ETV Bharat / state

ಪಿಎಸ್​ಐ ನೇಮಕಾತಿ ಅಕ್ರಮ: 2ನೇ ಬಾರಿ ಐಪಿಎಸ್ ಅಧಿಕಾರಿ ಅಮೃತ್‌ ಪೌಲ್ ವಿಚಾರಣೆ - IPS officer Amrit Paul second time inquiry regarding PSI exam scam

ಪೊಲೀಸ್ ಸಿಬ್ಬಂದಿ ನೇಮಕಾತಿ ವಿಭಾಗದಲ್ಲಿ ಅಮೃತ್‌ ಪೌಲ್​ ಎಡಿಜಿಪಿ ಆಗಿದ್ದ ಸಂದರ್ಭದಲ್ಲಿ ಪಿಎಸ್‌ಐ ಹಗರಣ ನಡೆದಿತ್ತು.

ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್
ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್
author img

By

Published : Jun 23, 2022, 4:33 PM IST

ಬೆಂಗಳೂರು: ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಸಂಬಂಧ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್‌ ಪೌಲ್ ಎರಡನೇ ಬಾರಿ ಸಿಐಡಿ ತನಿಖಾಧಿಕಾರಿಗಳ‌ ಮುಂದೆ ಇಂದು ಹಾಜರಾದರು.

ನೇಮಕಾತಿ ವಿಭಾಗದಲ್ಲಿ ಅಮೃತ್‌ ಪೌಲ್ ಎಡಿಜಿಪಿ ಆಗಿದ್ದ ಸಂದರ್ಭದಲ್ಲಿ ಹಗರಣ ನಡೆದಿತ್ತು. ಈ ಸಂಬಂಧ ಅಮ್ರಿತ್ ಪೌಲ್ ಆಪ್ತ ಅಧಿಕಾರಿ ಡಿವೈಎಸ್​ಪಿ ಶಾಂತರಾಜು ಅವರನ್ನು ಸಿಐಡಿ ಬಂಧಿಸಿದೆ. ಶಾಂತಕುಮಾರ್ ಹೇಳಿಕೆಯ ಮೇಲೆ, ಪ್ರಸ್ತುತ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿರುವ ಅಮ್ರಿತ್ ಪೌಲ್ ಈ ಹಿಂದೆ ಕೂಡ ಎರಡು ದಿನ ವಿಚಾರಣೆ ಎದುರಿಸಿದ್ದರು. ಸದ್ಯ ಈ ಕೇಸ್​ನಲ್ಲಿ ಇನ್ನಷ್ಟು ಆರೋಪಿಗಳು ಬಂಧನವಾಗಿದ್ದು, ಬಂಧಿತರ ಸಂಖ್ಯೆ 40ರ ಗಡಿ ದಾಟಿದೆ.

ಇವರುಗಳ ಹೇಳಿಕೆ ಮತ್ತು ಸಾಂದರ್ಭಿಕ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಸಿಐಡಿ ಎಡಿಜಿ ಉಮೇಶ್ ಕುಮಾರ್ ಸಮ್ಮುಖದಲ್ಲಿ ಡಿವೈಎಸ್​ಪಿ ಶೇಖರ್, ಅಮೃತ್‌ ಪೌಲ್ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ‌ ಲಭ್ಯವಾಗಿದೆ.

ಇದನ್ನೂ ಓದಿ: ಕಲಬುರಗಿ: ದೇವಲಗಾಣಗಾಪುರ ದತ್ತಾತ್ರೇಯ ದೇಗುಲದ ಅರ್ಚಕರ ವಿರುದ್ಧ ವಂಚನೆ ಪ್ರಕರಣ

ಬೆಂಗಳೂರು: ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಸಂಬಂಧ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್‌ ಪೌಲ್ ಎರಡನೇ ಬಾರಿ ಸಿಐಡಿ ತನಿಖಾಧಿಕಾರಿಗಳ‌ ಮುಂದೆ ಇಂದು ಹಾಜರಾದರು.

ನೇಮಕಾತಿ ವಿಭಾಗದಲ್ಲಿ ಅಮೃತ್‌ ಪೌಲ್ ಎಡಿಜಿಪಿ ಆಗಿದ್ದ ಸಂದರ್ಭದಲ್ಲಿ ಹಗರಣ ನಡೆದಿತ್ತು. ಈ ಸಂಬಂಧ ಅಮ್ರಿತ್ ಪೌಲ್ ಆಪ್ತ ಅಧಿಕಾರಿ ಡಿವೈಎಸ್​ಪಿ ಶಾಂತರಾಜು ಅವರನ್ನು ಸಿಐಡಿ ಬಂಧಿಸಿದೆ. ಶಾಂತಕುಮಾರ್ ಹೇಳಿಕೆಯ ಮೇಲೆ, ಪ್ರಸ್ತುತ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿರುವ ಅಮ್ರಿತ್ ಪೌಲ್ ಈ ಹಿಂದೆ ಕೂಡ ಎರಡು ದಿನ ವಿಚಾರಣೆ ಎದುರಿಸಿದ್ದರು. ಸದ್ಯ ಈ ಕೇಸ್​ನಲ್ಲಿ ಇನ್ನಷ್ಟು ಆರೋಪಿಗಳು ಬಂಧನವಾಗಿದ್ದು, ಬಂಧಿತರ ಸಂಖ್ಯೆ 40ರ ಗಡಿ ದಾಟಿದೆ.

ಇವರುಗಳ ಹೇಳಿಕೆ ಮತ್ತು ಸಾಂದರ್ಭಿಕ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಸಿಐಡಿ ಎಡಿಜಿ ಉಮೇಶ್ ಕುಮಾರ್ ಸಮ್ಮುಖದಲ್ಲಿ ಡಿವೈಎಸ್​ಪಿ ಶೇಖರ್, ಅಮೃತ್‌ ಪೌಲ್ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ‌ ಲಭ್ಯವಾಗಿದೆ.

ಇದನ್ನೂ ಓದಿ: ಕಲಬುರಗಿ: ದೇವಲಗಾಣಗಾಪುರ ದತ್ತಾತ್ರೇಯ ದೇಗುಲದ ಅರ್ಚಕರ ವಿರುದ್ಧ ವಂಚನೆ ಪ್ರಕರಣ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.