ಬೆಂಗಳೂರು: ಪಕ್ಷ ಬಿಡೋ ಮಾತೇ ಇಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂದು ಭದ್ರಾವತಿ ಶಾಸಕ ಸಂಗಮೇಶ್ ಹೇಳಿದ್ದಾರೆ.
ಸಚಿವ ಸ್ಥಾನ ಕೊಟ್ಟರೂ, ಕೊಡದಿದ್ದರೂ ಸಂತೋಷ ಹಾಗೂ ಬಿಜೆಪಿ ಪಕ್ಷದವರು ನನಗೆ ಸಂಪರ್ಕಿಸಿಲ್ಲ ಎಂದು ಶಾಸಕ ಸಂಗಮೇಶ ಅವರು ಮಾಧ್ಯಮಗಳಿಗೆ ತಿಳಿಸಿದರು.
ಈ ಹಿಂದೆ ಭದ್ರಾವತಿಯ ಶಾಸಕ ಸಂಗಮೇಶ್ ಪಕ್ಷ ತೊರೆಯುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದ್ರೆ ಅವರ ಈ ಹೇಳಿಕೆಯಿಂದ ಎಲ್ಲಾ ಗೊಂದಲಕ್ಕೆ ತೆರೆ ಎಳೆದಂತೆ ಆಗಿದೆ.