ETV Bharat / state

ಎಂಇಎಸ್ ಪುಂಡಾಟಿಕೆ : ಕನ್ನಡ ಪರ ಸಂಘಟನೆಗಳಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ

author img

By

Published : Dec 18, 2021, 10:09 PM IST

Updated : Dec 18, 2021, 10:42 PM IST

ಮೈಸೂರು ಬ್ಯಾಂಕ್ ಸರ್ಕಲ್​​ನಿಂದ ಬೆಳಗಾವಿ ಚಲೋ ಕಾರ್ಯಕ್ರಮ ನೆಲಮಂಗಲದಿಂದ ತುಮಕೂರು-ಚಿತ್ರದುರ್ಗ ಮಾರ್ಗವಾಗಿ ಹೋಗಲಿದೆ. ಮಾರ್ಗ ಮಧ್ಯೆ ಸಿಗುವ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡುತ್ತೇವೆ. ಕಾರು, ಬೈಕ್, ಬಸ್, ರೈಲುಗಳ‌ ಮುಖಾಂತರ ಕನ್ನಡಪರ ಕಾರ್ಯಕರ್ತರು ಬೆಳಗಾವಿಯಲ್ಲಿ ಸೇರಿಕೊಳ್ಳಲಿದ್ದಾರೆ. ಸೋಮವಾರ 11 ಗಂಟೆಗೆ ಸುವರ್ಣಸೌಧ ತಲುಪುತ್ತೇವೆ..

Kannada organisation held belgaum chalo protest tomorrow
ಕನ್ನಡ ಪರ ಸಂಘಟನೆಗಳಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ

ಬೆಂಗಳೂರು : ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರ ವಿರುದ್ಧ ಕನ್ನಡಪರ ಸೇರಿದಂತೆ ವಿವಿಧ ಸಂಘಟನೆಗಳು ಸಮರ ಸಾರಿವೆ. ಕನ್ನಡ ಪರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿವೆ.

ಕನ್ನಡ ಪರ ಸಂಘಟನೆಗಳಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ

ಕರವೇ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಇಂದು ಸಂಜೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ರೈತ ಮುಖಂಡ ಕುರುಬುರು ಶಾಂತಕುಮಾರ್ ಸೇರಿದಂತೆ ವಿವಿಧ ಸಂಘಟನೆ ಮುಖಂಡರು ಭಾಗವಹಿಸಿದ್ದರು. ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬೆಳ್ಳಗ್ಗೆ 11 ಗಂಟೆಗೆ ಮೈಸೂರು ಬ್ಯಾಂಕ್ ಸರ್ಕಲ್​​​ನಿಂದ ಬೆಳಗಾವಿಯ ಸುವರ್ಣಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮೆಜೆಸ್ಟಿಕ್​​ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿ ಬಳಿಕ ಬೆಳಗಾವಿ ಕಡೆ ಪ್ರಯಾಣ ಆರಂಭಿಸಲಿದ್ದೇವೆ. ಕಿತ್ತೂರು ರಾಣಿ ಚೆನ್ನಮ್ಮಗೆ ಮಾಲಾರ್ಪಣೆ ಮಾಡಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ. ಇದು ಎಂಇಎಸ್, ಶಿವಸೇನೆ ವಿರುದ್ಧ ಹೋರಾಟವಾಗಿದೆ. ರಕ್ತಕ್ರಾಂತಿ ಆದರೂ ಪರವಾಗಿಲ್ಲ. ಹೋರಾಟ ನಿಲ್ಲಿಸಲ್ಲ ಎಂದು ಪ್ರವೀಣ್ ಶೆಟ್ಟಿ ಹೇಳಿದರು.

