ETV Bharat / state

ಸಚಿವ ಸ್ಥಾನ ತುಂಬಲು 'ತೆನೆ'ಬೇನೆ.. ಲೋಕ ರಿಸಲ್ಟ್‌ ಬಳಿಕ ಹೊರಟ್ಟಿ, ಫಾರೂಕ್‌ ಮಿನಿಸ್ಟರ್‌? - undefined

ಲೋಕಸಭಾ ಫಲಿತಾಂಶದ ಬಳಿಕ 2 ಸ್ಥಾನಗಳನ್ನೂ ಭರ್ತಿ ಮಾಡುವ ಸಾಧ್ಯತೆ ಇದ್ದು, ವಿಧಾನ ಪರಿಷತ್​ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹಾಗೂ ಬಿ ಎಂ ಫಾರೂಕ್ ಅವರಿಗೆ ಸಚಿವ ಸ್ಥಾನ ಸಿಗಲಿದೆಯಾ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಸಿಗಲಿದೆಯಾ ಹೊರಟ್ಟಿ, ಫಾರೂಕ್​ಗೆ ಸಚಿವ ಸ್ಥಾನ?
author img

By

Published : May 12, 2019, 8:45 PM IST

ಬೆಂಗಳೂರು : ಲೋಕಸಭೆ ಚುನಾವಣಾ ಫಲಿತಾಂಶದ ನಂತರ ಕೆಲ ಖಾತೆಗಳನ್ನು ಬದಲಾವಣೆ ಮಾಡಲು ಜೆಡಿಎಸ್ ಚಿಂತನೆ ನಡೆಸಿದೆಯಂತೆ. ಜೆಡಿಎಸ್ ಪಾಲಿನ 10 ಖಾತೆಗಳಲ್ಲಿ ಕೆಲ ಸಚಿವರ ಖಾತೆ ಬದಲಾವಣೆ ಮಾಡಲು ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆಲೋಚಿಸಿದ್ದಾರೆ ಎನ್ನಲಾಗಿದೆ.

ಬಿಎಸ್​ಪಿ ಶಾಸಕ ಮಹೇಶ್‌ರಿಂದ ತೆರವಾಗಿರೋದು ಸೇರಿ ಜೆಡಿಎಸ್‌ ಬಳಿ ಈಗ ಎರಡು ಸ್ಥಾನಗಳು ಖಾಲಿಯಿವೆ. ಲೋಕಸಭಾ ಫಲಿತಾಂಶದ ಬಳಿಕ ಆ 2 ಸ್ಥಾನ ಭರ್ತಿ ಮಾಡುವ ಸಾಧ್ಯತೆ ಇದ್ದು, ವಿಧಾನ ಪರಿಷತ್​ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹಾಗೂ ಬಿ ಎಂ ಫಾರೂಕ್ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಸಚಿವ ಸ್ಥಾನ ಮಂಡ್ಯ ಲೋಕಸಭೆ ಚುನಾವಣಾ ಫಲಿತಾಂಶದ ಮೇಲೆ ನಿಂತಿದೆ ಎಂದು ಹೇಳಲಾಗುತ್ತಿದೆ. ಕಾರಣ, ಇಬ್ಬರು ಸಚಿವರ ಕ್ಷೇತ್ರಗಳಲ್ಲೂ ಜೆಡಿಎಸ್ ಪರ ಮತಗಳು ಬಿದ್ದಿಲ್ಲವೆಂಬ ಗುಪ್ತಚರ ಇಲಾಖೆ ಮಾಹಿತಿ ಸಿಎಂಗೆ ತಲುಪಿದೆ ಎನ್ನಲಾಗಿದೆ.

