ETV Bharat / state

ವಕೀಲರ ಪೋಷಕರಿಗೆ ವಿಮಾ ಸೌಲಭ್ಯ: ಸಮಗ್ರ ಅರ್ಜಿ ಸಲ್ಲಿಸಲು ಸಲಹೆ

author img

By ETV Bharat Karnataka Team

Published : Aug 23, 2023, 10:46 PM IST

ವಕೀಲರ ಪೋಷಕರನ್ನು ವಿಮಾ ಯೋಜನೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಸಮಗ್ರವಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸುವಂತೆ ವಕೀಲ ರಮೇಶ್ ನಾಯಕ್​ಗೆ ಹೈಕೋರ್ಟ್​ ಸಲಹೆ ನೀಡಿದೆ.

ಹೈಕೋರ್ಟ್​
ಹೈಕೋರ್ಟ್​

ಬೆಂಗಳೂರು : ಕೇಂದ್ರ ಸರ್ಕಾರ ರಚಿಸಲು ಉದ್ದೇಶಿಸಿರುವ ವಿಮಾ ಯೋಜನೆ ವ್ಯಾಪ್ತಿಗೆ ವೃತ್ತಿನಿರತ ವಕೀಲರ ಪೋಷಕರನ್ನೂ ಒಳಪಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಮಗ್ರವಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವಂತೆ ವಕೀಲ ಎಲ್. ರಮೇಶ್ ನಾಯಕ್‌ಗೆ ಹೈಕೋರ್ಟ್ ಸಲಹೆ ನೀಡಿದೆ.

ವಿಮಾ ಯೋಜನೆ ವ್ಯಾಪ್ತಿಗೆ ವೃತ್ತಿನಿರತ ವಕೀಲರ ಪೋಷಕರನ್ನೂ ಒಳಪಡಿಸಲು ಭಾರತೀಯ ವಕೀಲರ ಪರಿಷತ್ತು (ಬಿಸಿಐ) ಮತ್ತು ಕರ್ನಾಟಕ ವಕೀಲರ ಪರಿಷತ್ತಿಗೆ (ಕೆಬಿಸಿ) ನಿರ್ದೇಶಿಸುವಂತೆ ಕೋರಿ ವಕೀಲ ಎಲ್. ರಮೇಶ್ ನಾಯಕ್ ಎಂಬವರು ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ, ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಯನ್ನಾಗಿ ಪರಿವರ್ತಿಸಿತ್ತು. ಅದರಂತೆ ಆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಎಂಜೆಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರೂ ಆಗಿರುವ ಅರ್ಜಿದಾರ ವಕೀಲ ಎಲ್. ರಮೇಶ್ ನಾಯಕ್ ಅವರು ಪ್ರಕರಣ ಸಂಬಂಧ ಕರ್ನಾಟಕ ವಕೀಲರ ಪರಿಷತ್‌ಗೆ ನೀಡಿದ್ದ ಮನವಿ ಪತ್ರ ಮತ್ತು ಅರ್ಜಿಯಲ್ಲಿ ಉಲ್ಲೇಖಿಸಿದ ಕೆಲವೊಂದು ಅಂಶಗಳಲ್ಲಿ ಕೆಲವೊಂದು ವ್ಯತ್ಯಾಸ ಇರುವುದನ್ನು ನ್ಯಾಯಪೀಠ ಗಮನಿಸಿತು. ಆ ಸಂಬಂಧ ಪ್ರತಿಕ್ರಿಯಿಸಿದ ವಿಭಾಗೀಯ ಪೀಠ, ಅರ್ಜಿದಾರರು ಸೂಕ್ತವಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಸೂಕ್ತ ರೀತಿಯಲ್ಲಿ ಸಲ್ಲಿಸಿಲ್ಲ. ಅರ್ಜಿದಾರರು ಯಾವುದನ್ನು ಮಾಡಬೇಕಿತ್ತೋ; ಅದನ್ನು ಮಾಡಿಲ್ಲ. ಅರ್ಧ ಕೆಲಸವಷ್ಟೇ ಮಾಡಿದ್ದಾರೆ ಎಂದು ನುಡಿಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರು, ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು. ಇದರಿಂದ ಅರ್ಜಿ ಹಿಂಪಡೆಯಲು ಒಪ್ಪಿದ ನ್ಯಾಯಪೀಠ, ಸಮರ್ಪಕ ಮತ್ತು ಸಮಗ್ರವಾಗಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಅನುಮತಿ ಸಹ ನೀಡಿತು.

