ETV Bharat / state

ಸುಳ್ಳು ಆಸ್ತಿ ವಿವರ ಆರೋಪ: ಪ್ರಜ್ವಲ್​ ರೇವಣ್ಣಗೆ ಕಾಲಾವಕಾಶ ನೀಡಲು ನಿರಾಕರಿಸಿದ ಕೋರ್ಟ್​

author img

By

Published : Sep 30, 2019, 1:12 PM IST

ಚುನಾವಣಾ ನಾಮಪತ್ರದಲ್ಲಿ ಆಸ್ತಿ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು 4 ವಾರಗಳ ಸಮಯಾವಕಾಶ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಪರ ವಕೀಲರು ಕೇಳಿದ್ದಾರೆ. ಆದರೆ ನ್ಯಾಯಾಲಯ ಇದನ್ನ ತಿರಸ್ಕಾರ ಮಾಡಿದೆ.

ಲೋಕಸಭೆ ಸದಸ್ಯ ಪ್ರಜ್ವಲ್ ರೇವಣ್ಣ

ಬೆಂಗಳೂರು: ಚುನಾವಣಾ ನಾಮಪತ್ರದಲ್ಲಿ ಆಸ್ತಿ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು 4 ವಾರಗಳ ಸಮಯಾವಕಾಶ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಪರ ವಕೀಲರು ಕೇಳಿದ್ದಾರೆ. ಆದರೆ ನ್ಯಾಯಾಲಯ ಇದನ್ನ ತಿರಸ್ಕಾರ ಮಾಡಿದೆ.

ಆಸ್ತಿ ವಿವರದಲ್ಲಿ ತಪ್ಪು ಮಾಹಿತಿ ನೀಡಿ ಸಂಸದರಾಗಿ ಆಯ್ಕೆಯಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಎ. ಮಂಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ಇಂದು ಏಕಸದಸ್ಯ ಪೀಠದಲ್ಲಿ ನಡೆಯಿತು. ಈ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಲು 4 ವಾರಗಳ ಕಾಲ ಸಮಾಯಾವಕಾಶ ಕೇಳಿದರು. ಮನವಿ ನಿರಾಕರಿಸಿದ ನ್ಯಾಯಾಲಯ ಅಕ್ಟೋಬರ್ 18ಕ್ಕೆ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

ಪತ್ರಿಕೆ ಜಾಹೀರಾತು ಮೂಲಕ ಹೊರಡಿಸಿದ ಸಮನ್ಸ್​ ಸ್ವೀಕಾರ‌ ಮಾಡಿದ ಪ್ರಜ್ವಲ್ ರೇವಣ್ಣ ಕಳೆದ ವಾರ ವಕೀಲರ ಮೂಲಕ ನೋಟಿಸ್ ಸ್ವೀಕರಿಸಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದರು.

ಪ್ರಕರಣದ ಹಿನ್ನಲೆ

ಕಳೆದ ಲೋಕಾಸಭಾ ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿಯಲ್ಲಿ, ಹಾಸನ ಬಿಜೆಪಿ ಅಭ್ಯರ್ಥಿ ಮತ್ತು ವಕೀಲ ದೇವರಾಜೇಗೌಡ ಹೈಕೊರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಾಲಯ ಪ್ರಜ್ವಲ್ ರೇವಣ್ಣಗೆ ನೋಟಿಸ್​ ನೀಡಿತ್ತು. ಆದರೆ ಮೂರು ಬಾರಿಯೂ ಪ್ರಜ್ವಲ್ ರೇವಣ್ಣಗೆ ನೋಟಿಸ್​ ತಲುಪಿರಲಿಲ್ಲ. ಚುನಾವಣೆ ಆಯೋಗಕ್ಕೆ ಸಲ್ಲಿಸಿರುವ ಆಫಿಡವಿಟ್ ನಲ್ಲಿನ ವಿಳಾಸದಲ್ಲಿ ಅವರಿಲ್ಲ ಎಂದು ತಿಳಿದು ಬಂದಿತ್ತು.

ನಂತರ ಕೋರ್ಟ್ ಅಮೀನರು ಮತ್ತು ಹಾಸನ ಜಿಲ್ಲಾ ನ್ಯಾಯಾಧೀಶರ ಮೂಲಕ ತಲುಪಿಸುವ ಪ್ರಯತ್ನ ಕೂಡ ವಿಫಲವಾಗಿತ್ತು. ಈ ಬಗ್ಗೆ ಅರ್ಜಿದಾರರ ಪರ ವಕೀಲೆ ಪ್ರಮೀಳಾ ನೇಸರ್ಗಿ ಸೆ.3 ರಂದು ಕೋರ್ಟ್ ಗಮನಕ್ಕೆ ತಂದಿದ್ದರು. ಅಲ್ಲದೇ ನೋಟಿಸ್​ ಪ್ರತಿಯನ್ನ ಪತ್ರಿಕೆ ಜಾಹೀರಾತು ಪ್ರಕಟಿಸಲು ಮನವಿ ಮಾಡಿದ್ದರು. ಅದಕ್ಕೆ ಸೆ.6 ರಂದು ಹೈ ಕೋರ್ಟ್ ಅನುಮತಿ ನೀಡಿ ಪತ್ರಿಕೆ ಜಾಹೀರಾತು ನೀಡಲಾಗಿತ್ತು.