ಮೈಸೂರು ಬ್ಯಾಂಕ್ ಸರ್ಕಲ್​​ನಿಂದ ಬೆಳಗಾವಿ ಚಲೋ ಕಾರ್ಯಕ್ರಮ ನೆಲಮಂಗಲದಿಂದ ತುಮಕೂರು-ಚಿತ್ರದುರ್ಗ ಮಾರ್ಗವಾಗಿ ಹೋಗಲಿದೆ. ಮಾರ್ಗ ಮಧ್ಯೆ ಸಿಗುವ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡುತ್ತೇವೆ. ಕಾರು, ಬೈಕ್, ಬಸ್, ರೈಲುಗಳ‌ ಮುಖಾಂತರ ಕನ್ನಡಪರ ಕಾರ್ಯಕರ್ತರು ಬೆಳಗಾವಿಯಲ್ಲಿ ಸೇರಿಕೊಳ್ಳಲಿದ್ದಾರೆ. ಸೋಮವಾರ 11 ಗಂಟೆಗೆ ಸುವರ್ಣಸೌಧ ತಲುಪುತ್ತೇವೆ ಎಂದು ಮಾಹಿತಿ ನೀಡಿದರು.

ಉದ್ನಿಗ್ವ ಪರಿಸ್ಥಿತಿ ನಿರ್ಮಾಣ : ಕಿಡಿಗೇಡಿಗಳು ಶಿವಾಜಿ ಪ್ರತಿಮೆಗೆ ಮಸಿ ಬಳಿದ ಬೆನ್ನಲೇ ಬೆಳಗಾವಿ ಸೇರಿದಂತೆ‌ ಮಹಾರಾಷ್ಟ್ರದಲ್ಲಿ ಕರ್ನಾಟಕದ ವಾಹನಗಳ ಮೇಲೆ ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರು ದಾಂಧಲೆ ನಡೆಸಿದ್ದರು. ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ್ದರು. ಸದ್ಯ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ನಿಗ್ವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಸಿ ಬಳಿದ‌‌ ಕಿಡಿಗೇಡಿಗಳ ವಿರುದ್ಧ ಎಫ್ಐಆರ್​ : ಮಾಹಾರಾಷ್ಟ್ರದಲ್ಲಿ ಕನ್ನಡ ಭಾವುಟವನ್ನು ಸುಟ್ಟು ಹಾಕಿರುವ ಹಿನ್ನೆಲೆಯಲ್ಲಿ ಪ್ರತಿಯಾಗಿ ಕಿಡಿಗೇಡಿಗಳು ಗುರುವಾರ ರಾತ್ರಿ ಭಾಷ್ಯಂ ಸರ್ಕಲ್​​​​ನಲ್ಲಿರುವ ಶಿವಾಜಿ ಪ್ರತಿಮೆಗೆ ಮಸಿ ಬಳಿದು ಅಪಮಾನ‌ ಮಾಡಿದ್ದರು.‌ ಈ ಸಂಬಂಧ ಆರೋಪಿಗಳ ವಿರುದ್ಧ ಸದಾಶಿವನಗರ ಪೊಲೀಸರು‌ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು ಕಿಡಿಕಾರಿದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು

ಬೆಂಗಳೂರು : ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರ ವಿರುದ್ಧ ಕನ್ನಡಪರ ಸೇರಿದಂತೆ ವಿವಿಧ ಸಂಘಟನೆಗಳು ಸಮರ ಸಾರಿವೆ. ಕನ್ನಡ ಪರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿವೆ.

ಕನ್ನಡ ಪರ ಸಂಘಟನೆಗಳಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ

ಕರವೇ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಇಂದು ಸಂಜೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ರೈತ ಮುಖಂಡ ಕುರುಬುರು ಶಾಂತಕುಮಾರ್ ಸೇರಿದಂತೆ ವಿವಿಧ ಸಂಘಟನೆ ಮುಖಂಡರು ಭಾಗವಹಿಸಿದ್ದರು. ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬೆಳ್ಳಗ್ಗೆ 11 ಗಂಟೆಗೆ ಮೈಸೂರು ಬ್ಯಾಂಕ್ ಸರ್ಕಲ್​​​ನಿಂದ ಬೆಳಗಾವಿಯ ಸುವರ್ಣಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮೆಜೆಸ್ಟಿಕ್​​ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿ ಬಳಿಕ ಬೆಳಗಾವಿ ಕಡೆ ಪ್ರಯಾಣ ಆರಂಭಿಸಲಿದ್ದೇವೆ. ಕಿತ್ತೂರು ರಾಣಿ ಚೆನ್ನಮ್ಮಗೆ ಮಾಲಾರ್ಪಣೆ ಮಾಡಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ. ಇದು ಎಂಇಎಸ್, ಶಿವಸೇನೆ ವಿರುದ್ಧ ಹೋರಾಟವಾಗಿದೆ. ರಕ್ತಕ್ರಾಂತಿ ಆದರೂ ಪರವಾಗಿಲ್ಲ. ಹೋರಾಟ ನಿಲ್ಲಿಸಲ್ಲ ಎಂದು ಪ್ರವೀಣ್ ಶೆಟ್ಟಿ ಹೇಳಿದರು.

