ETV Bharat / state

ಮತದಾರರ ಪಟ್ಟಿಯಿಂದ 27 ಲಕ್ಷ ಹೆಸರು ತೆಗೆದಿದ್ದು ಹೇಗೆ?: ಡಿ ಕೆ ಶಿವಕುಮಾರ್

author img

By

Published : Nov 22, 2022, 12:47 PM IST

ಮತದಾರರ ಮಾಹಿತಿ ತೆಗೆದುಕೊಳ್ಳುವ ಅವಕಾಶ ಯಾರಿಗೂ ಇಲ್ಲ. 27 ಲಕ್ಷ ಮತದಾರರ ಹೆಸರು ತೆಗೆದಿದ್ದು ಹೇಗೆ, ಇದಕ್ಕೆ ಸಹಿ ಹಾಕಿದವರು ಯಾರು ಎಂದು ಡಿ ಕೆ ಶಿವಕುಮಾರ್​ ಪ್ರಶ್ನಿಸಿದ್ದಾರೆ.

dkshi
ಡಿ ಕೆ ಶಿವಕುಮಾರ್

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಯುವುದಕ್ಕೆ ಅಥವಾ ಸೇರಿಸುವುದಕ್ಕೆ ಫಾರಂ 7 ಅತ್ಯಗತ್ಯ. ಈ ಅರ್ಜಿಗಳಿಲ್ಲದೆ 27 ಲಕ್ಷ ಹೆಸರುಗಳನ್ನು ತೆಗೆದಿದ್ದು ಹೇಗೆ?. ಇವುಗಳಿಗೆ ಸಹಿ ಹಾಕಿದವರು ಯಾರು? ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೇಳಿದ್ದಾರೆ.

ಮತದಾರರ ಹೆಸರು ತೆಗೆದ ಬಗ್ಗೆ ಡಿಕೆಶಿ ಪ್ರತಿಕ್ರಿಯೆ

ಬೆಂಗಳೂರಿನಿಂದ ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ, ಬೇರೆ ಸಮಯದಲ್ಲಿ ಚಿಲುಮೆ ಸಂಸ್ಥೆಗೆ ಬೇರೆ ಕೆಲಸವನ್ನು ಸರ್ಕಾರ ನೀಡಿರಬಹುದು. ಆದರೆ ಅವುಗಳಿಗೂ ಈ ಚುನಾವಣೆ ಪ್ರಕ್ರಿಯೆಗೂ ಬಹಳ ವ್ಯತ್ಯಾಸವಿದೆ. ಚುನಾವಣಾ ಆಯೋಗದ ಬಳಿ ಅಧಿಕಾರಿಗಳ ಭೇಟಿಗೆ ಇಂದು ಸಮಯಾವಕಾಶ ಕೇಳಲಾಗಿತ್ತು. ಹಿರಿಯ ಅಧಿಕಾರಿ ಭೇಟಿ ಮಾಡಬೇಕಿದ್ದು, ನಾಳೆ ಸಮಯ ನೀಡಿದ್ದಾರೆ.

ನಾಳೆ ಭೇಟಿ ಮಾಡಿ ನಮ್ಮ ದೂರು ನೀಡುತ್ತೇವೆ. ಈ ಪ್ರಕರಣದಲ್ಲಿ ಸಾಕಷ್ಟು ಕಾನೂನು ಅಂಶಗಳಿವೆ. ಮತದಾರರ ಮಾಹಿತಿ ತೆಗೆದುಕೊಳ್ಳುವ ಅವಕಾಶ ಯಾರಿಗೂ ಇಲ್ಲ. ರಾಜ್ಯದಲ್ಲಿ 8,250 ಬೂತ್​ಗಳಿವೆ. ಪ್ರತಿ ಬೂತ್​ಗೆ ಒಬ್ಬರನ್ನು ನೇಮಕ ಮಾಡಬೇಕು. ಕೇವಲ ಚಿಲುಮೆ ಸಂಸ್ಥೆ ಮಾತ್ರವಲ್ಲ, 7 ಸಾವಿರಕ್ಕೂ ಹೆಚ್ಚು ಜನರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಎಲ್ಲಾ 28 ಕ್ಷೇತ್ರ ಚುನಾವಣಾಧಿಕಾರಿ ಮೇಲೂ ಪ್ರಕರಣ ದಾಖಲಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಚಿಲುಮೆ ಸಂಸ್ಥೆಯ ಮೂವರು ಆರೋಪಿಗಳು 12 ದಿನ ಪೊಲೀಸ್ ವಶಕ್ಕೆ