ಬೆಂಗಳೂರು: ಚುನಾವಣಾ ನಾಮಪತ್ರದಲ್ಲಿ ಆಸ್ತಿ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು 4 ವಾರಗಳ ಸಮಯಾವಕಾಶ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಪರ ವಕೀಲರು ಕೇಳಿದ್ದಾರೆ. ಆದರೆ ನ್ಯಾಯಾಲಯ ಇದನ್ನ ತಿರಸ್ಕಾರ ಮಾಡಿದೆ.

ಆಸ್ತಿ ವಿವರದಲ್ಲಿ ತಪ್ಪು ಮಾಹಿತಿ ನೀಡಿ ಸಂಸದರಾಗಿ ಆಯ್ಕೆಯಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಎ. ಮಂಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ಇಂದು ಏಕಸದಸ್ಯ ಪೀಠದಲ್ಲಿ ನಡೆಯಿತು. ಈ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಲು 4 ವಾರಗಳ ಕಾಲ ಸಮಾಯಾವಕಾಶ ಕೇಳಿದರು. ಮನವಿ ನಿರಾಕರಿಸಿದ ನ್ಯಾಯಾಲಯ ಅಕ್ಟೋಬರ್ 18ಕ್ಕೆ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

ಪತ್ರಿಕೆ ಜಾಹೀರಾತು ಮೂಲಕ ಹೊರಡಿಸಿದ ಸಮನ್ಸ್​ ಸ್ವೀಕಾರ‌ ಮಾಡಿದ ಪ್ರಜ್ವಲ್ ರೇವಣ್ಣ ಕಳೆದ ವಾರ ವಕೀಲರ ಮೂಲಕ ನೋಟಿಸ್ ಸ್ವೀಕರಿಸಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದರು.

ಪ್ರಕರಣದ ಹಿನ್ನಲೆ

ಕಳೆದ ಲೋಕಾಸಭಾ ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿಯಲ್ಲಿ, ಹಾಸನ ಬಿಜೆಪಿ ಅಭ್ಯರ್ಥಿ ಮತ್ತು ವಕೀಲ ದೇವರಾಜೇಗೌಡ ಹೈಕೊರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಾಲಯ ಪ್ರಜ್ವಲ್ ರೇವಣ್ಣಗೆ ನೋಟಿಸ್​ ನೀಡಿತ್ತು. ಆದರೆ ಮೂರು ಬಾರಿಯೂ ಪ್ರಜ್ವಲ್ ರೇವಣ್ಣಗೆ ನೋಟಿಸ್​ ತಲುಪಿರಲಿಲ್ಲ. ಚುನಾವಣೆ ಆಯೋಗಕ್ಕೆ ಸಲ್ಲಿಸಿರುವ ಆಫಿಡವಿಟ್ ನಲ್ಲಿನ ವಿಳಾಸದಲ್ಲಿ ಅವರಿಲ್ಲ ಎಂದು ತಿಳಿದು ಬಂದಿತ್ತು.

ನಂತರ ಕೋರ್ಟ್ ಅಮೀನರು ಮತ್ತು ಹಾಸನ ಜಿಲ್ಲಾ ನ್ಯಾಯಾಧೀಶರ ಮೂಲಕ ತಲುಪಿಸುವ ಪ್ರಯತ್ನ ಕೂಡ ವಿಫಲವಾಗಿತ್ತು. ಈ ಬಗ್ಗೆ ಅರ್ಜಿದಾರರ ಪರ ವಕೀಲೆ ಪ್ರಮೀಳಾ ನೇಸರ್ಗಿ ಸೆ.3 ರಂದು ಕೋರ್ಟ್ ಗಮನಕ್ಕೆ ತಂದಿದ್ದರು. ಅಲ್ಲದೇ ನೋಟಿಸ್​ ಪ್ರತಿಯನ್ನ ಪತ್ರಿಕೆ ಜಾಹೀರಾತು ಪ್ರಕಟಿಸಲು ಮನವಿ ಮಾಡಿದ್ದರು. ಅದಕ್ಕೆ ಸೆ.6 ರಂದು ಹೈ ಕೋರ್ಟ್ ಅನುಮತಿ ನೀಡಿ ಪತ್ರಿಕೆ ಜಾಹೀರಾತು ನೀಡಲಾಗಿತ್ತು.

