ETV Bharat / state

ಜೆಡಿಎಸ್​ನ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದೆ: ಭಾವುಕರಾದ ದೇವೇಗೌಡರು!

author img

By

Published : Jul 28, 2019, 6:50 PM IST

ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದೆ ಎಂದು ಜೆಡಿಎಸ್‌ ವರಿಷ್ಠ ಹೆಚ್ ಡಿ ದೇವೇಗೌಡ ಬಾವುಕರಾಗಿ ನುಡಿದರು. ಇದೇ ವೇಳೆ ಅವರು 14 ಮಂದಿ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ಆದೇಶವನ್ನು ಕೊಂಡಾಡಿದ್ರು.

ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಜೆಡಿಎಸ್‌ಗೆ ನಿಷ್ಟಾವಂತರಾಗಿ ದುಡಿದ ಕಾರ್ಯಕರ್ತರನ್ನು ನಾನು ನಿರ್ಲಕ್ಷಿಸಿದ್ದೇನೆ ಎಂದು ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡರು ಭಾವುಕರಾಗಿ ನುಡಿದ ಸನ್ನಿವೇಶ ಭಾನುವಾರ ನಡೆದಿದೆ.

ಮಾಜಿ ಪ್ರಧಾನಿ ದೇವೇಗೌಡ

ಜೆ.ಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್​ನ​ ನಿಷ್ಠಾವಂತ ಕೆಲಸಗಾರರಿಗೆ ಯಾವುದೇ ಸೂಕ್ತ ಸ್ಥಾನಮಾನವನ್ನು ನೀಡಲಾಗಲಿಲ್ಲ. ಇದು ಅತ್ಯಂತ ನೋವಿನ ಸಂಗತಿ ಎಂದರು.

ಶಾಸಕರ ಅನರ್ಹತೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷಾಂತರ ನಿಷೇಧ ಕಾನೂನು ‌ಜಾರಿಗೆ ಬಂದ ಮೇಲೆ ಅನೇಕ ರೀತಿಯ ತೀರ್ಪುಗಳು ಪ್ರಕಟವಾಗಿವೆ. ಈ ದೇಶದಲ್ಲಿ ವಿವಿಧ ರಾಜ್ಯದ ಸಭಾಧ್ಯಕ್ಷರು ತೀರ್ಪು ನೀಡಿದ್ದಾರೆ. ಆದರೆ, ಭಾನುವಾರ ಕರ್ನಾಟಕದ ಸ್ಪೀಕರ್ ವಿಶೇಷ ತೀರ್ಪು ಕೊಟ್ಟಿದ್ದಾರೆ ಎಂದು ಕೊಂಡಾಡಿದ್ರು.

ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ಬಗ್ಗೆ ಚರ್ಚೆಯಾಗುತ್ತಿದೆ. ಅವರು ಯಾವುದೇ ಒತ್ತಡಕ್ಕೆ ಮಣಿದು ಶಾಸಕರನ್ನು ಅನರ್ಹಗೊಳಿಸಿಲ್ಲ. ಅವರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ರಮೇಶಕುಮಾರ್ ಅವರು ನ್ಯಾಯ, ಸಂವಿಧಾನದ ಪರ ದನಿ ಎತ್ತಿದ್ದಾರೆ. ಅದೇ ಕಾರಣಕ್ಕೆ ಅವರು ರಾಜೀನಾಮೆ ಪತ್ರವನ್ನು ಸದನದಲ್ಲಿ ತೋರಿಸಿದ್ದು ಎಂದರು.

ಮೈತ್ರಿ ಮುಂದುವರಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಯಾವ ರೀತಿ ನಿರ್ಧಾರ ಕೈಗೊಳ್ಳುತ್ತಾರೋ ಅದರ ಪ್ರಕಾರ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಬೆಂಗಳೂರು: ಜೆಡಿಎಸ್‌ಗೆ ನಿಷ್ಟಾವಂತರಾಗಿ ದುಡಿದ ಕಾರ್ಯಕರ್ತರನ್ನು ನಾನು ನಿರ್ಲಕ್ಷಿಸಿದ್ದೇನೆ ಎಂದು ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡರು ಭಾವುಕರಾಗಿ ನುಡಿದ ಸನ್ನಿವೇಶ ಭಾನುವಾರ ನಡೆದಿದೆ.

