ETV Bharat / state

Mysore Gang Rape.. ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡ್ಬೇಕು: ಉಗ್ರಪ್ಪ

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಉಗ್ರಪ್ಪ ಆಗ್ರಹಿಸಿದ್ದಾರೆ

author img

By

Published : Aug 26, 2021, 7:47 PM IST

ಉಗ್ರಪ್ಪ
ಉಗ್ರಪ್ಪ

ಬೆಂಗಳೂರು: ಮಾನವೀಯ ಮೌಲ್ಯಗಳಿಗೆ ಒತ್ತು ಕೊಟ್ಟಿರುವ ರಾಜ್ಯ ನಮ್ಮದು. ಮೈಸೂರಿನಲ್ಲಿ ಮಂಗಳವಾರ ನಡೆದಿರುವ ಕೃತ್ಯ ಅತ್ಯಂತ ಅಮಾನವೀಯ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡ್ಬೇಕು: ಉಗ್ರಪ್ಪ

ರಾಮನ ರಾಜ್ಯದಲ್ಲಿ ರಾವಣನ ಕ್ರೌರ್ಯ’

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿಯ ನಿರ್ಭಯ, ತೆಲಂಗಾಣದ ಪ್ರಿಯಾಂಕಾ ರೆಡ್ಡಿ ಅವರ ಪ್ರಕರಣಕ್ಕಿಂತ ಹೀನಾಯವಾದ ಕೃತ್ಯ ಇದಾಗಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಪೋಲೀಸ್ ಕಾರ್ಯವೈಖರಿ ನೋಡಿದರೆ, ಯಾವ ದೇಶದಲ್ಲಿ ರಾಮಮಂದಿರ ಕಟ್ಟಿ, ರಾಮನ ಜಪ ಮಾಡುತ್ತಿರುವ ಬಿಜೆಪಿಯು ರಾವಣನ ಕ್ರೌರ್ಯ ಮೆರೆಯುತ್ತಿದೆ. ಸರ್ಕಾರದ ಘನತೆ ಉಳಿಸಿಕೊಳ್ಳುವ ಸಲುವಾಗಿ ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಅತ್ಯಾಚಾರ ಕಾಯ್ದೆಯಡಿ ಯಾಕೆ ಪ್ರಕರಣ ದಾಖಲಿಸಿಲ್ಲ

ಮಂಗಳವಾರ ರಾತ್ರಿ ಈ ಪೈಶಾಚಿಕ ಕೃತ್ಯ ನಡೆದಿದ್ದು, ನಂತರ ಸುಮಾರು 11 ಗಂಟೆಗೆ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಅಂಗಾಗಗಳ ಮೇಲೆ ತೀವ್ರವಾಗಿ ದಾಳಿ ನಡೆದಿರುವ ಗಾಯಗಳಾಗಿವೆ. ಬುಧವಾರ ಸಂಜೆ 4 ಗಂಟೆವರೆಗೂ ಪ್ರಕರಣ ದಾಖಲಾಗಿಲ್ಲ. ನಂತರ ಪೊಲೀಸರು 354ಎ ಸೆಕ್ಷನ್ ನಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಅದಕ್ಕೆ ಶಿಕ್ಷೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆಯೇ ಹೊರತು, ಸೆಕ್ಷನ್ 376 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ ಇದನ್ನು ಸಾಮೂಹಿಕ ಅತ್ಯಾಚಾರ ಎಂದು ಪ್ರಕರಣ ದಾಖಲಿಸಿದರೆ, ದೆಹಲಿ ಹಾಗೂ ತೆಲಂಗಾಣದ ಪ್ರಕರಣಕ್ಕಿಂತ ಗಂಭೀರವಾಗಲಿದೆ ಎಂಬ ಕಾರಣಕ್ಕೆ ಈ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಲ್ಲ ಎಂಬ ಮಾಹಿತಿ ಬಂದಿದೆ ಎಂದರು.

