ETV Bharat / state

ಹೈಕಮಾಂಡ್ ವೀಕ್ಷಕರ ಸಮ್ಮುಖದಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ: ಸಂಜೆ ಬಿಜೆಪಿ ಶಾಸಕಾಂಗ ಸಭೆ

author img

By

Published : Jul 3, 2023, 12:45 PM IST

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಇಂದು ಹೈಕಮಾಂಡ್ ವೀಕ್ಷಕರ ಸಮ್ಮುಖದಲ್ಲಿ ನಡೆಯಲಿದೆ.

ಬಿಜೆಪಿ ಶಾಸಕಾಂಗ ಸಭೆ
ಬಿಜೆಪಿ ಶಾಸಕಾಂಗ ಸಭೆ

ಬೆಂಗಳೂರು: ಹೈಕಮಾಂಡ್ ವೀಕ್ಷಕರೆದುರು ಕರ್ನಾಟಕ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದ್ದು, ಕೇಂದ್ರದ ಇಬ್ಬರು ನಾಯಕರು ವೀಕ್ಷಕರಾಗಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಂಜೆ 6 ಗಂಟೆಗೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕರ ಹೆಸರು ಪ್ರಕಟಿಸಲಾಗುತ್ತದೆ.

ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿ ಜಗನ್ನಾಥ ಭವನ ಅಥವಾ ರಾಜಭವನ ರಸ್ತೆಯಲ್ಲಿರುವ ಕ್ಯಾಪಿಟಲ್ ಹೋಟೆಲ್​ನಲ್ಲಿ ಶಾಸಕಂಗ ಪಕ್ಷದ ಸಭೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ಸಭೆಯಲ್ಲಿ ನೂತನ ಬಿಜೆಪಿ ಶಾಸಕರು ಭಾಗಿಯಾಗಲಿದ್ದು, ವಿಪಕ್ಷ ನಾಯಕನ ಆಯ್ಕೆ ಸಂಬಂಧ ಶಾಸಕರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ.

ದೆಹಲಿಯಿಂದ ವಿನೋಧ ತಾವಡೆ ಮತ್ತು ಮನ್ಸೂಕ್ ಮಾಂಡವೀಯ ವೀಕ್ಷಕರಾಗಿ ಬರುತ್ತಿದ್ದು, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಕೂಡ ಸಭೆಯಲ್ಲಿ ಭಾಗಿಯಾಗುವರು. ಇಬ್ಬರು ವೀಕ್ಷಕರ ಸಮ್ಮುಖದಲ್ಲಿ ಶಾಸಕಾಂಗ ನಾಯಕನ ಆಯ್ಕೆ ನಡೆಯಲಿದ್ದು, ಶಾಸಕರ ಅಭಿಪ್ರಾಯ ಸಂಗ್ರಹ ಸಾಧ್ಯತೆ ಅಥವಾ ಈಗಾಗಲೇ ನಿರ್ಣಯ ಮಾಡಿರುವ ಹೆಸರನ್ನು ಸಭೆಯಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಈ ಕುರಿತು ಮಾಹಿತಿ ನೀಡಿದ ಮಾಜಿ ಸಚಿವ ಆರ್. ಅಶೋಕ್, "ಕೇಂದ್ರದ ವೀಕ್ಷಕರ ಬರಲಿದ್ದು, ಶಾಸಕರಿಂದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ನಂತರ ಹೈಕಮಾಂಡ್ ನಾಯಕರು ವಿಪಕ್ಷ ನಾಯಕರ ಆಯ್ಕೆ ಮಾಡುತ್ತಾರೆ. ನಮ್ಮಲ್ಲಿ ಯಾವುದೇ ಗೊಂದಲ, ಗುಂಪು ಇಲ್ಲ" ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ವಿಳಂಬ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಲ್ಲಿ ಗೊಂದಲ ಮೂಡಿದ್ದು ಸದನಕ್ಕೆ ತೆರಳುವ ಮುನ್ನ ಮಾಜಿ ಸಿಎಂ ಬೊಮ್ಮಾಯಿ ಅವರನ್ನು ವಲಸಿಗ ಶಾಸಕರು ಭೇಟಿ ಮಾಡಿ ಮಾತುಕತೆ ನಡೆಸಿದರು. ಶಾಸಕ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜ್, ಆರ್.ಟಿ‌. ನಗರದ ನಿವಾಸದಲ್ಲಿ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದರು.