Intro:ಚುನಾವಣಾ ತಕರಾರು ಅರ್ಜಿಗೆ
ಆಕ್ಷೇಪಣೆ ಸಲ್ಲಿಸಲು ಸಮಾಯವಾಕಾಶ ಕೇಳಿದ ಸಂಸದ ಪ್ರಜ್ವಲ್ ರೇವಣ್ಣ



ಬೆಂಗಳೂರು

ಚುನಾವಣಾ ನಾಮಪತ್ರದಲ್ಲಿ ಆಸ್ತಿ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪ ಪ್ರಕರಣಕ್ಕೆ ಸಂಭಂದಿಸಿದಂತೆ ಆಕ್ಷೇಪಣೆ ಸಲ್ಲಿಸಲು ೪ ವಾರಗಳ ಕಾಲ ಸಮಯಾವಕಾಶವನ್ನ ಹಾಸನ ಲೋಕಸಭೆ ಸದಸ್ಯ ಪ್ರಜ್ವಲ್ ರೇವಣ್ಣ ಪರ ವಕೀಲರು ಕೇಳಿದ್ದಾರೆ. ಆದರೆ ನ್ಯಾಯಾಲಯ ಇದನ್ನ ತಿರಸ್ಕಾರ ಮಾಡಿದೆ.

ಆಸ್ತಿ ವಿವರದಲ್ಲಿ ತಪ್ಪು ಮಾಹಿತಿ ನೀಡಿ ಸಂಸದರಾಗಿ ಆಯ್ಕೆಯಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಎ.ಮಂಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ಇಂದು ಏಕಸದಸ್ಯ ಪೀಠದಲ್ಲಿ ನಡೆಯಿತು.

ಈ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಲು ೪ ವಾರಗಳ ಕಾಲ ಸಮಾಯಾವಕಾಶ ಕೇಳಿದ ಹಿನ್ನೆಲೆ ನ್ಯಾಯಾಲಯ ಈ ಮನವಿಗೆ ನಿರಾಕರಿಸಿ ಅಕ್ಟೋಬರ್ ೧೮ಕ್ಕೆ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

ಪತ್ರಿಕೆ ಜಾಹೀರಾತು ಮೂಲಕ ಹೊರಡಿಸಿದ ಸಮನ್ಸ್ ಅನ್ನ ಸ್ವೀಕಾರ‌ ಮಾಡಿದ ಪ್ರಜ್ವಲ್ ರೇವಣ್ಣ ಕಳೆದ ವಾರ ವಕೀಲರ ಮೂಲಕ ನೊಟೀಸ್ ನ್ನು ಸ್ವೀಕರಿಸಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದರು.

*ಪ್ರಕರಣದ ಹಿನ್ನಲೆ:

ಕಳೆದ ಲೋಕಾಸಭಾ ಚುನಾವಣಾ ಸಂಧರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿಯಲ್ಲಿ , ಹಾಸನ ಬಿಜೆಪಿ ಅಭ್ಯರ್ಥಿ ಮತ್ತು ವಕೀಲ ದೇವರಾಜೇಗೌಡ ಹೈ ಕೊರ್ಟ್ನಲ್ಲಿ ಅರ್ಜಿ ಹಾಕಿದ್ದರು. ಈ ಸಂಬಂಧ ನ್ಯಾಯಾಲಯ ಪ್ರಜ್ವಲ್ ರೇವಣ್ಣಗೆ ನೊಟೀಸ್ ನೀಡಿತ್ತು. ಆದರೆ ಮೂರು ಬಾರಿಯೂ ಪ್ರಜ್ವಲ್ ರೇವಣ್ಣಗೆ ನೊಟೀಸ್ ತಲುಪಿರಲಿಲ್ಲ.ಚುನಾವಣೆ ಆಯೋಗಕ್ಕೆ ಸಲ್ಲಿಸಿರುವ ಆಫಿಡವೀಟ್ ನಲ್ಲಿನ ವಿಳಾಸದಲ್ಲಿ ಅವರಿಲ್ಲ ಎಂದು ತಿಳಿದು ಬಂದಿತ್ತು.
ನಂತ್ರವಕೋರ್ಟ್ ಅಮೀನರು ಮತ್ತು ಹಾಸನ ಜಿಲ್ಲಾ ನ್ಯಾಯಾಧೀಶರ ಮೂಲಕ ತಲುಪಿಸುವ ಪ್ರಯತ್ನ ಕೂಡ ವಿಫಲವಾಗಿತ್ತು ಎಂದು ಈ ಬಗ್ಗೆ ಅರ್ಜಿದಾರರ ಪರ ವಕೀಲೆ ಪ್ರಮೀಳಾ ನೇಸರ್ಗಿ ಸೆ.3 ರಂದು ಕೋರ್ಟ್ ಗಮನಕ್ಕೆ ತಂದಿದ್ದರು. ಅಲ್ಲದೇ ನೊಟೀಸ್ ಪ್ರತಿಯನ್ನ ಪತ್ರಿಕೆ ಜಾಹೀರಾತು ಪ್ರಕಟಿಸಲು ಮನವಿ ಮಾಡಿದ್ದರು. ಅದಕ್ಕೆ ಸೆ.6 ರಂದು ಹೈ ಕೋರ್ಟ್ ಅನುಮತಿ ನೀಡಿ ಪತ್ರಿಕೆ ಜಾಹೀರಾತು ನೀಡಲಾಗಿತ್ತುBody:KN_BNG_02_PRJWL_7204498Conclusion:KN_BNG_02_PRJWL_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.