ETV Bharat / state

ಗೆಲುವು ಸಾಧಿಸಲು ಅವಕಾಶ ಇರುವ ಕ್ಷೇತ್ರಗಳಲ್ಲಿ ಕಾರ್ಯತಂತ್ರ ರೂಪಿಸುತ್ತಿರುವ ಜೆಡಿಎಸ್

ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯಲು ಮುಂದಾಗಿರುವ ಜೆಡಿಎಸ್ - ಗೆಲ್ಲಲು ಅವಕಾಶವಿರುವ 50 ಕ್ಷೇತ್ರಗಳಲ್ಲಿ ಜೆಡಿಎಸ್ ಕಾರ್ಯತಂತ್ರ - ಪಂಚರತ್ನ ರಥಯಾತ್ರೆ ನಡೆದ ಕ್ಷೇತ್ರಗಳಲ್ಲಿ ಜೆಡಿಎಸ್ ಸಮೀಕ್ಷೆ

author img

By

Published : Feb 25, 2023, 3:31 PM IST

JDS making strategy for upcoming election
ಗೆಲುವು ಸಾಧಿಸಲು ಅವಕಾಶ ಇರುವ ಕ್ಷೇತ್ರಗಳಲ್ಲಿ ಕಾರ್ಯತಂತ್ರ ರೂಪಿಸುತ್ತಿರುವ ಜೆಡಿಎಸ್!

ಬೆಂಗಳೂರು: ನಿನ್ನೆಯಷ್ಟೇ ವಿಧಾನಮಂಡಲದ ಬಜೆಟ್ ಅಧಿವೇಶನ ಮುಗಿದಿದ್ದು, ಎಲ್ಲ ಪಕ್ಷಗಳ ಶಾಸಕರು ತಮ್ಮ ತಮ್ಮ ಕ್ಷೇತ್ರಗಳತ್ತ ಮುಖ ಮಾಡಿದ್ದಾರೆ. ಇನ್ನು ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಈಗಾಗಲೇ ಚುನಾವಣಾ ಪ್ರಚಾರದ ತಾಲೀಮು ನಡೆಸುತ್ತಿವೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯಲು ಮುಂದಾಗಿರುವ ಜೆಡಿಎಸ್ ನಾಯಕರು ಪಂಚರತ್ನ ರಥಯಾತ್ರೆ ಮೂಲಕ ಈಗಾಗಲೇ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ಇನ್ನು, ಜೆಡಿಎಸ್ ಗೆಲ್ಲಲು ಅವಕಾಶವಿರುವ ಐವತ್ತು ಕ್ಷೇತ್ರಗಳಲ್ಲಿ ಕಾರ್ಯತಂತ್ರ ರೂಪಿಸಲು ಮುಂದಾಗಿದ್ದು, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕನಾಯಕನಹಳ್ಳಿ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರಿನ ಯಶವಂತಪುರ, ಹಾಸನ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಕೊಡಗು, ಬೆಳಗಾವಿ, ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಮಂಡ್ಯ ಸೇರಿದಂತೆ 50 ಕ್ಷೇತ್ರಗಳನ್ನು ಗುರುತಿಸಿರುವ ಜೆಡಿಎಸ್, ಆ ಕ್ಷೇತ್ರಗಳ ಮೇಲೆ ಹೆಚ್ಚು ಶ್ರಮ ಹಾಕಲು ದಳಪತಿಗಳು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಐವತ್ತು ಕ್ಷೇತ್ರಗಳ ಪೈಕಿ ಹಲವು ಕ್ಷೇತ್ರಗಳಲ್ಲಿ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿದ್ದರೂ, ಅಗತ್ಯವಿದ್ದರೆ ಬದಲಾವಣೆ ಮಾಡುವ ಸಾಧ್ಯತೆಯೂ ಇದೆ ಎಂದು ಈಗಾಗಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ತುಂಬಾ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿರುವ ವರಿಷ್ಠರು, ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿರುವವರು ಸಹ ಕುಮಾರಸ್ವಾಮಿ ಅವರ ಸಂಪರ್ಕದಲ್ಲಿದ್ದಾರೆ. ಈ ಪೈಕಿ ಸ್ಥಳೀಯವಾಗಿ ಪ್ರಭಾವ ಹೊಂದಿರುವ ಹಾಗೂ ಗೆಲ್ಲುವ ಸಾಮರ್ಥ್ಯ ಇರುವ ನಾಯಕರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಇದರ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡಿದರೆ ಅವರನ್ನು ಬೇರೆ ಕ್ಷೇತ್ರಗಳ ಕಡೆ ಮುಖ ಮಾಡದಂತೆ ಕಟ್ಟಿಹಾಕಲು ಕಾರ್ಯತಂತ್ರ ಹೆಣೆಯಲು ಚಿಂತನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಪಂಚರತ್ನ ರಥಯಾತ್ರೆ ನಡೆದ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿರುವ ಜೆಡಿಎಸ್, ಅದರಲ್ಲೂ ಗೆಲ್ಲುವ ಅವಕಾಶ ಇರುವವರ ಬಗ್ಗೆ ವರದಿ ನೀಡಲಾಗಿದೆ. ಆ ವರದಿಯನ್ನು ಇಟ್ಟುಕೊಂಡು ಅಳೆದು ತೂಗಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ವರಿಷ್ಠರು ನಿರ್ಧರಿಸಿದ್ದಾರೆ. ರಥಯಾತ್ರೆ ಬಳಿಕ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಗೆ ಪೈಪೋಟಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

