ಬೆಂಗಳೂರು: ಶೋಕಿ ಜೀವನ ಮಾಡುವ ಸಲುವಾಗಿ ಮನೆಗಳ್ಳತನ ಹಾಗೂ ಬೈಕ್ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿಗಳನ್ನ ಪ್ರತ್ಯೇಕ ಪ್ರಕರಣಗಳಲ್ಲಿ ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.
1ನೇ ಪ್ರಕರಣ: ಸುಮಾರು 100 ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ನನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 12 ಲಕ್ಷ ಮೌಲ್ಯದ ಸುಮಾರು 278 ಗ್ರಾಂ ಚಿನ್ನವನ್ನ ವಶಪಡಿಸಿಕೊಳ್ಳಲಾಗಿದೆ.
2ನೇ ಪ್ರಕರಣ: ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ಮನೆಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಅಲಿಯಾಸ್ ಮಂಜುನಾಥ್, ಆಜಮ್ ಖಾನ್ ಅಲಿಯಾಸ್ ಬ್ರೂಸ್ಲಿ, ಸೈಯದ್ ನದೀಂ ಬಂಧಿತ ಆರೋಪಿಗಳು.
3ನೇ ಪ್ರಕರಣ: ಐಷಾರಾಮಿ ಜೀವನ ಮಾಡಬೇಕು ಎನ್ನುವ ಉದ್ದೇಶದಿಂದ ಮನೆಯ ಮುಂದೆ ನಿಲ್ಲಿಸಿದ ಬೈಕ್ಗಳನ್ನ ಕಳ್ಳತನ ಮಾಡುತ್ತಿದ್ದ ಖದೀಮರನ್ನ ಪೊಲೀಸರು ಬಂಧಿಸಿದ್ದಾರೆ. ಮನೋಜ್ ಕುಮಾರ್ ಹಾಗೂ ಅಪ್ರೋಜ್ ಬಂಧಿತ ಆರೋಪಿಗಳು. ಇನ್ನು ಬಂಧಿತರಿಂದ 7 ಲಕ್ಷ ಮೌಲ್ಯದ 12 ಬೈಕ್ಗಳನ್ನ ವಶಪಡಿಸಿಕೊಂಡಿರುವುದಾಗಿ ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಗುಂಡಿನ ದಾಳಿ: 7ನೇ ತರಗತಿ ವಿದ್ಯಾರ್ಥಿಗೆ ಗುಂಡು ಹಾರಿಸಿದ ಯುವಕ