ETV Bharat / state

ಕೇರಳದಲ್ಲಿ ರಾಜಕೀಯ ಬದಲಾವಣೆಗೆ ಇದು ಸಕಾಲ: ಅಶ್ವತ್ಥ್​ನಾರಾಯಣ

ಡಿಸಿಎಂ ಅಶ್ವತ್ಥ್​ನಾರಾಯಣ ಅವರು ಸುವರ್ಣ ಕರ್ನಾಟಕ ಕೇರಳ ಸಮಾಜಂ ಸದಸ್ಯರ ಜೊತೆ ಸಂವಾದ ನಡೆಸಿದರು. ಈ ವೇಳೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

author img

By

Published : Mar 7, 2021, 6:49 AM IST

ಕೇರಳ ಸಮಾಜಂ ಸದಸ್ಯರ ಜೊತೆ ಸಂವಾದ ನಡೆಸಿದ ಡಿಸಿಎಂ
DCM interacted with Kerala society members

ಬೆಂಗಳೂರು: ಕಳೆದ 70 ವರ್ಷಕ್ಕೂ ಹೆಚ್ಚು ಕಾಲ ಅಭಿವೃದ್ಧಿಯಲ್ಲಿ ಜಿಡ್ಡುಗಟ್ಟಿದ ಸ್ಥಿತಿಯಲ್ಲಿರುವ ಕೇರಳದಲ್ಲಿ ರಾಜಕೀಯ ಬದಲಾವಣೆಗೆ ಇದು ಸಕಾಲ ಎಂದು ಕೇರಳ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ‌ಅಶ್ವತ್ಥ್​ನಾರಾಯಣ ಹೇಳಿದ್ದಾರೆ.

ಸುವರ್ಣ ಕರ್ನಾಟಕ ಕೇರಳ ಸಮಾಜಂ ಸದಸ್ಯರ ಜೊತೆ ಸಂವಾದ ನಡೆಸಿದ್ದ ಡಿಸಿಎಂ, ಕೇರಳದಲ್ಲಿ ಬದಲಾವಣೆ ಆಗಲೇಬೇಕು. ಎಲ್‌ಡಿಎಫ್‌ ಹಾಗೂ ಯುಡಿಎಫ್‌ ನಡೆಸಿದ ದುರಾಡಳಿತ ಸಾಕು. ಇದಕ್ಕೆ ಸಮಸ್ತ ಕೇರಳಿಗರೆಲ್ಲ ಕೈ ಜೋಡಿಸಿ ಏಳು ದಶಕಗಳ ನಂತರ ಹೊಸ ರಾಜಕೀಯ ಶಕ್ತಿಯ ಉದಯಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

DCM interacted with Kerala society members
ಡಿಸಿಎಂಗೆ ಅಲೆಪ್ಪಿ ಬೋಟ್‌ಹೌಸ್‌ ಸ್ಮರಣಿಕೆ ನೀಡಿ ಗೌರವಿಸಿದ ಕೇರಳ ಸಮಾಜಂ ಸದಸ್ಯರು

ಉತ್ತಮ ಸಾಕ್ಷರತೆ ಹೊಂದಿದ್ದರೂ ಅಭಿವೃದ್ಧಿಯಲ್ಲಿ ಕೇರಳ ಹಿಂದೆ ಬಿದ್ದಿರುವುದು ಯಾಕೆ ಎಂದು ಎಲ್ಲರೂ ಪ್ರಶ್ನೆ ಮಾಡಿಕೊಳ್ಳಬೇಕಿದೆ. ಇದುವರಿಗೂ ಆಗಿರುವ ನಷ್ಟ ಸಾಕು. ಈ ಬಾರಿ ಬಿಜೆಪಿಗೆ ಅವಕಾಶ ನೀಡಬೇಕು. ಅಭಿವೃದ್ಧಿ ಎಂದರೆ ಬಿಜೆಪಿಯಷ್ಟೇ ಆಯ್ಕೆ ಮತ್ತು ಪರಿಹಾರ. ಇದನ್ನು ಎಲ್ಲರೂ ಮನದಟ್ಟು ಮಾಡಿಕೊಳ್ಳಬೇಕು. ಮುಂಬರುವ ಚುನಾವಣೆಯಲ್ಲಿ ಅಭಿವೃದ್ಧಿ ಪರ ಇರುವ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಕೋರಿದರು.

