ETV Bharat / state

ನಮ್ಮವರು ಪಕ್ಷ ಬಿಡುತ್ತಿರುವುದು ನಿಜ, ಸೋಲಿನ ನಂತರ ಪಕ್ಷ ಕಟ್ಟುವಲ್ಲಿ ನಾವು ವಿಫಲ: ಸದಾನಂದ ಗೌಡ

author img

By ETV Bharat Karnataka Team

Published : Oct 12, 2023, 2:53 PM IST

ನಮ್ಮ ಕೆಲವರು ಬಿಜೆಪಿ ಬಿಟ್ಟು ಹೋಗುತ್ತಿರುವುದು ನಿಜ. ನಮ್ಮವರ ಮನವೊಲಿಸಿ ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ಆಗುತ್ತಿಲ್ಲ- ಡಿ.ವಿ.ಸದಾನಂದ ಗೌಡ

DV Sadanand Gowda
ಕೇಂದ್ರದ ಮಾಜಿ ಸಚಿವ ಡಿ.ವಿ ಸದಾನಂದಗೌಡ
ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಹೇಳಿಕೆ

ಬೆಂಗಳೂರು: ''ಇತ್ತೀಚಿನ ದಿನಗಳಲ್ಲಿ ಕೆಲವು ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿರುವುದು ನಮ್ಮ ವೈಫಲ್ಯವಾಗಿದೆ. ಸೋಲಿನ ನಂತರ ಪಕ್ಷ ಕಟ್ಟುವಲ್ಲಿ ನಾವು ವಿಫಲವಾಗಿದ್ದೇವೆ. ಅದರಿಂದಾಗಿಯೇ ನಾಯಕರು ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ'' ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿ.ವಿ.ಟವರ್ ಕಚೇರಿಯಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ''ಕಾಂಗ್ರೆಸ್​ಗೆ ಕೆಲವರು ವಲಸೆ ಹೋಗುತ್ತಿದ್ದಾರೆ. ನಮ್ಮವರು ಅನೇಕರು ಬಿಜೆಪಿ ಬಿಟ್ಟು ಹೋಗುತ್ತಿರುವುದು ನಿಜ, ಅವರನ್ನು ಮನವರಿಕೆ ಮಾಡಿ ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ನಡೆಯುತ್ತಿಲ್ಲ. ವಿಧಾನಸಭೆ ಚುನಾವಣೆ ಸೋಲಿನ ನಂತರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಿ ಪಕ್ಷ ಕಟ್ಟಿವಲ್ಲಿ ವಿಫಲವಾಗಿದ್ದೇವೆ'' ಎಂದರು.

ಎನ್ಇಪಿ ರದ್ದುಪಡಿಸಿ, ಎಸ್ಇಪಿ ಜಾರಿ ಅಪಾಯಕರ: ''ರಾಜ್ಯ ಸರ್ಕಾರ ಎಸ್‌ಇ‌ಪಿ ತರುವ ನಿರ್ಧಾರ ರಾಜ್ಯ ಶಿಕ್ಷಣ ವಲಯಕ್ಕೆ ಅಪಾಯಕಾರಿ. ಎಸ್‌ಇಪಿ ಶಿಕ್ಷಣ ಪದ್ದತಿಗೆ ಆಯೋಗ ರಚನೆ ಸರಿಯಲ್ಲ. ಎಲ್ಲ ಆಯಾಮಗಳಲ್ಲೂ ಪರಿಶೀಲಿಸಿ ಅಧ್ಯಯನ ನಡೆಸಿ ರಾಷ್ಟ್ರೀಯ ಶಿಕ್ಷಣ ನೀತಿ ತರಲಾಗಿದೆ. ಅದರಲ್ಲಿ ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ಕೊಡಬೇಕು ಅನ್ನೋದೂ ಇದೆ. ಎನ್‌ಇಪಿಯಲ್ಲಿ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ಕೊಡಲಾಗಿದೆ. ಹಾಗಾಗಿ ಎನ್ಇಪಿ ರದ್ದು ಮಾಡಿ ಎಸ್‌ಇ‌ಪಿ ತರುತ್ತಿರುವುದು ಮಾರಕ ನಡೆ. ಅವರಿಗೆ ಬೇಕಾದ ಹಾಗೆ ತಜ್ಞರ ವರದಿ ಪಡೆಯಲು ಮುಂದಾಗಿದ್ದಾರೆ. ಅವರಿಗೆ ಬೇಕಾದ ವರದಿ ಪಡೆಯಲು ಹೊರಗಿನ ಶಿಕ್ಷಣ ತಜ್ಞರನ್ನೂ ಆಯೋಗದಲ್ಲಿ ಸದಸ್ಯರಾಗಿ ಮಾಡಿದ್ದಾರೆ'' ಎಂದು ₹ಕ್ಷೇಪ ವ್ಯಕ್ತಪಡಿಸಿದರು.

