ETV Bharat / state

ಐತಿಹಾಸಿಕ ತೀರ್ಪಿನ ನಿರೀಕ್ಷೆ ಇತ್ತು, ಆದರೆ ನಿರಾಸೆ ಆಗಿದೆ: ಹೆಚ್‌.ಕೆ.ಪಾಟೀಲ್​​ - ಅನರ್ಹ ಶಾಸಕರ ತೀರ್ಪಿನ ಬಗ್ಗೆ ಹೆಚ್‌.ಕೆ.ಪಾಟೀಲ್ ಹೇಳಿಕೆ

ಐತಿಹಾಸಿಕ ತೀರ್ಪಿನ ನಿರೀಕ್ಷೆಯಲ್ಲಿ ಇದ್ದವರಿಗೆ ಸುಪ್ರೀಂ ತೀರ್ಪು ನಿರಾಸೆ ಮೂಡಿಸಿದೆ. ಸುಪ್ರೀಂ ತೀರ್ಪಿಗೆ ತಲೆಬಾಗುತ್ತೇನೆ. ಅನರ್ಹರು ತಪ್ಪಿತಸ್ಥರು ಎಂದು ಸುಪ್ರೀಂ ಹೇಳಿದೆ. ಆದರೆ, ಶಿಕ್ಷೆ ಕೊಟ್ಟಿಲ್ಲ ಎಂದು ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಹೆಚ್‌.ಕೆ.ಪಾಟೀಲ್
author img

By

Published : Nov 13, 2019, 6:02 PM IST

ಬೆಂಗಳೂರು: ಸುಪ್ರೀಂಕೊರ್ಟ್​ನಿಂದ ಐತಿಹಾಸಿಕ ತೀರ್ಪು ನಿರೀಕ್ಷೆ ಮಾಡಿದ್ದೆವು. ಆದರೆ ನಿರಾಸೆ ಆಗಿದೆ ಎಂದು ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಹೆಚ್‌.ಕೆ.ಪಾಟೀಲ್, ಮಾಜಿ ಸಚಿವ

ಅನರ್ಹ ಶಾಸಕರ ಕುರಿತು ಸುಪ್ರೀಂಕೊರ್ಟ್​ ನೀಡಿದ ತೀರ್ಪಿನ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಕ್ಷಾಂತರ ಪಿಡುಗನ್ನ ಬುಡ ಸಹಿತ ಕಿತ್ತು ಹಾಕುವ ಐತಿಹಾಸಿಕ ತೀರ್ಪಿನ ನಿರೀಕ್ಷೆಯಲ್ಲಿ ಇದ್ದವರಿಗೆ ಸುಪ್ರೀಂ ತೀರ್ಪು ನಿರಾಸೆ ಮೂಡಿಸಿದೆ. ಸುಪ್ರೀಂ ತೀರ್ಪಿಗೆ ತಲೆಬಾಗುತ್ತೇನೆ. ಅನರ್ಹರು ತಪ್ಪಿತಸ್ಥರು ಎಂದು ಸುಪ್ರೀಂ ಹೇಳಿದೆ. ಆದರೆ, ಶಿಕ್ಷೆ ಕೊಟ್ಟಿಲ್ಲ ಎಂದರು.

ಕುದುರೆ ವ್ಯಾಪಾರದ ಬಗ್ಗೆ ಸುಪ್ರೀಂ ಆತಂಕ ವ್ಯಕ್ತಪಡಿಸಿದೆ. ಈ ಸಂದರ್ಭದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಪಾತ್ರ ಏನು ಎಂಬುದರ ಬಗ್ಗೆಯೂ ಬೆಳಕು ಚೆಲ್ಲಿದೆ. ಅನೈತಿಕತೆ ಆಧಾರದ ಮೇಲೆ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ಕೂಡಲೇ ರಾಜೀನಾಮೆ ನೀಡಬೇಕು‌. ಈ ಮೂಲಕ ತೀರ್ಪಿಗೆ ಅವರು ಗೌರವ ಕೊಡಬೇಕು ಎಂದು ಆಗ್ರಹಿಸಿದರು.

