ETV Bharat / state

ಪರಿಸರ ಕಾಯ್ದೆ ಹಿಂದೆ ವಿದೇಶಿ ಕೈವಾಡ ಆರೋಪ: 5 ಲಕ್ಷ ದಂಡ ಪಾವತಿಸಿದ ಹೆದ್ದಾರಿ ಪ್ರಾಧಿಕಾರ

ಅರ್ಜಿ ವಿಚಾರಣೆ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪರ ಹಿರಿಯ ವಕೀಲರು, ಡೆಹ್ರಾಡೂನ್‌ನ ಭಾರತೀಯ ಅರಣ್ಯ ಮತ್ತು ಶಿಕ್ಷಣ ಸಂಶೋಧನಾ ಪರಿಷತ್ತು ಮತ್ತು ವನ್ಯಜೀವಿ ಸಂಶೋಧನಾ ಸಂಸ್ಥೆಗೆ ತಲಾ 2.50 ಲಕ್ಷ ರೂ.ದೇಣಿಗೆ ನೀಡಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

author img

By

Published : Feb 16, 2021, 10:56 PM IST

Karnataka high court
ಕರ್ನಾಟಕ ಹೈಕೋರ್ಟ್​

ಬೆಂಗಳೂರು: ಪರಿಸರ ಸಂರಕ್ಷಣೆ ಕಾಯ್ದೆ ರೂಪಿಸುವಾಗ ದೇಶದ ಸಂಸತ್ತು ವಿದೇಶಿ ಪ್ರಭಾವಕ್ಕೆ ಒಳಗಾಗಿತ್ತು ಎಂಬ ಹೇಳಿಕೆ ನೀಡಿದ್ದಕ್ಕಾಗಿ ದಂಡದ ರೂಪದಲ್ಲಿ ಪರಿಸರ ಮತ್ತು ವನ್ಯಜೀವಿಗಳಿಗಾಗಿ ಕೆಲಸ ಮಾಡುವ ಎರಡು ಸಂಸ್ಥೆಗಳಿಗೆ 5 ಲಕ್ಷ ರೂ. ದೇಣಿಗೆ ನೀಡಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೈಕೋರ್ಟ್​​​ಗೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಎನ್‌ಹೆಚ್‌ಎಐಗೆ ತನ್ನ ವಿವಾದಾತ್ಮಕ ಅಫಿಡವಿಟ್ ವಾಪಸ್ ಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ.

ಪರಿಸರ ಪರಿಣಾಮ ಅಧ್ಯಯನ ನಿಯಮ ಬದಿಗಿಟ್ಟು ಕೆಲ ರಾಷ್ಟ್ರೀಯ ಹೆದ್ದಾರಿಗಳನ್ನು ವಿಸ್ತರಿಸಲು ಮುಂದಾಗಿರುವ ಹೆದ್ದಾರಿ ಪ್ರಾಧಿಕಾರದ ಕ್ರಮ ಪ್ರಶ್ನಿಸಿ ಯುನೈಟೆಡ್ ಕನ್ಸರ್ವೇಷನ್ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿ ವಿಚಾರಣೆ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪರ ಹಿರಿಯ ವಕೀಲರು, ಡೆಹ್ರಾಡೂನ್‌ನ ಭಾರತೀಯ ಅರಣ್ಯ ಮತ್ತು ಶಿಕ್ಷಣ ಸಂಶೋಧನಾ ಪರಿಷತ್ತು ಮತ್ತು ವನ್ಯಜೀವಿ ಸಂಶೋಧನಾ ಸಂಸ್ಥೆಗೆ ತಲಾ 2.50 ಲಕ್ಷ ರೂ.ದೇಣಿಗೆ ನೀಡಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಪ್ರಾಧಿಕಾರ ಸಲ್ಲಿಸಿದ್ದ ವಿವಾದಾತ್ಮಕ ಅಕ್ಷೇಪಣೆಯನ್ನು ಹಿಂಪಡೆಯಲು ಅನುಮತಿಸಿ, ಅರ್ಜಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ

100 ಕಿ.ಮೀ ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣೆಗೆ ಪರಿಸರ ಪರಿಣಾಮ ಅಧ್ಯಯನ (ಇಐಎ)ಅನ್ವಯಿಸದಿರಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಟ್ರಸ್ಟ್ ಪಿಐಎಲ್ ಸಲ್ಲಿಸಿತ್ತು. ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದ ಎನ್‌ಹೆಚ್‌ಎಐ ಹಿರಿಯ ಅಧಿಕಾರಿಯೊಬ್ಬರು, ಪರಿಸರ ಸಂರಕ್ಷಣೆ ಕಾಯ್ದೆ ರೂಪಿಸುವುದರ ಹಿಂದೆ ವಿದೇಶಿ ಕೈವಾಡ ಇದೆ ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಪೀಠ, ಇಂಥ ಹೇಳಿಕೆ ಹಿಂದಿನ ಉದ್ದೇಶವನ್ನು ತನಿಖೆ ಮಾಡಿ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿದ ವರದಿ ನೀಡುವಂತೆ ಎನ್‌ಹೆಚ್‌ಐಎ ಅಧ್ಯಕ್ಷರಿಗೆ ನಿರ್ದೇಶಿಸಿತ್ತು.

ಆ ಬಳಿಕ ಪ್ರಾಧಿಕಾರ ನೀಡಿದ ಯಾವುದೇ ಸಮಜಾಯಿಸಿ ಒಪ್ಪದ ಪೀಠ, ದಂಡ ವಿಧಿಸುವುದಾಗಿ ಸ್ಪಷ್ಟಪಡಿಸಿತ್ತು. ಇದೇ ವೇಳೆ ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗೆ ದಂಡದ ಹಣವನ್ನು ದೇಣಿಗೆ ರೂಪದಲ್ಲಿ ಪಾವತಿಸಲು ಸೂಚಿಸಿತ್ತು. ಅದರಂತೆ ಪ್ರಾಧಿಕಾರ ಇದೀಗ 5 ಲಕ್ಷ ರೂ. ದೇಣಿಗೆಯನ್ನು ನೀಡಿದೆ.

ಇದನ್ನೂ ಓದಿ: ರಾಜಧಾನಿಯಲ್ಲಿ ಮತ್ತೊಮ್ಮೆ ಕೊರೊನಾ ಹೈ ಅಲರ್ಟ್; ಏರ್​​​ಪೋರ್ಟ್​​ನಲ್ಲಿ ಕಟ್ಟೆಚ್ಚರ

ಬೆಂಗಳೂರು: ಪರಿಸರ ಸಂರಕ್ಷಣೆ ಕಾಯ್ದೆ ರೂಪಿಸುವಾಗ ದೇಶದ ಸಂಸತ್ತು ವಿದೇಶಿ ಪ್ರಭಾವಕ್ಕೆ ಒಳಗಾಗಿತ್ತು ಎಂಬ ಹೇಳಿಕೆ ನೀಡಿದ್ದಕ್ಕಾಗಿ ದಂಡದ ರೂಪದಲ್ಲಿ ಪರಿಸರ ಮತ್ತು ವನ್ಯಜೀವಿಗಳಿಗಾಗಿ ಕೆಲಸ ಮಾಡುವ ಎರಡು ಸಂಸ್ಥೆಗಳಿಗೆ 5 ಲಕ್ಷ ರೂ. ದೇಣಿಗೆ ನೀಡಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೈಕೋರ್ಟ್​​​ಗೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಎನ್‌ಹೆಚ್‌ಎಐಗೆ ತನ್ನ ವಿವಾದಾತ್ಮಕ ಅಫಿಡವಿಟ್ ವಾಪಸ್ ಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ.

