ETV Bharat / state

ನಾಗೇಶ್​​ ಭೇಟಿಗೆ ಮುಂಬೈಗೆ ಹೋಗಿದ್ದೆ, ಬಿಜೆಪಿಗೆ ಬೆಂಬಲ ಕೊಡಲು ಒಪ್ಪಿದ್ದಾರೆ: ಆರ್.ಅಶೋಕ್​​

author img

By

Published : Jul 11, 2019, 6:21 PM IST

ಮೈತ್ರಿ ಸರ್ಕಾರದಿಂದ ಬೇಸತ್ತ ಅತೃಪ್ತ ಶಾಸಕರಲ್ಲೊಬ್ಬರಾದ ನಾಗೇಶ್​ರನ್ನು ನಿನ್ನೆ ಆರ್.ಅಶೊಕ್ ಭೇಟಿ ಮಾಡಿದ್ದರು.

ಈಟಿವಿ ಭಾರತಕ್ಕೆ ಪ್ರತಿಕ್ರಿಯಿಸಿದ ಆರ್​. ಅಶೋಕ್​

ಬೆಂಗಳೂರು: ಮೈತ್ರಿ ಸರ್ಕಾರದ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮುಂಬೈ ಸೇರಿರುವ ಪಕ್ಷೇತರ ಶಾಸಕರನ್ನು ನಿನ್ನೆ ಬಿಜೆಪಿ ನಾಯಕರಾದ ಆರ್.ಅಶೋಕ್, ಕೆ.ಜಿ.ಬೋಪಯ್ಯ ಭೇಟಿ ಮಾಡಿದ್ದಾರೆ. ಈ ವಿಚಾರವಾಗಿ 'ಈಟಿವಿ ಭಾರತ'ಕ್ಕೆ ಪ್ರತಿಕ್ರಿಯಿಸಿದ ಶಾಸಕ ಆರ್.ಅಶೋಕ್, ಪಕ್ಷೇತರ ಶಾಸಕರಾದ ನಾಗೇಶ್ ಅವರನ್ನು ಭೇಟಿ ಮಾಡಲೆಂದು ನಾನು ಮುಂಬೈಗೆ ಹೋಗಿದ್ದೆ. ನಾಗೇಶ್ ಅವರು ಸಹ ಬಿಜೆಪಿಗೆ ಬೆಂಬಲ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ನಾನು ಮುಂಬೈಗೆ ಹೋಗಿದ್ದ ಕಾರಣ ಇದಲ್ಲದೆ ಬೇರಾವುದು ಅಲ್ಲ. ಮುಂಬೈನಲ್ಲಿ ಬೇರೆ ಯಾರನ್ನು ಭೇಟಿ ಮಾಡಿಲ್ಲ ಎಂದು ಹೇಳಿದರು.

