ETV Bharat / state

ಒಂದೇ ದಿನದೊಳಗೆ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭ: ಸಿಎಂ ಬೊಮ್ಮಾಯಿ

author img

By

Published : Nov 25, 2022, 7:28 PM IST

ಎಲ್ಲ ಸಮಾಜದಲ್ಲಿ ವ್ಯಗ್ರ ಚಿಂತನೆಗಳಿರುವ ವ್ಯಕ್ತಿಗಳಿದ್ದಾರೆ. ಅವರಿಗೆ ಉಗ್ರ ಶಿಕ್ಷೆ ವಿಧಿಸಬೇಕು. ಅಮಾನವೀಯವಾಗಿ ಮಹಿಳೆಯರ ಮೇಲೆ ಹಲ್ಲೆ, ಕೊಲೆ, ದೌರ್ಜನ್ಯ ಅತ್ಯಾಚಾರ ನಡೆಯುತ್ತಿರುವುದು ನಾವು ನೋಡುತ್ತಿದ್ದೇವೆ. ಇದು ರಾಕ್ಷಸ ಕೃತ್ಯ. ಉಗ್ರ ಕಾನೂನು ಇದ್ದರೂ, ಶಿಕ್ಷೆಗೆ ಒಳಪಟ್ಟಿದ್ದರೂ, ಕಾನೂನು ಅಪರಾಧಗಳನ್ನು ತಡೆಹಿಡಿಯಲು ಸಫಲವಾಗಿಲ್ಲ.

Investigation of women's commission complaints started within a day: CM Bommai
ಒಂದೇ ದಿನದೊಳಗೆ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭ: ಸಿಎಂ ಬೊಮ್ಮಾಯಿ

ಬೆಂಗಳೂರು: ಮಹಿಳಾ ಆಯೋಗದಿಂದ ಸ್ವೀಕಾರವಾದ ದೂರುಗಳನ್ನು ಏಳರಿಂದ ಎಂಟು ಗಂಟೆಯೊಳಗೆ ನೋಂದಣಿಯಾಗಿ ತನಿಖೆ ಪ್ರಾರಂಭಿಸಬೇಕೆಂದು ಡಿಜಿ ಅವರಿಗೆ ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಆಯೋಗಕ್ಕೆ ಸಮರ್ಥ ವಕೀಲರ ನೇಮಕ ಮಾಡಲಾಗುವುದು. ನಿರ್ಭಯ ಯೋಜನೆಯಡಿ ಜಾರಿ ಮಾಡಿರುವ ಕಾನೂನಿನ ಬಗ್ಗೆ ಪುರುಷರಿಗೆ ಜಾಗೃತಿ ಮೂಡಿಸುವುದು ಅಗತ್ಯ. ಅನ್ಯಾಯ ಆಗುವ ಮೂಲದಿಂದಲೇ ಅರಿವು ಮೂಡಿಸಬೇಕು ಎಂದರು.

ಮಹಿಳಾ ಆಯೋಗಕ್ಕೆ ಇನ್ನಷ್ಟು ಅಧಿಕಾರದ ಜೊತೆಗೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಅಗತ್ಯ ಮೂಲ ಸೌಕರ್ಯಗಳನ್ನು ಸರ್ಕಾರ ಒದಗಿಸಲು ಸಿದ್ದವಿದೆ. ಇದಲ್ಲದೇ ಕಲ್ಯಾಣ ಕೆಲಸಗಳನ್ನು ಸರ್ಕಾರ ಕೈಗೊಂಡಿದೆ. ಮಹಿಳೆಯರ ಪೌಷ್ಟಿಕತೆ ಹೆಚ್ಚಿಸಲು ಕ್ರಮ ವಹಿಸಿದೆ. ಕೆಲಸ ಮಾಡುವ ಗರ್ಭಿಣಿಯರಿಗೆ ವಿಶೇಷ ಸ್ಥಳ ನಿಗದಿ, 5 ಪ್ರಮುಖ ನಗರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಹಿಳೆಯರಿಗೆ ಹಾಸ್ಟೆಲ್, ಐಐಎಂ ತರಬೇತಿ, ಎಲಿವೆಟ್ ಯೋಜನೆಯಡಿ ಸ್ಟಾರ್ಟ್ ಅಪ್ ಗೆ ಅವಕಾಶ, ಸ್ತ್ರೀ ಶಕ್ತಿ ಸಂಘಗಳಿಗೆ ಸ್ರ್ತೀ ಸಾಮರ್ಥ್ಯ ಯೋಜನೆ ಜಾರಿಗೆ ತಂದಿದ್ದೇವೆ.

