ETV Bharat / state

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಸ್ವಾಗತಾರ್ಹ: ಸಚಿವ ಜಗದೀಶ್ ಶೆಟ್ಟರ್

author img

By

Published : Sep 30, 2020, 4:08 PM IST

Updated : Sep 30, 2020, 5:09 PM IST

ರಾಮ ಮಂದಿರ ಆಗಬೇಕು ಎನ್ನುವ ಒಳ್ಳೆಯ ಉದ್ದೇಶದಿಂದ‌ ರಥಯಾತ್ರೆ ಮಾಡಿದ್ದರು. ಈಗ ಅವರೆಲ್ಲ ನಿರ್ದೋಷಿ ಎಂದು ತೀರ್ಪು ಬಂದಿರುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಸಚಿವ ಜಗದೀಶ್ ಶೆಟ್ಟರ್  Minister Jagadish Shettar
ಸಚಿವ ಜಗದೀಶ್ ಶೆಟ್ಟರ್

ಬೆಂಗಳೂರು: ಬಾಬರಿ ಮಸೀದಿ ಧ್ವಂಸ ಪ್ರಕರಣ ವಿವಾದ ಕುರಿತು ಸಿಬಿಐ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದ್ದು, ಈ ತೀರ್ಪನ್ನು ಸ್ವಾಗತಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಸಚಿವ ಜಗದೀಶ್ ಶೆಟ್ಟರ್

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ಬಾಬರಿ ಮಸೀದಿ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಇನ್ನಿತರ ನಾಯಕರ ಮೇಲೆ ಕೇಸ್​ಗಳು ಇದ್ದವು. ಅವರನ್ನು ಕಟಕಟೆಯಲ್ಲಿ ನಿಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ಆದ ನಂತರ ಮಹತ್ವದ ಐತಿಹಾಸಿಕ‌ ತೀರ್ಪು ಬಂದಿದೆ. ಎಲ್ಲರನ್ನೂ ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದನ್ನು ಸ್ವಾಗತ ಮಾಡುತ್ತಿದ್ದೇನೆ ಎಂದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಬೇಕು ಎಂದು‌ ಅಡ್ವಾಣಿ ರಥಯಾತ್ರೆ ಮಾಡಿದ್ದರು. ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಅವರ ಮನಸ್ಸಿನಲ್ಲಿ ಮಸೀದಿ‌ ಧ್ವಂಸ ಮಾಡುವ ಉದ್ದೇಶ ಇರಲಿಲ್ಲ. ರಾಮ ಮಂದಿರ ಆಗಬೇಕು ಎನ್ನುವ ಒಳ್ಳೆಯ ಉದ್ದೇಶದಿಂದ‌ ರಥಯಾತ್ರೆ ಮಾಡಿದ್ದರು. ಈಗ ಅವರೆಲ್ಲಾ ನಿರ್ದೋಷಿ ಎಂದು ತೀರ್ಪು ಬಂದಿರುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಭೂಮಿ ಪೂಜೆ ಮಾಡಿದ್ದಾರೆ. ಮಂದಿರ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಇಡೀ ದೇಶದ ಸಂಸ್ಕೃತಿ, ಪರಂಪರೆಗೆ ಕೀರ್ತಿ ತರುವ ರೀತಿಯಲ್ಲಿ ಅದ್ಭುತ ರಾಮಮಂದಿರ‌ ಆದಷ್ಟು ಬೇಗ ನಿರ್ಮಾಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು: ಬಾಬರಿ ಮಸೀದಿ ಧ್ವಂಸ ಪ್ರಕರಣ ವಿವಾದ ಕುರಿತು ಸಿಬಿಐ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದ್ದು, ಈ ತೀರ್ಪನ್ನು ಸ್ವಾಗತಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಸಚಿವ ಜಗದೀಶ್ ಶೆಟ್ಟರ್

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ಬಾಬರಿ ಮಸೀದಿ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಇನ್ನಿತರ ನಾಯಕರ ಮೇಲೆ ಕೇಸ್​ಗಳು ಇದ್ದವು. ಅವರನ್ನು ಕಟಕಟೆಯಲ್ಲಿ ನಿಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ಆದ ನಂತರ ಮಹತ್ವದ ಐತಿಹಾಸಿಕ‌ ತೀರ್ಪು ಬಂದಿದೆ. ಎಲ್ಲರನ್ನೂ ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದನ್ನು ಸ್ವಾಗತ ಮಾಡುತ್ತಿದ್ದೇನೆ ಎಂದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಬೇಕು ಎಂದು‌ ಅಡ್ವಾಣಿ ರಥಯಾತ್ರೆ ಮಾಡಿದ್ದರು. ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಅವರ ಮನಸ್ಸಿನಲ್ಲಿ ಮಸೀದಿ‌ ಧ್ವಂಸ ಮಾಡುವ ಉದ್ದೇಶ ಇರಲಿಲ್ಲ. ರಾಮ ಮಂದಿರ ಆಗಬೇಕು ಎನ್ನುವ ಒಳ್ಳೆಯ ಉದ್ದೇಶದಿಂದ‌ ರಥಯಾತ್ರೆ ಮಾಡಿದ್ದರು. ಈಗ ಅವರೆಲ್ಲಾ ನಿರ್ದೋಷಿ ಎಂದು ತೀರ್ಪು ಬಂದಿರುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಭೂಮಿ ಪೂಜೆ ಮಾಡಿದ್ದಾರೆ. ಮಂದಿರ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಇಡೀ ದೇಶದ ಸಂಸ್ಕೃತಿ, ಪರಂಪರೆಗೆ ಕೀರ್ತಿ ತರುವ ರೀತಿಯಲ್ಲಿ ಅದ್ಭುತ ರಾಮಮಂದಿರ‌ ಆದಷ್ಟು ಬೇಗ ನಿರ್ಮಾಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Last Updated : Sep 30, 2020, 5:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.