ಈಟಿವಿ ಭಾರತಕ್ಕೆ ಪ್ರತಿಕ್ರಿಯಿಸಿದ ಆರ್​. ಅಶೋಕ್​


ಕಾಂಗ್ರೆಸ್ ಶಾಸಕರ ರಾಜೀನಾಮೆ ವಿಚಾರದ ಬಗ್ಗೆ ಸಂಜೆಯೊಳಗೆ ಸ್ಪೀಕರ್ ತೀರ್ಮಾನ ತೆಗೆದುಕೊಳ್ಳಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶಕ್ಕೆ ಪ್ರತಿಕ್ರಿಯೆ ನೀಡಿದ ಅರ್.ಅಶೋಕ್, ಇದೊಂದು ಉತ್ತಮ ಬೆಳವಣಿಗೆ. ಸ್ಪೀಕರ್ ಅವರು ಬೇಗ ಈ ನಿರ್ಧಾರ ತೆಗೆದುಕೊಂಡಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಸುಪ್ರೀಂ ಕೋರ್ಟ್​ನಿಂದ ಹೇಳಿಸಿಕೊಂಡು ನಿರ್ಧಾರ ತೆಗೆದುಕೊಳ್ಳುವಂತಹ ಪರಿಸ್ಥಿತಿ ಸ್ಪೀಕರ್ ಅವರಿಗೆ ಬಂದಿದೆ ಎಂದು ವ್ಯಂಗ್ಯವಾಡಿದರು. ಅಲ್ಲದೆ ವಿಧಾನಸಭೆಯಲ್ಲಿ ದೋಸ್ತಿ ಸರ್ಕಾರದ ಸಂಖ್ಯಾಬಲ ಕುಸಿದಿದ್ದು, ಮುಖ್ಯಮಂತ್ರಿಗಳಿಗೆ ಮಾನ ಮರ್ಯಾದೆ ಎಂಬುದು ಇದ್ದರೆ ರಾಜೀನಾಮೆ ನೀಡಬೇಕಿತ್ತು. ಅವರಿಗೆ ಅವ್ಯಾವುದು ಇಲ್ಲ. ಅದಕ್ಕೆ ವಿಧಾನಸೌಧದಲ್ಲಿ ಕೂತಿದ್ದಾರೆ. ಕಳೆದ ಬಾರಿ ವಿಧಾನಸಭೆಯಲ್ಲಿ ಬಹುಮತ ಇಲ್ಲದ ಕಾರಣ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಮುಖ್ಯಮಂತ್ರಿಗಳು ಕೂಡ ಗೌರವಯುತವಾಗಿ ರಾಜೀನಾಮೆ ಕೊಡಬೇಕು. ಮೈತ್ರಿ ಸರ್ಕಾರಕ್ಕೆ ಬಹುಮತ ಇಲ್ಲ ಎಂಬುದು ಜಗಜ್ಜಾಹೀರಾಗಿದೆ. ಜನರು ಕೂಡ ಅವರ ರಾಜೀನಾಮೆ ಬಗ್ಗೆಯೇ ಮಾತನಾಡಿಕೊಳ್ಳುತ್ತಿದ್ದಾರೆ ಎಂದರು.

ಇನ್ನು ಕಾಂಗ್ರೆಸ್​​ನ ರೆಬೆಲ್ ಶಾಸಕರು ರಾಜೀನಾಮೆ ನೀಡಿರುವ ವಿಚಾರವಾಗಿ ಆಪರೇಷನ್ ಕಮಲ ಎಂಬ ಮಾತು ಕೇಳಿಬರುತ್ತಿದೆ ಎಂದಿದ್ದಕ್ಕೆ, ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವುದಕ್ಕೂ ನಮಗೂ ಸಂಬಂಧ ಇಲ್ಲ. ನಾವು ಯಾವುದೇ ಆಪರೇಷನ್ ಕಮಲ ಮಾಡಿಲ್ಲ, ಮಾಡೋದು ಇಲ್ಲ. ಅದು ಅವರ ಆಂತರಿಕ ಜಗಳ. ದೇವೇಗೌಡರನ್ನು ಸಿದ್ಧರಾಮಯ್ಯ ಸೋಲಿಸಿದರು, ಸಿದ್ದರಾಮಯ್ಯ ಅವರನ್ನು ದೇವೇಗೌಡ ಸೋಲಿಸಿದರು. ಅವರ ಒಳಜಗಳದಿಂದ ಸರ್ಕಾರ ಪತನವಾಗಿದೆ ಎಂದು ಹೇಳಿದ ಅರ್.ಅಶೋಕ್, ಬಿಜೆಪಿ ಸರ್ಕಾರ ರಚಿಸುವ ಬಗ್ಗೆ ಇನ್ನು ಗೊತ್ತಿಲ್ಲ. ಯೋಚನೆ ಮಾಡುತ್ತೇವೆ ಎಂಬ ಹಾರಿಕೆ ಉತ್ತರ ನೀಡಿದರು.

ಬೆಂಗಳೂರು: ಮೈತ್ರಿ ಸರ್ಕಾರದ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮುಂಬೈ ಸೇರಿರುವ ಪಕ್ಷೇತರ ಶಾಸಕರನ್ನು ನಿನ್ನೆ ಬಿಜೆಪಿ ನಾಯಕರಾದ ಆರ್.ಅಶೋಕ್, ಕೆ.ಜಿ.ಬೋಪಯ್ಯ ಭೇಟಿ ಮಾಡಿದ್ದಾರೆ. ಈ ವಿಚಾರವಾಗಿ 'ಈಟಿವಿ ಭಾರತ'ಕ್ಕೆ ಪ್ರತಿಕ್ರಿಯಿಸಿದ ಶಾಸಕ ಆರ್.ಅಶೋಕ್, ಪಕ್ಷೇತರ ಶಾಸಕರಾದ ನಾಗೇಶ್ ಅವರನ್ನು ಭೇಟಿ ಮಾಡಲೆಂದು ನಾನು ಮುಂಬೈಗೆ ಹೋಗಿದ್ದೆ. ನಾಗೇಶ್ ಅವರು ಸಹ ಬಿಜೆಪಿಗೆ ಬೆಂಬಲ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ನಾನು ಮುಂಬೈಗೆ ಹೋಗಿದ್ದ ಕಾರಣ ಇದಲ್ಲದೆ ಬೇರಾವುದು ಅಲ್ಲ. ಮುಂಬೈನಲ್ಲಿ ಬೇರೆ ಯಾರನ್ನು ಭೇಟಿ ಮಾಡಿಲ್ಲ ಎಂದು ಹೇಳಿದರು.