5 ಲಕ್ಷ ಮಹಿಳೆಯರಿಗೆ ಸ್ವಯಂ ಉದ್ಯೋಗ ನೀಡುವ ಕೆಲಸ ಮಾಡಲಾಗುತ್ತಿದೆ. 7500 ಸ್ತ್ರೀ ಶಕ್ತಿ ಸಂಘಗಳಿವೆ ಅಮೃತ ಯೋಜನೆಯಡಿ 1 ಲಕ್ಷ ರೂ ನೀಡಿ ಸ್ವಯಂ ಉದ್ಯೋಗ ನೀಡಲಾಗಿದೆ ಎಂದು ತಿಳಿಸಿದರು.

ಮಹಿಳೆಯರಿಗೆ ವಿಶೇಷ ಕ್ಲಾಸ್ ರೂಮ್​​ ನಿರ್ಮಾಣ, ಆಶಾ ಕಾರ್ಯಕರ್ತೆಯರು ಹಾಗೂ ಅಡುಗೆ ಮಾಡುವವರ ಗೌರವಧನ ಹೆಚ್ಚಳ ಮಾಡಿದ್ದೇವೆ‌. ಎನ್.ಪಿ.ಎಸ್ ಯೋಜನೆ ಮರುಪ್ರಾರಂಭವಾಗಿದೆ. ಈ ವರ್ಷ 4000 ಹೊಸ ಅಂಗನವಾಡಿ ನಿರ್ಮಾಣವಾಗುತ್ತಿದೆ. ಮಹಿಳೆಯರಿಗೆ ಎಲ್ಲ ಹಂತದ ನೆರವು ಒದಗಿಸಲಾಗುತ್ತಿದೆ. ಮಹಿಳೆಯರು ಸಬಲರಾದರೆ ದೇಶ ಸಬಲವಾಗುತ್ತದೆ ಎಂದರು.

ನಿರ್ಭಯ ಅಡಿ ಬೆಂಗಳೂರಿನಲ್ಲಿ 7500 ಕೃತಕ ಬುದ್ಧಿಮತ್ತೆಯ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ರಾತ್ರಿ ವೇಳೆ ಕೆಲಸ ಮುಗಿಸಿ ಬರುವ ಮಹಿಳೆಯರಿಗೆ ಇದು ಸುರಕ್ಷತೆ ಒದಗಿಸುತ್ತದೆ. ಮಹಿಳಾ ಪೊಲೀಸ್ ಒಳಗೊಂಡ ಪಿಂಕ್ ಹೊಯ್ಸಳ ವಾಹನಗಳು ಮಹಿಳೆಯರನ್ನು ರಕ್ಷಿಸಲು ಸಂಚರಿಸುತ್ತವೆ. ಅಲ್ಪಾವಧಿ ಸ್ವಯಂ ರಕ್ಷಣಾ ತರಬೇತಿಯನ್ನು ಕೂಡ ಶಾಲಾ ಕಾಲೇಜುಗಳ ಹಾಸ್ಟೆಲ್​ಗಳಲ್ಲಿ ನೀಡಲಾಗುತ್ತಿದೆ ಎಂದರು.