ಯಾವ ಮುಖವಿಟ್ಟು ಸಮರ್ಥನೆ

ನಿರ್ಭಯ ಕೇಸ್ ನಡೆದಾಗ ಮೋದಿ ಹಾಗೂ ಬಿಜೆಪಿ ನಾಯಕರು ಪ್ರಧಾನಮಂತ್ರಿಗಳ ರಾಜೀನಾಮೆ ಕೇಳಿದ್ದಿರಿ. ಆರಗ ಜ್ಞಾನೇಂದ್ರ ಅವರ ಕ್ಷೇತ್ರದಲ್ಲಿ ಹುಡುಗಿಯೊಬ್ಬಳು ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದಾಗ ಅದಕ್ಕೆ ಒಂದು ವರ್ಗ ಕಾರಣ ಎಂದು ರಾಜೀನಾಮೆ ಕೇಳಿದ್ದರು. ಆದರೆ, ಇಂದು ಯಾವ ಮುಖ ಇಟ್ಟುಕೊಂಡು ಸಮರ್ಥನೆ ಮಾಡಿಕೊಳ್ಳುತ್ತಿದ್ದೀರಿ ಎಂದು ಗರಂ ಆಗಿದ್ದಾರೆ.

ಮೈಸೂರಿನ ಪೊಲೀಸ್ ಆಯುಕ್ತರು ಇಂತಹ ಘಟನೆ ಇದೇ ಮೊದಲಲ್ಲ ಎಂಬ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಹಾಗಾದರೆ ಕಳೆದ 2 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಸರ್ಕಾರದಲ್ಲಿ ಮುಖ್ಯಮಂತ್ರಿಗಳೇ ಗೃಹ ಸಚಿವರಾಗಿದ್ದರು. ಅಲ್ಲಿ ಇಂತಹ ಘಟನೆ ನಡೆಯುತ್ತಿದ್ದರೂ ಕ್ರಮ ಜರುಗಿಸದಿದ್ದರೆ, ಸರ್ಕಾರದ ನಿರ್ಲಕ್ಷ್ಯ ಧೋರಣೆ ಎದ್ದು ಕಾಣುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದಿದ್ದಾರೆ.

ರಾಜೀನಾಮೆ ನೀಡಲಿ

ಕಳೆದ ಮೂವತ್ತು ದಿನಗಳಲ್ಲಿ ಮೈಸೂರಿನಲ್ಲಿ 3 ಹತ್ಯೆಗಳು ನಡೆದಿವೆ. 1 ಶೂಟೌಟ್ ಆಗಿದೆ, ಸುಮಾರು 16 ಸುಲಿಗೆಗಳು, 3 ದರೋಡೆ, ಇಂದು ಬೆಳಗ್ಗೆ ಸರಸ್ವತಿಪುರಂ ಠಾಣಾ ವ್ಯಾಪ್ತಿಯಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಪ್ರಕರಣ ದಾಖಲಾಗಿದೆ. ಆ ಜಿಲ್ಲ ಮಂತ್ರಿಗಳು, ರಾಜ್ಯದ ಗೃಹ ಸಚಿವರು, ರಾಜ್ಯದ ಸಿಎಂ ಏನು ಮಾಡುತ್ತಿದ್ದಾರೆ?

ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದು ಒಂದೆಡೆಯಾದರೆ, ಇದರ ನೈತಿಕತೆ ಹೊರಬೇಕಾದವರು ಯಾರು? ರಾಮನ ಜಪ ಮಾಡುತ್ತಿರುವವರು ಹೆಣ್ಣು ಮಕ್ಕಳ ರಕ್ಷಣೆ ಮಾಡುತ್ತಿದ್ದಾರಾ? ಈ ದೇಶದ ಪ್ರಧಾನ ಮಂತ್ರಿಗಳು ಅವರ ಮನೆಯ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡಲು ಆಗುತ್ತಿಲ್ಲ. ಅವರ ಶ್ರೀಮತಿ ಅವರಿಗೆ ಜೀವನಾಂಶ ಹಾಗೂ ರಕ್ಷಣೆ ನೀಡುತ್ತಿಲ್ಲ.

