ETV Bharat / state

ಶಾಮನೂರು ಶಿವಶಂಕರಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ ಜಗದೀಶ್ ಶೆಟ್ಟರ್

author img

By

Published : Apr 16, 2023, 8:08 PM IST

Updated : Apr 16, 2023, 8:16 PM IST

ಹೈಕಮಾಂಡ್​ ಜೊತೆ ಮಾತನಾಡಿದ್ದೇನೆ. ಅವರು ನನ್ನ ನೋವಿಗೆ ಪರಿಹಾರ ನೀಡಿಲ್ಲ. ಹಾಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಹೇಳಿದರು.

i-am-not-yet-resigned-for-bjp-says-jagadish-shettar
ನಾನಿನ್ನೂ ಬಿಜೆಪಿಗೆ ರಾಜೀನಾಮೆ ನೀಡಿಲ್ಲ: ಜಗದೀಶ್ ಶೆಟ್ಟರ್ ಸ್ಟಷ್ಟನೆ..!
ಜಗದೀಶ್ ಶೆಟ್ಟರ್

ಬೆಂಗಳೂರು : ನಾನಿನ್ನೂ ಬಿಜೆಪಿಗೆ ರಾಜೀನಾಮೆ ನೀಡಿಲ್ಲ. ಒಂದು ವಿಧಾನಸಭಾ ಸ್ಥಾನದ ಟಿಕೆಟ್‌ಗಾಗಿ ಇಷ್ಟೆಲ್ಲ ನಡೆಯಿತು ಎನ್ನುವ ನೋವಿನಿಂದ ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಬಿಜೆಪಿಗೆ ರಾಜೀನಾಮೆ ಸೇರಿದಂತೆ ಇನ್ನೆರಡು ದಿನದಲ್ಲಿ ಮುಂದಿನ ರಾಜಕೀಯ ನಡೆ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ ಶೆಟ್ಟರ್ ಶಾಂತಿನಗರದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿವಾಸಕ್ಕೆ ಭೇಟಿ ನೀಡಿದರು. ಸಂಬಂಧಿಯೂ ಆಗಿರುವ ಶಾಮನೂರು ಭೇಟಿಗೆ ಆಗಮಿಸಿರುವ ಶೆಟ್ಟರ್ ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನಾನು ಪಕ್ಷದ ಸದಸ್ಯತ್ವಕ್ಕೆ ಇನ್ನೂ ರಾಜೀನಾಮೆ ಕೊಟ್ಟಿಲ್ಲ. ಎಲ್ಲವನ್ನೂ ಸಮಾಲೋಚನೆ ಮಾಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇನೆ. ಕಳೆದ ಹಲವಾರು ತಿಂಗಳುಗಳಿಂದ ನೋವು ಅನುಭವಿಸಿದ್ದೇನೆ. ಕೇವಲ ಒಂದು ವಿಧಾನ ಪರಿಷತ್ ಸ್ಥಾನದ ಟಿಕೆಟ್ ಸಲುವಾಗಿ ಇಷ್ಟೆಲ್ಲ ಆಗಿದೆ ಎಂದು ಹೇಳಿದರು.

ಈ ವಿಚಾರವಾಗಿ ಹೈಕಮಾಂಡ್ ಜೊತೆ ಮಾತನಾಡಿದ್ದೇನೆ. ನಿನ್ನೆಯೂ ಹುಬ್ಬಳ್ಳಿಯ ನನ್ನ ಮನೆಗೆ ಧರ್ಮೇಂದ್ರ ಪ್ರಧಾನ್, ಬಸವರಾಜ ಬೊಮ್ಮಾಯಿ, ಪ್ರಹ್ಲಾದ್ ಜೋಷಿ ಸೇರಿ ಕೆಲ ನಾಯಕರು ಬಂದು ಮಾತನಾಡಿದರು. ಈ ಎಲ್ಲ ವಿಷಯದ ಬಗ್ಗೆ ಚರ್ಚೆಯಾಯಿತು. ಆದರೂ ಅಲ್ಲಿ ನನ್ನ ನೋವಿಗೆ ಪರಿಹಾರ ಸಿಗಲಿಲ್ಲ. ಹಾಗಾಗಿ ಬೇಸರಗೊಂಡು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದಿನ ರಾಜಕೀಯ ನಡೆಯ ಬಗ್ಗೆ ಇಂದು ಅಥವಾ ನಾಳೆ ನಿರ್ಧಾರ ಕೈಗೊಳ್ಳುತ್ತೇನೆ. ಏನೇ ನಿರ್ಧಾರ ಕೈಗೊಂಡರೂ ಮಾಧ್ಯಮಗಳಿಗೆ ತಿಳಿಸಿಯೇ ಕೈಗೊಳ್ಳುತ್ತೇನೆ ಎಂದರು.

