ETV Bharat / state

ಅಂತಾರಾಜ್ಯ ಜಲವ್ಯಾಜ್ಯ : ಕಾನೂನು ತಜ್ಞರ ಜೊತೆ ಸಿಎಂ ಸಭೆ

author img

By

Published : Feb 8, 2022, 5:42 PM IST

Updated : Feb 8, 2022, 6:18 PM IST

ಅಂತಾರಾಜ್ಯ ಜಲವ್ಯಾಜ್ಯಗಳಲ್ಲಿ ಇರುವ ವಾಸ್ತವಾಂಶ, ಎಲ್ಲ ಪ್ರಕರಣ ಯಾವ ಹಂತದಲ್ಲಿದೆ? ಏನು ಎನ್ನುವ ಕುರಿತು ಎಲ್ಲವನ್ನು ಉಭಯ ಸದನಗಳ ಪ್ರತಿಪಕ್ಷ ನಾಯಕರ ಜೊತೆ ಚರ್ಚೆ ನಡೆಸುತ್ತೇವೆ. ಕರ್ನಾಟಕದ ನೆಲ ಜಲದ ವಿಚಾರದಲ್ಲಿ ಪಕ್ಷಾತೀತವಾಗಿ ಎಲ್ಲರೂ ಒಂದಾಗಿರಬೇಕು, ಎಲ್ಲಾ ವಿಚಾರಗಳನ್ನು ಪ್ರತಿಪಕ್ಷ ನಾಯಕರ ಜೊತೆ ಹಂಚಿಕೊಳ್ಳಬೇಕು ಅವರ ಸಲಹೆಯನ್ನು ತೆಗೆದುಕೊಂಡು ನಿರ್ಧರಿಸಲಾಗುತ್ತದೆ ಎಂದು ಸಿಎಂ ಸ್ಪಷ್ಟಪಡಿಸಿದರು..

Meeting on water dispute under the chairmanship of CM
Meeting on water dispute under the chairmanship of CM

ಬೆಂಗಳೂರುನ : ಅಂತಾರಾಜ್ಯ ಜಲ ವ್ಯಾಜ್ಯಗಳ ವಿಚಾರದಲ್ಲಿ ನಾಲ್ಕು ಪ್ರಮುಖ ನಿರ್ಧಾರಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಹಿರಿಯ ವಕೀಲರ, ಕಾನೂನು ತಜ್ಞರ ಸಭೆಯಲ್ಲಿ ಕೈಗೊಳ್ಳಲಾಗಿದ್ದು, ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿ ಯಾವುದೇ ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡಬಾರದು ಎನ್ನುವ ನಿರ್ಧಾರ ಕೈಗೊಳ್ಳಾಗಿದೆ.

ಸಿಎಂ ಅವರ ಅಧ್ಯಕ್ಷತೆಯಲ್ಲಿ ಇಂದು ನವದೆಹಲಿಯಲ್ಲಿ ಅಂತಾರಾಜ್ಯ ಜಲ ವಿವಾದ ಕುರಿತು ಕಾನೂನು ತಜ್ಞರೊಂದಿಗೆ ಸಭೆ ನಡೆಯಿತು. ನವದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ರಾಜ್ಯ ಸರ್ಕಾರದ ಅಡ್ವೋಕೆಟ್ ಜನರಲ್ ಪ್ರಭುಲಿಂಗ ನಾವದಗಿ ಹಾಗೂ ಹಿರಿಯ ಕಾನೂನು ತಜ್ಞರು ಸಭೆಯಲ್ಲಿ ಉಪಸ್ಥಿತರಿದ್ದರು. ಜಲ ವ್ಯಾಜ್ಯಗಳ ಕುರಿತು ಮಹತ್ವದ ಮಾತುಕತೆ ನಡೆಸಿ ಕೆಲ ನಿರ್ಧಾರಗಳನ್ನು ಕೈಗೊಳ್ಳಲಾಯಿತು.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಇಂದು ಅಂತಾರಾಜ್ಯ ಜಲವಿವಾದಗಳ ಬಗ್ಗೆ ನಮ್ಮ ಹಿರಿಯ ನ್ಯಾಯವಾದಿಗಳು, ಅಡ್ವೋಕೇಟ್ ಜನರಲ್, ಅಧಿಕಾರಿಗಳು ಮತ್ತು ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚೆ ಮಾಡಿದ್ದೇನೆ. ಪ್ರಮುಖವಾಗಿ ಕೃಷ್ಣಾ ಮೇಲ್ದಂಡೆ ಎರಡನೇ ಹಂತದ ನ್ಯಾಯಾಧೀಕರಣದ ಆದೇಶದ ನೋಟಿಫಿಕೇಶನ್ ಮಾಡುವ ಕುರಿತು ಪ್ರಯತ್ನ ತ್ವರಿತಗೊಳಿಸಬೇಕು, ಸುಪ್ರೀಂಕೋರ್ಟ್​ನಲ್ಲಿ ನಮ್ಮ ವ್ಯಾಜ್ಯದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳು ಹಿಂದೆ ಸರಿದ ಕಾರಣ ಬೇರೆ ನ್ಯಾಯಪೀಠ ರಚನೆ ಮಾಡಲು ಸುಪ್ರೀಂಕೋರ್ಟ್ ರಿಜಿಸ್ಟರ್​ಗೆ ತಕ್ಷಣ ಮನವಿ ಮಾಡಬೇಕು ಎನ್ನುವ ಕುರಿತು ನಿರ್ಧರಿಸಲಾಯಿತು ಎಂದರು.