ನಂತರ ವಿಧಾನಸೌಧಕ್ಕೆ ಬೊಮ್ಮಾಯಿ‌ ತೆರಳಿದ್ದು, ಬೊಮ್ಮಾಯಿ‌ ಕಾರಿನಲ್ಲೇ ಬೈರತಿ, ಶಿವರಾಮ್ ಹೆಬ್ಬಾರ್, ಎಸ್.ಟಿ. ಸೋಮಶೇಖರ್ ತೆರಳಿದರು. ಆರ್. ಅಶೋಕ್ ತಮ್ಮದೇ ಕಾರಿನಲ್ಲಿ ವಿಧಾನಸೌಧಕ್ಕೆ ಹೊರಟರು. ಬೊಮ್ಮಾಯಿ‌ ವಿಪಕ್ಷ ನಾಯಕನ ರೇಸಿನಲ್ಲಿರುವ ಹೊತ್ತಿನಲ್ಲಿ ಹಾಲಿ ಶಾಸಕರು ಬೊಮ್ಮಾಯಿ‌ಗೆ ಸಾಥ್ ನೀಡಿದ್ದು ವಿಪಕ್ಷ ನಾಯಕನಾಗಲು ಪರೋಕ್ಷ ಬೆಂಬಲ ನೀಡಿದಂತಿದೆ.

ಜಿಲ್ಲಾಧ್ಯಕ್ಷರ ಸಭೆ: ಶಾಸಕಾಂಗ ಪಕ್ಷದ ಸಭೆಗೂ ಮೊದಲು ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರಧಾನಕಾರ್ಯದರ್ಶಿಗಳ‌ ಸಭೆ ಕಟೀಲ್ ನೇತೃತ್ವದಲ್ಲಿ ನಡೆಯಲಿದೆ. ವಿಧಾನಸಭೆ ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲಾಧ್ಯಕ್ಷರ ಜೊತೆ ಸಭೆ ನಿಗದಿಯಾಗಿದ್ದು, ಸೋಲಿನ ಕುರಿತು ಪರಾಮರ್ಶೆ ನಡೆಸಲಾಗುತ್ತದೆ. ಇದರ ಜೊತೆಗೆ ಲೋಕಸಭಾ ಚುನಾವಣಾ ತಯಾರಿ ಸಂಬಂಧವೂ ಮಾತುಕತೆ ನಡೆಯಲಿದೆ.

ಇದನ್ನೂ ಓದಿ: Karnataka Budget: 2023-24ನೇ ಸಾಲಿನ ಬಜೆಟ್​ಗೆ ಸಿಎಂ ಸಿದ್ದರಾಮಯ್ಯ ಕಸರತ್ತು: 3 ಹೊರೆಗಳ ತಲೆನೋವು

ಬೆಂಗಳೂರು: ಹೈಕಮಾಂಡ್ ವೀಕ್ಷಕರೆದುರು ಕರ್ನಾಟಕ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದ್ದು, ಕೇಂದ್ರದ ಇಬ್ಬರು ನಾಯಕರು ವೀಕ್ಷಕರಾಗಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಂಜೆ 6 ಗಂಟೆಗೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕರ ಹೆಸರು ಪ್ರಕಟಿಸಲಾಗುತ್ತದೆ.

ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿ ಜಗನ್ನಾಥ ಭವನ ಅಥವಾ ರಾಜಭವನ ರಸ್ತೆಯಲ್ಲಿರುವ ಕ್ಯಾಪಿಟಲ್ ಹೋಟೆಲ್​ನಲ್ಲಿ ಶಾಸಕಂಗ ಪಕ್ಷದ ಸಭೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ಸಭೆಯಲ್ಲಿ ನೂತನ ಬಿಜೆಪಿ ಶಾಸಕರು ಭಾಗಿಯಾಗಲಿದ್ದು, ವಿಪಕ್ಷ ನಾಯಕನ ಆಯ್ಕೆ ಸಂಬಂಧ ಶಾಸಕರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ.