ಮುಸ್ಲಿಂ ಸಮುದಾಯದ ಮತ ಸೆಳೆಯಲು ತಂತ್ರ: ಇನ್ನು, ಮುಸ್ಲಿಂ ಸಮುದಾಯದ ಮತ ಸೆಳೆಯಲು ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸದ್ದಿಲ್ಲದೆ ಕಲಬುರಗಿ, ಬಾಲಕೋಟೆ, ವಿಜಯಪುರ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕಾರ್ಯತಂತ್ರ ನಡೆಸುತ್ತಿದ್ದು, ಕೆಲವು ಪ್ರಮುಖರನ್ನು ತಮ್ಮ ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪಂಚರತ್ನ ರಥಯಾತ್ರೆ ಮುಗಿದ ನಂತರ ಚುನಾವಣೆಯಲ್ಲಿ ಗೆಲ್ಲಲು ಮಾಡಬೇಕಿರುವ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಮಾರ್ಚ್ ಮೊದಲ ವಾರದಲ್ಲಿ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ಸಭೆ ಕರೆಯಲಾಗಿದೆ ಎಂದು ಮೂಲಗಳು ಹೇಳಿವೆ.

ಬ್ರಾಹ್ಮಣ ಸಿಎಂ ಹೇಳಿಕೆಯಲ್ಲಿ ಹೆಚ್​ಡಿಕೆ ಲೆಕ್ಕಾಚಾರವೇನು?: ಕೆಲವು ದಿನಗಳ ಹಿಂದೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರು ಪ್ರಸ್ತಾಪಿಸಿ, ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿ ಮಾಡಲು ಆರ್ ಎಸ್​ಎಸ್ ತೀರ್ಮಾನಿಸಿದೆ ಎಂಬ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆದರೆ, ಬಿಜೆಪಿಯ ಕೆಲವೇ ನಾಯಕರು ಈ ಬಗ್ಗೆ ಪ್ರತಿಕ್ರಿಯಿಸಿದರೆ ಹೊರತು, ಪ್ರಮುಖ ನಾಯಕರು ಯಾರೂ ಮಾತನಾಡಿರಲಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಸಿಗುವುದಿಲ್ಲವೆಂಬ ಸಂದೇಶ ರವಾನಿಸುವ ಮೂಲಕ ಒಂದೇ ಕಲ್ಲಿನಿಂದ ಎರಡು ಹಕ್ಕಿ ಹೊಡೆಯುವುದು ರಾಜಕೀಯ ಲಾಭದ ಉದ್ದೇಶ ಇರಬಹುದೆಂಬ ವ್ಯಾಖ್ಯಾನಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಜೆಡಿಎಸ್​ಗೆ ಲಾಭವಾಗುವುದೇ? : ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಹೆಚ್​ಡಿಕೆ ಹೇಳಿಕೆ ಜೆಡಿಎಸ್​ಗೆ ಲಾಭ ತರುವುದೇ? ಎಂಬ ಪ್ರಶ್ನೆಯೂ ಮೂಡಿದೆ. ಮುಂಬರುವ ಚುನಾವಣೆಯಲ್ಲೂ ಯಾವುದೇ ಪಕ್ಷಕ್ಕೆ ಬಹುಮತ ಬರುವುದು ಅನುಮಾನ ಎಂಬ ಮಾತುಗಳ ಕೇಳಿಬರುತ್ತಿರುವುದರ ನಡುವೆಯೇ ಏನೇ ಆಗಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಎಂಬುದು ಕುಮಾರಸ್ವಾಮಿ ಪಟ್ಟು ಆಗಿದೆ. ಇದೆಲ್ಲದಕ್ಕೂ ಚುನಾವಣೆ ಫಲಿತಾಂಶದ ನಂತರ ಉತ್ತರ ಸಿಗಲಿದೆ.

