ETV Bharat / state

ಜಾತ್ರೆಯಲ್ಲಿ ಹಿಂದೂಯೇತರ ವರ್ತಕರಿಗೆ ಅವಕಾಶ ನಿರಾಕರಣೆ ಸಲ್ಲದು: ಬಿಜೆಪಿ ಶಾಸಕ ಗರುಡಾಚಾರ್

author img

By

Published : Nov 28, 2022, 4:35 PM IST

ಬೆಂಗಳೂರಿನ ವಿವಿಪುರಂನಲ್ಲಿರುವ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಳೆ ನಡೆಯಲಿರುವ ಜಾತ್ರೆಗೆ ಅನ್ಯ ಧರ್ಮೀಯ ವರ್ತಕರಿಗೆ ಅವಕಾಶ ನೀಡದಂತೆ ಹಿಂದೂಪರ ಸಂಘಟನೆಗಳು ಮನವಿ ಮಾಡಿವೆ. ಈ ವಿಚಾರ ಇರಿಸಿಕೊಂಡು ಗದ್ದಲಕ್ಕೆ ಯತ್ನಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಹೇಳಿದ್ದಾರೆ.

its-not-fair-to-deny-the-non-hindu-traders-in-fair-says-mla-uday-garudachar
ಜಾತ್ರೆಯಲ್ಲಿ ಹಿಂದೂಯೇತರ ವರ್ತಕರಿಗೆ ಅವಕಾಶ ನಿರಾಕರಣೆ ಸಲ್ಲದು : ಶಾಸಕ ಗರುಡಾಚಾರ್

ಬೆಂಗಳೂರು: ನಗರದ ವಿವಿಪುರಂನಲ್ಲಿ ಮಂಗಳವಾರ ನಡೆಯಲಿರುವ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎನ್ನುವ ಹಿಂದೂಪರ ಸಂಘಟನೆಗಳ ಮನವಿಗೆ ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಾತ್ರೆಯಲ್ಲಿ ಇದೇ ವಿಚಾರ ಇರಿಸಿಕೊಂಡು ಗದ್ದಲಕ್ಕೆ ಯತ್ನಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ರವಾನಿಸಿದ್ದಾರೆ.

ಜಾತ್ರೆಯ ಮುನ್ನ ದಿನವಾದ ಇಂದು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ದೇವರ ದರ್ಶನ ಮಾಡಿ ಬಳಿಕ ಜಾತ್ರೆಯ ಸಿದ್ಧತೆಗಳನ್ನು ಪರಿಶೀಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಗಳವಾರ ಸುಬ್ರಹ್ಮಣ್ಯ ಜಾತ್ರೆ ನಡೆಯಲಿದೆ. ಜಾತ್ರೆಯಲ್ಲಿ ವ್ಯಾಪಾರಿಗಳಿಗೆ ಅವಕಾಶ ನೀಡುವ ವಿಚಾರದಲ್ಲಿ ಹಿಂದಿನಿಂದ ನಡೆದುಕೊಂಡು ಬಂದಿರುವ ಪದ್ಧತಿಯನ್ನೇ ಮುಂದುವರೆಸಲಾಗುತ್ತದೆ. ಹಿಂದೂಯೇತರ ವರ್ತಕರಿಗೆ ಅವಕಾಶ ನೀಡಬಾರದು ಎನ್ನುವ ಆಗ್ರಹ ಸರಿಯಲ್ಲ. ಇದೇ ವಿಷಯ ಇರಿಸಿಕೊಂಡು ಜಾತ್ರೆಯಲ್ಲಿ ಗದ್ದಲವೆಬ್ಬಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದೂಪರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದರು.

