ETV Bharat / state

'ನಾನು ನೃತ್ಯಗಾರನಲ್ಲ' ಹೇಳಿಕೆ: ರಮೇಶ್ ಕುಮಾರ್ ಕ್ಷಮೆಯಾಚಿಸುವಂತೆ ಶೋಭಾ ಕರಂದ್ಲಾಜೆ ಆಗ್ರಹ! -

ವಿಧಾನಸಭೆ ಅಧ್ಯಕ್ಷರ ಪೀಠದಲ್ಲಿ ಕುಳಿತು ರಮೇಶ್ ಕುಮಾರ್ ನೃತ್ಯಗಾರ ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತಾಡಿದ್ದು, ಕೂಡಲೇ ಸ್ಪೀಕರ್ ಕ್ಷಮೆ ಯಾಚಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿದರು
author img

By

Published : Jul 15, 2019, 11:28 AM IST

ಬೆಂಗಳೂರು: ವಿಧಾನಸಭೆ ಅಧ್ಯಕ್ಷರ ಪೀಠದಲ್ಲಿ ಕುಳಿತು ರಮೇಶ್ ಕುಮಾರ್ ನೃತ್ಯಗಾರ ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತಾಡಿದ್ದು, ಕೂಡಲೇ ಸ್ಪೀಕರ್ ಕ್ಷಮೆ ಯಾಚಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿದರು

ನಾನು ನೃತ್ಯಗಾರನಲ್ಲ ಎಂದು ಸ್ಪೀಕರ್ ಪೀಠದಲ್ಲಿ ಕೂತು ರಮೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ. ಎರಡು ಮೂರು ಬಾರಿ ಅವರು ಅಸಾಂವಿಧಾನಾತ್ಮಕವಾಗಿ ಮಾತಾಡಿದ್ದಾರೆ. ಹಿಂದೆ ಅದೇ ಪೀಠದಲ್ಲಿ ಕೂತು ವೇಶ್ಯೆಯರ ಬಗ್ಗೆ ಮಾತಾಡಿದ್ದರು, ಈಗ ನೃತ್ಯಗಾರರ ಬಗ್ಗೆ ಮಾತಾಡಿದ್ದಾರೆ.‌ ಅವರ ನೆತ್ತಿ ಮೇಲೆ ದೇಶದ ಲಾಂಛನ‌ ಇದೆ, ಆ ಪೀಠದಲ್ಲಿ ಕೂತು ಗೌರವಯುತವಾಗಿ ಮಾತಾಡಬೇಕು. ದೇಶದಲ್ಲಿ ಭರತನಾಟ್ಯ, ಯಕ್ಷಗಾನ, ಕಥಕ್ಕಳಿ ಮೂಲಕ ದೇವರನ್ನು ಒಲಿಸಿಕೊಂಡ ಕಲಾವಿದರಿದ್ದಾರೆ ಎಂದು ಕಿಡಿಕಾರಿದರು.

ನೃತ್ಯದ ಬಗ್ಗೆ ಅವಹೇಳನಕಾರಿಯಾಗಿ ಆ ಪೀಠದಲ್ಲಿ ಕೂತು ಮಾತಾಡುತ್ತಿರೋದು ಅವರ ಮಾನಸಿಕತೆಯನ್ನು ತೋರಿಸುತ್ತದೆ.ಅವರು ಕೇವಲ ಕಾಂಗ್ರೆಸ್ ಏಜೆಂಟರಂತೆ ಮಾತಾಡುತ್ತಿದ್ದಾರೆ, ಕೂಡಲೇ ಅವರು ನೃತ್ಯಗಾರರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಸಿಎಂ ಈಗಾಗಲೇ ಬಹುಮತ ಕಳೆದುಕೊಂಡಿದ್ದಾರೆ, ಅವರು ರಾಜೀನಾಮೆ ಕೊಟ್ಟು ತೆರಳಿದರೆ ಅವರಿಗೆ ಗೌರವ ಬರುತ್ತದೆ. ಅಧಿಕಾರದಲ್ಲಿದ್ದಾಗ ಶಾಸಕರಿಗೆ ಭೇಟಿಗೆ ಅವಕಾಶ ಕೊಡದೆ ದರ್ಪ ತೋರಿಸಿದ್ದರು. ಇವತ್ತು ಮುಂಬೈಗೆ ಹೋಗಿ ಭೇಟಿ ಮಾಡಲು ಗೋಗರೆಯುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಬೆಂಗಳೂರು: ವಿಧಾನಸಭೆ ಅಧ್ಯಕ್ಷರ ಪೀಠದಲ್ಲಿ ಕುಳಿತು ರಮೇಶ್ ಕುಮಾರ್ ನೃತ್ಯಗಾರ ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತಾಡಿದ್ದು, ಕೂಡಲೇ ಸ್ಪೀಕರ್ ಕ್ಷಮೆ ಯಾಚಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿದರು

ನಾನು ನೃತ್ಯಗಾರನಲ್ಲ ಎಂದು ಸ್ಪೀಕರ್ ಪೀಠದಲ್ಲಿ ಕೂತು ರಮೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ. ಎರಡು ಮೂರು ಬಾರಿ ಅವರು ಅಸಾಂವಿಧಾನಾತ್ಮಕವಾಗಿ ಮಾತಾಡಿದ್ದಾರೆ. ಹಿಂದೆ ಅದೇ ಪೀಠದಲ್ಲಿ ಕೂತು ವೇಶ್ಯೆಯರ ಬಗ್ಗೆ ಮಾತಾಡಿದ್ದರು, ಈಗ ನೃತ್ಯಗಾರರ ಬಗ್ಗೆ ಮಾತಾಡಿದ್ದಾರೆ.‌ ಅವರ ನೆತ್ತಿ ಮೇಲೆ ದೇಶದ ಲಾಂಛನ‌ ಇದೆ, ಆ ಪೀಠದಲ್ಲಿ ಕೂತು ಗೌರವಯುತವಾಗಿ ಮಾತಾಡಬೇಕು. ದೇಶದಲ್ಲಿ ಭರತನಾಟ್ಯ, ಯಕ್ಷಗಾನ, ಕಥಕ್ಕಳಿ ಮೂಲಕ ದೇವರನ್ನು ಒಲಿಸಿಕೊಂಡ ಕಲಾವಿದರಿದ್ದಾರೆ ಎಂದು ಕಿಡಿಕಾರಿದರು.

ನೃತ್ಯದ ಬಗ್ಗೆ ಅವಹೇಳನಕಾರಿಯಾಗಿ ಆ ಪೀಠದಲ್ಲಿ ಕೂತು ಮಾತಾಡುತ್ತಿರೋದು ಅವರ ಮಾನಸಿಕತೆಯನ್ನು ತೋರಿಸುತ್ತದೆ.ಅವರು ಕೇವಲ ಕಾಂಗ್ರೆಸ್ ಏಜೆಂಟರಂತೆ ಮಾತಾಡುತ್ತಿದ್ದಾರೆ, ಕೂಡಲೇ ಅವರು ನೃತ್ಯಗಾರರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಸಿಎಂ ಈಗಾಗಲೇ ಬಹುಮತ ಕಳೆದುಕೊಂಡಿದ್ದಾರೆ, ಅವರು ರಾಜೀನಾಮೆ ಕೊಟ್ಟು ತೆರಳಿದರೆ ಅವರಿಗೆ ಗೌರವ ಬರುತ್ತದೆ. ಅಧಿಕಾರದಲ್ಲಿದ್ದಾಗ ಶಾಸಕರಿಗೆ ಭೇಟಿಗೆ ಅವಕಾಶ ಕೊಡದೆ ದರ್ಪ ತೋರಿಸಿದ್ದರು. ಇವತ್ತು ಮುಂಬೈಗೆ ಹೋಗಿ ಭೇಟಿ ಮಾಡಲು ಗೋಗರೆಯುತ್ತಿದ್ದಾರೆ ಎಂದು ಲೇವಡಿ ಮಾಡಿದರು.