ಇದನ್ನೂ ಓದಿ:ಶಿಕ್ಷಕರ ಆತ್ಮಹತ್ಯೆಯನ್ನು ಸರ್ಕಾರಿ ಕೊಲೆ ಅನ್ನದೇ ಬೇರೇನು ಹೇಳಬೇಕು?: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ನಿನ್ನೆಯಷ್ಟೇ ವಿಧಾನಮಂಡಲದ ಬಜೆಟ್ ಅಧಿವೇಶನ ಮುಗಿದಿದ್ದು, ಎಲ್ಲ ಪಕ್ಷಗಳ ಶಾಸಕರು ತಮ್ಮ ತಮ್ಮ ಕ್ಷೇತ್ರಗಳತ್ತ ಮುಖ ಮಾಡಿದ್ದಾರೆ. ಇನ್ನು ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಈಗಾಗಲೇ ಚುನಾವಣಾ ಪ್ರಚಾರದ ತಾಲೀಮು ನಡೆಸುತ್ತಿವೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯಲು ಮುಂದಾಗಿರುವ ಜೆಡಿಎಸ್ ನಾಯಕರು ಪಂಚರತ್ನ ರಥಯಾತ್ರೆ ಮೂಲಕ ಈಗಾಗಲೇ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ಇನ್ನು, ಜೆಡಿಎಸ್ ಗೆಲ್ಲಲು ಅವಕಾಶವಿರುವ ಐವತ್ತು ಕ್ಷೇತ್ರಗಳಲ್ಲಿ ಕಾರ್ಯತಂತ್ರ ರೂಪಿಸಲು ಮುಂದಾಗಿದ್ದು, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕನಾಯಕನಹಳ್ಳಿ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರಿನ ಯಶವಂತಪುರ, ಹಾಸನ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಕೊಡಗು, ಬೆಳಗಾವಿ, ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಮಂಡ್ಯ ಸೇರಿದಂತೆ 50 ಕ್ಷೇತ್ರಗಳನ್ನು ಗುರುತಿಸಿರುವ ಜೆಡಿಎಸ್, ಆ ಕ್ಷೇತ್ರಗಳ ಮೇಲೆ ಹೆಚ್ಚು ಶ್ರಮ ಹಾಕಲು ದಳಪತಿಗಳು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಐವತ್ತು ಕ್ಷೇತ್ರಗಳ ಪೈಕಿ ಹಲವು ಕ್ಷೇತ್ರಗಳಲ್ಲಿ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿದ್ದರೂ, ಅಗತ್ಯವಿದ್ದರೆ ಬದಲಾವಣೆ ಮಾಡುವ ಸಾಧ್ಯತೆಯೂ ಇದೆ ಎಂದು ಈಗಾಗಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ತುಂಬಾ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿರುವ ವರಿಷ್ಠರು, ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿರುವವರು ಸಹ ಕುಮಾರಸ್ವಾಮಿ ಅವರ ಸಂಪರ್ಕದಲ್ಲಿದ್ದಾರೆ. ಈ ಪೈಕಿ ಸ್ಥಳೀಯವಾಗಿ ಪ್ರಭಾವ ಹೊಂದಿರುವ ಹಾಗೂ ಗೆಲ್ಲುವ ಸಾಮರ್ಥ್ಯ ಇರುವ ನಾಯಕರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಇದರ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡಿದರೆ ಅವರನ್ನು ಬೇರೆ ಕ್ಷೇತ್ರಗಳ ಕಡೆ ಮುಖ ಮಾಡದಂತೆ ಕಟ್ಟಿಹಾಕಲು ಕಾರ್ಯತಂತ್ರ ಹೆಣೆಯಲು ಚಿಂತನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಪಂಚರತ್ನ ರಥಯಾತ್ರೆ ನಡೆದ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿರುವ ಜೆಡಿಎಸ್, ಅದರಲ್ಲೂ ಗೆಲ್ಲುವ ಅವಕಾಶ ಇರುವವರ ಬಗ್ಗೆ ವರದಿ ನೀಡಲಾಗಿದೆ. ಆ ವರದಿಯನ್ನು ಇಟ್ಟುಕೊಂಡು ಅಳೆದು ತೂಗಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ವರಿಷ್ಠರು ನಿರ್ಧರಿಸಿದ್ದಾರೆ. ರಥಯಾತ್ರೆ ಬಳಿಕ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಗೆ ಪೈಪೋಟಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

