ಬೆಂಗಳೂರು: ಕರ್ನಾಟಕದ ರೈತ ಸಂಘ, ದಲಿತ ಸಂಘ ಸೇರಿದಂತೆ ಪಂಜಾಬ್ ಹಾಗೂ ಹರಿಯಾಣದ ಹಲವು ಸಂಘಗಳು ಭಾರತ್ ಬಂದ್ಗೆ ಕರೆ ನೀಡಿರುವ ಹಿನ್ನೆಲೆ, ಬೆಂಗಳೂರು ಹೋಟೆಲ್ಗಳು ಇದಕ್ಕೆ ಸಹಕಾರ ನೀಡುವುದಿಲ್ಲ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ ಸಿ ರಾವ್ ಸ್ಪಷ್ಟಪಡಿಸಿದ್ದಾರೆ.
ಕೋವಿಡ್-19ನಿಂದಾಗಿ ಹೋಟೆಲ್ಗಳಿಗೆ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆ ನಾವು ಯಾವುದೇ ಬಂದ್ಗೆ ಸಹಕಾರ ನೀಡುವುದಿಲ್ಲ ಎಂದು ಅವರು ತಿಳಿಸಿದರು.
ತಿಂಗಳ ಹಿಂದೆಯಷ್ಟೇ ಪೂರ್ಣ ಪ್ರಮಾಣದಲ್ಲಿ ಹೋಟೆಲ್ ತೆರೆಯಲು ಸರ್ಕಾರ ಅನುಮತಿ ನೀಡಿತ್ತು. ಹಿಂದಿನ 6 ತಿಂಗಳ ಕಾಲ ಹೋಟೆಲ್ ಉದ್ಯಮ ನಷ್ಟದಲ್ಲಿತ್ತು. ಹೀಗಾಗಿ ಹೋಟೆಲ್ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದರು.