ETV Bharat / state

ಅತಂತ್ರ ಸ್ಥಿತಿ ಬೇಡ, ಸ್ಪಷ್ಟ ಬಹುಮತ ಬರಲಿ: ಜೆ.ಸಿ.ಮಾಧುಸ್ವಾಮಿ

author img

By

Published : Feb 24, 2023, 4:22 PM IST

ಬಜೆಟ್​ ಅಧಿವೇಶನದ ಕೊನೆಯ ದಿನವಾದ ಇಂದು ಬಿಜೆಪಿ, ಜೆಡಿಎಸ್​, ಕಾಂಗ್ರೆಸ್​ ನಾಯಕರು ವಿದಾಯ ಭಾಷಣ ಮಾಡಿದರು.

ಜೆಸಿ ಮಾಧುಸ್ವಾಮಿ
ಜೆಸಿ ಮಾಧುಸ್ವಾಮಿ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಬಂದರೆ ಒಳ್ಳೆಯದು. ಅತಂತ್ರ ಸ್ಥತಿ ನಿರ್ಮಾಣವಾಗಬಾರದು. ಅದರಿಂದ ರಾಜ್ಯಕ್ಕೆ ಒಳ್ಳೆಯದಾಗುವುದಿಲ್ಲ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು. 15ನೇ ವಿಧಾನಸಭೆ ಹಾಗೂ ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ವಿದಾಯ ಭಾಷಣ ಮಾಡಿದ ಅವರು, ದೇಶದ ರಾಜಕಾರಣದಲ್ಲಿ ಎನ್​ಡಿಎ, ಯುಪಿಎ ಮೈತ್ರಿಕೂಟಗಳ ಸರ್ಕಾರ ರಚನೆಯಾದ ನಂತರ ಯಾವುದೇ ಒಂದು ಪಕ್ಷಕ್ಕೆ ಸ್ಪಷ್ಟ ಬಹುಮತ ನಿರೀಕ್ಷಿಸುವುದು ಕಷ್ಟವಾಗಿದೆ. ಆದರೆ, ಸಮ್ಮಿಶ್ರ ಸರ್ಕಾರವಿರಲಿ, ಏಕಪಕ್ಷದ ಸರ್ಕಾರವೇ ಇರಲಿ, ಮತದಾರರ ಹಿತ ಕಾಪಾಡುವುದು ಮುಖ್ಯವಾಗಬೇಕು ಎಂದು ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಶ್ರೀಮಂತರು ಮತ್ತು ಬಡವರ ನಡುವಿನ ಕಂದಕ ಹೆಚ್ಚಾಗುತ್ತಿದೆ. ಅದನ್ನು ಕಡಿಮೆ ಮಾಡಲು ಜನಪ್ರತಿನಿಧಿಗಳು ಕೆಲಸ ಮಾಡಬೇಕು. ಇಂದು ಜಾತಿ, ಭೇದಕ್ಕಿಂತ ವರ್ಗಭೇದ ಹೆಚ್ಚಾಗಿದೆ. ಹಲವು ಸವಾಲುಗಳ ನಡುವೆಯೂ ಉತ್ತಮ ಮತ್ತು ಯಶಸ್ವಿ ಆಡಳಿತ ನೀಡಿದ್ದೇವೆ. ತಮಗೆ ದೊರೆತ ಅವಕಾಶದಲ್ಲಿ ನೆಲ, ಜಲ, ಜನರ ರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಪ್ರವಾಹ, ಕೋವಿಡ್ ಬಿಕ್ಕಟ್ಟಿನಂತಹ ಹಲವು ಸವಾಲುಗಳನ್ನು ಸಮರ್ಥವಾಗಿ ಎದುರಿಸಿದ್ದೇವೆ. ಹಣಕಾಸಿನ ಕೊರತೆ ಇದ್ದಾಗಲೂ ಆರ್ಥಿಕ ಶಿಸ್ತು ಕಾಪಾಡಿಕೊಂಡು ಬರಲಾಗಿದೆ. ಕೇಂದ್ರ ಸರ್ಕಾರ ಕಷ್ಟಕಾಲದಲ್ಲಿ ನಮ್ಮ ಸಹಾಯಕ್ಕೆ ಬಂದಿದೆ. ಡಬಲ್ ಎಂಜಿನ್ ಸರ್ಕಾರ ಇದ್ದರೆ ಒಳ್ಳೆಯದು ಎಂಬುದಕ್ಕೆ ಇದೊಂದು ನಿದರ್ಶನ ಎಂದರು.