ಸಿಎಂ ಬಸವರಾಜ ಬೊಮ್ಮಾಯಿ

ಮೇಕೆದಾಟು ಯೋಜನೆ ವಿಚಾರದ ಕುರಿತು ಚರ್ಚೆ ಮಾಡಲಾಗಿದೆ. ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಲ್ಲಿ ನಮ್ಮ ಮತ್ತು ತಮಿಳುನಾಡಿನ ಎರಡು ಪ್ರಕರಣಗಳು ಒಟ್ಟಿಗೆ ವಿಚಾರಣೆಗೆ ಬರುತ್ತಿದೆ. ತಮಿಳುನಾಡು ಹೊಗೇನಕಲ್ ಯೋಜನೆ, ಎರಡು ಜಲ ವಿದ್ಯುತ್ ಯೋಜನೆಗಳಿಗೆ ಆಕ್ಷೇಪಣೆ ಸಲ್ಲಿಕೆ ಮಾಡಬೇಕು ಎಂದು ನಿರ್ಧರಿಸಲಾಗಿದೆ.

ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡಲು ಅನುಮತಿ ಸಿಕ್ಕಿದೆ. ಮುಂದಿನ ಬಾರಿ ದೆಹಲಿ ಭೇಟಿ ವೇಳೆ ಈ ಸಂಬಂಧ ಜಲಶಕ್ತಿ ಸಚಿವರ ಭೇಟಿ ಮಾಡಲಿದ್ದೇನೆ. ಪರಿಸರ ಇಲಾಖೆ ಅನುಮತಿ ಬೇಕಿದೆ ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ ಎಂದರು. ಮಹಾದಾಯಿ ವಿಚಾರದಲ್ಲಿಯೂ ಚರ್ಚೆ ನಡೆದಿದೆ. ವಿಚಾರಣೆ ಕುರಿತ ಆರಂಭಕ್ಕೆ ಮನವಿ ಮಾಡುತ್ತೇವೆ. ಸದ್ಯ ಪ್ರಕರಣ ಅಂತಿಮ ಹಂತದಲ್ಲಿದೆ.

ಈ ಕುರಿತ ನ್ಯಾಯಾಧಿಕರಣದ ತೀರ್ಪಿನ ಬಗ್ಗೆ ಎಲ್ಲ ರಾಜ್ಯಗಳು ಆಕ್ಷೇಪಣೆ ಸಲ್ಲಿಸಿವೆ. ಹಾಗಾಗಿ, ತ್ವರಿತ ವಿಚಾರಣೆ ಅಗತ್ಯವಿದೆ. ನ್ಯಾಯಾಧೀಕರಣದ ಆದೇಶದಂತೆ ನಾವು ಈಗಾಗಲೇ ಡಿಪಿಆರ್ ಸಿದ್ಧಪಡಿಸಿದ್ದೇವೆ, ಸಂಪರ್ಕ ಕಾಲುವೆ ಈಗಾಗಲೇ ಸಿದ್ಧವಾಗಿವೆ, ನೀರು ಹಂಚಿಕೆ ವಿವಾದ ಬಾಕಿ ಇದೆ, ನಮ್ಮ ಡಿಪಿಆರ್​ಗೆ ಅನುಮತಿ ಕೊಟ್ಟರೆ ನಾವು ಯೋಜನೆ ಜಾರಿ ವಿಚಾರದಲ್ಲಿ ಮುಂದುವರಿಯುತ್ತೇವೆ ಎಂದು ಸಿಎಂ ತಿಳಿಸಿದರು.