ಹಾಗಾಗಿ, ಮಂಡ್ಯ ಫಲಿತಾಂಶ ವ್ಯತಿರಿಕ್ತವಾಗಿ ಬಂದರೆ ಸಚಿವ ಸ್ಥಾನಕ್ಕೆ ಕೋಕ್ ಬೀಳಲಿದೆ ಎಂದು ಹೇಳಲಾಗ್ತಿದೆ. ಒಂದು ವೇಳೆ ಸಚಿವ ಸ್ಥಾನಕ್ಕೆ ಕೋಕ್ ನೀಡಿದ್ರೆ, ಮಳವಳ್ಳಿ ಶಾಸಕ ಡಾ.ಅನ್ನದಾನಿ ಹಾಗೂ ಸಕಲೇಶಪುರ ಕ್ಷೇತ್ರದ ಶಾಸಕ ಹೆಚ್‌ ಕೆ ಕುಮಾರಸ್ವಾಮಿ ಅವರಿಗೆ ಬಂಪರ್ ಗಿಫ್ಟ್ ಸಿಗುತ್ತಾ ಎಂಬ ಲೆಕ್ಕಾಚಾರಗಳ ಕುರಿತು ಜೆಡಿಎಸ್ ವಲಯದಲ್ಲಿ ಚರ್ಚೆಯಾಗುತ್ತಿವೆ. ಮೇ 23ರ ಫಲಿತಾಂಶದ ನಂತರ 3 ಖಾತೆ ಬದಲಾವಣೆ ಸಾಧ್ಯತೆ ಇದ್ದು, ಖಾಲಿ ಉಳಿದ ನಿಗಮ ಮಂಡಳಿಯನ್ನೂ ಭರ್ತಿ ಮಾಡಲು ಜೆಡಿಎಸ್ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು : ಲೋಕಸಭೆ ಚುನಾವಣಾ ಫಲಿತಾಂಶದ ನಂತರ ಕೆಲ ಖಾತೆಗಳನ್ನು ಬದಲಾವಣೆ ಮಾಡಲು ಜೆಡಿಎಸ್ ಚಿಂತನೆ ನಡೆಸಿದೆಯಂತೆ. ಜೆಡಿಎಸ್ ಪಾಲಿನ 10 ಖಾತೆಗಳಲ್ಲಿ ಕೆಲ ಸಚಿವರ ಖಾತೆ ಬದಲಾವಣೆ ಮಾಡಲು ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆಲೋಚಿಸಿದ್ದಾರೆ ಎನ್ನಲಾಗಿದೆ.

ಬಿಎಸ್​ಪಿ ಶಾಸಕ ಮಹೇಶ್‌ರಿಂದ ತೆರವಾಗಿರೋದು ಸೇರಿ ಜೆಡಿಎಸ್‌ ಬಳಿ ಈಗ ಎರಡು ಸ್ಥಾನಗಳು ಖಾಲಿಯಿವೆ. ಲೋಕಸಭಾ ಫಲಿತಾಂಶದ ಬಳಿಕ ಆ 2 ಸ್ಥಾನ ಭರ್ತಿ ಮಾಡುವ ಸಾಧ್ಯತೆ ಇದ್ದು, ವಿಧಾನ ಪರಿಷತ್​ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹಾಗೂ ಬಿ ಎಂ ಫಾರೂಕ್ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಸಚಿವ ಸ್ಥಾನ ಮಂಡ್ಯ ಲೋಕಸಭೆ ಚುನಾವಣಾ ಫಲಿತಾಂಶದ ಮೇಲೆ ನಿಂತಿದೆ ಎಂದು ಹೇಳಲಾಗುತ್ತಿದೆ. ಕಾರಣ, ಇಬ್ಬರು ಸಚಿವರ ಕ್ಷೇತ್ರಗಳಲ್ಲೂ ಜೆಡಿಎಸ್ ಪರ ಮತಗಳು ಬಿದ್ದಿಲ್ಲವೆಂಬ ಗುಪ್ತಚರ ಇಲಾಖೆ ಮಾಹಿತಿ ಸಿಎಂಗೆ ತಲುಪಿದೆ ಎನ್ನಲಾಗಿದೆ.

ಹಾಗಾಗಿ, ಮಂಡ್ಯ ಫಲಿತಾಂಶ ವ್ಯತಿರಿಕ್ತವಾಗಿ ಬಂದರೆ ಸಚಿವ ಸ್ಥಾನಕ್ಕೆ ಕೋಕ್ ಬೀಳಲಿದೆ ಎಂದು ಹೇಳಲಾಗ್ತಿದೆ. ಒಂದು ವೇಳೆ ಸಚಿವ ಸ್ಥಾನಕ್ಕೆ ಕೋಕ್ ನೀಡಿದ್ರೆ, ಮಳವಳ್ಳಿ ಶಾಸಕ ಡಾ.ಅನ್ನದಾನಿ ಹಾಗೂ ಸಕಲೇಶಪುರ ಕ್ಷೇತ್ರದ ಶಾಸಕ ಹೆಚ್‌ ಕೆ ಕುಮಾರಸ್ವಾಮಿ ಅವರಿಗೆ ಬಂಪರ್ ಗಿಫ್ಟ್ ಸಿಗುತ್ತಾ ಎಂಬ ಲೆಕ್ಕಾಚಾರಗಳ ಕುರಿತು ಜೆಡಿಎಸ್ ವಲಯದಲ್ಲಿ ಚರ್ಚೆಯಾಗುತ್ತಿವೆ. ಮೇ 23ರ ಫಲಿತಾಂಶದ ನಂತರ 3 ಖಾತೆ ಬದಲಾವಣೆ ಸಾಧ್ಯತೆ ಇದ್ದು, ಖಾಲಿ ಉಳಿದ ನಿಗಮ ಮಂಡಳಿಯನ್ನೂ ಭರ್ತಿ ಮಾಡಲು ಜೆಡಿಎಸ್ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