ಈಟಿವಿ ಭಾರತಕ್ಕೆ ಪ್ರತಿಕ್ರಿಯಿಸಿದ ಆರ್​. ಅಶೋಕ್​


ಕಾಂಗ್ರೆಸ್ ಶಾಸಕರ ರಾಜೀನಾಮೆ ವಿಚಾರದ ಬಗ್ಗೆ ಸಂಜೆಯೊಳಗೆ ಸ್ಪೀಕರ್ ತೀರ್ಮಾನ ತೆಗೆದುಕೊಳ್ಳಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶಕ್ಕೆ ಪ್ರತಿಕ್ರಿಯೆ ನೀಡಿದ ಅರ್.ಅಶೋಕ್, ಇದೊಂದು ಉತ್ತಮ ಬೆಳವಣಿಗೆ. ಸ್ಪೀಕರ್ ಅವರು ಬೇಗ ಈ ನಿರ್ಧಾರ ತೆಗೆದುಕೊಂಡಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಸುಪ್ರೀಂ ಕೋರ್ಟ್​ನಿಂದ ಹೇಳಿಸಿಕೊಂಡು ನಿರ್ಧಾರ ತೆಗೆದುಕೊಳ್ಳುವಂತಹ ಪರಿಸ್ಥಿತಿ ಸ್ಪೀಕರ್ ಅವರಿಗೆ ಬಂದಿದೆ ಎಂದು ವ್ಯಂಗ್ಯವಾಡಿದರು. ಅಲ್ಲದೆ ವಿಧಾನಸಭೆಯಲ್ಲಿ ದೋಸ್ತಿ ಸರ್ಕಾರದ ಸಂಖ್ಯಾಬಲ ಕುಸಿದಿದ್ದು, ಮುಖ್ಯಮಂತ್ರಿಗಳಿಗೆ ಮಾನ ಮರ್ಯಾದೆ ಎಂಬುದು ಇದ್ದರೆ ರಾಜೀನಾಮೆ ನೀಡಬೇಕಿತ್ತು. ಅವರಿಗೆ ಅವ್ಯಾವುದು ಇಲ್ಲ. ಅದಕ್ಕೆ ವಿಧಾನಸೌಧದಲ್ಲಿ ಕೂತಿದ್ದಾರೆ. ಕಳೆದ ಬಾರಿ ವಿಧಾನಸಭೆಯಲ್ಲಿ ಬಹುಮತ ಇಲ್ಲದ ಕಾರಣ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಮುಖ್ಯಮಂತ್ರಿಗಳು ಕೂಡ ಗೌರವಯುತವಾಗಿ ರಾಜೀನಾಮೆ ಕೊಡಬೇಕು. ಮೈತ್ರಿ ಸರ್ಕಾರಕ್ಕೆ ಬಹುಮತ ಇಲ್ಲ ಎಂಬುದು ಜಗಜ್ಜಾಹೀರಾಗಿದೆ. ಜನರು ಕೂಡ ಅವರ ರಾಜೀನಾಮೆ ಬಗ್ಗೆಯೇ ಮಾತನಾಡಿಕೊಳ್ಳುತ್ತಿದ್ದಾರೆ ಎಂದರು.