ದೆಹಲಿಯಿಂದ ವಿನೋಧ ತಾವಡೆ ಮತ್ತು ಮನ್ಸೂಕ್ ಮಾಂಡವೀಯ ವೀಕ್ಷಕರಾಗಿ ಬರುತ್ತಿದ್ದು, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಕೂಡ ಸಭೆಯಲ್ಲಿ ಭಾಗಿಯಾಗುವರು. ಇಬ್ಬರು ವೀಕ್ಷಕರ ಸಮ್ಮುಖದಲ್ಲಿ ಶಾಸಕಾಂಗ ನಾಯಕನ ಆಯ್ಕೆ ನಡೆಯಲಿದ್ದು, ಶಾಸಕರ ಅಭಿಪ್ರಾಯ ಸಂಗ್ರಹ ಸಾಧ್ಯತೆ ಅಥವಾ ಈಗಾಗಲೇ ನಿರ್ಣಯ ಮಾಡಿರುವ ಹೆಸರನ್ನು ಸಭೆಯಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಈ ಕುರಿತು ಮಾಹಿತಿ ನೀಡಿದ ಮಾಜಿ ಸಚಿವ ಆರ್. ಅಶೋಕ್, "ಕೇಂದ್ರದ ವೀಕ್ಷಕರ ಬರಲಿದ್ದು, ಶಾಸಕರಿಂದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ನಂತರ ಹೈಕಮಾಂಡ್ ನಾಯಕರು ವಿಪಕ್ಷ ನಾಯಕರ ಆಯ್ಕೆ ಮಾಡುತ್ತಾರೆ. ನಮ್ಮಲ್ಲಿ ಯಾವುದೇ ಗೊಂದಲ, ಗುಂಪು ಇಲ್ಲ" ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ವಿಳಂಬ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಲ್ಲಿ ಗೊಂದಲ ಮೂಡಿದ್ದು ಸದನಕ್ಕೆ ತೆರಳುವ ಮುನ್ನ ಮಾಜಿ ಸಿಎಂ ಬೊಮ್ಮಾಯಿ ಅವರನ್ನು ವಲಸಿಗ ಶಾಸಕರು ಭೇಟಿ ಮಾಡಿ ಮಾತುಕತೆ ನಡೆಸಿದರು. ಶಾಸಕ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜ್, ಆರ್.ಟಿ‌. ನಗರದ ನಿವಾಸದಲ್ಲಿ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದರು.

ನಂತರ ವಿಧಾನಸೌಧಕ್ಕೆ ಬೊಮ್ಮಾಯಿ‌ ತೆರಳಿದ್ದು, ಬೊಮ್ಮಾಯಿ‌ ಕಾರಿನಲ್ಲೇ ಬೈರತಿ, ಶಿವರಾಮ್ ಹೆಬ್ಬಾರ್, ಎಸ್.ಟಿ. ಸೋಮಶೇಖರ್ ತೆರಳಿದರು. ಆರ್. ಅಶೋಕ್ ತಮ್ಮದೇ ಕಾರಿನಲ್ಲಿ ವಿಧಾನಸೌಧಕ್ಕೆ ಹೊರಟರು. ಬೊಮ್ಮಾಯಿ‌ ವಿಪಕ್ಷ ನಾಯಕನ ರೇಸಿನಲ್ಲಿರುವ ಹೊತ್ತಿನಲ್ಲಿ ಹಾಲಿ ಶಾಸಕರು ಬೊಮ್ಮಾಯಿ‌ಗೆ ಸಾಥ್ ನೀಡಿದ್ದು ವಿಪಕ್ಷ ನಾಯಕನಾಗಲು ಪರೋಕ್ಷ ಬೆಂಬಲ ನೀಡಿದಂತಿದೆ.

ಜಿಲ್ಲಾಧ್ಯಕ್ಷರ ಸಭೆ: ಶಾಸಕಾಂಗ ಪಕ್ಷದ ಸಭೆಗೂ ಮೊದಲು ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರಧಾನಕಾರ್ಯದರ್ಶಿಗಳ‌ ಸಭೆ ಕಟೀಲ್ ನೇತೃತ್ವದಲ್ಲಿ ನಡೆಯಲಿದೆ. ವಿಧಾನಸಭೆ ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲಾಧ್ಯಕ್ಷರ ಜೊತೆ ಸಭೆ ನಿಗದಿಯಾಗಿದ್ದು, ಸೋಲಿನ ಕುರಿತು ಪರಾಮರ್ಶೆ ನಡೆಸಲಾಗುತ್ತದೆ. ಇದರ ಜೊತೆಗೆ ಲೋಕಸಭಾ ಚುನಾವಣಾ ತಯಾರಿ ಸಂಬಂಧವೂ ಮಾತುಕತೆ ನಡೆಯಲಿದೆ.

ಇದನ್ನೂ ಓದಿ: Karnataka Budget: 2023-24ನೇ ಸಾಲಿನ ಬಜೆಟ್​ಗೆ ಸಿಎಂ ಸಿದ್ದರಾಮಯ್ಯ ಕಸರತ್ತು: 3 ಹೊರೆಗಳ ತಲೆನೋವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.