Intro:ಬೆಂಗಳೂರು : ಲೋಕಸಭೆ ಚುನಾವಣಾ ಫಲಿತಾಂಶದ ನಂತರ ಕೆಲವೊಂದು ಖಾತೆಗಳನ್ನು ಬದಲಾವಣೆ ಮಾಡಲು ಜೆಡಿಎಸ್ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. Body:ಜೆಡಿಎಸ್ ಪಾಲಿನ ಹತ್ತು ಖಾತೆಗಳಲ್ಲಿ ಕೆಲವು ಸಚಿವರ ಖಾತೆ ಬದಲಾವಣೆ ಮಾಡಲು ಸಿಎಂ ಆಲೋಚಿಸಿದ್ದಾರೆ ಎನ್ನಲಾಗಿದೆ.
ಇನ್ನು ಬಿಎಸ್ ಪಿ ಪಕ್ಷದ ಶಾಸಕ ಮಹೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ, ಈ ಸ್ಥಾನ ಖಾಲಿ ಉಳಿದಿರುವುದು ಸೇರಿದಂತೆ ಜೆಡಿಎಸ್ ಪಾಲಿನ ಎರಡು ಸ್ಥಾನಗಳನ್ನು ತುಂಬಬೇಕಿದೆ. ಹಾಗಾಗಿ, ಲೋಕ ಫಲಿತಾಂಶದ ಬಳಿಕ ಆ ಎರಡು ಸ್ಥಾನಗಳನ್ನೂ ಭರ್ತಿ ಮಾಡುವ ಸಾಧ್ಯತೆ ಇದ್ದು, ವಿಧಾನ ಪರಿಷತ್ ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹಾಗೂ ಬಿ.ಎಂ.ಫಾರೂಕ್ ಅವರಿಗೆ ಸಚಿವ ಸ್ಥಾನ ಸಿಗಲಿದೆಯಾ? ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಅವರ ಸಚಿವ ಸ್ಥಾನ ಮಂಡ್ಯ ಲೋಕಸಭೆ ಚುನಾವಣಾ ಫಲಿತಾಂಶದ ಮೇಲೆ ನಿಂತಿದೆ ಎಂದು ಹೇಳಲಾಗುತ್ತಿದೆ. ಕಾರಣ, ಇಬ್ಬರು ಸಚಿವರ ಕ್ಷೇತ್ರಗಳಲ್ಲೂ ಜೆಡಿಎಸ್ ಪರ ಮತಗಳು ಬಿದ್ದಿಲ್ಲವೆಂಬ ಗುಪ್ತಚರ ಇಲಾಖೆ ಮಾಹಿತಿ ಸಿಎಂಗೆ ತಲುಪಿದೆ ಎನ್ನಲಾಗಿದೆ.
ಹಾಗಾಗಿ, ಮಂಡ್ಯ ಫಲಿತಾಂಶ ವ್ಯತಿರಿಕ್ತವಾಗಿ ಬಂದರೆ ಸಚಿವ ಸ್ಥಾನಕ್ಕೆ ಕೊಕ್ ? ಬೀಳಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಒಂದು ವೇಳೆ ಸಚಿವ ಸ್ಥಾನಕ್ಕೆ ಕೊಕ್ ನೀಡಿದರೆ, ಮಳವಳ್ಳಿ ಶಾಸಕ ಡಾ.ಅನ್ನದಾನಿ ಹಾಗೂ ಸಕಲೇಶಪುರ ಕ್ಷೇತ್ರದ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಅವರಿಗೆ ಬಂಪರ್ ಗಿಫ್ಟ್ ಸಿಗುತ್ತಾ ? ಎಂಬ ಲೆಕ್ಕಾಚಾರಗಳ ಕುರಿತು ಜೆಡಿಎಸ್ ವಲಯದಲ್ಲಿ ಚರ್ಚೆಯಾಗುತ್ತಿವೆ.
ಮೇ 23 ರ ಫಲಿತಾಂಶದ ನಂತರ ಮೂರು ಖಾತೆ ಬದಲಾವಣೆ ಸಾಧ್ಯತೆ ಇದ್ದು, ಖಾಲಿ ಉಳಿದ ನಿಗಮ ಮಂಡಳಿಯನ್ನೂ ಭರ್ತಿ ಮಾಡಲು ಜೆಡಿಎಸ್ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಒಟ್ಟಾರೆ, ಎಲ್ಲದಕ್ಕೂ ಮೇ 23 ರ ಲೋಕಸಭೆ ಚುನಾವಣಾ ಫಲಿತಾಂಶದ ಬಳಿಕ ಉತ್ತರ ಸಿಗಲಿದೆ.

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.