ಒತ್ತಡದ ಮೇಲೆ ಈ ಕೆಲಸ ಮಾಡಿದ್ದೇವೆ ಎಂದು ಕೆಲವು ಬಂಧಿತ ಆರೋಪಿಗಳು ಹೇಳಿಕೆ ನೀಡಿರುವ ಸುದ್ದಿ ಬಗ್ಗೆ ಕೇಳಿದಾಗ, ಈ ವಿಚಾರ ನನಗೆ ಗೊತ್ತಿಲ್ಲ. ಆತ ಕಳ್ಳತನ ಮಾಡಿದ್ದರೆ, ಅದನ್ನು ಮಾಡಿಸಿದವರು ಯಾರು? ಹೀಗೆ ಮಾಡಬೇಕು ಎಂದು ಹೇಳಿಕೊಟ್ಟವರು ಯಾರು? ಅಧಿಕಾರಿಯೊಬ್ಬರು ಮೇಲಾಧಿಕಾರಿಗಳ ಆದೇಶದ ಮೇರೆಗೆ ನಾವು ಈ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ. ಈ ಮೇಲಾಧಿಕಾರಿಗಳು ಯಾರು? ನಾನಾ, ಸಿದ್ದರಾಮಯ್ಯನವರಾ, ಯಡಿಯರಪ್ಪನವರಾ, ಬೊಮ್ಮಾಯಿ ಅವರಾ? ಈ ವಿಚಾರ ತನಿಖೆಯಾಗಬೇಕು. ಆದರೆ ಇದು ಇವರಿಂದ ಸಾಧ್ಯವಿಲ್ಲ. ನಾವು ಎಲ್ಲವನ್ನೂ ಈಗಲೇ ಬಹಿರಂಗ ಮಾಡುವುದಿಲ್ಲ. ದೂರು ಕೊಟ್ಟ ನಂತರ ಏನು ದೂರು ಕೊಟ್ಟಿದ್ದೇವೆ ಎಂದು ತಿಳಿಸುತ್ತೇವೆ ಎಂದು ಪ್ರತಿಕ್ರಿಯಿಸಿದರು.

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಯುವುದಕ್ಕೆ ಅಥವಾ ಸೇರಿಸುವುದಕ್ಕೆ ಫಾರಂ 7 ಅತ್ಯಗತ್ಯ. ಈ ಅರ್ಜಿಗಳಿಲ್ಲದೆ 27 ಲಕ್ಷ ಹೆಸರುಗಳನ್ನು ತೆಗೆದಿದ್ದು ಹೇಗೆ?. ಇವುಗಳಿಗೆ ಸಹಿ ಹಾಕಿದವರು ಯಾರು? ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೇಳಿದ್ದಾರೆ.

ಮತದಾರರ ಹೆಸರು ತೆಗೆದ ಬಗ್ಗೆ ಡಿಕೆಶಿ ಪ್ರತಿಕ್ರಿಯೆ

ಬೆಂಗಳೂರಿನಿಂದ ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ, ಬೇರೆ ಸಮಯದಲ್ಲಿ ಚಿಲುಮೆ ಸಂಸ್ಥೆಗೆ ಬೇರೆ ಕೆಲಸವನ್ನು ಸರ್ಕಾರ ನೀಡಿರಬಹುದು. ಆದರೆ ಅವುಗಳಿಗೂ ಈ ಚುನಾವಣೆ ಪ್ರಕ್ರಿಯೆಗೂ ಬಹಳ ವ್ಯತ್ಯಾಸವಿದೆ. ಚುನಾವಣಾ ಆಯೋಗದ ಬಳಿ ಅಧಿಕಾರಿಗಳ ಭೇಟಿಗೆ ಇಂದು ಸಮಯಾವಕಾಶ ಕೇಳಲಾಗಿತ್ತು. ಹಿರಿಯ ಅಧಿಕಾರಿ ಭೇಟಿ ಮಾಡಬೇಕಿದ್ದು, ನಾಳೆ ಸಮಯ ನೀಡಿದ್ದಾರೆ.