ಕಠಿಣ ಕಾನೂನು ಕ್ರಮ ಕೂಡ ಅವಶ್ಯಕ: ಎಲ್ಲ ಸಮಾಜದಲ್ಲಿ ವ್ಯಗ್ರ ಚಿಂತನೆಗಳಿರುವ ವ್ಯಕ್ತಿಗಳಿದ್ದಾರೆ. ಅವರಿಗೆ ಉಗ್ರ ಶಿಕ್ಷೆ ವಿಧಿಸಬೇಕು. ಅಮಾನವೀಯವಾಗಿ ಮಹಿಳೆಯರ ಮೇಲೆ ಹಲ್ಲೆ, ಕೊಲೆ, ದೌರ್ಜನ್ಯ ಅತ್ಯಾಚಾರ ನಡೆಯುತ್ತಿರುವುದು ನಾವು ನೋಡುತ್ತಿದ್ದೇವೆ. ಇದು ರಾಕ್ಷಸ ಕೃತ್ಯ. ಉಗ್ರ ಕಾನೂನು ಇದ್ದರೂ, ಶಿಕ್ಷೆಗೆ ಒಳಪಟ್ಟಿದ್ದರೂ ಆ ಕಾನೂನು ಅಪರಾಧಗಳನ್ನು ತಡೆಹಿಡಿಯಲು ಸಫಲವಾಗಿಲ್ಲ. ಸಾಮಾಜಿಕ ಚಿಂತನೆ ಬದಲಾವಣೆಯ ಜೊತೆಗೆ ಕಠಿಣ ಕಾನೂನು ಕ್ರಮ ಕೂಡ ಅವಶ್ಯಕ. ಮಹಿಳಾ ಆಯೋಗಕ್ಕೆ ಶಕ್ತಿ ತುಂಬುವ ಕೆಲಸ ಆಗಬೇಕು ಎಂದರು.

ಮಹಿಳಾ‌ ಆಯೋಗ ಹಲ್ಲಿಲ್ಲದ ಹಾವು ಆಗಬಾರದು: ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಹಿಳಾ‌ ಆಯೋಗ ಹಲ್ಲಿಲ್ಲದ ಹಾವು ಆಗಬಾರದು. ಈ ನಿಟ್ಟಿನಲ್ಲಿ ಮಹಿಳಾ‌ ಆಯೋಗಕ್ಕೆ ಶಕ್ತಿ ತುಂಬುವ ಕೆಲಸ ಆಗಬೇಕು. ಹೆಚ್ಚಿನ ಹಣಕಾಸು ಸೌಲಭ್ಯ ನೀಡಬೇಕು. ಮಹಿಳೆಯ ಪರಿಸ್ಥಿತಿ ಗಂಭೀರವಾಗಿದೆ. ಶಿಕ್ಷಣ ಹಾಗೂ ಆರ್ಥಿಕ ಸಬಲೀಕರಣದಿಂದ ಮಹಿಳೆಯರಿಗೆ ಶಕ್ತಿ ಬರುತ್ತದೆ ಎಂಬುದು ಕನಸಾಗಿತ್ತು. ಆದರೆ, ಶಿಕ್ಷಣ ಸಿಕ್ಕಿದರೂ‌ ಆರ್ಥಿಕವಾಗಿ ಸದೃಢರಾದರೂ ಮಹಿಳೆಯರ ಮೇಲೆ ಆಗುತ್ತಿರುವ ಪ್ರಕರಣ ‌ಕಡಿಮೆ ಆಗಿಲ್ಲ ಎಂದು‌ ಆತಂಕ ವ್ಯಕ್ತಪಡಿಸಿದರು.

ಮುಂದುವರೆದು, ನಮ್ಮನ್ನು ನಾವು ರಕ್ಷಣೆ ಮಾಡಲು ನಾವು ಸಾಧ್ಯವಾಗಿದೆಯಾ? ಎಂದು ಪ್ರಶ್ನಿಸಿದ ಅವರು, ಐಎಎಸ್ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳೇ ಬಂದು ಉನ್ನತಾಧಿಕಾರಿಗಳ ದೌರ್ಜನ್ಯ ಹಾಗೂ ಒತ್ತಡದ ಬಗ್ಗೆ ಹೇಳಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಮಹಿಳಾ‌ ದಿನ ಆಚರಣೆ ಮಾಡಬೇಕಾಗಿದ್ದು ಮಹಿಳೆಯರಿಗಲ್ಲ ಬದಲಾಗಿ ಪುರುಷರಿಗೆ, ಭಾಷಣಗಳ ಅಗತ್ಯಗಳು ಬೇಕಾಗಿರುವುದು ಕೂಡಾ ಪುರುಷರಿಗೆ ಎಂದು ಹೇಳಿದರು.

