ಬೆಂಗಳೂರು : ಹಾಸನದಲ್ಲಿ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಸ್ಫೋಟ ಸಂಭವಿಸಿರುವ ಘಟನೆ ಖಂಡಿಸಿರುವ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್ ಆರ್ ಪಾಟೀಲ್, ಇಂತಹ ಘಟನೆಗಳಿಗೆ ಅಂತ್ಯವೇ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಟ್ವೀಟ್ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದ ಸ್ಫೋಟದ ನಂತರ ಈಗ ಹಾಸನದಲ್ಲೂ ಅಂತದ್ದೇ ಘಟನೆ ನಡೆದಿದೆ. ಹಾಸನದ ಚಾಕೇನಹಳ್ಳಿಯಲ್ಲಿ ಕಲ್ಲು ಗಣಿಗಾರಿಕೆಗೆ ಸ್ಫೋಟಕ ಸಂಗ್ರಹಿಸಿದ್ದ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ವ್ಯಕ್ತಿಯೊಬ್ಬ ಮೃತನಾಗಿದ್ದಾನೆ, ಇಬ್ಬರು ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಈ ರೀತಿಯ ಘಟನೆಗಳಿಗೆ ಅಂತ್ಯವೇ ಇಲ್ಲವೇ?
-
ರಾಜ್ಯದಲ್ಲಿ ಸ್ಫೋಟಕಗಳನ್ನು ಸಾಗಿಸುವಾಗ ಸೂಕ್ತ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದ್ಯಾವುದೂ ಇಲ್ಲದೇ ಎಚ್ಚರಿಕೆ ತಪ್ಪಿದ್ದೇ ದುರಂತಗಳಿಗೆ ಕಾರಣ. ನಿಯಮ ಉಲ್ಲಂಘಿಸಿ ಸಾಗಾಣಿಕೆ ಮಾಡಿದಾಗ ಇಂತಹ ಘಟನೆಗಳು ಆಗುತ್ತವೆ. ಜಿಲ್ಲಾ ಹಾಗೂ ರಾಜ್ಯ ಗುಪ್ತಚರ ಅಧಿಕಾರಿಗಳ ಗಮನಕ್ಕೆ ಬಾರದೇ ಈ ಅಕ್ರಮ ಸಾಗಾಣಿಕೆ ಹೇಗೆ ನಡೆಯುತ್ತಿದೆ..? 3/4
— S R Patil (@srpatilbagalkot) April 5, 2021 " class="align-text-top noRightClick twitterSection" data="
">ರಾಜ್ಯದಲ್ಲಿ ಸ್ಫೋಟಕಗಳನ್ನು ಸಾಗಿಸುವಾಗ ಸೂಕ್ತ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದ್ಯಾವುದೂ ಇಲ್ಲದೇ ಎಚ್ಚರಿಕೆ ತಪ್ಪಿದ್ದೇ ದುರಂತಗಳಿಗೆ ಕಾರಣ. ನಿಯಮ ಉಲ್ಲಂಘಿಸಿ ಸಾಗಾಣಿಕೆ ಮಾಡಿದಾಗ ಇಂತಹ ಘಟನೆಗಳು ಆಗುತ್ತವೆ. ಜಿಲ್ಲಾ ಹಾಗೂ ರಾಜ್ಯ ಗುಪ್ತಚರ ಅಧಿಕಾರಿಗಳ ಗಮನಕ್ಕೆ ಬಾರದೇ ಈ ಅಕ್ರಮ ಸಾಗಾಣಿಕೆ ಹೇಗೆ ನಡೆಯುತ್ತಿದೆ..? 3/4
— S R Patil (@srpatilbagalkot) April 5, 2021ರಾಜ್ಯದಲ್ಲಿ ಸ್ಫೋಟಕಗಳನ್ನು ಸಾಗಿಸುವಾಗ ಸೂಕ್ತ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದ್ಯಾವುದೂ ಇಲ್ಲದೇ ಎಚ್ಚರಿಕೆ ತಪ್ಪಿದ್ದೇ ದುರಂತಗಳಿಗೆ ಕಾರಣ. ನಿಯಮ ಉಲ್ಲಂಘಿಸಿ ಸಾಗಾಣಿಕೆ ಮಾಡಿದಾಗ ಇಂತಹ ಘಟನೆಗಳು ಆಗುತ್ತವೆ. ಜಿಲ್ಲಾ ಹಾಗೂ ರಾಜ್ಯ ಗುಪ್ತಚರ ಅಧಿಕಾರಿಗಳ ಗಮನಕ್ಕೆ ಬಾರದೇ ಈ ಅಕ್ರಮ ಸಾಗಾಣಿಕೆ ಹೇಗೆ ನಡೆಯುತ್ತಿದೆ..? 3/4
— S R Patil (@srpatilbagalkot) April 5, 2021