ಕಾಂಗ್ರೆಸ್ ಸೇರುತ್ತೀರಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, ನಾನಿನ್ನೂ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ರಾಜೀನಾಮೆ ನೀಡಿದ ನಂತರ ಮುಂದಿನ ನಡೆ ಬಗ್ಗೆ ಹೇಳುತ್ತೇನೆ. ಇದೆಲ್ಲ ನಿರ್ಧಾರ ಆದ ನಂತರ ಮಾಧ್ಯಮಗಳ ಮುಂದೆ ಬಂದು ನಿರ್ಧಾರ ಪ್ರಕಟಿಸುತ್ತೇನೆ. ನಾಮಪತ್ರ ಸಲ್ಲಿಕೆಗೆ 20ರವರೆಗೂ ಸಮಯ ಇದೆ. ಹಾಗಾಗಿ ಇನ್ನೆರಡು ದಿನಗಳಲ್ಲಿ ರಾಜೀನಾಮೆ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದರು.

ನಾನಿನ್ನೂ ರಾಜೀನಾಮೆ ಕೊಟ್ಟಿಲ್ಲ. ಇಂದೇ ಕೊಡಬಹುದು ಅಥವಾ ನಾಳೆ ಕೊಡಬಹುದು. ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದ ವಿಚಾರ ತಳ್ಳಿಹಾಕಿದ ಶೆಟ್ಟರ್, ನಾನು ಎಐಸಿಸಿ ಅಧ್ಯಕ್ಷರ ಜೊತೆಗಾಗಲೀ, ರಾಹುಲ್ ಗಾಂಧಿ ಜೊತೆಗಾಗಲೀ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟನೆ ನೀಡಿದರು.

ಶಾಮನೂರು ನಿವಾಸದಲ್ಲಿ ಸಭೆ: ಶಾಮನೂರು ಶಿವಶಂಕರಪ್ಪ ಅವರ ಸಂಬಂಧಿಕರೂ ಆಗಿರುವ ಜಗದೀಶ್ ಶೆಟ್ಟರ್ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುವ ಮುನ್ನ ಶಾಮನೂರು ಜೊತೆ ಮಾತುಕತೆ ನಡೆಸಿದರು. ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಮನೂರು ಶಿವಶಂಕರಪ್ಪ ಶೆಟ್ಟರ್ ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಎಂದಿದ್ದರು. ಈ ಹಿನ್ನೆಲೆಯಲ್ಲಿಯೇ ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಜಗದೀಶ್ ಶೆಟ್ಟರ್ ಕುಟುಂಬಕ್ಕೆ ಟಿಕೆಟ್, ಶೆಟ್ಟರ್‌ಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಿದ್ದರೂ ಶೆಟ್ಟರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದ್ದು, ಬಿಜೆಪಿ ನಾಯಕರು ಕೂಡ ನಿಧಾನವಾಗಿ ಶೆಟ್ಟರ್ ವಿರುದ್ಧ ಅಸಮಾಧಾನದ ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ. ಈ ಎಲ್ಲ ವಿಚಾರಗಳನ್ನು ಗಮನದಲ್ಲಿರಿಸಿಕೊಂಡು ಶೆಟ್ಟರ್ ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ. ಇಂದೇ ಬಿಜೆಪಿಗೆ ರಾಜೀನಾಮೆ ನೀಡಬಹುದು ಅಥವಾ ನಾಳೆ ನೀಡಬಹುದು, ಸದ್ಯಕ್ಕೆ ಬಿಜೆಪಿ ತೊರೆಯುವ ನಿರ್ಧಾರದಲ್ಲಿ ಬದಲಾವಣೆ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಇದನ್ನೂ ಓದಿ : ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಬಂದ್ರೆ ಸ್ವಾಗತ: ಸತೀಶ್ ಜಾರಕಿಹೊಳಿ