ಇದನ್ನೂ ಓದಿ:ರಾಜ್ಯಗಳನ್ನು ಬೇರ್ಪಡಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರ ನಿಲ್ಲಿಸಬೇಕು, ಶೀಘ್ರ ಸರ್ವಪಕ್ಷ ಸಭೆ: ಸಿಎಂ

ಬೆಂಗಳೂರು: ಮಹಿಳಾ ಆಯೋಗದಿಂದ ಸ್ವೀಕಾರವಾದ ದೂರುಗಳನ್ನು ಏಳರಿಂದ ಎಂಟು ಗಂಟೆಯೊಳಗೆ ನೋಂದಣಿಯಾಗಿ ತನಿಖೆ ಪ್ರಾರಂಭಿಸಬೇಕೆಂದು ಡಿಜಿ ಅವರಿಗೆ ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಆಯೋಗಕ್ಕೆ ಸಮರ್ಥ ವಕೀಲರ ನೇಮಕ ಮಾಡಲಾಗುವುದು. ನಿರ್ಭಯ ಯೋಜನೆಯಡಿ ಜಾರಿ ಮಾಡಿರುವ ಕಾನೂನಿನ ಬಗ್ಗೆ ಪುರುಷರಿಗೆ ಜಾಗೃತಿ ಮೂಡಿಸುವುದು ಅಗತ್ಯ. ಅನ್ಯಾಯ ಆಗುವ ಮೂಲದಿಂದಲೇ ಅರಿವು ಮೂಡಿಸಬೇಕು ಎಂದರು.

ಮಹಿಳಾ ಆಯೋಗಕ್ಕೆ ಇನ್ನಷ್ಟು ಅಧಿಕಾರದ ಜೊತೆಗೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಅಗತ್ಯ ಮೂಲ ಸೌಕರ್ಯಗಳನ್ನು ಸರ್ಕಾರ ಒದಗಿಸಲು ಸಿದ್ದವಿದೆ. ಇದಲ್ಲದೇ ಕಲ್ಯಾಣ ಕೆಲಸಗಳನ್ನು ಸರ್ಕಾರ ಕೈಗೊಂಡಿದೆ. ಮಹಿಳೆಯರ ಪೌಷ್ಟಿಕತೆ ಹೆಚ್ಚಿಸಲು ಕ್ರಮ ವಹಿಸಿದೆ. ಕೆಲಸ ಮಾಡುವ ಗರ್ಭಿಣಿಯರಿಗೆ ವಿಶೇಷ ಸ್ಥಳ ನಿಗದಿ, 5 ಪ್ರಮುಖ ನಗರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಹಿಳೆಯರಿಗೆ ಹಾಸ್ಟೆಲ್, ಐಐಎಂ ತರಬೇತಿ, ಎಲಿವೆಟ್ ಯೋಜನೆಯಡಿ ಸ್ಟಾರ್ಟ್ ಅಪ್ ಗೆ ಅವಕಾಶ, ಸ್ತ್ರೀ ಶಕ್ತಿ ಸಂಘಗಳಿಗೆ ಸ್ರ್ತೀ ಸಾಮರ್ಥ್ಯ ಯೋಜನೆ ಜಾರಿಗೆ ತಂದಿದ್ದೇವೆ.