''ಕೇಂದ್ರದ ಬರ ಅಧ್ಯಯನ ತಂಡದೆದುರು ಬರ ಪರಿಸ್ಥಿತಿ ಬಗ್ಗೆ ಸರಿಯಾಗಿ ತಿಳಿಸಲಿಲ್ಲ. ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ವಿದ್ಯುತ್ ಸಮಸ್ಯೆ ನಿಭಾಯಿಸುವಲ್ಲಿಯೂ ಎಡವಿದೆ. ಬರಪೀಡಿತ ಪ್ರದೇಶದ ರೈತರಿಗೆ ಪರಿಹಾರ ಕೊಟ್ಟಿಲ್ಲ. ರೈತರ ಸಮಸ್ಯೆ ಆಲಿಸದೇ ಬೇಜವಾಬ್ದಾರಿ ನಡೆಯನ್ನು ಸರ್ಕಾರ ಅನುಸರಿಸುತ್ತಿದೆ'' ಎಂದು ಕಿಡಿ ಕಾರಿದರು.

ಕಾವೇರಿ ನದಿಯಿಂದ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಆದೇಶ ಕುರಿತು ಪ್ರತಿಕ್ರಿಯಿಸಿ, ''ಕರ್ನಾಟಕದಲ್ಲಿ ನೀರಿಲ್ಲ, ಬಿಡಲು ಆಗಲ್ಲ, ಆದರೆ ತಮಿಳುನಾಡಿನಲ್ಲಿ ನೀರಿನ ಅವಶ್ಯಕತೆ ಎಲ್ಲಿದೆ ಅಂತ ಅವರು ಪ್ರತಿಪಾದಿಸುತ್ತಿಲ್ಲ. ನಮ್ಮವರು ಕುಡಿಯಲು ಅಗತ್ಯವಾಗಿ ಬೇಕು ಅನ್ನೋದನ್ನು ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದ್ದಾರೆ. ಇದು ಸರ್ಕಾರ, ಜಲಸಂಪನ್ಮೂಲ ಖಾತೆ ಸಚಿವರ ವೈಫಲ್ಯ'' ಎಂದರು.

ಅನುದಾನ ವಾಪಸ್ ಹಿಂದೆ ಕಮಿಷನ್ ಹುನ್ನಾರ: ಬಿಜೆಪಿ ಶಾಸಕರ ಅನುದಾನ ವಾಪಸ್ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸದಾನಂದ ಗೌಡ, ''ನಮ್ಮ ಶಾಸಕರ ಅನುದಾನ ವಾಪಸ್ ಪಡೆದಿರೋದು ಸರಿಯಲ್ಲ. ಅನುದಾನ ವಾಪಸ್ ಪಡೆದಿರುವ ಹಿಂದೆ ಕಮಿಷನ್ ಪಡೆಯುವ ಉದ್ದೇಶವಿದೆ. ಇನ್ನೂ ಹೆಚ್ಚಿನ ಕಮಿಷನ್ ಪಡೆಯುವ ಸಲುವಾಗಿ ಶಾಸಕರ ಅನುದಾನ ವಾಪಸ್ ಪಡೆದಿರಬಹುದು. ಅನುದಾನ ವಾಪಸ್ ಹಿಂದೆ ಕಮಿಷನ್ ಹೆಚ್ಚು ಮಾಡುವ ಹುನ್ನಾರ ಅಡಗಿದೆ'' ಎಂದು ಗಂಭೀರ ಆರೋಪ ಮಾಡಿದರು.

ಶಾಸಕ ಮುನಿರತ್ನಗೆ ಟಾಂಗ್: ಬಿ.ಎಸ್​.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವಾಗ ಸದಾನಂದ ಗೌಡ ಯಾಕೆ ಮಾತಾಡಿಲ್ಲ ಎನ್ನುವ ಮುನಿರತ್ನ ಹೇಳಿಕೆಗೆ ಸದಾನಂದ ಗೌಡ ಟಾಂಗ್ ನೀಡಿದರು. ''ನಾವು ಯಡಿಯೂರಪ್ಪರನ್ನು ಬದಲಾವಣೆ ಮಾಡಿ, ಇನ್ನೊಬ್ಬರನ್ನು ಮುಖ್ಯಮಂತ್ರಿ ಮಾಡುವಾಗ ಕಾಂಗ್ರೆಸ್ ಪಾರ್ಟಿಯವರನ್ನು ಮುಖ್ಯಮಂತ್ರಿ ಮಾಡಿಲ್ಲ. ನಮ್ಮವರನ್ನೇ ಮುಖ್ಯಮಂತ್ರಿ ಮಾಡಿದ್ದೇವೆ. ಸೌಹಾರ್ದಯುತವಾಗಿಯೇ ಆಯ್ಕೆ ಮಾಡಲಾಗಿತ್ತು.
ಆಗ ನಾನು ಯಾಕೆ ಮಾತಾಡಬೇಕಿತ್ತು?'' ಎಂದರು.

ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿ.10ರ ವರೆಗೂ ನೀರು ಹರಿಸಲು ನಿರ್ಧಾರ: ಆರ್.ಬಿ ತಿಮ್ಮಾಪುರ

ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಹೇಳಿಕೆ

ಬೆಂಗಳೂರು: ''ಇತ್ತೀಚಿನ ದಿನಗಳಲ್ಲಿ ಕೆಲವು ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿರುವುದು ನಮ್ಮ ವೈಫಲ್ಯವಾಗಿದೆ. ಸೋಲಿನ ನಂತರ ಪಕ್ಷ ಕಟ್ಟುವಲ್ಲಿ ನಾವು ವಿಫಲವಾಗಿದ್ದೇವೆ. ಅದರಿಂದಾಗಿಯೇ ನಾಯಕರು ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ'' ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿ.ವಿ.ಟವರ್ ಕಚೇರಿಯಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ''ಕಾಂಗ್ರೆಸ್​ಗೆ ಕೆಲವರು ವಲಸೆ ಹೋಗುತ್ತಿದ್ದಾರೆ. ನಮ್ಮವರು ಅನೇಕರು ಬಿಜೆಪಿ ಬಿಟ್ಟು ಹೋಗುತ್ತಿರುವುದು ನಿಜ, ಅವರನ್ನು ಮನವರಿಕೆ ಮಾಡಿ ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ನಡೆಯುತ್ತಿಲ್ಲ. ವಿಧಾನಸಭೆ ಚುನಾವಣೆ ಸೋಲಿನ ನಂತರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಿ ಪಕ್ಷ ಕಟ್ಟಿವಲ್ಲಿ ವಿಫಲವಾಗಿದ್ದೇವೆ'' ಎಂದರು.

ಎನ್ಇಪಿ ರದ್ದುಪಡಿಸಿ, ಎಸ್ಇಪಿ ಜಾರಿ ಅಪಾಯಕರ: ''ರಾಜ್ಯ ಸರ್ಕಾರ ಎಸ್‌ಇ‌ಪಿ ತರುವ ನಿರ್ಧಾರ ರಾಜ್ಯ ಶಿಕ್ಷಣ ವಲಯಕ್ಕೆ ಅಪಾಯಕಾರಿ. ಎಸ್‌ಇಪಿ ಶಿಕ್ಷಣ ಪದ್ದತಿಗೆ ಆಯೋಗ ರಚನೆ ಸರಿಯಲ್ಲ. ಎಲ್ಲ ಆಯಾಮಗಳಲ್ಲೂ ಪರಿಶೀಲಿಸಿ ಅಧ್ಯಯನ ನಡೆಸಿ ರಾಷ್ಟ್ರೀಯ ಶಿಕ್ಷಣ ನೀತಿ ತರಲಾಗಿದೆ. ಅದರಲ್ಲಿ ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ಕೊಡಬೇಕು ಅನ್ನೋದೂ ಇದೆ. ಎನ್‌ಇಪಿಯಲ್ಲಿ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ಕೊಡಲಾಗಿದೆ. ಹಾಗಾಗಿ ಎನ್ಇಪಿ ರದ್ದು ಮಾಡಿ ಎಸ್‌ಇ‌ಪಿ ತರುತ್ತಿರುವುದು ಮಾರಕ ನಡೆ. ಅವರಿಗೆ ಬೇಕಾದ ಹಾಗೆ ತಜ್ಞರ ವರದಿ ಪಡೆಯಲು ಮುಂದಾಗಿದ್ದಾರೆ. ಅವರಿಗೆ ಬೇಕಾದ ವರದಿ ಪಡೆಯಲು ಹೊರಗಿನ ಶಿಕ್ಷಣ ತಜ್ಞರನ್ನೂ ಆಯೋಗದಲ್ಲಿ ಸದಸ್ಯರಾಗಿ ಮಾಡಿದ್ದಾರೆ'' ಎಂದು ₹ಕ್ಷೇಪ ವ್ಯಕ್ತಪಡಿಸಿದರು.