ಬೆಂಗಳೂರು: ಸುಪ್ರೀಂಕೊರ್ಟ್​ನಿಂದ ಐತಿಹಾಸಿಕ ತೀರ್ಪು ನಿರೀಕ್ಷೆ ಮಾಡಿದ್ದೆವು. ಆದರೆ ನಿರಾಸೆ ಆಗಿದೆ ಎಂದು ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಹೆಚ್‌.ಕೆ.ಪಾಟೀಲ್, ಮಾಜಿ ಸಚಿವ

ಅನರ್ಹ ಶಾಸಕರ ಕುರಿತು ಸುಪ್ರೀಂಕೊರ್ಟ್​ ನೀಡಿದ ತೀರ್ಪಿನ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಕ್ಷಾಂತರ ಪಿಡುಗನ್ನ ಬುಡ ಸಹಿತ ಕಿತ್ತು ಹಾಕುವ ಐತಿಹಾಸಿಕ ತೀರ್ಪಿನ ನಿರೀಕ್ಷೆಯಲ್ಲಿ ಇದ್ದವರಿಗೆ ಸುಪ್ರೀಂ ತೀರ್ಪು ನಿರಾಸೆ ಮೂಡಿಸಿದೆ. ಸುಪ್ರೀಂ ತೀರ್ಪಿಗೆ ತಲೆಬಾಗುತ್ತೇನೆ. ಅನರ್ಹರು ತಪ್ಪಿತಸ್ಥರು ಎಂದು ಸುಪ್ರೀಂ ಹೇಳಿದೆ. ಆದರೆ, ಶಿಕ್ಷೆ ಕೊಟ್ಟಿಲ್ಲ ಎಂದರು.

ಕುದುರೆ ವ್ಯಾಪಾರದ ಬಗ್ಗೆ ಸುಪ್ರೀಂ ಆತಂಕ ವ್ಯಕ್ತಪಡಿಸಿದೆ. ಈ ಸಂದರ್ಭದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಪಾತ್ರ ಏನು ಎಂಬುದರ ಬಗ್ಗೆಯೂ ಬೆಳಕು ಚೆಲ್ಲಿದೆ. ಅನೈತಿಕತೆ ಆಧಾರದ ಮೇಲೆ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ಕೂಡಲೇ ರಾಜೀನಾಮೆ ನೀಡಬೇಕು‌. ಈ ಮೂಲಕ ತೀರ್ಪಿಗೆ ಅವರು ಗೌರವ ಕೊಡಬೇಕು ಎಂದು ಆಗ್ರಹಿಸಿದರು.

Intro:Body:KN_BNG_07_HKPATIL_BYTE_SCRIPT_7201951

ಐತಿಹಾಸಿಕ ತೀರ್ಪಿನ ನಿರೀಕ್ಷೆ ಇತ್ತು, ಆದರೆ ನಿರಾಶೆ ಆಗಿದೆ: ಎಚ್‌.ಕೆ.ಪಾಟೀಲ್

ಬೆಂಗಳೂರು: ಐತಿಹಾಸಿಕ ತೀರ್ಪು ನಿರೀಕ್ಷೆ ಮಾಡಿದ್ದೆವು, ಆದರೆ ನಿರಾಶೆ ಆಗಿದೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಕ್ಷಾಂತರ ಪಿಡುಗನ್ನು ಬುಡ ಸಹಿತ ಕಿತ್ತು ಹಾಕುವ ಐತಿಹಾಸಿಕ ತೀರ್ಪಿನ ನಿರೀಕ್ಷೆಯಲ್ಲಿ ಇದ್ದವರಿಗೆ ಸುಪ್ರೀಂ ತೀರ್ಪು ನಿರಾಶೆ ಮೂಡಿಸಿದೆ. ಸುಪ್ರೀಂ ತೀರ್ಪಿಗೆ ತಲೆಬಾಗುತ್ತೇನೆ. ಅನರ್ಹರು ತಪ್ಪಿತಸ್ಥರು ಎಂದು ಹೇಳಿದ್ದಾರೆ. ಆದರೆ, ಶಿಕ್ಷೆ ಕೊಟ್ಟಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಕುದುರೆ ವ್ಯಾಪಾರದ ಬಗ್ಗೆ ಸುಪ್ರೀಂ ಆತಂಕ ವ್ಯಕ್ತಪಡಿಸಿದೆ. ಈ ಸಂದರ್ಭದಲ್ಲಿ ಸಂವಿಧಾನಿಕ ಸಂಸ್ಥೆಗಳ ಪಾತ್ರ ಏನು ಎಂಬುದರ ಬಗ್ಗೆಯೂ ಬೆಳಕು ಚೆಲ್ಲಿದೆ. ಅನೈತಿಕತೆ ಆಧಾರದ ಮೇಲೆ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ಕೂಡಲೆ ರಾಜೀನಾಮೆ ನೀಡಬೇಕು‌. ಈ ಮೂಲಕ ತೀರ್ಪಿಗೆ ಅವರು ಗೌರವ ನೀಡಬೇಕು ಎಂದು ಆಗ್ರಹಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.