ETV Bharat / state

ಹಿಟ್ ಆ್ಯಂಡ್ ರನ್​ ಕೇಸ್.. ಅಪರಾಧಿ ಪೊಲೀಸ್ ಬಲೆಗೆ

author img

By

Published : Nov 29, 2022, 12:49 PM IST

ಕ್ಯಾಬ್ ಚಾಲಕನಾಗಿದ್ದ ವ್ಯಕ್ತಿ 2009 ರಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಆರ್ ಲೇಔಟ್ ಬಳಿ ಪಾದಚಾರಿಯೋರ್ವರಿಗೆ ಗುದ್ದಿ ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಕೂಡ ಸಲ್ಲಿಸಿಯಾಗಿತ್ತು.

Hit and run case; Criminal police trap
ಹಿಟ್ ಅಂಡ್ ರನ್​ ಕೇಸ್​; ಅಪರಾಧಿ ಪೊಲೀಸ್ ಬಲೆಗೆ

ಬೆಂಗಳೂರು: ಹಿಟ್ ಆ್ಯಂಡ್ ರನ್ ಕೇಸ್​ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ಅಪರಾಧಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ರಘುನಾಥ್ ಪಾಸ್ವಾನ್ ತಲೆಮರೆಸಿಕೊಂಡಿದ್ದ ಅಪರಾಧಿ.

ಕ್ಯಾಬ್ ಚಾಲಕನಾಗಿದ್ದ ಈತ 2009 ರಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಆರ್ ಲೇಔಟ್ ಬಳಿ ಪಾದಚಾರಿಯೋರ್ವರಿಗೆ ಗುದ್ದಿ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಕೂಡ ಸಲ್ಲಿಸಿಯಾಗಿತ್ತು. ಆರೋಪ ಸಾಬೀತು ಹಿನ್ನೆಲೆ ಆರು ತಿಂಗಳ ಶಿಕ್ಷೆ ಹಾಗೂ 5 ಸಾವಿರ ರೂಪಾಯಿ ದಂಡ ವಿಧಿಸಿತ್ತು.

ಇದರಿಂದ ಕೆಳಹಂತದ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ರಘುನಾಥ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿ ವಾದ-ಪ್ರತಿವಾದ ಆಲಿಸಿ 5ನೇ ಸಂಚಾರ ನ್ಯಾಯಾಲಯ ಆರೋಪಿ ವಿರುದ್ಧ ತೀರ್ಪು ಎತ್ತಿ ಹಿಡಿದಿತ್ತು. ಹಾಗಾಗಿ ಒಂದು ತಿಂಗಳೊಳಗಾಗಿ ನ್ಯಾಯಾಲಯದ ಮುಂದೆ ಹಾಜರಾಗಬೇಕೆಂದು ಆದೇಶಿಸಿತ್ತು‌‌. ಈ ಸಂಬಂಧ ಅಪರಾಧಿ ತಲೆಮರೆಸಿಕೊಂಡಿದ್ದ. ಆದರೆ ಇವರನ್ನು ಪುನಃ ಹಲಸೂರು ಗೇಟ್ ಸಂಚಾರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ದೇವನಹಳ್ಳಿ: ಡಾಬಾದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಏಳು ಜನ ಪೊಲೀಸ್‌ ವಶಕ್ಕೆ

ಬೆಂಗಳೂರು: ಹಿಟ್ ಆ್ಯಂಡ್ ರನ್ ಕೇಸ್​ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ಅಪರಾಧಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ರಘುನಾಥ್ ಪಾಸ್ವಾನ್ ತಲೆಮರೆಸಿಕೊಂಡಿದ್ದ ಅಪರಾಧಿ.

ಕ್ಯಾಬ್ ಚಾಲಕನಾಗಿದ್ದ ಈತ 2009 ರಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಆರ್ ಲೇಔಟ್ ಬಳಿ ಪಾದಚಾರಿಯೋರ್ವರಿಗೆ ಗುದ್ದಿ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಕೂಡ ಸಲ್ಲಿಸಿಯಾಗಿತ್ತು. ಆರೋಪ ಸಾಬೀತು ಹಿನ್ನೆಲೆ ಆರು ತಿಂಗಳ ಶಿಕ್ಷೆ ಹಾಗೂ 5 ಸಾವಿರ ರೂಪಾಯಿ ದಂಡ ವಿಧಿಸಿತ್ತು.

ಇದರಿಂದ ಕೆಳಹಂತದ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ರಘುನಾಥ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿ ವಾದ-ಪ್ರತಿವಾದ ಆಲಿಸಿ 5ನೇ ಸಂಚಾರ ನ್ಯಾಯಾಲಯ ಆರೋಪಿ ವಿರುದ್ಧ ತೀರ್ಪು ಎತ್ತಿ ಹಿಡಿದಿತ್ತು. ಹಾಗಾಗಿ ಒಂದು ತಿಂಗಳೊಳಗಾಗಿ ನ್ಯಾಯಾಲಯದ ಮುಂದೆ ಹಾಜರಾಗಬೇಕೆಂದು ಆದೇಶಿಸಿತ್ತು‌‌. ಈ ಸಂಬಂಧ ಅಪರಾಧಿ ತಲೆಮರೆಸಿಕೊಂಡಿದ್ದ. ಆದರೆ ಇವರನ್ನು ಪುನಃ ಹಲಸೂರು ಗೇಟ್ ಸಂಚಾರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ದೇವನಹಳ್ಳಿ: ಡಾಬಾದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಏಳು ಜನ ಪೊಲೀಸ್‌ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.