ಅಂತಾರಾಜ್ಯ ಜಲವ್ಯಾಜ್ಯಗಳಲ್ಲಿ ಇರುವ ವಾಸ್ತವಾಂಶ, ಎಲ್ಲ ಪ್ರಕರಣ ಯಾವ ಹಂತದಲ್ಲಿದೆ? ಏನು ಎನ್ನುವ ಕುರಿತು ಎಲ್ಲವನ್ನು ಉಭಯ ಸದನಗಳ ಪ್ರತಿಪಕ್ಷ ನಾಯಕರ ಜೊತೆ ಚರ್ಚೆ ನಡೆಸುತ್ತೇವೆ. ಕರ್ನಾಟಕದ ನೆಲ ಜಲದ ವಿಚಾರದಲ್ಲಿ ಪಕ್ಷಾತೀತವಾಗಿ ಎಲ್ಲರೂ ಒಂದಾಗಿರಬೇಕು, ಎಲ್ಲಾ ವಿಚಾರಗಳನ್ನು ಪ್ರತಿಪಕ್ಷ ನಾಯಕರ ಜೊತೆ ಹಂಚಿಕೊಳ್ಳಬೇಕು ಅವರ ಸಲಹೆಯನ್ನು ತೆಗೆದುಕೊಂಡು ಒಟ್ಟಾರೆಯಾಗಿ ಬರುವ ದಿನಗಳಲ್ಲಿ ಯಾವ ರೀತಿ ನಮ್ಮ ಯೋಜನೆಗಳನ್ನು ಪ್ರಾರಂಭ ಮಾಡಬೇಕು? ಈಗಾಗಲೇ ಪ್ರಾರಂಭ ಮಾಡಿರುವುದು ಯಾವ ರೀತಿ ಅನುಷ್ಠಾನಗೊಳಿಸಬೇಕು ಎಂದು ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ನದಿ ಜೋಡಣೆ ಬಗ್ಗೆಯೂ ಚರ್ಚೆಯಾಗಿದೆ. ನಮ್ಮ ಪಾಲಿನ ನೀರಿನ ಕುರಿತು ಚರ್ಚಿಸಿದ್ದು, ಎಲ್ಲಾ ರಾಜ್ಯಗಳು ಸೇರಿ ಅಂತಿಮ ನಿರ್ಧಾರ ಕೈಗೊಂಡ ನಂತರವೇ ಡಿಪಿಆರ್ ಗೆ ಒಪ್ಪಿಗೆ ಕೊಡಲು ನಿರ್ಧರಿಸಿದ್ದೇವೆ. ಅಲ್ಲಿಯವರೆಗೆ ಡಿಪಿಆರ್ ಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ಧರಿಸಿದ್ದೇವೆ. ನಮ್ಮ ಪಾಲಿನ ನೀರನ್ನು ಪಡೆಯಲು ಎಲ್ಲ ರೀತಿಯ ಪ್ರಯತ್ನ ನಡೆಸುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಬೆಂಗಳೂರುನ : ಅಂತಾರಾಜ್ಯ ಜಲ ವ್ಯಾಜ್ಯಗಳ ವಿಚಾರದಲ್ಲಿ ನಾಲ್ಕು ಪ್ರಮುಖ ನಿರ್ಧಾರಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಹಿರಿಯ ವಕೀಲರ, ಕಾನೂನು ತಜ್ಞರ ಸಭೆಯಲ್ಲಿ ಕೈಗೊಳ್ಳಲಾಗಿದ್ದು, ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿ ಯಾವುದೇ ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡಬಾರದು ಎನ್ನುವ ನಿರ್ಧಾರ ಕೈಗೊಳ್ಳಾಗಿದೆ.