ಇನ್ನು ದೇಶದಲ್ಲಿ ಹೆಣ್ಣು ಮಕ್ಕಳಿಗೆ ಹೇಗೆ ರಕ್ಷಣೆ ಸಿಗುತ್ತದೆ? ಈ ಹಿಂದೆ ಆರಗ ಜ್ಞಾನೇಂದ್ರ ಅವರೇ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ರಾಜೀನಾಮೆ ಕೇಳಿದ್ದರು. ಅವರಿಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿಯೇ ಈ ಪರಿಸ್ಥಿತಿಗೆ ಕಾರಣ

ಹೆಣ್ಣು ಮಕ್ಕಳನ್ನು ಎರಡನೇ ದರ್ಜೆಯಲ್ಲಿ ಕಾಣುತ್ತಿರುವ ಬಿಜೆಪಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಆಡಳಿತ ನಡೆಸುತ್ತಿರುವುದೇ ಇಂತಹ ಪರಿಸ್ಥಿತಿಗೆ ಕಾರಣ. ಬಿಜೆಪಿ ಶಾಸಕರು, ಮಂತ್ರಿಗಳು ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿದ ಹೆಣ್ಣಿನ ಮೇಲೆಯೇ ಸರ್ಕಾರ ಪ್ರಕರಣ ದಾಖಲಿಸುತ್ತದೆ. ಆಕೆಯ ಆರೋಪದ ಮೇಲೆ ತನಿಖೆ ನಡೆಯುತ್ತಿಲ್ಲ. ಆರೋಪ ಹೊತ್ತಿರುವ ಶಾಸಕರ ಮೇಲೆ ಆರೋಪ ಪಟ್ಟಿ ಅಥವಾ ಬಿ ರಿಪೋರ್ಟ್ ಯಾಕೆ ದಾಖಲಿಸಿಲ್ಲ.

ಇದು ರಾಜ್ಯದಲ್ಲಿ ಯಾರೇ ಅತ್ಯಾಚಾರ ಮಾಡಿದರೂ ಅವರಿಗೆ ಏನೂ ಮಾಡುವುದಿಲ್ಲ ಎಂಬ ಸಂದೇಶ ರವಾನೆಯಾಗಿದೆ. ಇದೇ ಕಾರಣಕ್ಕೆ ಈ ರೀತಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ ಎಂದು ಹೇಳಿದರು.
ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ಷಡ್ಯಂತ್ರ

ಮಾಜಿ ಸಚಿವ ಹೆಚ್.ಎಂ.ರೇವಣ್ಣ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿನ ಈ ಘಟನೆ ನೆನೆಸಿಕೊಂಡರೆ ಆಘಾತವಾಗುತ್ತದೆ. ಒಮ್ಮೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಪತ್ರಕರ್ತೆ ಪ್ರಶ್ನೆ ಮಾಡಿದಾಗ, ಸಚಿವ ಈಶ್ವರಪ್ಪ, ನಿನ್ನ ಮೇಲೆ ರೇಪ್ ಆಗಿದೆಯಾ? ಎಂದು ಕೇಳುತ್ತಾರೆ. ಇಂತಹ ನಾಯಕರನ್ನು ನಾವು ಪಡೆದಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಸದನದಲ್ಲಿ ಬ್ಲೂ ಫಿಲಂ ನೋಡಿದವರು ಮತ್ತೆ ಮಂತ್ರಿ’

ವಿಧಾನಸೌಧದಲ್ಲಿ ಬ್ಲೂಫಿಲಂ ನೋಡಿದವರು ಇಂದು ಮತ್ತೆ ಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದಾರೆ. ಇದೇ ವೇಳೆ, ರಘುಪತಿ ಭಟ್ ಅವರ ಪ್ರಕರಣ ನೆನಪಿಗೆ ಬರುತ್ತದೆ. ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ನಂದಿತಾ ಅವರ ಪ್ರಕರಣ ಸಂದರ್ಭದಲ್ಲಿ ಕಿಮ್ಮನೆ ರತ್ನಾಕರ ಪ್ರವೇಶಕ್ಕೆ ಅಡ್ಡಿ ಮಾಡಿ ರಾದ್ಧಾಂತ ಮಾಡಿದ್ದರು. ಈಗ ಗೃಹ ಸಚಿವರಾಗಿರುವ ಅವರು ತಾವು ಹೋಗುವವರೆಗೂ ಯಾವುದೇ ಹೇಳಿಕೆ ನೀಡುವಂತಿಲ್ಲ ಎಂಬ ಆದೇಶ ಕೊಟ್ಟಿದ್ದಾರೆ.