15ನೇ ವಿಧಾನಸಭೆ ಅವಧಿಯಲ್ಲಿ 38-39 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಅನಗತ್ಯ ಹಾಗೂ ನಿರುಪಯುಕ್ತ ಕಾಯ್ದೆಗಳನ್ನು ರದ್ದುಪಡಿಸಲಾಗಿದೆ, ಇಲ್ಲವೇ ತಿದ್ದುಪಡಿ ಮಾಡಲಾಗಿದೆ. ಜನರ ಸಂಕಷ್ಟಕ್ಕೆ ಸ್ಪಂದಿಸುವ ರೀತಿಯಲ್ಲಿ ನಮ್ಮ ಇತಿಮಿತಿಗಳೊಳಗೆ ಸ್ಪಂದಿಸಿದ್ದೇವೆ ಎಂದು ಹೇಳಿದರು.
ಪ್ರಜಾಪ್ರಭುತ್ವದ ದೇಗುಲವಾದ ಈ ಸದನಕ್ಕೆ ಜನರಿಂದ ಆಯ್ಕೆಯಾಗಿ ಬಂದವರು ಅತ್ಮಸಾಕ್ಷಿಯಂತೆ ಕೆಲಸ ಮಾಡಬೇಕು. ನಮ್ಮ ಗೆಲುವಿಗಾಗಿ ದುಡಿದವರನ್ನು ಮರೆಯಬಾರದು. ಜನಮೆಚ್ಚಿ ಹೌದು ಹೌದು ಎನ್ನುವಂತೆ ಕೆಲಸ ಮಾಡುವುದು ಅತ್ಯಗತ್ಯ. ಮುಂಬರುವ ಚುನಾವಣೆಯಲ್ಲಿ ನಾವು ನೀವು ಗೆದ್ದುಬಂದು ಜನತೆಗೆ ಒಳ್ಳೆಯದು ಮಾಡೋಣ. ನಮ್ಮನ್ನು ಆಯ್ಕೆ ಮಾಡಿದವರನ್ನು ಯಾವುದೇ ಕಾರಣಕ್ಕೂ ಮರೆಯಬಾರದು ಎಂದು ಕಿವಿಮಾತು ಹೇಳಿದರು.

ಸಭಾಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಸದನದ ಘನತೆ ಹೆಚ್ಚಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಡಳಿತಾತ್ಮಕವಾಗಿ ಹಲವು ಸುಧಾರಣೆ ತಂದಿದ್ದಾರೆ. ನೀರಾವರಿಗೆ ಹೆಚ್ಚು ಒತ್ತು ನೀಡಿದ್ದಾರೆ. ಅವರ ಶ್ರಮಕ್ಕೆ ಮಂತ್ರಿಮಂಡಲದ ಎಲ್ಲ ಸದಸ್ಯರು ಬೆಂಬಲವಾಗಿ ನಿಂತು ನಾಡಿನ ಒಳಿತಿಗೆ ಶ್ರಮಿಸಿದ್ದಾರೆ. ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಉತ್ತಮ ಆಡಳಿತ ನೀಡಿದ್ದಾರೆ. ಅವರು ನಮ್ಮೆಲ್ಲರಿಗೆ ಪ್ರೇರಣೆಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವಿಧಾನಸಭೆ ಅವಧಿಯಲ್ಲಿ 8 ಮಂದಿ ಸದಸ್ಯರು ಅಕಾಲಿಕ ಮರಣ ಹೊಂದಿದ್ದಾರೆ. ಅವರನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ ಎಂದು ಹೇಳಿದರು.

ಈ ಸದನದಲ್ಲಿ ನಡೆದ ಚರ್ಚೆಯ ಸಂದರ್ಭಗಳಲ್ಲಿ ಕೋಪ, ತಾಪ, ಅಭಿಪ್ರಾಯ ಬೇಧಗಳು ಸಾಮಾನ್ಯ. ಅವನ್ನೆಲ್ಲ ಮರೆಯೋಣ ಎಂದು ಮನವಿ ಮಾಡಿದರು. ನೀವೆಲ್ಲ ಮತ್ತೆ ಈ ಸದನಕ್ಕೆ ಆಯ್ಕೆಯಾಗಿ ಬರಬೇಕು. ಅನುಭವ ಧಾರೆ ಎರೆಯಬೇಕು. ಭಗವಂತ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದರು.