ನಾಳೆ ಭೇಟಿ ಮಾಡಿ ನಮ್ಮ ದೂರು ನೀಡುತ್ತೇವೆ. ಈ ಪ್ರಕರಣದಲ್ಲಿ ಸಾಕಷ್ಟು ಕಾನೂನು ಅಂಶಗಳಿವೆ. ಮತದಾರರ ಮಾಹಿತಿ ತೆಗೆದುಕೊಳ್ಳುವ ಅವಕಾಶ ಯಾರಿಗೂ ಇಲ್ಲ. ರಾಜ್ಯದಲ್ಲಿ 8,250 ಬೂತ್​ಗಳಿವೆ. ಪ್ರತಿ ಬೂತ್​ಗೆ ಒಬ್ಬರನ್ನು ನೇಮಕ ಮಾಡಬೇಕು. ಕೇವಲ ಚಿಲುಮೆ ಸಂಸ್ಥೆ ಮಾತ್ರವಲ್ಲ, 7 ಸಾವಿರಕ್ಕೂ ಹೆಚ್ಚು ಜನರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಎಲ್ಲಾ 28 ಕ್ಷೇತ್ರ ಚುನಾವಣಾಧಿಕಾರಿ ಮೇಲೂ ಪ್ರಕರಣ ದಾಖಲಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಚಿಲುಮೆ ಸಂಸ್ಥೆಯ ಮೂವರು ಆರೋಪಿಗಳು 12 ದಿನ ಪೊಲೀಸ್ ವಶಕ್ಕೆ

ಒತ್ತಡದ ಮೇಲೆ ಈ ಕೆಲಸ ಮಾಡಿದ್ದೇವೆ ಎಂದು ಕೆಲವು ಬಂಧಿತ ಆರೋಪಿಗಳು ಹೇಳಿಕೆ ನೀಡಿರುವ ಸುದ್ದಿ ಬಗ್ಗೆ ಕೇಳಿದಾಗ, ಈ ವಿಚಾರ ನನಗೆ ಗೊತ್ತಿಲ್ಲ. ಆತ ಕಳ್ಳತನ ಮಾಡಿದ್ದರೆ, ಅದನ್ನು ಮಾಡಿಸಿದವರು ಯಾರು? ಹೀಗೆ ಮಾಡಬೇಕು ಎಂದು ಹೇಳಿಕೊಟ್ಟವರು ಯಾರು? ಅಧಿಕಾರಿಯೊಬ್ಬರು ಮೇಲಾಧಿಕಾರಿಗಳ ಆದೇಶದ ಮೇರೆಗೆ ನಾವು ಈ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ. ಈ ಮೇಲಾಧಿಕಾರಿಗಳು ಯಾರು? ನಾನಾ, ಸಿದ್ದರಾಮಯ್ಯನವರಾ, ಯಡಿಯರಪ್ಪನವರಾ, ಬೊಮ್ಮಾಯಿ ಅವರಾ? ಈ ವಿಚಾರ ತನಿಖೆಯಾಗಬೇಕು. ಆದರೆ ಇದು ಇವರಿಂದ ಸಾಧ್ಯವಿಲ್ಲ. ನಾವು ಎಲ್ಲವನ್ನೂ ಈಗಲೇ ಬಹಿರಂಗ ಮಾಡುವುದಿಲ್ಲ. ದೂರು ಕೊಟ್ಟ ನಂತರ ಏನು ದೂರು ಕೊಟ್ಟಿದ್ದೇವೆ ಎಂದು ತಿಳಿಸುತ್ತೇವೆ ಎಂದು ಪ್ರತಿಕ್ರಿಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.