ETV Bharat / state

ಎಚ್ಎಸ್ಆರ್​ಪಿ ನಂಬರ್ ಪ್ಲೇಟ್​ ಕಡ್ಡಾಯ ಅಳವಡಿಕೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

author img

By ETV Bharat Karnataka Team

Published : Sep 23, 2023, 6:22 AM IST

ರಾಜ್ಯ ಸರ್ಕಾರ 2019ರ ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್​ ನಿರಾಕರಿಸಿದೆ.

high-court-refuses-to-stay-the-mandatory-installation-of-hsrp-number-plates
ಎಚ್ಎಸ್ಆರ್​ಪಿ ನಂಬರ್ ಪ್ಲೇಟ್​ ಕಡ್ಡಾಯ ಅಳವಡಿಕೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

ಬೆಂಗಳೂರು: 2019ರ ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್‌ಎಸ್​ಆರ್‌ಪಿ) ಅಳವಡಿಕೆ ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಅಲ್ಲದೇ, ಎಚ್ಎಸ್ಆರ್​ಪಿ ಉತ್ಪಾದಕರನ್ನು ಅಂತಿಮಗೊಳಿಸಲು ಕಾಲಮಿತಿ ನಿಗದಿ ಪಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ಆದೇಶಿಸಿದೆ. 2019ರ ಏಪ್ರಿಲ್ 1ಕ್ಕಿಂತ ಮುನ್ನ ನೋಂದಣಿ ಆಗಿರುವ ವಾಹನಗಳಿಗೆ ಎಚ್​ಎಸ್​ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ತಡೆ ನೀಡುವಂತೆ ಕೋರಿ ಭಾರತೀಯ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಉತ್ಪಾದಕರ ಒಕ್ಕೂಟ ಸೇರಿ ಕೆಲ ಸಂಸ್ಥೆಗಳು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದವು.

ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ. ಆದರೆ, ವಾಹನ ಉತ್ಪಾದಕರು ಪ್ರತಿಯೊಂದು ಲೈಸೆನ್ಸ್ ಪ್ಲೇಟ್ ಉತ್ಪಾದಕರಿಗೆ ಟೈಪ್ ಅಪ್ರೋವಲ್ ಸರ್ಟಿಫಿಕೇಟ್ (ಟಿಎಸಿ) ಪಡೆದುಕೊಳ್ಳಲು ಅಂತಿಮ ಪ್ರಕ್ರಿಯೆಯನ್ನು ಕೈಗೊಳ್ಳಬಹುದು ಎಂದು ಪೀಠ ತಿಳಿಸಿದೆ. ಜೊತೆಗೆ ರಾಜ್ಯ ಸರ್ಕಾರ ಕಾಲಮಿತಿಯಲ್ಲಿ ಕೇಂದ್ರ ರಸ್ತೆ ಸಂಶೋಧನಾ ಸಂಸ್ಥೆ (ಸಿಆರ್‌ಆರ್‌ಐ) ವಿತರಿಸಿರುವ ಟೈಪ್ ಅಪ್ರೋವಲ್ ಸರ್ಟಿಫಿಕೇಟ್ (ಟಿಎಸಿ) ಹೊಂದಿರುವ ಪರವಾನಗಿ ಪಡೆದ ಪ್ಲೇಟ್ ಉತ್ಪಾದಕರಿಗೆ ಅನುಮೋದನೆ ನೀಡುವ ಬಗ್ಗೆ ಪ್ರಕ್ರಿಯೆ ನಡೆಸಬಹುದು ಎಂದು ಆದೇಶಿಸಿದೆ.

ರಾಜ್ಯ ಸರ್ಕಾರ ಇನ್ನೂ ಯಾವುದೇ ಪರವಾನಗಿ ಹೊಂದಿದ ಪ್ಲೇಟ್ ತಯಾರಕರಿಗೆ ಎಚ್‌ಎಸ್‌ಆರ್‌ಪಿಗಳನ್ನು ಪೂರೈಸಲು ಅನುಮೋದನೆ ನೀಡಿಲ್ಲ. ಅಲ್ಲದೆ, ಅದು ಮೋಟಾರು ವಾಹನ ನಿಯಮ 50(1)(ವಿ)ಯಲ್ಲಿ ವಿವರಿಸುವಂತೆ ವಾಹನ ಉತ್ಪಾದಕರ ಮೂಲಕವೇ ಎಚ್‌ಎಸ್‌ಆರ್‌ಪಿ ಪಡೆಯಬೇಕೆಂಬ ಆದೇಶವನ್ನು ಸಹ ಹೊರಡಿಸಿಲ್ಲ. ಈ ನಿಟ್ಟಿನಲ್ಲಿ ಅನುಕೂಲ ಸಮತೋಲನ ಸಾಧಿಸಲು ಯಾವುದೇ ಪೂರ್ವಾಗ್ರಹಕ್ಕೆ ಒಳಗಾಗದೆ ಎಲ್ಲ ನೋಂದಣಿ ಫಲಕ ಉತ್ಪಾದಕರಿಗೆ ಒಪ್ಪಿಗೆ ನೀಡುವ ಸಂಬಂಧ ಪ್ರಕ್ರಿಯೆ ಪ್ರಕಟಿಸಿಬೇಕು ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ಹಿನ್ನೆಲೆ ಏನು?: ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮುನ್ನ ನೋಂದಣಿಯಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಅಳವಡಿಸಿಕೊಳ್ಳಲು ಸರ್ಕಾರ ಆ.17ರಂದು ಅಸೂಚನೆ ಹೊರಡಿಸಿದೆ. ಕೇಂದ್ರ ಮೋಟಾರು ವಾಹನಗಳ ನಿಯಮಗಳನ್ನು ಮೀರಿ ಅರ್ಜಿದಾರ ಸಂಸ್ಥೆಯನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ. ಕೆಲವು ಪ್ರಭಾವಿ ಸಂಸ್ಥೆಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಅರ್ಜಿದಾರ ಸಂಸ್ಥೆ ಅರ್ಜಿಯಲ್ಲಿ ಆರೋಪಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸರ್ಕಾರ, ಆ ವಾದವನ್ನು ಅಲ್ಲಗಳೆದು ಅಂತಹ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಇದನ್ನೂ ಓದಿ: ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆ.. ತೆರಿಗೆ ವಿಧಿಸಲು ಗ್ರಾಮ ಪಂಚಾಯ್ತಿಗೆ ಅವಕಾಶವಿಲ್ಲ: ಹೈಕೋರ್ಟ್

ಬೆಂಗಳೂರು: 2019ರ ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್‌ಎಸ್​ಆರ್‌ಪಿ) ಅಳವಡಿಕೆ ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಅಲ್ಲದೇ, ಎಚ್ಎಸ್ಆರ್​ಪಿ ಉತ್ಪಾದಕರನ್ನು ಅಂತಿಮಗೊಳಿಸಲು ಕಾಲಮಿತಿ ನಿಗದಿ ಪಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ಆದೇಶಿಸಿದೆ. 2019ರ ಏಪ್ರಿಲ್ 1ಕ್ಕಿಂತ ಮುನ್ನ ನೋಂದಣಿ ಆಗಿರುವ ವಾಹನಗಳಿಗೆ ಎಚ್​ಎಸ್​ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ತಡೆ ನೀಡುವಂತೆ ಕೋರಿ ಭಾರತೀಯ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಉತ್ಪಾದಕರ ಒಕ್ಕೂಟ ಸೇರಿ ಕೆಲ ಸಂಸ್ಥೆಗಳು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದವು.

ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ. ಆದರೆ, ವಾಹನ ಉತ್ಪಾದಕರು ಪ್ರತಿಯೊಂದು ಲೈಸೆನ್ಸ್ ಪ್ಲೇಟ್ ಉತ್ಪಾದಕರಿಗೆ ಟೈಪ್ ಅಪ್ರೋವಲ್ ಸರ್ಟಿಫಿಕೇಟ್ (ಟಿಎಸಿ) ಪಡೆದುಕೊಳ್ಳಲು ಅಂತಿಮ ಪ್ರಕ್ರಿಯೆಯನ್ನು ಕೈಗೊಳ್ಳಬಹುದು ಎಂದು ಪೀಠ ತಿಳಿಸಿದೆ. ಜೊತೆಗೆ ರಾಜ್ಯ ಸರ್ಕಾರ ಕಾಲಮಿತಿಯಲ್ಲಿ ಕೇಂದ್ರ ರಸ್ತೆ ಸಂಶೋಧನಾ ಸಂಸ್ಥೆ (ಸಿಆರ್‌ಆರ್‌ಐ) ವಿತರಿಸಿರುವ ಟೈಪ್ ಅಪ್ರೋವಲ್ ಸರ್ಟಿಫಿಕೇಟ್ (ಟಿಎಸಿ) ಹೊಂದಿರುವ ಪರವಾನಗಿ ಪಡೆದ ಪ್ಲೇಟ್ ಉತ್ಪಾದಕರಿಗೆ ಅನುಮೋದನೆ ನೀಡುವ ಬಗ್ಗೆ ಪ್ರಕ್ರಿಯೆ ನಡೆಸಬಹುದು ಎಂದು ಆದೇಶಿಸಿದೆ.

ರಾಜ್ಯ ಸರ್ಕಾರ ಇನ್ನೂ ಯಾವುದೇ ಪರವಾನಗಿ ಹೊಂದಿದ ಪ್ಲೇಟ್ ತಯಾರಕರಿಗೆ ಎಚ್‌ಎಸ್‌ಆರ್‌ಪಿಗಳನ್ನು ಪೂರೈಸಲು ಅನುಮೋದನೆ ನೀಡಿಲ್ಲ. ಅಲ್ಲದೆ, ಅದು ಮೋಟಾರು ವಾಹನ ನಿಯಮ 50(1)(ವಿ)ಯಲ್ಲಿ ವಿವರಿಸುವಂತೆ ವಾಹನ ಉತ್ಪಾದಕರ ಮೂಲಕವೇ ಎಚ್‌ಎಸ್‌ಆರ್‌ಪಿ ಪಡೆಯಬೇಕೆಂಬ ಆದೇಶವನ್ನು ಸಹ ಹೊರಡಿಸಿಲ್ಲ. ಈ ನಿಟ್ಟಿನಲ್ಲಿ ಅನುಕೂಲ ಸಮತೋಲನ ಸಾಧಿಸಲು ಯಾವುದೇ ಪೂರ್ವಾಗ್ರಹಕ್ಕೆ ಒಳಗಾಗದೆ ಎಲ್ಲ ನೋಂದಣಿ ಫಲಕ ಉತ್ಪಾದಕರಿಗೆ ಒಪ್ಪಿಗೆ ನೀಡುವ ಸಂಬಂಧ ಪ್ರಕ್ರಿಯೆ ಪ್ರಕಟಿಸಿಬೇಕು ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ಹಿನ್ನೆಲೆ ಏನು?: ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮುನ್ನ ನೋಂದಣಿಯಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಅಳವಡಿಸಿಕೊಳ್ಳಲು ಸರ್ಕಾರ ಆ.17ರಂದು ಅಸೂಚನೆ ಹೊರಡಿಸಿದೆ. ಕೇಂದ್ರ ಮೋಟಾರು ವಾಹನಗಳ ನಿಯಮಗಳನ್ನು ಮೀರಿ ಅರ್ಜಿದಾರ ಸಂಸ್ಥೆಯನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ. ಕೆಲವು ಪ್ರಭಾವಿ ಸಂಸ್ಥೆಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಅರ್ಜಿದಾರ ಸಂಸ್ಥೆ ಅರ್ಜಿಯಲ್ಲಿ ಆರೋಪಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸರ್ಕಾರ, ಆ ವಾದವನ್ನು ಅಲ್ಲಗಳೆದು ಅಂತಹ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಇದನ್ನೂ ಓದಿ: ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆ.. ತೆರಿಗೆ ವಿಧಿಸಲು ಗ್ರಾಮ ಪಂಚಾಯ್ತಿಗೆ ಅವಕಾಶವಿಲ್ಲ: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.