''ಕೇಂದ್ರದ ಬರ ಅಧ್ಯಯನ ತಂಡದೆದುರು ಬರ ಪರಿಸ್ಥಿತಿ ಬಗ್ಗೆ ಸರಿಯಾಗಿ ತಿಳಿಸಲಿಲ್ಲ. ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ವಿದ್ಯುತ್ ಸಮಸ್ಯೆ ನಿಭಾಯಿಸುವಲ್ಲಿಯೂ ಎಡವಿದೆ. ಬರಪೀಡಿತ ಪ್ರದೇಶದ ರೈತರಿಗೆ ಪರಿಹಾರ ಕೊಟ್ಟಿಲ್ಲ. ರೈತರ ಸಮಸ್ಯೆ ಆಲಿಸದೇ ಬೇಜವಾಬ್ದಾರಿ ನಡೆಯನ್ನು ಸರ್ಕಾರ ಅನುಸರಿಸುತ್ತಿದೆ'' ಎಂದು ಕಿಡಿ ಕಾರಿದರು.

ಕಾವೇರಿ ನದಿಯಿಂದ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಆದೇಶ ಕುರಿತು ಪ್ರತಿಕ್ರಿಯಿಸಿ, ''ಕರ್ನಾಟಕದಲ್ಲಿ ನೀರಿಲ್ಲ, ಬಿಡಲು ಆಗಲ್ಲ, ಆದರೆ ತಮಿಳುನಾಡಿನಲ್ಲಿ ನೀರಿನ ಅವಶ್ಯಕತೆ ಎಲ್ಲಿದೆ ಅಂತ ಅವರು ಪ್ರತಿಪಾದಿಸುತ್ತಿಲ್ಲ. ನಮ್ಮವರು ಕುಡಿಯಲು ಅಗತ್ಯವಾಗಿ ಬೇಕು ಅನ್ನೋದನ್ನು ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದ್ದಾರೆ. ಇದು ಸರ್ಕಾರ, ಜಲಸಂಪನ್ಮೂಲ ಖಾತೆ ಸಚಿವರ ವೈಫಲ್ಯ'' ಎಂದರು.

ಅನುದಾನ ವಾಪಸ್ ಹಿಂದೆ ಕಮಿಷನ್ ಹುನ್ನಾರ: ಬಿಜೆಪಿ ಶಾಸಕರ ಅನುದಾನ ವಾಪಸ್ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸದಾನಂದ ಗೌಡ, ''ನಮ್ಮ ಶಾಸಕರ ಅನುದಾನ ವಾಪಸ್ ಪಡೆದಿರೋದು ಸರಿಯಲ್ಲ. ಅನುದಾನ ವಾಪಸ್ ಪಡೆದಿರುವ ಹಿಂದೆ ಕಮಿಷನ್ ಪಡೆಯುವ ಉದ್ದೇಶವಿದೆ. ಇನ್ನೂ ಹೆಚ್ಚಿನ ಕಮಿಷನ್ ಪಡೆಯುವ ಸಲುವಾಗಿ ಶಾಸಕರ ಅನುದಾನ ವಾಪಸ್ ಪಡೆದಿರಬಹುದು. ಅನುದಾನ ವಾಪಸ್ ಹಿಂದೆ ಕಮಿಷನ್ ಹೆಚ್ಚು ಮಾಡುವ ಹುನ್ನಾರ ಅಡಗಿದೆ'' ಎಂದು ಗಂಭೀರ ಆರೋಪ ಮಾಡಿದರು.

ಶಾಸಕ ಮುನಿರತ್ನಗೆ ಟಾಂಗ್: ಬಿ.ಎಸ್​.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವಾಗ ಸದಾನಂದ ಗೌಡ ಯಾಕೆ ಮಾತಾಡಿಲ್ಲ ಎನ್ನುವ ಮುನಿರತ್ನ ಹೇಳಿಕೆಗೆ ಸದಾನಂದ ಗೌಡ ಟಾಂಗ್ ನೀಡಿದರು. ''ನಾವು ಯಡಿಯೂರಪ್ಪರನ್ನು ಬದಲಾವಣೆ ಮಾಡಿ, ಇನ್ನೊಬ್ಬರನ್ನು ಮುಖ್ಯಮಂತ್ರಿ ಮಾಡುವಾಗ ಕಾಂಗ್ರೆಸ್ ಪಾರ್ಟಿಯವರನ್ನು ಮುಖ್ಯಮಂತ್ರಿ ಮಾಡಿಲ್ಲ. ನಮ್ಮವರನ್ನೇ ಮುಖ್ಯಮಂತ್ರಿ ಮಾಡಿದ್ದೇವೆ. ಸೌಹಾರ್ದಯುತವಾಗಿಯೇ ಆಯ್ಕೆ ಮಾಡಲಾಗಿತ್ತು.
ಆಗ ನಾನು ಯಾಕೆ ಮಾತಾಡಬೇಕಿತ್ತು?'' ಎಂದರು.

ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿ.10ರ ವರೆಗೂ ನೀರು ಹರಿಸಲು ನಿರ್ಧಾರ: ಆರ್.ಬಿ ತಿಮ್ಮಾಪುರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.