ಮೈಸೂರು ಬ್ಯಾಂಕ್ ಸರ್ಕಲ್​​ನಿಂದ ಬೆಳಗಾವಿ ಚಲೋ ಕಾರ್ಯಕ್ರಮ ನೆಲಮಂಗಲದಿಂದ ತುಮಕೂರು-ಚಿತ್ರದುರ್ಗ ಮಾರ್ಗವಾಗಿ ಹೋಗಲಿದೆ. ಮಾರ್ಗ ಮಧ್ಯೆ ಸಿಗುವ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡುತ್ತೇವೆ. ಕಾರು, ಬೈಕ್, ಬಸ್, ರೈಲುಗಳ‌ ಮುಖಾಂತರ ಕನ್ನಡಪರ ಕಾರ್ಯಕರ್ತರು ಬೆಳಗಾವಿಯಲ್ಲಿ ಸೇರಿಕೊಳ್ಳಲಿದ್ದಾರೆ. ಸೋಮವಾರ 11 ಗಂಟೆಗೆ ಸುವರ್ಣಸೌಧ ತಲುಪುತ್ತೇವೆ ಎಂದು ಮಾಹಿತಿ ನೀಡಿದರು.

ಉದ್ನಿಗ್ವ ಪರಿಸ್ಥಿತಿ ನಿರ್ಮಾಣ : ಕಿಡಿಗೇಡಿಗಳು ಶಿವಾಜಿ ಪ್ರತಿಮೆಗೆ ಮಸಿ ಬಳಿದ ಬೆನ್ನಲೇ ಬೆಳಗಾವಿ ಸೇರಿದಂತೆ‌ ಮಹಾರಾಷ್ಟ್ರದಲ್ಲಿ ಕರ್ನಾಟಕದ ವಾಹನಗಳ ಮೇಲೆ ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರು ದಾಂಧಲೆ ನಡೆಸಿದ್ದರು. ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ್ದರು. ಸದ್ಯ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ನಿಗ್ವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಸಿ ಬಳಿದ‌‌ ಕಿಡಿಗೇಡಿಗಳ ವಿರುದ್ಧ ಎಫ್ಐಆರ್​ : ಮಾಹಾರಾಷ್ಟ್ರದಲ್ಲಿ ಕನ್ನಡ ಭಾವುಟವನ್ನು ಸುಟ್ಟು ಹಾಕಿರುವ ಹಿನ್ನೆಲೆಯಲ್ಲಿ ಪ್ರತಿಯಾಗಿ ಕಿಡಿಗೇಡಿಗಳು ಗುರುವಾರ ರಾತ್ರಿ ಭಾಷ್ಯಂ ಸರ್ಕಲ್​​​​ನಲ್ಲಿರುವ ಶಿವಾಜಿ ಪ್ರತಿಮೆಗೆ ಮಸಿ ಬಳಿದು ಅಪಮಾನ‌ ಮಾಡಿದ್ದರು.‌ ಈ ಸಂಬಂಧ ಆರೋಪಿಗಳ ವಿರುದ್ಧ ಸದಾಶಿವನಗರ ಪೊಲೀಸರು‌ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು ಕಿಡಿಕಾರಿದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು

Last Updated : Dec 18, 2021, 10:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.