ಜಗದೀಶ್ ಶೆಟ್ಟರ್

ಬೆಂಗಳೂರು : ನಾನಿನ್ನೂ ಬಿಜೆಪಿಗೆ ರಾಜೀನಾಮೆ ನೀಡಿಲ್ಲ. ಒಂದು ವಿಧಾನಸಭಾ ಸ್ಥಾನದ ಟಿಕೆಟ್‌ಗಾಗಿ ಇಷ್ಟೆಲ್ಲ ನಡೆಯಿತು ಎನ್ನುವ ನೋವಿನಿಂದ ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಬಿಜೆಪಿಗೆ ರಾಜೀನಾಮೆ ಸೇರಿದಂತೆ ಇನ್ನೆರಡು ದಿನದಲ್ಲಿ ಮುಂದಿನ ರಾಜಕೀಯ ನಡೆ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ ಶೆಟ್ಟರ್ ಶಾಂತಿನಗರದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿವಾಸಕ್ಕೆ ಭೇಟಿ ನೀಡಿದರು. ಸಂಬಂಧಿಯೂ ಆಗಿರುವ ಶಾಮನೂರು ಭೇಟಿಗೆ ಆಗಮಿಸಿರುವ ಶೆಟ್ಟರ್ ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನಾನು ಪಕ್ಷದ ಸದಸ್ಯತ್ವಕ್ಕೆ ಇನ್ನೂ ರಾಜೀನಾಮೆ ಕೊಟ್ಟಿಲ್ಲ. ಎಲ್ಲವನ್ನೂ ಸಮಾಲೋಚನೆ ಮಾಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇನೆ. ಕಳೆದ ಹಲವಾರು ತಿಂಗಳುಗಳಿಂದ ನೋವು ಅನುಭವಿಸಿದ್ದೇನೆ. ಕೇವಲ ಒಂದು ವಿಧಾನ ಪರಿಷತ್ ಸ್ಥಾನದ ಟಿಕೆಟ್ ಸಲುವಾಗಿ ಇಷ್ಟೆಲ್ಲ ಆಗಿದೆ ಎಂದು ಹೇಳಿದರು.

ಈ ವಿಚಾರವಾಗಿ ಹೈಕಮಾಂಡ್ ಜೊತೆ ಮಾತನಾಡಿದ್ದೇನೆ. ನಿನ್ನೆಯೂ ಹುಬ್ಬಳ್ಳಿಯ ನನ್ನ ಮನೆಗೆ ಧರ್ಮೇಂದ್ರ ಪ್ರಧಾನ್, ಬಸವರಾಜ ಬೊಮ್ಮಾಯಿ, ಪ್ರಹ್ಲಾದ್ ಜೋಷಿ ಸೇರಿ ಕೆಲ ನಾಯಕರು ಬಂದು ಮಾತನಾಡಿದರು. ಈ ಎಲ್ಲ ವಿಷಯದ ಬಗ್ಗೆ ಚರ್ಚೆಯಾಯಿತು. ಆದರೂ ಅಲ್ಲಿ ನನ್ನ ನೋವಿಗೆ ಪರಿಹಾರ ಸಿಗಲಿಲ್ಲ. ಹಾಗಾಗಿ ಬೇಸರಗೊಂಡು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದಿನ ರಾಜಕೀಯ ನಡೆಯ ಬಗ್ಗೆ ಇಂದು ಅಥವಾ ನಾಳೆ ನಿರ್ಧಾರ ಕೈಗೊಳ್ಳುತ್ತೇನೆ. ಏನೇ ನಿರ್ಧಾರ ಕೈಗೊಂಡರೂ ಮಾಧ್ಯಮಗಳಿಗೆ ತಿಳಿಸಿಯೇ ಕೈಗೊಳ್ಳುತ್ತೇನೆ ಎಂದರು.

