ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರಸಭೆ ಚುನಾವಣೆಯ ಮತದಾನ ನಡೆಯುತ್ತಿದೆ. ಮತಗಟ್ಟೆ ಕೇಂದ್ರಕ್ಕೆ ಡ್ರಾಗರ್ನೊಂದಿಗೆ ಬಂದಿದ್ದ ಆರೋಪಿವೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಶಾಂತ್ ಬಂಧಿತ ಆರೋಪಿ. ಈತ ಕಾಂಗ್ರೆಸ್ ಅಭ್ಯರ್ಥಿಪರ ಏಜೆಂಟ್ ಆಗಿ ಕೂರಲು ಬಂದಿದ್ದ ಎನ್ನಲಾಗ್ತಿದೆ. ಈ ವೇಳೆ ಜೇಬಿನಲ್ಲಿದ್ದ ಡ್ರಾಗರ್ ಕಂಡು ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದು, ಆತನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಎರಡು ದಿನಗಳ ಹಿಂದೆ ಆನ್ಲೈನ್ನಲ್ಲಿ ಡ್ರಾಗರ್ ಖರೀದಿಸಿದ್ದಾಗಿ ಹೇಳಿಕೆ ನೀಡಿದ್ದಾನೆ ಎಂದು ತಿಳಿದುಬಂದಿದೆ.