ಭರವಸೆಗಳು ಕಾರ್ಯಗತವಾಗಲಿ: ಸದನದಲ್ಲಿ ಸದಸ್ಯರಿಗೆ ಸಚಿವರು ನೀಡಿದ ಭರವಸೆಗಳು ಕಾರ್ಯಗತವಾಗಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಖಾಶೆಂಪೂರ್ ವಿಧಾನಸಭೆಯಲ್ಲಿ ವಿದಾಯ ಭಾಷಣದ ವೇಳೆ ಹೇಳಿದರು. ಸದಸ್ಯರು ಅವರವರ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಶ್ನೆ ಕೇಳುತ್ತಾರೆ. ಆ ಪ್ರಶ್ನೆಗೆ ಸಚಿವರು ನೀಡಿದ ಉತ್ತರ ಬಹುತೇಕ ಕಾರ್ಯಗತವಾಗುವುದಿಲ್ಲ. ಮುಂದಿನ ದಿನಗಳಲ್ಲಿ ಸ್ಪೀಕರ್ ಸೂಕ್ತ ನಿರ್ದೇಶನ ನೀಡುವಂತಾಗಿ ಅಂತಿಮ ರೂಪ ಸಿಗುವಂತಾಗಬೇಕು ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೆಸರು ಪ್ರಸ್ತಾಪ ಮಾಡಿರುವುದು ಸಂತೋಷ ತಂದಿದೆ ಎಂದ ಅವರು, ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆಶೀರ್ವಾದದಿಂದ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ, ಅವರಿಗೆ ಮತ್ತು ನನ್ನ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