‘48 ಗಂಟೆ ಕಳೆದರೂ ಕ್ರಮಯಿಲ್ಲ’

ಆರಗ ಜ್ಞಾನೇಂದ್ರ ಯಾವ ರೀತಿ ಕಾರ್ಯ ಮಾಡುತ್ತಿದ್ದಾರೆ ಎಂಬ ಅನುಮಾನ ಮೂಡುತ್ತದೆ. ಈ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ನಿನ್ನೆಯಿಂದ ನಮ್ಮ ವಿವಿಧ ಘಟಕಗಳು ಪ್ರತಿಭಟನೆ ನಡೆಸುತ್ತಿದ್ದು, ಮನುಷ್ಯತ್ವ ಇರುವ ಎಲ್ಲರೂ ಇದಕ್ಕೆ ಬೆಂಬಲ ನೀಡಬೇಕು. ನಿರ್ಭಯಾ ಪ್ರಕರಣದಲ್ಲಿ ವರ್ಮಾ ಆಯೋಗ ಇಂತಹ ಪ್ರಕರಣದಲ್ಲಿ ದೂರು ದಾಖಲಾಗದಿದ್ದರೂ ಸುಮೋಟೋ ಪ್ರಕರಣ ದಾಖಲಿಸಬೇಕು ಎಂದು ಹೇಳಿತ್ತು. ಆದರೆ, ಇಲ್ಲಿ ಘಟನೆ ನಡೆದು 48 ಗಂಟೆ ಕಳೆದರೂ ಸರಿಯಾದ ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ.

ಇದನ್ನೂ ಓದಿ: Mysore Gang rape ಪ್ರಕರಣಕ್ಕೆ ಪೊಲೀಸರ ತಲೆದಂಡ?

‘ಪೊಲೀಸರು ಶಾಮೀಲು’

ಈ ಪ್ರಕರಣವನ್ನು ಮುಚ್ಚಿ ಹಾಕುವುದರಲ್ಲಿ ಪೊಲೀಸರು ಶಾಮೀಲಾಗಿದ್ದಾರೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು. ಸುದ್ದಿಗೋಷ್ಠಿ ವೇಳೆ ಮಾಜಿ ಸಚಿವೆ ಮೋಟಮ್ಮ, ಕಾಂಗ್ರೆಸ್ ನಾಯಕಿ ಮಂಜುಳಾ ನಾಯ್ಡು, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು: ಮಾನವೀಯ ಮೌಲ್ಯಗಳಿಗೆ ಒತ್ತು ಕೊಟ್ಟಿರುವ ರಾಜ್ಯ ನಮ್ಮದು. ಮೈಸೂರಿನಲ್ಲಿ ಮಂಗಳವಾರ ನಡೆದಿರುವ ಕೃತ್ಯ ಅತ್ಯಂತ ಅಮಾನವೀಯ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡ್ಬೇಕು: ಉಗ್ರಪ್ಪ

ರಾಮನ ರಾಜ್ಯದಲ್ಲಿ ರಾವಣನ ಕ್ರೌರ್ಯ’

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿಯ ನಿರ್ಭಯ, ತೆಲಂಗಾಣದ ಪ್ರಿಯಾಂಕಾ ರೆಡ್ಡಿ ಅವರ ಪ್ರಕರಣಕ್ಕಿಂತ ಹೀನಾಯವಾದ ಕೃತ್ಯ ಇದಾಗಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಪೋಲೀಸ್ ಕಾರ್ಯವೈಖರಿ ನೋಡಿದರೆ, ಯಾವ ದೇಶದಲ್ಲಿ ರಾಮಮಂದಿರ ಕಟ್ಟಿ, ರಾಮನ ಜಪ ಮಾಡುತ್ತಿರುವ ಬಿಜೆಪಿಯು ರಾವಣನ ಕ್ರೌರ್ಯ ಮೆರೆಯುತ್ತಿದೆ. ಸರ್ಕಾರದ ಘನತೆ ಉಳಿಸಿಕೊಳ್ಳುವ ಸಲುವಾಗಿ ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಅತ್ಯಾಚಾರ ಕಾಯ್ದೆಯಡಿ ಯಾಕೆ ಪ್ರಕರಣ ದಾಖಲಿಸಿಲ್ಲ