ಈ ವೇಳೆ ಕೇರಳ ಸಮಾಜದ ಸದಸ್ಯರು ಉಪ ಮುಖ್ಯಮಂತ್ರಿ ಅವರಿಗೆ ಕೇರಳ ಪ್ರವಾಸೋದ್ಯಮಕ್ಕೆ ದ್ಯೋತಕವಾದ ಅಲೆಪ್ಪಿ ಬೋಟ್‌ಹೌಸ್ ಸ್ಮರಣಿಕೆ ನೀಡಿ ಗೌರವಿಸಿದರು.

ಬೆಂಗಳೂರು: ಕಳೆದ 70 ವರ್ಷಕ್ಕೂ ಹೆಚ್ಚು ಕಾಲ ಅಭಿವೃದ್ಧಿಯಲ್ಲಿ ಜಿಡ್ಡುಗಟ್ಟಿದ ಸ್ಥಿತಿಯಲ್ಲಿರುವ ಕೇರಳದಲ್ಲಿ ರಾಜಕೀಯ ಬದಲಾವಣೆಗೆ ಇದು ಸಕಾಲ ಎಂದು ಕೇರಳ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ‌ಅಶ್ವತ್ಥ್​ನಾರಾಯಣ ಹೇಳಿದ್ದಾರೆ.

ಸುವರ್ಣ ಕರ್ನಾಟಕ ಕೇರಳ ಸಮಾಜಂ ಸದಸ್ಯರ ಜೊತೆ ಸಂವಾದ ನಡೆಸಿದ್ದ ಡಿಸಿಎಂ, ಕೇರಳದಲ್ಲಿ ಬದಲಾವಣೆ ಆಗಲೇಬೇಕು. ಎಲ್‌ಡಿಎಫ್‌ ಹಾಗೂ ಯುಡಿಎಫ್‌ ನಡೆಸಿದ ದುರಾಡಳಿತ ಸಾಕು. ಇದಕ್ಕೆ ಸಮಸ್ತ ಕೇರಳಿಗರೆಲ್ಲ ಕೈ ಜೋಡಿಸಿ ಏಳು ದಶಕಗಳ ನಂತರ ಹೊಸ ರಾಜಕೀಯ ಶಕ್ತಿಯ ಉದಯಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

DCM interacted with Kerala society members
ಡಿಸಿಎಂಗೆ ಅಲೆಪ್ಪಿ ಬೋಟ್‌ಹೌಸ್‌ ಸ್ಮರಣಿಕೆ ನೀಡಿ ಗೌರವಿಸಿದ ಕೇರಳ ಸಮಾಜಂ ಸದಸ್ಯರು

ಉತ್ತಮ ಸಾಕ್ಷರತೆ ಹೊಂದಿದ್ದರೂ ಅಭಿವೃದ್ಧಿಯಲ್ಲಿ ಕೇರಳ ಹಿಂದೆ ಬಿದ್ದಿರುವುದು ಯಾಕೆ ಎಂದು ಎಲ್ಲರೂ ಪ್ರಶ್ನೆ ಮಾಡಿಕೊಳ್ಳಬೇಕಿದೆ. ಇದುವರಿಗೂ ಆಗಿರುವ ನಷ್ಟ ಸಾಕು. ಈ ಬಾರಿ ಬಿಜೆಪಿಗೆ ಅವಕಾಶ ನೀಡಬೇಕು. ಅಭಿವೃದ್ಧಿ ಎಂದರೆ ಬಿಜೆಪಿಯಷ್ಟೇ ಆಯ್ಕೆ ಮತ್ತು ಪರಿಹಾರ. ಇದನ್ನು ಎಲ್ಲರೂ ಮನದಟ್ಟು ಮಾಡಿಕೊಳ್ಳಬೇಕು. ಮುಂಬರುವ ಚುನಾವಣೆಯಲ್ಲಿ ಅಭಿವೃದ್ಧಿ ಪರ ಇರುವ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಕೋರಿದರು.

ಈ ವೇಳೆ ಕೇರಳ ಸಮಾಜದ ಸದಸ್ಯರು ಉಪ ಮುಖ್ಯಮಂತ್ರಿ ಅವರಿಗೆ ಕೇರಳ ಪ್ರವಾಸೋದ್ಯಮಕ್ಕೆ ದ್ಯೋತಕವಾದ ಅಲೆಪ್ಪಿ ಬೋಟ್‌ಹೌಸ್ ಸ್ಮರಣಿಕೆ ನೀಡಿ ಗೌರವಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.