ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಜೈರಾಜ್ ಡಿ.ಆರ್. ಅವರು ಅವಿರೋಧ ಆಯ್ಕೆ ಆಗಿದ್ದಾರೆ.
ಇಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಸ್ಪರ್ಧಿಸಿದ್ದ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ಸುಂದರಾಜ್ ಹಾಗೂ ನರಸಿಂಹಲು ಅವರು ನಾಮಪತ್ರವನ್ನು ಹಿಂಪಡೆದ ಹಿನ್ನೆಲೆಯಲ್ಲಿ ಜೈರಾಜ್ ಡಿ.ಆರ್. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ನಿರ್ಗಮಿತ ಅಧ್ಯಕ್ಷರಾದ ಚಿನ್ನೇಗೌಡರು ತಿಳಿಸಿದ್ದಾರೆ.
ಅಲ್ಲದೆ ಉಪಾಧ್ಯಕ್ಷ ಸ್ಥಾನಕ್ಕೂ ಸಹ ಪ್ರದರ್ಶಕರ ವಲಯದಿಂದ ನಿಂತಿದ್ದ ಉತ್ತರ ಕರ್ನಾಟಕ ಭಾಗದ ವೆಂಕಟರಮಣ, ಅವರು ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ . ಹಾಗೂ ವಿತರಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಗಣೇಶ ಎ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಪ್ರದರ್ಶಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನರಸಿಂಹಲು ಎಂ. ಅವರು ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದರ ಜೊತೆಗೆ ಅಬೌಟ್ ಯೂನಿಟ್ ಸದಸ್ಯ ಸ್ಥಾನಕ್ಕೆ ಗೋವಿಂದರಾಜು ಎಸ್ಸಿ ಅವರು ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಮತ್ತು ಪ್ರಾದೇಶಿಕ ಭಾಷೆ ನಿರ್ಮಾಪಕ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ ಅವಿನಾಶ್ ಶೆಟ್ಟಿ ಅವರು ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿರ್ಮಾಪಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕರಾದ ಉಮೇಶ್ ಬಣಕಾರ್, ನಟಿ ಪ್ರಮೀಳಾ ಜೋಷಾಯಿ ಹಾಗೂ ನಿರ್ಮಾಪಕ ದಿನೇಶ್ ಗಾಂಧಿ ಅವರು ಸ್ಪರ್ಧಾಕಣದಲ್ಲಿದ್ದಾರೆ 29 ನೇ ತಾರೀಖನಂದು ನಿರ್ಮಾಪಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.