ಕಾಂಗ್ರೆಸ್ ಸೇರುತ್ತೀರಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, ನಾನಿನ್ನೂ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ರಾಜೀನಾಮೆ ನೀಡಿದ ನಂತರ ಮುಂದಿನ ನಡೆ ಬಗ್ಗೆ ಹೇಳುತ್ತೇನೆ. ಇದೆಲ್ಲ ನಿರ್ಧಾರ ಆದ ನಂತರ ಮಾಧ್ಯಮಗಳ ಮುಂದೆ ಬಂದು ನಿರ್ಧಾರ ಪ್ರಕಟಿಸುತ್ತೇನೆ. ನಾಮಪತ್ರ ಸಲ್ಲಿಕೆಗೆ 20ರವರೆಗೂ ಸಮಯ ಇದೆ. ಹಾಗಾಗಿ ಇನ್ನೆರಡು ದಿನಗಳಲ್ಲಿ ರಾಜೀನಾಮೆ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದರು.

ನಾನಿನ್ನೂ ರಾಜೀನಾಮೆ ಕೊಟ್ಟಿಲ್ಲ. ಇಂದೇ ಕೊಡಬಹುದು ಅಥವಾ ನಾಳೆ ಕೊಡಬಹುದು. ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದ ವಿಚಾರ ತಳ್ಳಿಹಾಕಿದ ಶೆಟ್ಟರ್, ನಾನು ಎಐಸಿಸಿ ಅಧ್ಯಕ್ಷರ ಜೊತೆಗಾಗಲೀ, ರಾಹುಲ್ ಗಾಂಧಿ ಜೊತೆಗಾಗಲೀ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟನೆ ನೀಡಿದರು.

ಶಾಮನೂರು ನಿವಾಸದಲ್ಲಿ ಸಭೆ: ಶಾಮನೂರು ಶಿವಶಂಕರಪ್ಪ ಅವರ ಸಂಬಂಧಿಕರೂ ಆಗಿರುವ ಜಗದೀಶ್ ಶೆಟ್ಟರ್ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುವ ಮುನ್ನ ಶಾಮನೂರು ಜೊತೆ ಮಾತುಕತೆ ನಡೆಸಿದರು. ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಮನೂರು ಶಿವಶಂಕರಪ್ಪ ಶೆಟ್ಟರ್ ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಎಂದಿದ್ದರು. ಈ ಹಿನ್ನೆಲೆಯಲ್ಲಿಯೇ ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಜಗದೀಶ್ ಶೆಟ್ಟರ್ ಕುಟುಂಬಕ್ಕೆ ಟಿಕೆಟ್, ಶೆಟ್ಟರ್‌ಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಿದ್ದರೂ ಶೆಟ್ಟರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದ್ದು, ಬಿಜೆಪಿ ನಾಯಕರು ಕೂಡ ನಿಧಾನವಾಗಿ ಶೆಟ್ಟರ್ ವಿರುದ್ಧ ಅಸಮಾಧಾನದ ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ. ಈ ಎಲ್ಲ ವಿಚಾರಗಳನ್ನು ಗಮನದಲ್ಲಿರಿಸಿಕೊಂಡು ಶೆಟ್ಟರ್ ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ. ಇಂದೇ ಬಿಜೆಪಿಗೆ ರಾಜೀನಾಮೆ ನೀಡಬಹುದು ಅಥವಾ ನಾಳೆ ನೀಡಬಹುದು, ಸದ್ಯಕ್ಕೆ ಬಿಜೆಪಿ ತೊರೆಯುವ ನಿರ್ಧಾರದಲ್ಲಿ ಬದಲಾವಣೆ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಇದನ್ನೂ ಓದಿ : ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಬಂದ್ರೆ ಸ್ವಾಗತ: ಸತೀಶ್ ಜಾರಕಿಹೊಳಿ

Last Updated : Apr 16, 2023, 8:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.