ಸಿಎಂ ಅವರ ಅಧ್ಯಕ್ಷತೆಯಲ್ಲಿ ಇಂದು ನವದೆಹಲಿಯಲ್ಲಿ ಅಂತಾರಾಜ್ಯ ಜಲ ವಿವಾದ ಕುರಿತು ಕಾನೂನು ತಜ್ಞರೊಂದಿಗೆ ಸಭೆ ನಡೆಯಿತು. ನವದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ರಾಜ್ಯ ಸರ್ಕಾರದ ಅಡ್ವೋಕೆಟ್ ಜನರಲ್ ಪ್ರಭುಲಿಂಗ ನಾವದಗಿ ಹಾಗೂ ಹಿರಿಯ ಕಾನೂನು ತಜ್ಞರು ಸಭೆಯಲ್ಲಿ ಉಪಸ್ಥಿತರಿದ್ದರು. ಜಲ ವ್ಯಾಜ್ಯಗಳ ಕುರಿತು ಮಹತ್ವದ ಮಾತುಕತೆ ನಡೆಸಿ ಕೆಲ ನಿರ್ಧಾರಗಳನ್ನು ಕೈಗೊಳ್ಳಲಾಯಿತು.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಇಂದು ಅಂತಾರಾಜ್ಯ ಜಲವಿವಾದಗಳ ಬಗ್ಗೆ ನಮ್ಮ ಹಿರಿಯ ನ್ಯಾಯವಾದಿಗಳು, ಅಡ್ವೋಕೇಟ್ ಜನರಲ್, ಅಧಿಕಾರಿಗಳು ಮತ್ತು ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚೆ ಮಾಡಿದ್ದೇನೆ. ಪ್ರಮುಖವಾಗಿ ಕೃಷ್ಣಾ ಮೇಲ್ದಂಡೆ ಎರಡನೇ ಹಂತದ ನ್ಯಾಯಾಧೀಕರಣದ ಆದೇಶದ ನೋಟಿಫಿಕೇಶನ್ ಮಾಡುವ ಕುರಿತು ಪ್ರಯತ್ನ ತ್ವರಿತಗೊಳಿಸಬೇಕು, ಸುಪ್ರೀಂಕೋರ್ಟ್​ನಲ್ಲಿ ನಮ್ಮ ವ್ಯಾಜ್ಯದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳು ಹಿಂದೆ ಸರಿದ ಕಾರಣ ಬೇರೆ ನ್ಯಾಯಪೀಠ ರಚನೆ ಮಾಡಲು ಸುಪ್ರೀಂಕೋರ್ಟ್ ರಿಜಿಸ್ಟರ್​ಗೆ ತಕ್ಷಣ ಮನವಿ ಮಾಡಬೇಕು ಎನ್ನುವ ಕುರಿತು ನಿರ್ಧರಿಸಲಾಯಿತು ಎಂದರು.

ಸಿಎಂ ಬಸವರಾಜ ಬೊಮ್ಮಾಯಿ

ಮೇಕೆದಾಟು ಯೋಜನೆ ವಿಚಾರದ ಕುರಿತು ಚರ್ಚೆ ಮಾಡಲಾಗಿದೆ. ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಲ್ಲಿ ನಮ್ಮ ಮತ್ತು ತಮಿಳುನಾಡಿನ ಎರಡು ಪ್ರಕರಣಗಳು ಒಟ್ಟಿಗೆ ವಿಚಾರಣೆಗೆ ಬರುತ್ತಿದೆ. ತಮಿಳುನಾಡು ಹೊಗೇನಕಲ್ ಯೋಜನೆ, ಎರಡು ಜಲ ವಿದ್ಯುತ್ ಯೋಜನೆಗಳಿಗೆ ಆಕ್ಷೇಪಣೆ ಸಲ್ಲಿಕೆ ಮಾಡಬೇಕು ಎಂದು ನಿರ್ಧರಿಸಲಾಗಿದೆ.

ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡಲು ಅನುಮತಿ ಸಿಕ್ಕಿದೆ. ಮುಂದಿನ ಬಾರಿ ದೆಹಲಿ ಭೇಟಿ ವೇಳೆ ಈ ಸಂಬಂಧ ಜಲಶಕ್ತಿ ಸಚಿವರ ಭೇಟಿ ಮಾಡಲಿದ್ದೇನೆ. ಪರಿಸರ ಇಲಾಖೆ ಅನುಮತಿ ಬೇಕಿದೆ ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ ಎಂದರು. ಮಹಾದಾಯಿ ವಿಚಾರದಲ್ಲಿಯೂ ಚರ್ಚೆ ನಡೆದಿದೆ. ವಿಚಾರಣೆ ಕುರಿತ ಆರಂಭಕ್ಕೆ ಮನವಿ ಮಾಡುತ್ತೇವೆ. ಸದ್ಯ ಪ್ರಕರಣ ಅಂತಿಮ ಹಂತದಲ್ಲಿದೆ.