ಎಲ್ಲಾ ಧರ್ಮದ ವರ್ತಕರಿಗೆ ಅವಕಾಶ ಕೊಡಬೇಕು : ನಾವು ಚುನಾಯಿತ ಪ್ರತಿನಿಧಿಗಳು, ಎಲ್ಲರ ಮತ ಪಡೆದೇ ಆಯ್ಕೆಯಾಗಿದ್ದೇವೆ. ಸಂವಿಧಾನದ ಮೇಲೆ ಪ್ರಮಾಣವಚನ ಸ್ವೀಕಾರ ಮಾಡಿ ಶಾಸಕ ಸ್ಥಾನ ಅಲಂಕರಿಸಿದ್ದೇವೆ. ಈ ಸ್ಥಾನದಲ್ಲಿದ್ದಾಗ ಜಾತಿ, ಧರ್ಮದ ಬೇಧಭಾವ ಮಾಡಲು ಸಾಧ್ಯವಿಲ್ಲ. ಎಲ್ಲರನ್ನೂ ಸಮಾನವಾಗಿ ನೋಡುತ್ತೇವೆ. ಅದರಂತೆ ಹಿಂದಿನಿಂದ ಬಂದ ಪದ್ಧತಿಯಂತೆ ಜಾತ್ರೆಯಲ್ಲಿ ಎಲ್ಲ ಧರ್ಮದವರಿಗೂ ಅವಕಾಶ ಕೊಡಲೇಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ದರ್ಗಾ, ಮಸೀದಿ ಮುಂದೆ ಹಿಂದೂಗಳ ವ್ಯಾಪಾರಕ್ಕೆ ಅವಕಾಶ ನೀಡದೆ ಇರುವ ಮಾಹಿತಿ ನನ್ನ ಗಮನಕ್ಕೆ ಬಂದಿಲ್ಲ. ನಾನು ಮನೆಯಲ್ಲಿ ಬ್ರಾಹ್ಮಣ, ಹೊರಗಡೆ ಬಂದಾಗ ವಿಶ್ವಮಾನವ, ಕ್ಷೇತ್ರ ವ್ಯಾಪ್ತಿಯಲ್ಲಿ ದರ್ಗಾ, ಮಸೀದಿ ಮುಂದೆ ಹಿಂದೂ ವ್ಯಾಪಾರಿಗಳಿಗೆ ಅವಕಾಶ ನೀಡದಿರುವ ವಿಷಯವನ್ನು ಯಾರೂ ನನ್ನ ಗಮನಕ್ಕೆ ತಂದಿಲ್ಲ. ಹಾಗೊಂದು ವೇಳೆ ಇಂತಹ ಘಟನೆ ನಡೆದಿದ್ದರೆ ಅದನ್ನು ಸರಿಪಡಿಸಲಾಗುತ್ತದೆ. ಸಾಮರಸ್ಯ ಸಹಬಾಳ್ವೆ ನಡೆಸಲು ನಿರ್ಬಂಧದಂತಹ ಘಟನೆಗಳಿಂದ ಎಲ್ಲರೂ ದೂರವಿರಬೇಕು ಎಂದು ಸಲಹೆ ನೀಡಿದರು.

ಸೈಲೆಂಟ್ ಸುನೀಲ್ ಬಗ್ಗೆ ಗೊತ್ತಿಲ್ಲ: ಸೈಲೆಂಟ್ ಸುನೀಲ್ ಆಯೋಜನೆ ಮಾಡಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದು ನಿಜ. ಆದರೆ ಆತ ರೌಡಿ ಹಿನ್ನೆಲೆ ಹೊಂದಿದ ಬಗ್ಗೆ ಮಾಹಿತಿ ಇರಲಿಲ್ಲ. ಕ್ಷೇತ್ರದ ಶಾಸಕನಾಗಿ ಒಳ್ಳೆಯ ಕೆಲಸಕ್ಕೆ ಕರೆದಾಗ ಇಲ್ಲ ಎನ್ನಲು ಸಾಧ್ಯವಿಲ್ಲ. ಸಾಮಾಜಿಕ ಕಳಕಳಿ ಕಾರ್ಯಕ್ರಮ ಎನ್ನುವ ಕಾರಣಕ್ಕಾಗಿ ರಕ್ತದಾನ ಶಿಬಿರಕ್ಕೆ ಹೋಗಿದ್ದೆ. ರೌಡಿ ಶೀಟರ್ ಎನ್ನುವುದು ಗೊತ್ತಿದ್ದರೆ, ಹೋಗುತ್ತಲೇ ಇರಲಿಲ್ಲ ಎಂದು ಶಾಸಕರು ಸ್ಪಷ್ಟೀಕರಣ ನೀಡಿದರು.