5 ಲಕ್ಷ ಮಹಿಳೆಯರಿಗೆ ಸ್ವಯಂ ಉದ್ಯೋಗ ನೀಡುವ ಕೆಲಸ ಮಾಡಲಾಗುತ್ತಿದೆ. 7500 ಸ್ತ್ರೀ ಶಕ್ತಿ ಸಂಘಗಳಿವೆ ಅಮೃತ ಯೋಜನೆಯಡಿ 1 ಲಕ್ಷ ರೂ ನೀಡಿ ಸ್ವಯಂ ಉದ್ಯೋಗ ನೀಡಲಾಗಿದೆ ಎಂದು ತಿಳಿಸಿದರು.

ಮಹಿಳೆಯರಿಗೆ ವಿಶೇಷ ಕ್ಲಾಸ್ ರೂಮ್​​ ನಿರ್ಮಾಣ, ಆಶಾ ಕಾರ್ಯಕರ್ತೆಯರು ಹಾಗೂ ಅಡುಗೆ ಮಾಡುವವರ ಗೌರವಧನ ಹೆಚ್ಚಳ ಮಾಡಿದ್ದೇವೆ‌. ಎನ್.ಪಿ.ಎಸ್ ಯೋಜನೆ ಮರುಪ್ರಾರಂಭವಾಗಿದೆ. ಈ ವರ್ಷ 4000 ಹೊಸ ಅಂಗನವಾಡಿ ನಿರ್ಮಾಣವಾಗುತ್ತಿದೆ. ಮಹಿಳೆಯರಿಗೆ ಎಲ್ಲ ಹಂತದ ನೆರವು ಒದಗಿಸಲಾಗುತ್ತಿದೆ. ಮಹಿಳೆಯರು ಸಬಲರಾದರೆ ದೇಶ ಸಬಲವಾಗುತ್ತದೆ ಎಂದರು.

ನಿರ್ಭಯ ಅಡಿ ಬೆಂಗಳೂರಿನಲ್ಲಿ 7500 ಕೃತಕ ಬುದ್ಧಿಮತ್ತೆಯ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ರಾತ್ರಿ ವೇಳೆ ಕೆಲಸ ಮುಗಿಸಿ ಬರುವ ಮಹಿಳೆಯರಿಗೆ ಇದು ಸುರಕ್ಷತೆ ಒದಗಿಸುತ್ತದೆ. ಮಹಿಳಾ ಪೊಲೀಸ್ ಒಳಗೊಂಡ ಪಿಂಕ್ ಹೊಯ್ಸಳ ವಾಹನಗಳು ಮಹಿಳೆಯರನ್ನು ರಕ್ಷಿಸಲು ಸಂಚರಿಸುತ್ತವೆ. ಅಲ್ಪಾವಧಿ ಸ್ವಯಂ ರಕ್ಷಣಾ ತರಬೇತಿಯನ್ನು ಕೂಡ ಶಾಲಾ ಕಾಲೇಜುಗಳ ಹಾಸ್ಟೆಲ್​ಗಳಲ್ಲಿ ನೀಡಲಾಗುತ್ತಿದೆ ಎಂದರು.

ಕಠಿಣ ಕಾನೂನು ಕ್ರಮ ಕೂಡ ಅವಶ್ಯಕ: ಎಲ್ಲ ಸಮಾಜದಲ್ಲಿ ವ್ಯಗ್ರ ಚಿಂತನೆಗಳಿರುವ ವ್ಯಕ್ತಿಗಳಿದ್ದಾರೆ. ಅವರಿಗೆ ಉಗ್ರ ಶಿಕ್ಷೆ ವಿಧಿಸಬೇಕು. ಅಮಾನವೀಯವಾಗಿ ಮಹಿಳೆಯರ ಮೇಲೆ ಹಲ್ಲೆ, ಕೊಲೆ, ದೌರ್ಜನ್ಯ ಅತ್ಯಾಚಾರ ನಡೆಯುತ್ತಿರುವುದು ನಾವು ನೋಡುತ್ತಿದ್ದೇವೆ. ಇದು ರಾಕ್ಷಸ ಕೃತ್ಯ. ಉಗ್ರ ಕಾನೂನು ಇದ್ದರೂ, ಶಿಕ್ಷೆಗೆ ಒಳಪಟ್ಟಿದ್ದರೂ ಆ ಕಾನೂನು ಅಪರಾಧಗಳನ್ನು ತಡೆಹಿಡಿಯಲು ಸಫಲವಾಗಿಲ್ಲ. ಸಾಮಾಜಿಕ ಚಿಂತನೆ ಬದಲಾವಣೆಯ ಜೊತೆಗೆ ಕಠಿಣ ಕಾನೂನು ಕ್ರಮ ಕೂಡ ಅವಶ್ಯಕ. ಮಹಿಳಾ ಆಯೋಗಕ್ಕೆ ಶಕ್ತಿ ತುಂಬುವ ಕೆಲಸ ಆಗಬೇಕು ಎಂದರು.