ಈ ಕುರಿತ ನ್ಯಾಯಾಧಿಕರಣದ ತೀರ್ಪಿನ ಬಗ್ಗೆ ಎಲ್ಲ ರಾಜ್ಯಗಳು ಆಕ್ಷೇಪಣೆ ಸಲ್ಲಿಸಿವೆ. ಹಾಗಾಗಿ, ತ್ವರಿತ ವಿಚಾರಣೆ ಅಗತ್ಯವಿದೆ. ನ್ಯಾಯಾಧೀಕರಣದ ಆದೇಶದಂತೆ ನಾವು ಈಗಾಗಲೇ ಡಿಪಿಆರ್ ಸಿದ್ಧಪಡಿಸಿದ್ದೇವೆ, ಸಂಪರ್ಕ ಕಾಲುವೆ ಈಗಾಗಲೇ ಸಿದ್ಧವಾಗಿವೆ, ನೀರು ಹಂಚಿಕೆ ವಿವಾದ ಬಾಕಿ ಇದೆ, ನಮ್ಮ ಡಿಪಿಆರ್​ಗೆ ಅನುಮತಿ ಕೊಟ್ಟರೆ ನಾವು ಯೋಜನೆ ಜಾರಿ ವಿಚಾರದಲ್ಲಿ ಮುಂದುವರಿಯುತ್ತೇವೆ ಎಂದು ಸಿಎಂ ತಿಳಿಸಿದರು.

ಅಂತಾರಾಜ್ಯ ಜಲವ್ಯಾಜ್ಯಗಳಲ್ಲಿ ಇರುವ ವಾಸ್ತವಾಂಶ, ಎಲ್ಲ ಪ್ರಕರಣ ಯಾವ ಹಂತದಲ್ಲಿದೆ? ಏನು ಎನ್ನುವ ಕುರಿತು ಎಲ್ಲವನ್ನು ಉಭಯ ಸದನಗಳ ಪ್ರತಿಪಕ್ಷ ನಾಯಕರ ಜೊತೆ ಚರ್ಚೆ ನಡೆಸುತ್ತೇವೆ. ಕರ್ನಾಟಕದ ನೆಲ ಜಲದ ವಿಚಾರದಲ್ಲಿ ಪಕ್ಷಾತೀತವಾಗಿ ಎಲ್ಲರೂ ಒಂದಾಗಿರಬೇಕು, ಎಲ್ಲಾ ವಿಚಾರಗಳನ್ನು ಪ್ರತಿಪಕ್ಷ ನಾಯಕರ ಜೊತೆ ಹಂಚಿಕೊಳ್ಳಬೇಕು ಅವರ ಸಲಹೆಯನ್ನು ತೆಗೆದುಕೊಂಡು ಒಟ್ಟಾರೆಯಾಗಿ ಬರುವ ದಿನಗಳಲ್ಲಿ ಯಾವ ರೀತಿ ನಮ್ಮ ಯೋಜನೆಗಳನ್ನು ಪ್ರಾರಂಭ ಮಾಡಬೇಕು? ಈಗಾಗಲೇ ಪ್ರಾರಂಭ ಮಾಡಿರುವುದು ಯಾವ ರೀತಿ ಅನುಷ್ಠಾನಗೊಳಿಸಬೇಕು ಎಂದು ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ನದಿ ಜೋಡಣೆ ಬಗ್ಗೆಯೂ ಚರ್ಚೆಯಾಗಿದೆ. ನಮ್ಮ ಪಾಲಿನ ನೀರಿನ ಕುರಿತು ಚರ್ಚಿಸಿದ್ದು, ಎಲ್ಲಾ ರಾಜ್ಯಗಳು ಸೇರಿ ಅಂತಿಮ ನಿರ್ಧಾರ ಕೈಗೊಂಡ ನಂತರವೇ ಡಿಪಿಆರ್ ಗೆ ಒಪ್ಪಿಗೆ ಕೊಡಲು ನಿರ್ಧರಿಸಿದ್ದೇವೆ. ಅಲ್ಲಿಯವರೆಗೆ ಡಿಪಿಆರ್ ಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ಧರಿಸಿದ್ದೇವೆ. ನಮ್ಮ ಪಾಲಿನ ನೀರನ್ನು ಪಡೆಯಲು ಎಲ್ಲ ರೀತಿಯ ಪ್ರಯತ್ನ ನಡೆಸುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

Last Updated : Feb 8, 2022, 6:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.