ಮುಸ್ಲಿಂ ಸಮುದಾಯದ ಮತ ಸೆಳೆಯಲು ತಂತ್ರ: ಇನ್ನು, ಮುಸ್ಲಿಂ ಸಮುದಾಯದ ಮತ ಸೆಳೆಯಲು ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸದ್ದಿಲ್ಲದೆ ಕಲಬುರಗಿ, ಬಾಲಕೋಟೆ, ವಿಜಯಪುರ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕಾರ್ಯತಂತ್ರ ನಡೆಸುತ್ತಿದ್ದು, ಕೆಲವು ಪ್ರಮುಖರನ್ನು ತಮ್ಮ ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪಂಚರತ್ನ ರಥಯಾತ್ರೆ ಮುಗಿದ ನಂತರ ಚುನಾವಣೆಯಲ್ಲಿ ಗೆಲ್ಲಲು ಮಾಡಬೇಕಿರುವ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಮಾರ್ಚ್ ಮೊದಲ ವಾರದಲ್ಲಿ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ಸಭೆ ಕರೆಯಲಾಗಿದೆ ಎಂದು ಮೂಲಗಳು ಹೇಳಿವೆ.

ಬ್ರಾಹ್ಮಣ ಸಿಎಂ ಹೇಳಿಕೆಯಲ್ಲಿ ಹೆಚ್​ಡಿಕೆ ಲೆಕ್ಕಾಚಾರವೇನು?: ಕೆಲವು ದಿನಗಳ ಹಿಂದೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರು ಪ್ರಸ್ತಾಪಿಸಿ, ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿ ಮಾಡಲು ಆರ್ ಎಸ್​ಎಸ್ ತೀರ್ಮಾನಿಸಿದೆ ಎಂಬ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆದರೆ, ಬಿಜೆಪಿಯ ಕೆಲವೇ ನಾಯಕರು ಈ ಬಗ್ಗೆ ಪ್ರತಿಕ್ರಿಯಿಸಿದರೆ ಹೊರತು, ಪ್ರಮುಖ ನಾಯಕರು ಯಾರೂ ಮಾತನಾಡಿರಲಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಸಿಗುವುದಿಲ್ಲವೆಂಬ ಸಂದೇಶ ರವಾನಿಸುವ ಮೂಲಕ ಒಂದೇ ಕಲ್ಲಿನಿಂದ ಎರಡು ಹಕ್ಕಿ ಹೊಡೆಯುವುದು ರಾಜಕೀಯ ಲಾಭದ ಉದ್ದೇಶ ಇರಬಹುದೆಂಬ ವ್ಯಾಖ್ಯಾನಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಜೆಡಿಎಸ್​ಗೆ ಲಾಭವಾಗುವುದೇ? : ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಹೆಚ್​ಡಿಕೆ ಹೇಳಿಕೆ ಜೆಡಿಎಸ್​ಗೆ ಲಾಭ ತರುವುದೇ? ಎಂಬ ಪ್ರಶ್ನೆಯೂ ಮೂಡಿದೆ. ಮುಂಬರುವ ಚುನಾವಣೆಯಲ್ಲೂ ಯಾವುದೇ ಪಕ್ಷಕ್ಕೆ ಬಹುಮತ ಬರುವುದು ಅನುಮಾನ ಎಂಬ ಮಾತುಗಳ ಕೇಳಿಬರುತ್ತಿರುವುದರ ನಡುವೆಯೇ ಏನೇ ಆಗಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಎಂಬುದು ಕುಮಾರಸ್ವಾಮಿ ಪಟ್ಟು ಆಗಿದೆ. ಇದೆಲ್ಲದಕ್ಕೂ ಚುನಾವಣೆ ಫಲಿತಾಂಶದ ನಂತರ ಉತ್ತರ ಸಿಗಲಿದೆ.

ಇದನ್ನೂ ಓದಿ:ಶಿಕ್ಷಕರ ಆತ್ಮಹತ್ಯೆಯನ್ನು ಸರ್ಕಾರಿ ಕೊಲೆ ಅನ್ನದೇ ಬೇರೇನು ಹೇಳಬೇಕು?: ಸಿದ್ದರಾಮಯ್ಯ ಕಿಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.