ದ್ವೇಷ ಮುಕ್ತ ಚುನಾವಣೆ ಆಗಬೇಕು: ಅಧಿಕಾರ ಎಂಬುದು ಯಾರಿಗೂ ಶಾಶ್ವತವಲ್ಲ. ಎಲ್ಲರೂ ದ್ವೇಷ ಮುಕ್ತ ಚುನಾವಣೆ ನಡೆಸಲು ಮುಂದಾಗಬೇಕು ಎಂದು ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ವಿಧಾನಸಭೆಯಲ್ಲಿ ವಿದಾಯದ ಭಾಷಣದಲ್ಲಿ ಮನವಿ ಮಾಡಿದರು. ರಾಜಕೀಯಕ್ಕಾಗಿ ಹೊಡೆದಾಡುವುದು ಬೇಡ. ಪ್ರೀತಿ, ವಿಶ್ವಾಸ ಕಳೆದುಕೊಳ್ಳಬಾರದು. ರಾಜಕೀಯಕ್ಕಾಗಿ ಸ್ನೇಹವನ್ನು ಕಳೆದುಕೊಳ್ಳಬಾರದು. ಚಿಕ್ಕ ವಯಸ್ಸಿನಲ್ಲೆ ನನಗೆ ಉಪನಾಯಕ ಸ್ಥಾನ ಕೊಟ್ಟಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ನಮ್ಮ ಪಕ್ಷದ ಹೈಕಮಾಂಡ್ಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ನನಗೆ ಬೆದರಿಕೆ ಕರೆ ಬಂದಾಗ ನಾನು ಪೊಲೀಸ್ ರಕ್ಷಣೆ ತೆಗೆದುಕೊಂಡಿರಲಿಲ್ಲ. ಆಗ, ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಬೈದು ರಕ್ಷಣೆ ಕೊಡಿಸಿದ್ದರು. ಅದರಿಂದ ನನಗೆ ಮುಕ್ತವಾಗಿ ಓಡಾಡಲು ಸಾಧ್ಯವಾಯಿತು ಎಂದು ನೆನಪು ಮಾಡಿಕೊಂಡರು. ಸದನಕ್ಕೆ ಬರುವುದು ನಾವು ಜನರ ಕೆಲಸಕ್ಕಾಗಿ. ಆದರೆ, ಜನರ ಕೆಲಸ ಪುಟ್ಬಾಲ್ ರೀತಿ ಆಗದೇ, ಗೋಲ್ ಹೊಡೆಯಬೇಕು. ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಬೇಕು ಎಂದು ಕಿವಿ ಮಾತು ಹೇಳಿದರು. ಸಮಾಜವನ್ನು ಕಲುಷಿತ ಮಾಡಬಾರದು. ಎಲ್ಲವನ್ನು ಗಳಿಸಿ ಪರಿಸ್ಥಿತಿ ವಿಷಮವಾದರೆ ಪ್ರಯೋಜನವಾಗುವುದಿಲ್ಲ. ಟೆನ್ಷನ್ ರಹಿತ ರಾಜಕಾರಣ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: ನಮ್ಮದು ಆರ್ಥಿಕ ಶಿಸ್ತು, ಆರ್ಥಿಕ ಪ್ರಗತಿಯ ಉಳಿತಾಯ ಬಜೆಟ್: ಸಿಎಂ ಬೊಮ್ಮಾಯಿ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಬಂದರೆ ಒಳ್ಳೆಯದು. ಅತಂತ್ರ ಸ್ಥತಿ ನಿರ್ಮಾಣವಾಗಬಾರದು. ಅದರಿಂದ ರಾಜ್ಯಕ್ಕೆ ಒಳ್ಳೆಯದಾಗುವುದಿಲ್ಲ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು. 15ನೇ ವಿಧಾನಸಭೆ ಹಾಗೂ ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ವಿದಾಯ ಭಾಷಣ ಮಾಡಿದ ಅವರು, ದೇಶದ ರಾಜಕಾರಣದಲ್ಲಿ ಎನ್​ಡಿಎ, ಯುಪಿಎ ಮೈತ್ರಿಕೂಟಗಳ ಸರ್ಕಾರ ರಚನೆಯಾದ ನಂತರ ಯಾವುದೇ ಒಂದು ಪಕ್ಷಕ್ಕೆ ಸ್ಪಷ್ಟ ಬಹುಮತ ನಿರೀಕ್ಷಿಸುವುದು ಕಷ್ಟವಾಗಿದೆ. ಆದರೆ, ಸಮ್ಮಿಶ್ರ ಸರ್ಕಾರವಿರಲಿ, ಏಕಪಕ್ಷದ ಸರ್ಕಾರವೇ ಇರಲಿ, ಮತದಾರರ ಹಿತ ಕಾಪಾಡುವುದು ಮುಖ್ಯವಾಗಬೇಕು ಎಂದು ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಶ್ರೀಮಂತರು ಮತ್ತು ಬಡವರ ನಡುವಿನ ಕಂದಕ ಹೆಚ್ಚಾಗುತ್ತಿದೆ. ಅದನ್ನು ಕಡಿಮೆ ಮಾಡಲು ಜನಪ್ರತಿನಿಧಿಗಳು ಕೆಲಸ ಮಾಡಬೇಕು. ಇಂದು ಜಾತಿ, ಭೇದಕ್ಕಿಂತ ವರ್ಗಭೇದ ಹೆಚ್ಚಾಗಿದೆ. ಹಲವು ಸವಾಲುಗಳ ನಡುವೆಯೂ ಉತ್ತಮ ಮತ್ತು ಯಶಸ್ವಿ ಆಡಳಿತ ನೀಡಿದ್ದೇವೆ. ತಮಗೆ ದೊರೆತ ಅವಕಾಶದಲ್ಲಿ ನೆಲ, ಜಲ, ಜನರ ರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಪ್ರವಾಹ, ಕೋವಿಡ್ ಬಿಕ್ಕಟ್ಟಿನಂತಹ ಹಲವು ಸವಾಲುಗಳನ್ನು ಸಮರ್ಥವಾಗಿ ಎದುರಿಸಿದ್ದೇವೆ. ಹಣಕಾಸಿನ ಕೊರತೆ ಇದ್ದಾಗಲೂ ಆರ್ಥಿಕ ಶಿಸ್ತು ಕಾಪಾಡಿಕೊಂಡು ಬರಲಾಗಿದೆ. ಕೇಂದ್ರ ಸರ್ಕಾರ ಕಷ್ಟಕಾಲದಲ್ಲಿ ನಮ್ಮ ಸಹಾಯಕ್ಕೆ ಬಂದಿದೆ. ಡಬಲ್ ಎಂಜಿನ್ ಸರ್ಕಾರ ಇದ್ದರೆ ಒಳ್ಳೆಯದು ಎಂಬುದಕ್ಕೆ ಇದೊಂದು ನಿದರ್ಶನ ಎಂದರು.