ಕೇಂದ್ರ ಸರ್ಕಾರವು ವೃತ್ತಿ ನಿರತ ವಕೀಲರಿಗೆ ವಿಮಾ ಯೋಜನೆ ರೂಪಿಸಲು ಸಮ್ಮತಿಸಿದೆ. ಇದರಿಂದ ವೃತ್ತಿ ನಿರತ ವಕೀಲರ ಮಾಹಿತಿ ಒದಗಿಸುವಂತೆ ಎಲ್ಲಾ ರಾಜ್ಯಗಳ ವಕೀಲರ ಪರಿಷತ್​ಗೆ ಬಿಸಿಐ ಸೂಚಿಸಿತ್ತು. ಅದರಂತೆ ರಾಜ್ಯದ ಎಲ್ಲಾ ವಕೀಲರ ಸಂಘಗಳಿಗೆ ಪತ್ರ ಬರೆದಿದ್ದ ಕೆಬಿಸಿ, ಸಂಘದ ಎಲ್ಲಾ ಸದಸ್ಯರ ಹೆಸರು, ವಯಸ್ಸು, ಅವರ ಬಾಳ ಸಂಗಾತಿ (ಪತಿ/ಪತ್ನಿ) ಮತ್ತು ಮಕ್ಕಳ ಹೆಸರು ಒದಗಿಸುವಂತೆ ಸೂಚಿಸಿತ್ತು.

ಇದರಿಂದ ಹೈಕೋರ್ಟ್​ಗೆ ತಕರಾರು ಅರ್ಜಿ ಸಲ್ಲಿಸಿದ್ದ ರಮೇಶ್ ನಾಯಕ್, ವಕೀಲರ ಪೋಷಕರನ್ನು ವಕೀಲರ ಅವಲಂಬಿತರಾಗಿ ಪರಿಗಣಿಸುತ್ತಿಲ್ಲ. ಹಾಗಾಗಿ, ವಕೀಲರ ಪೋಷಕರನ್ನು ವಿಮಾ ಯೋಜನೆ ವ್ಯಾಪ್ತಿಗೆ ತರುವಂತೆ ರಾಜ್ಯ ಸರ್ಕಾರ, ಬಿಸಿಐ ಮತ್ತು ಕೆಬಿಸಿಗೆ ನಿರ್ದೇಶಿಸಬೇಕೆಂದು ಕೋರಿದ್ದರು. ಅರ್ಜಿದಾರರು ಎತ್ತಿರುವ ವಿಷಯದಲ್ಲಿ ದೊಡ್ಡ ಸಾಮಾಜಿಕ ಕಳಕಳಿ ಎಂದಿದ್ದ ಏಕ ಸದಸ್ಯ ಪೀಠ, ತಕರಾರು ಅರ್ಜಿಯನ್ನು ಪಿಐಎಲ್ ಆಗಿ ಪರಿವರ್ತಿಸಿತ್ತು.

ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಶಿಸ್ತು ಪ್ರಾಧಿಕಾರ ನಿವೃತ್ತ ನ್ಯಾಯಾಧೀಶರನ್ನು ತನಿಖಾಧಿಕಾರಿಯಾಗಿ ನೇಮಿಸಬಹುದು: ಹೈಕೋರ್ಟ್

ಬೆಂಗಳೂರು : ಕೇಂದ್ರ ಸರ್ಕಾರ ರಚಿಸಲು ಉದ್ದೇಶಿಸಿರುವ ವಿಮಾ ಯೋಜನೆ ವ್ಯಾಪ್ತಿಗೆ ವೃತ್ತಿನಿರತ ವಕೀಲರ ಪೋಷಕರನ್ನೂ ಒಳಪಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಮಗ್ರವಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವಂತೆ ವಕೀಲ ಎಲ್. ರಮೇಶ್ ನಾಯಕ್‌ಗೆ ಹೈಕೋರ್ಟ್ ಸಲಹೆ ನೀಡಿದೆ.

