ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ಇಂದು ರೆಪೋ ದರ ಶೇ.35ರಷ್ಟು ಕಡಿತಗೊಳಿಸಿದ್ದು,ಈ ಬಗ್ಗೆ ಪ್ರತಿಕ್ರಿಯಿಸಿದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಸಿ.ಆರ್. ಜನಾರ್ಧನ್,ರೆಪೋ ದರ ಕಡಿತದಿಂದ ನಮ್ಮ ದೇಶದಲ್ಲಿ ಕೈಗಾರಿಕೆಗಳು ವೃದ್ಧಿಸುತ್ತವೆ. ಇದರಿಂದ ಜಿಡಿಪಿ ಸಹಾ ಏರುತ್ತದೆ ಎಂದು ತಿಳಿಸಿದ್ದಾರೆ.
ಹಿಂದೆ ಪ್ರೈಸ್ ಇಂಡಕ್ಸ್ ಏರಿಕೆಯಾಗುತ್ತಿತ್ತು. ಆದರೆ, ಈ ಬಾರಿ ಯಾವ ವಲಯಕ್ಕೆ ಬಡ್ಡಿದರವನ್ನು ಕಡಿತಗೊಳಿಸಬೇಕು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಸೂಕ್ಷ್ಮವಾಗಿ ಗಮನಿಸಿ ನಿರ್ಧಾರಗಳನ್ನು ಕೈಗೊಂಡಿದ್ದಾರೆ. 20 ಲಕ್ಷ ಸದಸ್ಯರ ಪರವಾಗಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಈ ನಿರ್ಧಾರವನ್ನು ಸ್ವಾಗತಿಸುತ್ತದೆ ಎಂದರು.