15ನೇ ವಿಧಾನಸಭೆ ಅವಧಿಯಲ್ಲಿ 38-39 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಅನಗತ್ಯ ಹಾಗೂ ನಿರುಪಯುಕ್ತ ಕಾಯ್ದೆಗಳನ್ನು ರದ್ದುಪಡಿಸಲಾಗಿದೆ, ಇಲ್ಲವೇ ತಿದ್ದುಪಡಿ ಮಾಡಲಾಗಿದೆ. ಜನರ ಸಂಕಷ್ಟಕ್ಕೆ ಸ್ಪಂದಿಸುವ ರೀತಿಯಲ್ಲಿ ನಮ್ಮ ಇತಿಮಿತಿಗಳೊಳಗೆ ಸ್ಪಂದಿಸಿದ್ದೇವೆ ಎಂದು ಹೇಳಿದರು.
ಪ್ರಜಾಪ್ರಭುತ್ವದ ದೇಗುಲವಾದ ಈ ಸದನಕ್ಕೆ ಜನರಿಂದ ಆಯ್ಕೆಯಾಗಿ ಬಂದವರು ಅತ್ಮಸಾಕ್ಷಿಯಂತೆ ಕೆಲಸ ಮಾಡಬೇಕು. ನಮ್ಮ ಗೆಲುವಿಗಾಗಿ ದುಡಿದವರನ್ನು ಮರೆಯಬಾರದು. ಜನಮೆಚ್ಚಿ ಹೌದು ಹೌದು ಎನ್ನುವಂತೆ ಕೆಲಸ ಮಾಡುವುದು ಅತ್ಯಗತ್ಯ. ಮುಂಬರುವ ಚುನಾವಣೆಯಲ್ಲಿ ನಾವು ನೀವು ಗೆದ್ದುಬಂದು ಜನತೆಗೆ ಒಳ್ಳೆಯದು ಮಾಡೋಣ. ನಮ್ಮನ್ನು ಆಯ್ಕೆ ಮಾಡಿದವರನ್ನು ಯಾವುದೇ ಕಾರಣಕ್ಕೂ ಮರೆಯಬಾರದು ಎಂದು ಕಿವಿಮಾತು ಹೇಳಿದರು.

ಸಭಾಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಸದನದ ಘನತೆ ಹೆಚ್ಚಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಡಳಿತಾತ್ಮಕವಾಗಿ ಹಲವು ಸುಧಾರಣೆ ತಂದಿದ್ದಾರೆ. ನೀರಾವರಿಗೆ ಹೆಚ್ಚು ಒತ್ತು ನೀಡಿದ್ದಾರೆ. ಅವರ ಶ್ರಮಕ್ಕೆ ಮಂತ್ರಿಮಂಡಲದ ಎಲ್ಲ ಸದಸ್ಯರು ಬೆಂಬಲವಾಗಿ ನಿಂತು ನಾಡಿನ ಒಳಿತಿಗೆ ಶ್ರಮಿಸಿದ್ದಾರೆ. ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಉತ್ತಮ ಆಡಳಿತ ನೀಡಿದ್ದಾರೆ. ಅವರು ನಮ್ಮೆಲ್ಲರಿಗೆ ಪ್ರೇರಣೆಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವಿಧಾನಸಭೆ ಅವಧಿಯಲ್ಲಿ 8 ಮಂದಿ ಸದಸ್ಯರು ಅಕಾಲಿಕ ಮರಣ ಹೊಂದಿದ್ದಾರೆ. ಅವರನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ ಎಂದು ಹೇಳಿದರು.

ಈ ಸದನದಲ್ಲಿ ನಡೆದ ಚರ್ಚೆಯ ಸಂದರ್ಭಗಳಲ್ಲಿ ಕೋಪ, ತಾಪ, ಅಭಿಪ್ರಾಯ ಬೇಧಗಳು ಸಾಮಾನ್ಯ. ಅವನ್ನೆಲ್ಲ ಮರೆಯೋಣ ಎಂದು ಮನವಿ ಮಾಡಿದರು. ನೀವೆಲ್ಲ ಮತ್ತೆ ಈ ಸದನಕ್ಕೆ ಆಯ್ಕೆಯಾಗಿ ಬರಬೇಕು. ಅನುಭವ ಧಾರೆ ಎರೆಯಬೇಕು. ಭಗವಂತ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದರು.