ಮಂಗಳವಾರ ರಾತ್ರಿ ಈ ಪೈಶಾಚಿಕ ಕೃತ್ಯ ನಡೆದಿದ್ದು, ನಂತರ ಸುಮಾರು 11 ಗಂಟೆಗೆ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಅಂಗಾಗಗಳ ಮೇಲೆ ತೀವ್ರವಾಗಿ ದಾಳಿ ನಡೆದಿರುವ ಗಾಯಗಳಾಗಿವೆ. ಬುಧವಾರ ಸಂಜೆ 4 ಗಂಟೆವರೆಗೂ ಪ್ರಕರಣ ದಾಖಲಾಗಿಲ್ಲ. ನಂತರ ಪೊಲೀಸರು 354ಎ ಸೆಕ್ಷನ್ ನಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಅದಕ್ಕೆ ಶಿಕ್ಷೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆಯೇ ಹೊರತು, ಸೆಕ್ಷನ್ 376 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ ಇದನ್ನು ಸಾಮೂಹಿಕ ಅತ್ಯಾಚಾರ ಎಂದು ಪ್ರಕರಣ ದಾಖಲಿಸಿದರೆ, ದೆಹಲಿ ಹಾಗೂ ತೆಲಂಗಾಣದ ಪ್ರಕರಣಕ್ಕಿಂತ ಗಂಭೀರವಾಗಲಿದೆ ಎಂಬ ಕಾರಣಕ್ಕೆ ಈ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಲ್ಲ ಎಂಬ ಮಾಹಿತಿ ಬಂದಿದೆ ಎಂದರು.

ಯಾವ ಮುಖವಿಟ್ಟು ಸಮರ್ಥನೆ

ನಿರ್ಭಯ ಕೇಸ್ ನಡೆದಾಗ ಮೋದಿ ಹಾಗೂ ಬಿಜೆಪಿ ನಾಯಕರು ಪ್ರಧಾನಮಂತ್ರಿಗಳ ರಾಜೀನಾಮೆ ಕೇಳಿದ್ದಿರಿ. ಆರಗ ಜ್ಞಾನೇಂದ್ರ ಅವರ ಕ್ಷೇತ್ರದಲ್ಲಿ ಹುಡುಗಿಯೊಬ್ಬಳು ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದಾಗ ಅದಕ್ಕೆ ಒಂದು ವರ್ಗ ಕಾರಣ ಎಂದು ರಾಜೀನಾಮೆ ಕೇಳಿದ್ದರು. ಆದರೆ, ಇಂದು ಯಾವ ಮುಖ ಇಟ್ಟುಕೊಂಡು ಸಮರ್ಥನೆ ಮಾಡಿಕೊಳ್ಳುತ್ತಿದ್ದೀರಿ ಎಂದು ಗರಂ ಆಗಿದ್ದಾರೆ.

ಮೈಸೂರಿನ ಪೊಲೀಸ್ ಆಯುಕ್ತರು ಇಂತಹ ಘಟನೆ ಇದೇ ಮೊದಲಲ್ಲ ಎಂಬ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಹಾಗಾದರೆ ಕಳೆದ 2 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಸರ್ಕಾರದಲ್ಲಿ ಮುಖ್ಯಮಂತ್ರಿಗಳೇ ಗೃಹ ಸಚಿವರಾಗಿದ್ದರು. ಅಲ್ಲಿ ಇಂತಹ ಘಟನೆ ನಡೆಯುತ್ತಿದ್ದರೂ ಕ್ರಮ ಜರುಗಿಸದಿದ್ದರೆ, ಸರ್ಕಾರದ ನಿರ್ಲಕ್ಷ್ಯ ಧೋರಣೆ ಎದ್ದು ಕಾಣುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದಿದ್ದಾರೆ.