ಪರಿಸರ ಪರಿಣಾಮ ಅಧ್ಯಯನ ನಿಯಮ ಬದಿಗಿಟ್ಟು ಕೆಲ ರಾಷ್ಟ್ರೀಯ ಹೆದ್ದಾರಿಗಳನ್ನು ವಿಸ್ತರಿಸಲು ಮುಂದಾಗಿರುವ ಹೆದ್ದಾರಿ ಪ್ರಾಧಿಕಾರದ ಕ್ರಮ ಪ್ರಶ್ನಿಸಿ ಯುನೈಟೆಡ್ ಕನ್ಸರ್ವೇಷನ್ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿ ವಿಚಾರಣೆ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪರ ಹಿರಿಯ ವಕೀಲರು, ಡೆಹ್ರಾಡೂನ್‌ನ ಭಾರತೀಯ ಅರಣ್ಯ ಮತ್ತು ಶಿಕ್ಷಣ ಸಂಶೋಧನಾ ಪರಿಷತ್ತು ಮತ್ತು ವನ್ಯಜೀವಿ ಸಂಶೋಧನಾ ಸಂಸ್ಥೆಗೆ ತಲಾ 2.50 ಲಕ್ಷ ರೂ.ದೇಣಿಗೆ ನೀಡಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಪ್ರಾಧಿಕಾರ ಸಲ್ಲಿಸಿದ್ದ ವಿವಾದಾತ್ಮಕ ಅಕ್ಷೇಪಣೆಯನ್ನು ಹಿಂಪಡೆಯಲು ಅನುಮತಿಸಿ, ಅರ್ಜಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ

100 ಕಿ.ಮೀ ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣೆಗೆ ಪರಿಸರ ಪರಿಣಾಮ ಅಧ್ಯಯನ (ಇಐಎ)ಅನ್ವಯಿಸದಿರಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಟ್ರಸ್ಟ್ ಪಿಐಎಲ್ ಸಲ್ಲಿಸಿತ್ತು. ಈ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದ ಎನ್‌ಹೆಚ್‌ಎಐ ಹಿರಿಯ ಅಧಿಕಾರಿಯೊಬ್ಬರು, ಪರಿಸರ ಸಂರಕ್ಷಣೆ ಕಾಯ್ದೆ ರೂಪಿಸುವುದರ ಹಿಂದೆ ವಿದೇಶಿ ಕೈವಾಡ ಇದೆ ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಪೀಠ, ಇಂಥ ಹೇಳಿಕೆ ಹಿಂದಿನ ಉದ್ದೇಶವನ್ನು ತನಿಖೆ ಮಾಡಿ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿದ ವರದಿ ನೀಡುವಂತೆ ಎನ್‌ಹೆಚ್‌ಐಎ ಅಧ್ಯಕ್ಷರಿಗೆ ನಿರ್ದೇಶಿಸಿತ್ತು.

ಆ ಬಳಿಕ ಪ್ರಾಧಿಕಾರ ನೀಡಿದ ಯಾವುದೇ ಸಮಜಾಯಿಸಿ ಒಪ್ಪದ ಪೀಠ, ದಂಡ ವಿಧಿಸುವುದಾಗಿ ಸ್ಪಷ್ಟಪಡಿಸಿತ್ತು. ಇದೇ ವೇಳೆ ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗೆ ದಂಡದ ಹಣವನ್ನು ದೇಣಿಗೆ ರೂಪದಲ್ಲಿ ಪಾವತಿಸಲು ಸೂಚಿಸಿತ್ತು. ಅದರಂತೆ ಪ್ರಾಧಿಕಾರ ಇದೀಗ 5 ಲಕ್ಷ ರೂ. ದೇಣಿಗೆಯನ್ನು ನೀಡಿದೆ.

ಇದನ್ನೂ ಓದಿ: ರಾಜಧಾನಿಯಲ್ಲಿ ಮತ್ತೊಮ್ಮೆ ಕೊರೊನಾ ಹೈ ಅಲರ್ಟ್; ಏರ್​​​ಪೋರ್ಟ್​​ನಲ್ಲಿ ಕಟ್ಟೆಚ್ಚರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.