ಭರವಸೆಗಳು ಕಾರ್ಯಗತವಾಗಲಿ: ಸದನದಲ್ಲಿ ಸದಸ್ಯರಿಗೆ ಸಚಿವರು ನೀಡಿದ ಭರವಸೆಗಳು ಕಾರ್ಯಗತವಾಗಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಖಾಶೆಂಪೂರ್ ವಿಧಾನಸಭೆಯಲ್ಲಿ ವಿದಾಯ ಭಾಷಣದ ವೇಳೆ ಹೇಳಿದರು. ಸದಸ್ಯರು ಅವರವರ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಶ್ನೆ ಕೇಳುತ್ತಾರೆ. ಆ ಪ್ರಶ್ನೆಗೆ ಸಚಿವರು ನೀಡಿದ ಉತ್ತರ ಬಹುತೇಕ ಕಾರ್ಯಗತವಾಗುವುದಿಲ್ಲ. ಮುಂದಿನ ದಿನಗಳಲ್ಲಿ ಸ್ಪೀಕರ್ ಸೂಕ್ತ ನಿರ್ದೇಶನ ನೀಡುವಂತಾಗಿ ಅಂತಿಮ ರೂಪ ಸಿಗುವಂತಾಗಬೇಕು ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೆಸರು ಪ್ರಸ್ತಾಪ ಮಾಡಿರುವುದು ಸಂತೋಷ ತಂದಿದೆ ಎಂದ ಅವರು, ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆಶೀರ್ವಾದದಿಂದ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ, ಅವರಿಗೆ ಮತ್ತು ನನ್ನ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

ದ್ವೇಷ ಮುಕ್ತ ಚುನಾವಣೆ ಆಗಬೇಕು: ಅಧಿಕಾರ ಎಂಬುದು ಯಾರಿಗೂ ಶಾಶ್ವತವಲ್ಲ. ಎಲ್ಲರೂ ದ್ವೇಷ ಮುಕ್ತ ಚುನಾವಣೆ ನಡೆಸಲು ಮುಂದಾಗಬೇಕು ಎಂದು ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ವಿಧಾನಸಭೆಯಲ್ಲಿ ವಿದಾಯದ ಭಾಷಣದಲ್ಲಿ ಮನವಿ ಮಾಡಿದರು. ರಾಜಕೀಯಕ್ಕಾಗಿ ಹೊಡೆದಾಡುವುದು ಬೇಡ. ಪ್ರೀತಿ, ವಿಶ್ವಾಸ ಕಳೆದುಕೊಳ್ಳಬಾರದು. ರಾಜಕೀಯಕ್ಕಾಗಿ ಸ್ನೇಹವನ್ನು ಕಳೆದುಕೊಳ್ಳಬಾರದು. ಚಿಕ್ಕ ವಯಸ್ಸಿನಲ್ಲೆ ನನಗೆ ಉಪನಾಯಕ ಸ್ಥಾನ ಕೊಟ್ಟಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ನಮ್ಮ ಪಕ್ಷದ ಹೈಕಮಾಂಡ್ಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ನನಗೆ ಬೆದರಿಕೆ ಕರೆ ಬಂದಾಗ ನಾನು ಪೊಲೀಸ್ ರಕ್ಷಣೆ ತೆಗೆದುಕೊಂಡಿರಲಿಲ್ಲ. ಆಗ, ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಬೈದು ರಕ್ಷಣೆ ಕೊಡಿಸಿದ್ದರು. ಅದರಿಂದ ನನಗೆ ಮುಕ್ತವಾಗಿ ಓಡಾಡಲು ಸಾಧ್ಯವಾಯಿತು ಎಂದು ನೆನಪು ಮಾಡಿಕೊಂಡರು. ಸದನಕ್ಕೆ ಬರುವುದು ನಾವು ಜನರ ಕೆಲಸಕ್ಕಾಗಿ. ಆದರೆ, ಜನರ ಕೆಲಸ ಪುಟ್ಬಾಲ್ ರೀತಿ ಆಗದೇ, ಗೋಲ್ ಹೊಡೆಯಬೇಕು. ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಬೇಕು ಎಂದು ಕಿವಿ ಮಾತು ಹೇಳಿದರು. ಸಮಾಜವನ್ನು ಕಲುಷಿತ ಮಾಡಬಾರದು. ಎಲ್ಲವನ್ನು ಗಳಿಸಿ ಪರಿಸ್ಥಿತಿ ವಿಷಮವಾದರೆ ಪ್ರಯೋಜನವಾಗುವುದಿಲ್ಲ. ಟೆನ್ಷನ್ ರಹಿತ ರಾಜಕಾರಣ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: ನಮ್ಮದು ಆರ್ಥಿಕ ಶಿಸ್ತು, ಆರ್ಥಿಕ ಪ್ರಗತಿಯ ಉಳಿತಾಯ ಬಜೆಟ್: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.