Intro:


ಬೆಂಗಳೂರು: ವಿಧಾನಸಭೆ ಅಧ್ಯಕ್ಷರ ಪೀಠದಲ್ಲಿ ಕುಳಿತು ರಮೇಶ್ ಕುಮಾರ್ ನೃತ್ಯಗಾರರು ಹೆಣ್ಣುಮಕ್ಕಳ ಬಗ್ಗೆ ಹಗುರವಾಗಿ ಮಾತಾಡಿದ್ದು ಕೂಡಲೇ ಸ್ಪೀಕರ್ ಕ್ಷಮೆಯಾಚಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ನಾನು ನೃತ್ಯಗಾರನಲ್ಲ ಎಂದು ಸ್ಪೀಕರ್ ಪೀಠದಲ್ಲಿ ಕೂತು ರಮೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ. ಎರಡು ಮೂರು ಬಾರಿ ಅವರು ಅಸಾಂವಿಧಾನಾತ್ಮಕವಾಗಿ ಮಾತಾಡಿದ್ದಾರೆ‌ ಹಿಂದೆ ಅದೇ ಪೀಠದಲ್ಲಿ ಕೂತು ವೇಶ್ಯೆಯರ ಬಗ್ಗೆ ಮಾತಾಡಿದ್ದರು, ಈಗ ನೃತ್ಯಗಾರರ ಬಗ್ಗೆ ಮಾತಾಡಿದ್ದಾರೆ‌ ಅವರ ನೆತ್ತಿ ಮೇಲೆ ದೇಶದ ಲಾಂಛನ‌ ಇದೆ ಆ ಪೀಠದಲ್ಲಿ ಕೂತು ಗೌರವಯುತವಾಗಿ ಮಾತಾಡಬೇಕು ದೇಶದಲ್ಲಿ ಭರತನಾಟ್ಯ, ಯಕ್ಷಗಾನ, ಕಥಕ್ಕಳಿ ಮೂಲಕ ದೇವರನ್ನು ಒಲಿಸಿಕೊಂಡ ಕಲಾವಿದರಿದ್ದಾರೆ ಎಂದು ಕಿಡಿಕಾರಿದರು.

ನೃತ್ಯದ ಬಗ್ಗೆ ಅವಹೇಳನಕಾರಿಯಾಗಿ ಆ ಪೀಠದಲ್ಲಿ ಕೂತು ಮಾತಾಡುತ್ತಿರೋದು ಅವರ ಮಾನಸಿಕತೆಯನ್ನು ತೋರಿಸುತ್ತದೆ ಅವರು ಕೇವಲ ಕಾಂಗ್ರೆಸ್ ಏಜೆಂಟರಂತೆ ಮಾತಾಡುತ್ತಿದ್ದಾರೆ ಕೂಡಲೇ ಅವರು ನೃತ್ಯಗಾರರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಸಿಎಂ ಈಗಾಗಲೇ ಬಹುಮತ ಕಳೆದುಕೊಂಡಿದ್ದಾರೆ ಅವರು ರಾಜೀನಾಮೆ ಕೊಟ್ಟು ತೆರಳಿದರೆ ಅವರಿಗೆ ಗೌರವ ಬರುತ್ತದೆ ಅಧಿಕಾರದಲ್ಲಿದ್ದಾಗ ಶಾಸಕರಿಗೆ ಭೇಟಿಗೆ ಅವಕಾಶ ಕೊಡದೇ ದರ್ಪ ತೋರಿಸಿದ್ದರು ಇವತ್ತು ಮುಂಬೈಗೆ ಹೋಗಿ ಭೇಟಿ ಮಾಡಲು ಗೋಗರೆಯುತ್ತಿದ್ದಾರೆ ಎಂದು ಲೇವಡಿ ಮಾಡಿದರು.Body:.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.