ETV Bharat / state

ಐಎಂಎ ವಂಚನೆ ಪ್ರಕರಣ: ಮತ್ತೆ ಇಡಿ ವಶಕ್ಕೆ ‌ಮನ್ಸೂರ್‌ ಖಾನ್‌, ವಿಜಯ್‌ ಶಂಕರ್‌ಗೆ ಬೇಲ್

author img

By

Published : Jul 26, 2019, 6:02 PM IST

ಕಳೆದು ತಿಂಗಳು ಬೆಳಕಿಗೆ ಬಂದಿದ್ದ ಐಎಂಎ ಜ್ಯುವೆಲ್ಸ್ ಮಾಲೀಕ ಮೊಹಮದ್ ಮನ್ಸೂರ್ ಅಲಿ ಖಾನ್​ನ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮನ್ಸೂರ್ ಖಾನ್​ನನ್ನ ಇಡಿ ಅಧಿಕಾರಿಗಳ ವಶಕ್ಕೆ ನೀಡಿದೆ.

ಐಎಂಎ ವಂಚನೆ ಪ್ರಕರಣ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ಅವರನ್ನು ಮತ್ತೆ ವಿಚಾರಣೆಗಾಗಿ ಇಡಿ ಅಧಿಕಾರಿಗಳ ವಶಕ್ಕೆ ಕೋರ್ಟ್ ಒಪ್ಪಿಸಿದೆ.

ಇಂದು ಆರೋಪಿ ಮನ್ಸೂರ್ ಅವರನ್ನು ಸಂಜೆ 3.15 ರ ಸಮಯದಲ್ಲಿ ಇಡಿ ಅಧಿಕಾರಿಗಳು ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸಿಟಿ ಸಿವಿಲ್ ಕೋರ್ಟ್​ಗೆ ಹಾಜರು ಪಡಿಸಿದ್ದು, ಸಿಟಿ ಸಿವಿಲ್​ನ ಕೋರ್ಟ್‌ನಲ್ಲಿ ನ್ಯಾಯಾಧೀಶರ ಎದುರು ಹಾಜರು ಪಡಿಸಿದ್ರು.

ಈ ವೇಳೆ ಇಡಿ ಪರ ವಕೀಲ ಮನ್ಸೂರ್​ಗೆ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಸರಿಯಾದ ತನಿಖೆ ನಡೆಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ರು. ನ್ಯಾಯಾಲಯದಲ್ಲಿ ವಾದ ವಿವಾದ ಆಲಿಸಿದ ನಂತರ ಮನ್ಸೂರ್ ಖಾನ್ ನನ್ನ ಮತ್ತೆ 5 ದಿನಗಳ ಕಾಲ ಇಡಿ ವಶಕ್ಕೆ ನೀಡಿ ನ್ಯಾಯಾಧೀಶ ಶಿವಶಂಕರ ಅಮರಣ್ಣ ಆದೇಶ ಹೊರಡಿಸಿದರು.

ಮೂರನೇ ಬಾರಿಗೆ ಮತ್ತೆ ಇಡಿ ಅಧಿಕಾರಿಗಳ ವಿಚಾರಣೆಗೆಂದು ಕೋರ್ಟ್ ಮುಂದಿನ ತಿಂಗಳು 1 ನೇ ತಾರೀಖಿನವರೆಗೆ ವಶಕ್ಕೆ ನೀಡಿದೆ.

ಮೂವರು ಆರೋಪಿಗಳಿಗೆ ಜಾಮೀನು:

ಇನ್ನು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ಮತ್ತು ಸಹಾಯಕ ಆಯುಕ್ತ ನಾಗರಾಜ್ ಸೇರಿದಂತೆ ಮೂವರು ಅಧಿಕಾರಿಗಳಿಗೆ ಜಾಮೀನು ನೀಡಲಾಗಿದೆ. ಹಾಗೆ ಪ್ರಕರಣದ ಮತ್ತೊಬ್ಬ ಆರೋಪಿ ಪಾದ್ರಿ ಹನೀಫ್ ಅಫ್ಸರ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ.

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ಅವರನ್ನು ಮತ್ತೆ ವಿಚಾರಣೆಗಾಗಿ ಇಡಿ ಅಧಿಕಾರಿಗಳ ವಶಕ್ಕೆ ಕೋರ್ಟ್ ಒಪ್ಪಿಸಿದೆ.

ಇಂದು ಆರೋಪಿ ಮನ್ಸೂರ್ ಅವರನ್ನು ಸಂಜೆ 3.15 ರ ಸಮಯದಲ್ಲಿ ಇಡಿ ಅಧಿಕಾರಿಗಳು ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸಿಟಿ ಸಿವಿಲ್ ಕೋರ್ಟ್​ಗೆ ಹಾಜರು ಪಡಿಸಿದ್ದು, ಸಿಟಿ ಸಿವಿಲ್​ನ ಕೋರ್ಟ್‌ನಲ್ಲಿ ನ್ಯಾಯಾಧೀಶರ ಎದುರು ಹಾಜರು ಪಡಿಸಿದ್ರು.

ಈ ವೇಳೆ ಇಡಿ ಪರ ವಕೀಲ ಮನ್ಸೂರ್​ಗೆ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಸರಿಯಾದ ತನಿಖೆ ನಡೆಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ರು. ನ್ಯಾಯಾಲಯದಲ್ಲಿ ವಾದ ವಿವಾದ ಆಲಿಸಿದ ನಂತರ ಮನ್ಸೂರ್ ಖಾನ್ ನನ್ನ ಮತ್ತೆ 5 ದಿನಗಳ ಕಾಲ ಇಡಿ ವಶಕ್ಕೆ ನೀಡಿ ನ್ಯಾಯಾಧೀಶ ಶಿವಶಂಕರ ಅಮರಣ್ಣ ಆದೇಶ ಹೊರಡಿಸಿದರು.

ಮೂರನೇ ಬಾರಿಗೆ ಮತ್ತೆ ಇಡಿ ಅಧಿಕಾರಿಗಳ ವಿಚಾರಣೆಗೆಂದು ಕೋರ್ಟ್ ಮುಂದಿನ ತಿಂಗಳು 1 ನೇ ತಾರೀಖಿನವರೆಗೆ ವಶಕ್ಕೆ ನೀಡಿದೆ.

ಮೂವರು ಆರೋಪಿಗಳಿಗೆ ಜಾಮೀನು:

ಇನ್ನು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ಮತ್ತು ಸಹಾಯಕ ಆಯುಕ್ತ ನಾಗರಾಜ್ ಸೇರಿದಂತೆ ಮೂವರು ಅಧಿಕಾರಿಗಳಿಗೆ ಜಾಮೀನು ನೀಡಲಾಗಿದೆ. ಹಾಗೆ ಪ್ರಕರಣದ ಮತ್ತೊಬ್ಬ ಆರೋಪಿ ಪಾದ್ರಿ ಹನೀಫ್ ಅಫ್ಸರ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ.

Intro:Body:Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.