ಇನ್ನು ಕಾಂಗ್ರೆಸ್​​ನ ರೆಬೆಲ್ ಶಾಸಕರು ರಾಜೀನಾಮೆ ನೀಡಿರುವ ವಿಚಾರವಾಗಿ ಆಪರೇಷನ್ ಕಮಲ ಎಂಬ ಮಾತು ಕೇಳಿಬರುತ್ತಿದೆ ಎಂದಿದ್ದಕ್ಕೆ, ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವುದಕ್ಕೂ ನಮಗೂ ಸಂಬಂಧ ಇಲ್ಲ. ನಾವು ಯಾವುದೇ ಆಪರೇಷನ್ ಕಮಲ ಮಾಡಿಲ್ಲ, ಮಾಡೋದು ಇಲ್ಲ. ಅದು ಅವರ ಆಂತರಿಕ ಜಗಳ. ದೇವೇಗೌಡರನ್ನು ಸಿದ್ಧರಾಮಯ್ಯ ಸೋಲಿಸಿದರು, ಸಿದ್ದರಾಮಯ್ಯ ಅವರನ್ನು ದೇವೇಗೌಡ ಸೋಲಿಸಿದರು. ಅವರ ಒಳಜಗಳದಿಂದ ಸರ್ಕಾರ ಪತನವಾಗಿದೆ ಎಂದು ಹೇಳಿದ ಅರ್.ಅಶೋಕ್, ಬಿಜೆಪಿ ಸರ್ಕಾರ ರಚಿಸುವ ಬಗ್ಗೆ ಇನ್ನು ಗೊತ್ತಿಲ್ಲ. ಯೋಚನೆ ಮಾಡುತ್ತೇವೆ ಎಂಬ ಹಾರಿಕೆ ಉತ್ತರ ನೀಡಿದರು.

Intro:ಮೈತ್ರಿ ಸರ್ಕಾರದ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಮುಂಬೈ ಸೇರಿರುವ ಪಕ್ಷೇತರ ಶಾಸಕರನ್ನು ನಿನ್ನೆ ಬಿಜೆಪಿ ನಾಯಕರಾದ ಆರ್ ಅಶೋಕ್ ಆಗೋಕೆ ಜಿ ಬೋಪಯ್ಯ ಅವರು ಭೇಟಿ ಮಾಡಿಕೊಂಡು ಬಂದಿದ್ದರು. ಈ ವಿಚಾರವಾಗಿ ಈಟಿವಿ ಭಾರತ ಪ್ರತಿಕ್ರಿಯೆ ನೀಡಿದ ಮಾಜಿ ಉಪಮುಖ್ಯಮಂತ್ರಿ ಶಾಸಕರಾದ ಆರ್ ಅಶೋಕ್ ಪಕ್ಷೇತರ ಶಾಸಕರಾದ ನಾಗೇಶ್ ಅವರನ್ನು ಭೇಟಿ ಮಾಡಲಿದೆ ನಾನು ಮುಂಬೈ ಗೆ ಹೋಗಿದ್ದೆ. ನಾಗೇಶ್ ಅವರು ಸಹ ಬಿಜೆಪಿಗೆ ಬೆಂಬಲ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ನಾನು ಮುಂಬೈಗೆ ಹೋಗಿದ್ದ ಕಾರಣ ಸಹ ಇದೆ ಅಲ್ಲದೆ ನಾನು ಮುಂಬೈನಲ್ಲಿ ಬೇರೆ ಯಾರನ್ನು ಭೇಟಿ ಮಾಡಿಲ್ಲ ಎಂದು ಹೇಳಿದರು.


Body:ಅಲ್ಲದೆ ಕಾಂಗ್ರೆಸ್ ನ ಶಾಸಕರು ಇಂದು ಸ್ಪೀಕರ್ ಅವರನ್ನು ಭೇಟಿ ಮಾಡಿ ನೇರವಾಗಿ ರಾಜಿನಾಮೆ ನೀಡಬೇಕು. ಕಾಂಗ್ರೆಸ್ ಶಾಸಕರು ರಾಜಿನಾಮೆ ವಿಚಾರವನ್ನು ಸಂಜೆಯೊಳಗೆ ಸ್ಪೀಕರ್ ತೀರ್ಮಾನ ತೆಗೆದುಕೊಳ್ಳಬೇಕು. ಎಂಬ ಸುಪ್ರೀಂ ಕೋರ್ಟ್ ಆದೇಶಕ್ಕೆ ಪ್ರತಿಕ್ರಿಯೆ ನೀಡಿದ ಅರ್ ಅಶೋಕ್ ಉತ್ತಮ ಬೆಳವಣಿಗೆ ಸ್ಪೀಕರ್ ಅವರು ಬೇಗ ನಿರ್ಧಾರ ತೆಗೆದುಕೊಂಡಿದ್ದಾರೆ ಈ ರೀತಿ ಆಗುತ್ತಿರಲಿಲ್ಲ. ಸುಪ್ರೀಂಕೋರ್ಟ್ ನಿಂದ ಹೇಳಿಸಿಕೊಂಡು ತೆಗೆದುಕೊಳ್ಳುವಂತಹ ಪರಿಸ್ಥಿತಿ ಸ್ಪೀಕರ್ ಅವರಿಗೆ ಬಂದಿದೆ ಎಂದು ವ್ಯಂಗ್ಯವಾಡಿದರು.