ಮಾಜಿ ಪ್ರಧಾನಿ ದೇವೇಗೌಡ

ಜೆ.ಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್​ನ​ ನಿಷ್ಠಾವಂತ ಕೆಲಸಗಾರರಿಗೆ ಯಾವುದೇ ಸೂಕ್ತ ಸ್ಥಾನಮಾನವನ್ನು ನೀಡಲಾಗಲಿಲ್ಲ. ಇದು ಅತ್ಯಂತ ನೋವಿನ ಸಂಗತಿ ಎಂದರು.

ಶಾಸಕರ ಅನರ್ಹತೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷಾಂತರ ನಿಷೇಧ ಕಾನೂನು ‌ಜಾರಿಗೆ ಬಂದ ಮೇಲೆ ಅನೇಕ ರೀತಿಯ ತೀರ್ಪುಗಳು ಪ್ರಕಟವಾಗಿವೆ. ಈ ದೇಶದಲ್ಲಿ ವಿವಿಧ ರಾಜ್ಯದ ಸಭಾಧ್ಯಕ್ಷರು ತೀರ್ಪು ನೀಡಿದ್ದಾರೆ. ಆದರೆ, ಭಾನುವಾರ ಕರ್ನಾಟಕದ ಸ್ಪೀಕರ್ ವಿಶೇಷ ತೀರ್ಪು ಕೊಟ್ಟಿದ್ದಾರೆ ಎಂದು ಕೊಂಡಾಡಿದ್ರು.

ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ಬಗ್ಗೆ ಚರ್ಚೆಯಾಗುತ್ತಿದೆ. ಅವರು ಯಾವುದೇ ಒತ್ತಡಕ್ಕೆ ಮಣಿದು ಶಾಸಕರನ್ನು ಅನರ್ಹಗೊಳಿಸಿಲ್ಲ. ಅವರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ರಮೇಶಕುಮಾರ್ ಅವರು ನ್ಯಾಯ, ಸಂವಿಧಾನದ ಪರ ದನಿ ಎತ್ತಿದ್ದಾರೆ. ಅದೇ ಕಾರಣಕ್ಕೆ ಅವರು ರಾಜೀನಾಮೆ ಪತ್ರವನ್ನು ಸದನದಲ್ಲಿ ತೋರಿಸಿದ್ದು ಎಂದರು.

ಮೈತ್ರಿ ಮುಂದುವರಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಯಾವ ರೀತಿ ನಿರ್ಧಾರ ಕೈಗೊಳ್ಳುತ್ತಾರೋ ಅದರ ಪ್ರಕಾರ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

Intro:GggfBody:KN_BNG_03_DEVEGOWDA_PRESSMEET_SCRIPT_7201951

ಅತೃಪ್ತರನ್ನು ಅನರ್ಹಗೊಳಿಸಿರುವುದು ಐತಿಹಾಸಿಕ ನಿರ್ಣಯ: ಎಚ್.ಡಿ.ದೇವೇಗೌಡ

ಬೆಂಗಳೂರು: ಸ್ಪೀಕರ್ 14 ಅತೃಪ್ತ ಶಾಸಕರನ್ನು ಅನರ್ಹತೆ ಮಾಡಿರುವುದು ಈ ದೇಶದಲ್ಲೇ ಐತಿಹಾಸಿಕ ‌ನಿರ್ಣಯವಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದರು.

ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪಕ್ಷಾಂತರ ಕಾನೂನು ‌ಜಾರಿಗೆ ಬಂದ ಮೇಲೆ ಅನೇಕ ರೀತಿಯ ತೀರ್ಪುಗಳು ಪ್ರಕಟ ಆಗಿವೆ. ಈ ದೇಶದಲ್ಲಿ ವಿವಿಧ ರಾಜ್ಯದ ಸಭಾಧ್ಯಕ್ಷರು ತೀರ್ಪು ಪ್ರಕಟ ಮಾಡಿದ್ದಾರೆ. ಹಲವಾರು ತೀರ್ಪುಗಳು ಹೊರ ಬಿದ್ದಿವೆ. ಆದರೆ ಇಂದು ಕರ್ನಾಟಕದ ಸ್ಪೀಕರ್ ವಿಶೇಷ ತೀರ್ಪು ಕೊಟ್ಟಿದ್ದಾರೆ. ಈಗಾಗಲೇ ಈ ಬಗ್ಗೆ ಮೂವರು ಶಾಸಕರು, ಸರ್ವೋಚ್ಚ ನ್ಯಾಯಾಲಯದ ಮುಂದೆ ಪ್ರಶ್ನೆ ಮಾಡಲು ಹೊರಟಿದ್ದಾರೆ‌. ಇನ್ನುಳಿದ 14 ಶಾಸಕರು ಏನು ಮಾಡುತ್ತಾರೆ ಅನ್ನೋದನ್ನು ಕಾದು ನೋಡಬೇಕು ಎಂದು ತಿಳಿಸಿದರು.

ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ಬಗ್ಗೆ ಚರ್ಚೆಯಾಗಿದೆ‌. ಸ್ಪೀಕರ್ ಯಾವುದೇ ಒತ್ತಡಕ್ಕೆ ಮಣಿದಿಲ್ಲ. ಸ್ಪೀಕರ್ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ರಾಜೀನಾಮೆ ಪತ್ರವನ್ನು ಸದನದಲ್ಲಿ ಸ್ಪೀಕರ್ ತೋರಿಸಿದ್ದಾರೆ ಎಂದು ತಿಳಿಸಿದರು.

ಹಣಕಾಸು ವಿಧೇಯಕಕ್ಕೆ ನಾವು ವಿರೋಧ ಮಾಡುವುದಿಲ್ಲ. ಈ ಹಿಂದೆ ಕುಮಾರಸ್ವಾಮಿಯವರು ಬಜೆಟ್ ನ್ನು ಮಂಡಿಸಿದರು. ಇದೀಗ ಅದೇ ಬಜೆಟ್ ಗೆ ಬಿಎಸ್ ವೈ ಒಪ್ಪಿಗೆ ಪಡೆಯುತ್ತಿದ್ದಾರೆ. ಹೀಗಾಗಿ ಹಣಕಾಸಿನ ವಿಧೇಯಕಕ್ಕೆ ನಮ್ಮ ತಕರಾರು ಇಲ್ಲ. ಹಣಕಾಸಿನ ವಿಧೇಯಕಕ್ಕೆ ಬೆಂಬಲ ಇರೋ ಅರ್ಥದಲ್ಲಿ ಜಿಟಿ ದೇವೇಗೌಡರು ಹೇಳಿದ್ದಾರೆ. ಅದನ್ನು ಬೇರೆಯದಾಗಿ ವ್ಯಾಖ್ಯಾನ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.


ನಿಷ್ಠಾವಂತ ಕಾರ್ಯಕರ್ತರನ್ನು ನಾನು ಕಡೆಗಣಿಸಿದ್ದೇನೆ. ನಿಷ್ಠಾವಂತ ಕಾರ್ಯಕತರಿಗೆ
ಯಾವುದೇ ಸ್ಥಾನಮಾನ ನಾನು ಕೊಡಲು ಸಾಧ್ಯ ಆಗಿಲ್ಲ‌. ಮೈತ್ರಿ ಸರ್ಕಾರದಲ್ಲಿ ಸ್ಥಾನಮಾನ ಕೊಡಲು ಸಾಧ್ಯ ಆಗಿಲ್ಲ ಎಂದು ದೇವೇಗೌಡರು ಭಾವುಕರಾಗಿ ನುಡಿದರು.

ಮೈತ್ರಿ ಮುಂದುವರಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಯಾವ ರೀತಿ ನಿರ್ಧಾರ ಕೈಗೊಳ್ಳುತ್ತಾರೋ ಅದರ ಪ್ರಕಾರ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ದೇವೇಗೌಡರು ಇದೇ ವೇಳೆ ಸ್ಪಷ್ಟಪಡಿಸಿದರು.Conclusion:Ggg
ETV Bharat Logo

Copyright © 2024 Ushodaya Enterprises Pvt. Ltd., All Rights Reserved.