ಇದನ್ನೂ ಓದಿ : ಕುಕ್ಕೆ ಚಂಪಾಷಷ್ಠಿ: ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಜಾಗರಣ ವೇದಿಕೆ ಆಗ್ರಹ

ಬೆಂಗಳೂರು: ನಗರದ ವಿವಿಪುರಂನಲ್ಲಿ ಮಂಗಳವಾರ ನಡೆಯಲಿರುವ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎನ್ನುವ ಹಿಂದೂಪರ ಸಂಘಟನೆಗಳ ಮನವಿಗೆ ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಾತ್ರೆಯಲ್ಲಿ ಇದೇ ವಿಚಾರ ಇರಿಸಿಕೊಂಡು ಗದ್ದಲಕ್ಕೆ ಯತ್ನಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ರವಾನಿಸಿದ್ದಾರೆ.

ಜಾತ್ರೆಯ ಮುನ್ನ ದಿನವಾದ ಇಂದು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ದೇವರ ದರ್ಶನ ಮಾಡಿ ಬಳಿಕ ಜಾತ್ರೆಯ ಸಿದ್ಧತೆಗಳನ್ನು ಪರಿಶೀಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಗಳವಾರ ಸುಬ್ರಹ್ಮಣ್ಯ ಜಾತ್ರೆ ನಡೆಯಲಿದೆ. ಜಾತ್ರೆಯಲ್ಲಿ ವ್ಯಾಪಾರಿಗಳಿಗೆ ಅವಕಾಶ ನೀಡುವ ವಿಚಾರದಲ್ಲಿ ಹಿಂದಿನಿಂದ ನಡೆದುಕೊಂಡು ಬಂದಿರುವ ಪದ್ಧತಿಯನ್ನೇ ಮುಂದುವರೆಸಲಾಗುತ್ತದೆ. ಹಿಂದೂಯೇತರ ವರ್ತಕರಿಗೆ ಅವಕಾಶ ನೀಡಬಾರದು ಎನ್ನುವ ಆಗ್ರಹ ಸರಿಯಲ್ಲ. ಇದೇ ವಿಷಯ ಇರಿಸಿಕೊಂಡು ಜಾತ್ರೆಯಲ್ಲಿ ಗದ್ದಲವೆಬ್ಬಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದೂಪರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದರು.