Conclusion:ಅಲ್ಲದೆ ವಿಧಾನಸಭೆಯಲ್ಲಿ ದೋಸ್ತಿ ಸರ್ಕಾರದ ಸಂಖ್ಯಾಬಲ ಕುಸಿದಿದೆ. ಮುಖ್ಯಮಂತ್ರಿ ಗಳು ಮಾನ ಮರ್ಯಾದೆ ಇದ್ದಿದ್ರೆ ರಾಜೀನಾಮೆ ನೀಡಬೇಕಿತ್ತು. ಅವರಿಗೆ ಮಾನ ಮರ್ಯಾದೆ ಇಲ್ಲ ಅದಕ್ಕೆ ವಿಧಾನಸೌಧದಲ್ಲಿ ಕೂತಿದ್ದಾರೆ ಕಳೆದ ಬಾರಿ ವಿಧಾನಸಭೆಯಲ್ಲಿ ಬಹುಮತ ಇಲ್ಲದ ಕಾರಣ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು ಈಗ ಮುಖ್ಯಮಂತ್ರಿಗಳು ಕೂಡ ಗೌರವಯುತವಾಗಿ ರಾಜೀನಾಮೆ ಕೊಡಬೇಕು ಮೈತ್ರಿ ಸರ್ಕಾರಕ್ಕೆ ಬಹುಮತ ಇಲ್ಲ ಎಂಬುದು ಜಗಜ್ಜಾಹೀರಾಗಿದೆ ಜನರು ಮಾತನಾಡಿಕೊಳ್ಳುತ್ತಿದ್ದಾರೆ ಇಮ್ಮಿಡಿಯೇಟ್ ಆಗಿ ಸಿಎಂ ರಾಜೀನಾಮೆ ನೀಡಬೇಕು ಎಂದರು. ಇನ್ನು ಕಾಂಗ್ರೆಸ್ನ ರೆಬೆಲ್ ಶಾಸಕರು ರಾಜೀನಾಮೆ ನೀಡಿರುವ ವಿಚಾರವಾಗಿ ಆಪರೇಷನ್ ಕಮಲ ಎಂಬ ಮಾತು ಕೇಳಿಬರುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಆರ್ ಅಶೋಕ್ ಕಾಂಗ್ರೆಸ್ ಶಾಸಕರ ರಾಜೀನಾಮೆ ನೀಡಿರುವುದು ನಮಗೆ ಸಂಬಂಧ ಇಲ್ಲ. ನಾವ್ ಯಾವುದೇ ಆಪರೇಷನ್ ಕಮಲ ಮಾಡಿಲ್ಲ ಮಾಡೋದು ಇಲ್ಲ, ಅದು ಅವರ ಆಂತರಿಕ ಜಗಳ ದೇವೇಗೌಡರನ್ನು ಸಿದ್ಧರಾಮಯ್ಯ ಸೋಲಿಸಿದರು ಸಿದ್ದರಾಮಯ್ಯ ಅವರನ್ನು ದೇವೇಗೌಡ ಸೋಲಿಸಿದರು ಅವರ ಒಳಜಗಳದಿಂದ ಸರ್ಕಾರ ಪತನವಾಗಿದೆ ಎಂದೆ ಹೇಳಿದ ಅರ್ ಅಶೋಕ್ ಬಿಜೆಪಿ ಸರ್ಕಾರ ರಚಿಸುವ ಬಗ್ಗೆ ಇನ್ನು ಗೊತ್ತಿಲ್ಲ ಯೋಚನೆ ಮಾಡ್ತೀವಿ ಎಂಬ ಹಾರಿಕೆ ಉತ್ತರ ನೀಡಿದರು..

ಸತೀಶ ಎಂಬಿ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.