ಮಹಿಳಾ‌ ಆಯೋಗ ಹಲ್ಲಿಲ್ಲದ ಹಾವು ಆಗಬಾರದು: ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಹಿಳಾ‌ ಆಯೋಗ ಹಲ್ಲಿಲ್ಲದ ಹಾವು ಆಗಬಾರದು. ಈ ನಿಟ್ಟಿನಲ್ಲಿ ಮಹಿಳಾ‌ ಆಯೋಗಕ್ಕೆ ಶಕ್ತಿ ತುಂಬುವ ಕೆಲಸ ಆಗಬೇಕು. ಹೆಚ್ಚಿನ ಹಣಕಾಸು ಸೌಲಭ್ಯ ನೀಡಬೇಕು. ಮಹಿಳೆಯ ಪರಿಸ್ಥಿತಿ ಗಂಭೀರವಾಗಿದೆ. ಶಿಕ್ಷಣ ಹಾಗೂ ಆರ್ಥಿಕ ಸಬಲೀಕರಣದಿಂದ ಮಹಿಳೆಯರಿಗೆ ಶಕ್ತಿ ಬರುತ್ತದೆ ಎಂಬುದು ಕನಸಾಗಿತ್ತು. ಆದರೆ, ಶಿಕ್ಷಣ ಸಿಕ್ಕಿದರೂ‌ ಆರ್ಥಿಕವಾಗಿ ಸದೃಢರಾದರೂ ಮಹಿಳೆಯರ ಮೇಲೆ ಆಗುತ್ತಿರುವ ಪ್ರಕರಣ ‌ಕಡಿಮೆ ಆಗಿಲ್ಲ ಎಂದು‌ ಆತಂಕ ವ್ಯಕ್ತಪಡಿಸಿದರು.

ಮುಂದುವರೆದು, ನಮ್ಮನ್ನು ನಾವು ರಕ್ಷಣೆ ಮಾಡಲು ನಾವು ಸಾಧ್ಯವಾಗಿದೆಯಾ? ಎಂದು ಪ್ರಶ್ನಿಸಿದ ಅವರು, ಐಎಎಸ್ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳೇ ಬಂದು ಉನ್ನತಾಧಿಕಾರಿಗಳ ದೌರ್ಜನ್ಯ ಹಾಗೂ ಒತ್ತಡದ ಬಗ್ಗೆ ಹೇಳಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಮಹಿಳಾ‌ ದಿನ ಆಚರಣೆ ಮಾಡಬೇಕಾಗಿದ್ದು ಮಹಿಳೆಯರಿಗಲ್ಲ ಬದಲಾಗಿ ಪುರುಷರಿಗೆ, ಭಾಷಣಗಳ ಅಗತ್ಯಗಳು ಬೇಕಾಗಿರುವುದು ಕೂಡಾ ಪುರುಷರಿಗೆ ಎಂದು ಹೇಳಿದರು.

ಇದನ್ನೂ ಓದಿ:ರಾಜ್ಯಗಳನ್ನು ಬೇರ್ಪಡಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರ ನಿಲ್ಲಿಸಬೇಕು, ಶೀಘ್ರ ಸರ್ವಪಕ್ಷ ಸಭೆ: ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.