ರಾಜೀನಾಮೆ ನೀಡಲಿ

ಕಳೆದ ಮೂವತ್ತು ದಿನಗಳಲ್ಲಿ ಮೈಸೂರಿನಲ್ಲಿ 3 ಹತ್ಯೆಗಳು ನಡೆದಿವೆ. 1 ಶೂಟೌಟ್ ಆಗಿದೆ, ಸುಮಾರು 16 ಸುಲಿಗೆಗಳು, 3 ದರೋಡೆ, ಇಂದು ಬೆಳಗ್ಗೆ ಸರಸ್ವತಿಪುರಂ ಠಾಣಾ ವ್ಯಾಪ್ತಿಯಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಪ್ರಕರಣ ದಾಖಲಾಗಿದೆ. ಆ ಜಿಲ್ಲ ಮಂತ್ರಿಗಳು, ರಾಜ್ಯದ ಗೃಹ ಸಚಿವರು, ರಾಜ್ಯದ ಸಿಎಂ ಏನು ಮಾಡುತ್ತಿದ್ದಾರೆ?

ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದು ಒಂದೆಡೆಯಾದರೆ, ಇದರ ನೈತಿಕತೆ ಹೊರಬೇಕಾದವರು ಯಾರು? ರಾಮನ ಜಪ ಮಾಡುತ್ತಿರುವವರು ಹೆಣ್ಣು ಮಕ್ಕಳ ರಕ್ಷಣೆ ಮಾಡುತ್ತಿದ್ದಾರಾ? ಈ ದೇಶದ ಪ್ರಧಾನ ಮಂತ್ರಿಗಳು ಅವರ ಮನೆಯ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡಲು ಆಗುತ್ತಿಲ್ಲ. ಅವರ ಶ್ರೀಮತಿ ಅವರಿಗೆ ಜೀವನಾಂಶ ಹಾಗೂ ರಕ್ಷಣೆ ನೀಡುತ್ತಿಲ್ಲ.

ಇನ್ನು ದೇಶದಲ್ಲಿ ಹೆಣ್ಣು ಮಕ್ಕಳಿಗೆ ಹೇಗೆ ರಕ್ಷಣೆ ಸಿಗುತ್ತದೆ? ಈ ಹಿಂದೆ ಆರಗ ಜ್ಞಾನೇಂದ್ರ ಅವರೇ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ರಾಜೀನಾಮೆ ಕೇಳಿದ್ದರು. ಅವರಿಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿಯೇ ಈ ಪರಿಸ್ಥಿತಿಗೆ ಕಾರಣ

ಹೆಣ್ಣು ಮಕ್ಕಳನ್ನು ಎರಡನೇ ದರ್ಜೆಯಲ್ಲಿ ಕಾಣುತ್ತಿರುವ ಬಿಜೆಪಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಆಡಳಿತ ನಡೆಸುತ್ತಿರುವುದೇ ಇಂತಹ ಪರಿಸ್ಥಿತಿಗೆ ಕಾರಣ. ಬಿಜೆಪಿ ಶಾಸಕರು, ಮಂತ್ರಿಗಳು ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿದ ಹೆಣ್ಣಿನ ಮೇಲೆಯೇ ಸರ್ಕಾರ ಪ್ರಕರಣ ದಾಖಲಿಸುತ್ತದೆ. ಆಕೆಯ ಆರೋಪದ ಮೇಲೆ ತನಿಖೆ ನಡೆಯುತ್ತಿಲ್ಲ. ಆರೋಪ ಹೊತ್ತಿರುವ ಶಾಸಕರ ಮೇಲೆ ಆರೋಪ ಪಟ್ಟಿ ಅಥವಾ ಬಿ ರಿಪೋರ್ಟ್ ಯಾಕೆ ದಾಖಲಿಸಿಲ್ಲ.

ಇದು ರಾಜ್ಯದಲ್ಲಿ ಯಾರೇ ಅತ್ಯಾಚಾರ ಮಾಡಿದರೂ ಅವರಿಗೆ ಏನೂ ಮಾಡುವುದಿಲ್ಲ ಎಂಬ ಸಂದೇಶ ರವಾನೆಯಾಗಿದೆ. ಇದೇ ಕಾರಣಕ್ಕೆ ಈ ರೀತಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ ಎಂದು ಹೇಳಿದರು.
ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ಷಡ್ಯಂತ್ರ

