೀಡಿರುವ ನಿವೇಶನದಲ್ಲಿ ಪೊಲೀಸ್ ಠಾಣೆ ನಿರ್ಮಿಸಲು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸುವಂತೆ ಕೋರಿ ಹನುಮಂತನಗರ ನಿವಾಸಿ ಜಿ.ಆರ್.ಅನಿಲ್ ಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿ ಸಂಬಂಧ ಕೆಲಕಾಲ ವಾದ ಪ್ರತಿವಾದ ಆಲಿಸಿದ ಪೀಠ, ವಿವಾದಿತ ಜಾಗವು ನಗರ ಪೊಲೀಸ್ ಆಯುಕ್ತರ ವಶದಲ್ಲಿಯೇ ಇದ್ದು, ಅದರ ಸುತ್ತ ತಂತಿಬೇಲಿ ಅಳವಡಿಸಲಾಗಿದೆ. ಆದ್ದರಿಂದ ನ್ಯಾಯಾಲಯದ ಮುಂದಿನ ಆದೇಶದವರೆಗೆ ಯಾವುದೇ ಕಾಮಗಾರಿ ಕೈಗೊಳ್ಳಬಾರದು. ಅದೇ ರೀತಿ ನಿವೇಶವನ್ನು ಯಥಾಸ್ಥಿತಿ ಸಂರಕ್ಷಣೆ ಮಾಡಬೇಕು ಎಂದು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತು.

ಅರ್ಜಿದಾರರ ಬೇಡಿಕೆ:

ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘವು 1994ರ ಜೂನ್ 18ರಂದು 60x120 ವಿಸ್ತೀರ್ಣದ ನಿವೇಶನದ ಎರಡು ನಿವೇಶನಗಳನ್ನು ಗಿರಿನಗರದಲ್ಲಿ ಪೊಲೀಸ್ ಠಾಣೆ ನಿರ್ಮಿಸಲು ನಗರ ಪೊಲೀಸ್ ಆಯುಕ್ತರಿಗೆ ದಾನ ನೀಡಿತ್ತು. ಆದರೆ, ಆ ಸ್ಥಳದಲ್ಲಿ ಈವರೆಗೆ ಪೊಲೀಸ್ ಠಾಣೆ ನಿರ್ಮಿಸಿಲ್ಲ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಜಾಗ ಕಬಳಿಸುವ ಸಾಧ್ಯತೆಯಿದ್ದು ಪೊಲೀಸ್ ಠಾಣೆ ನಿರ್ಮಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿದ್ದಾರೆ.

ಅದರಂತೆ, ವಿವಾದಿತ ನಿವೇಶನದಲ್ಲಿ ಗಿರಿನಗರ ಪೊಲೀಸ್ ಠಾಣೆ ನಿರ್ಮಾಣ ಮಾಡಲು ಕಳೆದ 2019ರ ಮೇ ತಿಂಗಳಲ್ಲಿ ಭೂಮಿ ಪೂಜೆ ನೆರವೇರಿಸಲಾಗಿತ್ತು. ಆದರೆ, ಸ್ಥಳೀಯ ಶಾಸಕರು ಮತ್ತವರ ಬೆಂಬಲಿಗರು ಕಾಮಗಾರಿಗೆ ಅಡ್ಡಿಪಡಿಸಿದ್ದು, ಜಾಗವನ್ನು ಬೇರಾವುದೇ ಸಾರ್ವಜನಿಕ ಬಳಕೆಗೆ ಮೀಸಲಿರಿಸುವಂತೆ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಾನ ನೀಡಲಾಗಿರುವ ನಿವೇಶನ ವಿವಾದದ ಕೇಂದ್ರವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.