ಎಲ್ಲಾ ಧರ್ಮದ ವರ್ತಕರಿಗೆ ಅವಕಾಶ ಕೊಡಬೇಕು : ನಾವು ಚುನಾಯಿತ ಪ್ರತಿನಿಧಿಗಳು, ಎಲ್ಲರ ಮತ ಪಡೆದೇ ಆಯ್ಕೆಯಾಗಿದ್ದೇವೆ. ಸಂವಿಧಾನದ ಮೇಲೆ ಪ್ರಮಾಣವಚನ ಸ್ವೀಕಾರ ಮಾಡಿ ಶಾಸಕ ಸ್ಥಾನ ಅಲಂಕರಿಸಿದ್ದೇವೆ. ಈ ಸ್ಥಾನದಲ್ಲಿದ್ದಾಗ ಜಾತಿ, ಧರ್ಮದ ಬೇಧಭಾವ ಮಾಡಲು ಸಾಧ್ಯವಿಲ್ಲ. ಎಲ್ಲರನ್ನೂ ಸಮಾನವಾಗಿ ನೋಡುತ್ತೇವೆ. ಅದರಂತೆ ಹಿಂದಿನಿಂದ ಬಂದ ಪದ್ಧತಿಯಂತೆ ಜಾತ್ರೆಯಲ್ಲಿ ಎಲ್ಲ ಧರ್ಮದವರಿಗೂ ಅವಕಾಶ ಕೊಡಲೇಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ದರ್ಗಾ, ಮಸೀದಿ ಮುಂದೆ ಹಿಂದೂಗಳ ವ್ಯಾಪಾರಕ್ಕೆ ಅವಕಾಶ ನೀಡದೆ ಇರುವ ಮಾಹಿತಿ ನನ್ನ ಗಮನಕ್ಕೆ ಬಂದಿಲ್ಲ. ನಾನು ಮನೆಯಲ್ಲಿ ಬ್ರಾಹ್ಮಣ, ಹೊರಗಡೆ ಬಂದಾಗ ವಿಶ್ವಮಾನವ, ಕ್ಷೇತ್ರ ವ್ಯಾಪ್ತಿಯಲ್ಲಿ ದರ್ಗಾ, ಮಸೀದಿ ಮುಂದೆ ಹಿಂದೂ ವ್ಯಾಪಾರಿಗಳಿಗೆ ಅವಕಾಶ ನೀಡದಿರುವ ವಿಷಯವನ್ನು ಯಾರೂ ನನ್ನ ಗಮನಕ್ಕೆ ತಂದಿಲ್ಲ. ಹಾಗೊಂದು ವೇಳೆ ಇಂತಹ ಘಟನೆ ನಡೆದಿದ್ದರೆ ಅದನ್ನು ಸರಿಪಡಿಸಲಾಗುತ್ತದೆ. ಸಾಮರಸ್ಯ ಸಹಬಾಳ್ವೆ ನಡೆಸಲು ನಿರ್ಬಂಧದಂತಹ ಘಟನೆಗಳಿಂದ ಎಲ್ಲರೂ ದೂರವಿರಬೇಕು ಎಂದು ಸಲಹೆ ನೀಡಿದರು.

ಸೈಲೆಂಟ್ ಸುನೀಲ್ ಬಗ್ಗೆ ಗೊತ್ತಿಲ್ಲ: ಸೈಲೆಂಟ್ ಸುನೀಲ್ ಆಯೋಜನೆ ಮಾಡಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದು ನಿಜ. ಆದರೆ ಆತ ರೌಡಿ ಹಿನ್ನೆಲೆ ಹೊಂದಿದ ಬಗ್ಗೆ ಮಾಹಿತಿ ಇರಲಿಲ್ಲ. ಕ್ಷೇತ್ರದ ಶಾಸಕನಾಗಿ ಒಳ್ಳೆಯ ಕೆಲಸಕ್ಕೆ ಕರೆದಾಗ ಇಲ್ಲ ಎನ್ನಲು ಸಾಧ್ಯವಿಲ್ಲ. ಸಾಮಾಜಿಕ ಕಳಕಳಿ ಕಾರ್ಯಕ್ರಮ ಎನ್ನುವ ಕಾರಣಕ್ಕಾಗಿ ರಕ್ತದಾನ ಶಿಬಿರಕ್ಕೆ ಹೋಗಿದ್ದೆ. ರೌಡಿ ಶೀಟರ್ ಎನ್ನುವುದು ಗೊತ್ತಿದ್ದರೆ, ಹೋಗುತ್ತಲೇ ಇರಲಿಲ್ಲ ಎಂದು ಶಾಸಕರು ಸ್ಪಷ್ಟೀಕರಣ ನೀಡಿದರು.

ಇದನ್ನೂ ಓದಿ : ಕುಕ್ಕೆ ಚಂಪಾಷಷ್ಠಿ: ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಜಾಗರಣ ವೇದಿಕೆ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.