ವಿಮಾ ಯೋಜನೆ ವ್ಯಾಪ್ತಿಗೆ ವೃತ್ತಿನಿರತ ವಕೀಲರ ಪೋಷಕರನ್ನೂ ಒಳಪಡಿಸಲು ಭಾರತೀಯ ವಕೀಲರ ಪರಿಷತ್ತು (ಬಿಸಿಐ) ಮತ್ತು ಕರ್ನಾಟಕ ವಕೀಲರ ಪರಿಷತ್ತಿಗೆ (ಕೆಬಿಸಿ) ನಿರ್ದೇಶಿಸುವಂತೆ ಕೋರಿ ವಕೀಲ ಎಲ್. ರಮೇಶ್ ನಾಯಕ್ ಎಂಬವರು ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ, ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಯನ್ನಾಗಿ ಪರಿವರ್ತಿಸಿತ್ತು. ಅದರಂತೆ ಆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಎಂಜೆಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರೂ ಆಗಿರುವ ಅರ್ಜಿದಾರ ವಕೀಲ ಎಲ್. ರಮೇಶ್ ನಾಯಕ್ ಅವರು ಪ್ರಕರಣ ಸಂಬಂಧ ಕರ್ನಾಟಕ ವಕೀಲರ ಪರಿಷತ್‌ಗೆ ನೀಡಿದ್ದ ಮನವಿ ಪತ್ರ ಮತ್ತು ಅರ್ಜಿಯಲ್ಲಿ ಉಲ್ಲೇಖಿಸಿದ ಕೆಲವೊಂದು ಅಂಶಗಳಲ್ಲಿ ಕೆಲವೊಂದು ವ್ಯತ್ಯಾಸ ಇರುವುದನ್ನು ನ್ಯಾಯಪೀಠ ಗಮನಿಸಿತು. ಆ ಸಂಬಂಧ ಪ್ರತಿಕ್ರಿಯಿಸಿದ ವಿಭಾಗೀಯ ಪೀಠ, ಅರ್ಜಿದಾರರು ಸೂಕ್ತವಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಸೂಕ್ತ ರೀತಿಯಲ್ಲಿ ಸಲ್ಲಿಸಿಲ್ಲ. ಅರ್ಜಿದಾರರು ಯಾವುದನ್ನು ಮಾಡಬೇಕಿತ್ತೋ; ಅದನ್ನು ಮಾಡಿಲ್ಲ. ಅರ್ಧ ಕೆಲಸವಷ್ಟೇ ಮಾಡಿದ್ದಾರೆ ಎಂದು ನುಡಿಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರು, ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು. ಇದರಿಂದ ಅರ್ಜಿ ಹಿಂಪಡೆಯಲು ಒಪ್ಪಿದ ನ್ಯಾಯಪೀಠ, ಸಮರ್ಪಕ ಮತ್ತು ಸಮಗ್ರವಾಗಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಅನುಮತಿ ಸಹ ನೀಡಿತು.

ಕೇಂದ್ರ ಸರ್ಕಾರವು ವೃತ್ತಿ ನಿರತ ವಕೀಲರಿಗೆ ವಿಮಾ ಯೋಜನೆ ರೂಪಿಸಲು ಸಮ್ಮತಿಸಿದೆ. ಇದರಿಂದ ವೃತ್ತಿ ನಿರತ ವಕೀಲರ ಮಾಹಿತಿ ಒದಗಿಸುವಂತೆ ಎಲ್ಲಾ ರಾಜ್ಯಗಳ ವಕೀಲರ ಪರಿಷತ್​ಗೆ ಬಿಸಿಐ ಸೂಚಿಸಿತ್ತು. ಅದರಂತೆ ರಾಜ್ಯದ ಎಲ್ಲಾ ವಕೀಲರ ಸಂಘಗಳಿಗೆ ಪತ್ರ ಬರೆದಿದ್ದ ಕೆಬಿಸಿ, ಸಂಘದ ಎಲ್ಲಾ ಸದಸ್ಯರ ಹೆಸರು, ವಯಸ್ಸು, ಅವರ ಬಾಳ ಸಂಗಾತಿ (ಪತಿ/ಪತ್ನಿ) ಮತ್ತು ಮಕ್ಕಳ ಹೆಸರು ಒದಗಿಸುವಂತೆ ಸೂಚಿಸಿತ್ತು.

ಇದರಿಂದ ಹೈಕೋರ್ಟ್​ಗೆ ತಕರಾರು ಅರ್ಜಿ ಸಲ್ಲಿಸಿದ್ದ ರಮೇಶ್ ನಾಯಕ್, ವಕೀಲರ ಪೋಷಕರನ್ನು ವಕೀಲರ ಅವಲಂಬಿತರಾಗಿ ಪರಿಗಣಿಸುತ್ತಿಲ್ಲ. ಹಾಗಾಗಿ, ವಕೀಲರ ಪೋಷಕರನ್ನು ವಿಮಾ ಯೋಜನೆ ವ್ಯಾಪ್ತಿಗೆ ತರುವಂತೆ ರಾಜ್ಯ ಸರ್ಕಾರ, ಬಿಸಿಐ ಮತ್ತು ಕೆಬಿಸಿಗೆ ನಿರ್ದೇಶಿಸಬೇಕೆಂದು ಕೋರಿದ್ದರು. ಅರ್ಜಿದಾರರು ಎತ್ತಿರುವ ವಿಷಯದಲ್ಲಿ ದೊಡ್ಡ ಸಾಮಾಜಿಕ ಕಳಕಳಿ ಎಂದಿದ್ದ ಏಕ ಸದಸ್ಯ ಪೀಠ, ತಕರಾರು ಅರ್ಜಿಯನ್ನು ಪಿಐಎಲ್ ಆಗಿ ಪರಿವರ್ತಿಸಿತ್ತು.

ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಶಿಸ್ತು ಪ್ರಾಧಿಕಾರ ನಿವೃತ್ತ ನ್ಯಾಯಾಧೀಶರನ್ನು ತನಿಖಾಧಿಕಾರಿಯಾಗಿ ನೇಮಿಸಬಹುದು: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.