ಮಾಜಿ ಸಚಿವ ಹೆಚ್.ಎಂ.ರೇವಣ್ಣ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿನ ಈ ಘಟನೆ ನೆನೆಸಿಕೊಂಡರೆ ಆಘಾತವಾಗುತ್ತದೆ. ಒಮ್ಮೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಪತ್ರಕರ್ತೆ ಪ್ರಶ್ನೆ ಮಾಡಿದಾಗ, ಸಚಿವ ಈಶ್ವರಪ್ಪ, ನಿನ್ನ ಮೇಲೆ ರೇಪ್ ಆಗಿದೆಯಾ? ಎಂದು ಕೇಳುತ್ತಾರೆ. ಇಂತಹ ನಾಯಕರನ್ನು ನಾವು ಪಡೆದಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಸದನದಲ್ಲಿ ಬ್ಲೂ ಫಿಲಂ ನೋಡಿದವರು ಮತ್ತೆ ಮಂತ್ರಿ’

ವಿಧಾನಸೌಧದಲ್ಲಿ ಬ್ಲೂಫಿಲಂ ನೋಡಿದವರು ಇಂದು ಮತ್ತೆ ಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದಾರೆ. ಇದೇ ವೇಳೆ, ರಘುಪತಿ ಭಟ್ ಅವರ ಪ್ರಕರಣ ನೆನಪಿಗೆ ಬರುತ್ತದೆ. ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ನಂದಿತಾ ಅವರ ಪ್ರಕರಣ ಸಂದರ್ಭದಲ್ಲಿ ಕಿಮ್ಮನೆ ರತ್ನಾಕರ ಪ್ರವೇಶಕ್ಕೆ ಅಡ್ಡಿ ಮಾಡಿ ರಾದ್ಧಾಂತ ಮಾಡಿದ್ದರು. ಈಗ ಗೃಹ ಸಚಿವರಾಗಿರುವ ಅವರು ತಾವು ಹೋಗುವವರೆಗೂ ಯಾವುದೇ ಹೇಳಿಕೆ ನೀಡುವಂತಿಲ್ಲ ಎಂಬ ಆದೇಶ ಕೊಟ್ಟಿದ್ದಾರೆ.

‘48 ಗಂಟೆ ಕಳೆದರೂ ಕ್ರಮಯಿಲ್ಲ’

ಆರಗ ಜ್ಞಾನೇಂದ್ರ ಯಾವ ರೀತಿ ಕಾರ್ಯ ಮಾಡುತ್ತಿದ್ದಾರೆ ಎಂಬ ಅನುಮಾನ ಮೂಡುತ್ತದೆ. ಈ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ನಿನ್ನೆಯಿಂದ ನಮ್ಮ ವಿವಿಧ ಘಟಕಗಳು ಪ್ರತಿಭಟನೆ ನಡೆಸುತ್ತಿದ್ದು, ಮನುಷ್ಯತ್ವ ಇರುವ ಎಲ್ಲರೂ ಇದಕ್ಕೆ ಬೆಂಬಲ ನೀಡಬೇಕು. ನಿರ್ಭಯಾ ಪ್ರಕರಣದಲ್ಲಿ ವರ್ಮಾ ಆಯೋಗ ಇಂತಹ ಪ್ರಕರಣದಲ್ಲಿ ದೂರು ದಾಖಲಾಗದಿದ್ದರೂ ಸುಮೋಟೋ ಪ್ರಕರಣ ದಾಖಲಿಸಬೇಕು ಎಂದು ಹೇಳಿತ್ತು. ಆದರೆ, ಇಲ್ಲಿ ಘಟನೆ ನಡೆದು 48 ಗಂಟೆ ಕಳೆದರೂ ಸರಿಯಾದ ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ.

ಇದನ್ನೂ ಓದಿ: Mysore Gang rape ಪ್ರಕರಣಕ್ಕೆ ಪೊಲೀಸರ ತಲೆದಂಡ?

‘ಪೊಲೀಸರು ಶಾಮೀಲು’

ಈ ಪ್ರಕರಣವನ್ನು ಮುಚ್ಚಿ ಹಾಕುವುದರಲ್ಲಿ ಪೊಲೀಸರು ಶಾಮೀಲಾಗಿದ್ದಾರೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು. ಸುದ್ದಿಗೋಷ್ಠಿ ವೇಳೆ ಮಾಜಿ ಸಚಿವೆ ಮೋಟಮ್ಮ, ಕಾಂಗ್ರೆಸ್ ನಾಯಕಿ ಮಂಜುಳಾ ನಾಯ್ಡು, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.