ETV Bharat / state

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದು ಪೈಸೆಯೂ ಹೆಚ್ಚುವರಿ ತೆರಿಗೆ ಹಾಕದೆ ಬಜೆಟ್​ ಮಂಡನೆ: ಸಿಎಂ

author img

By

Published : Mar 8, 2021, 10:38 AM IST

Updated : Mar 8, 2021, 3:41 PM IST

2021-22ನೇ ಸಾಲಿನ ರಾಜ್ಯ ಬಜೆಟ್​ಗೆ ಕ್ಷಣಗಣನೆ
2021-22ನೇ ಸಾಲಿನ ರಾಜ್ಯ ಬಜೆಟ್​ಗೆ ಕ್ಷಣಗಣನೆ

15:35 March 08

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದು ಪೈಸೆಯೂ ಹೆಚ್ಚುವರಿ ತೆರಿಗೆ ಹಾಕದೆ ಬಜೆಟ್​ ಮಂಡನೆ: ಸಿಎಂ

ಪ್ರವಾಹ, ಕೊರೊನಾ ಕಾರಣ ಇಡೀ ರಾಜ್ಯ ತಲ್ಲಣಗೊಂಡಿತ್ತು. ಲಾಕ್​ಡೌನ್​ನಿಂದ ಆರ್ಥಿಕ ಚಟುವಟಿಕೆ ನಡೆಯದೇ ಆದಾಯ ಸಂಗ್ರಹಣೆಗೂ ದೊಡ್ಡ ಪೆಟ್ಟು ಬಿದ್ದಿದೆ. 2020-21 ನೇ ಸಾಲಿನ ಆರ್ಥಿಕ ಸಾಧನೆ ಮಾರ್ಚ್​ ಕೊನೆಯವರೆಗೆ ಅಂದಾಜು ಶೇ. 94 ರಷ್ಟಾಗುತ್ತೆ. ನಮ್ಮ ನಿರೀಕ್ಷೆ ಶೇ 80 ಇದೆ. ಆರ್ಥಿ ಇಲಾಖೆ ಪ್ರಕಾರ ಶೇ 94 ಎಂದಿದೆ. ವಿತ್ತೀಯ ಶಿಸ್ತಿನ ಜತೆ ಆರ್ಥಿಕ ಸ್ಥಿತಿ ಕಳೆದ ತ್ರೈ ಮಾಸಿಕದಲ್ಲಿ ಸುಧಾರಿಸಿದೆ. ಸಂಕಷ್ಟದ ಸವಾಲುಗಳಿಗೆ ಪರಿಹಾರವಾಗಬಲ್ಲ ಸಮತೋಲಿತ ಬಜೆಟ್ ಇದಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಪ್ರತಿಕೂಲ ಸ್ಥಿತಿಯಲ್ಲೂ ಸರ್ವ ವ್ಯಾಪಿ, ಸರ್ವ ಸ್ವರೂಪಿ ಬಜೆಟ್​ ನಿರ್ಮಿಸಲು ಪ್ರಯತ್ನಿಸಿದೆ. ಈ ವರ್ಷದ ಬಜೆಟ್​ ಗಾತ್ರ ಶೇ.3 ಕ್ಕಿಂತ ಹೆಚ್ಚಳವಾಗಿದೆ. ಇದೊಂದು ಜನಸ್ನೇಹಿ ಬಜೆಟ್​. ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಪೈಸೆಯೂ ಹೆಚ್ಚುವರಿ ತೆರಿಗೆ ಹಾಕದೆ ಬಜೆಟ್​ ಮಂಡಿಸಿದ್ದೇವೆ. ಎಲ್ಲ ವಲಯ, ಜಿಲ್ಲೆಗಳಿಗೆ ವಿಶೇಷ ಕಾರ್ಯಕ್ರಮ ನೀಡಿ ಸಮತೋಲನ ಕಾಯ್ದುಕೊಳ್ಳಲು ಪ್ರಯತ್ನಿಸಿದ್ದೇನೆ. ಯಾರಿಗೂ ಹೊರೆಯಾಗದ ಜನಸ್ನೇಹಿ ಬಜೆಟ್​ ಇದಾಗಿದೆ ಎಂದು ತಿಳಿಸಿದರು.

ಮಹಿಳಾ ದಿನದಂದು ಮಂಡಿಸಲಾಗದ ಬಜೆಟ್​ನಲ್ಲಿ ಅವರ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ. ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲ ಕಲ್ಪಿಸಿದ್ದೇವೆ. ದೇಶ ಕಟ್ಟುವ ಕಾಯಕಕ್ಕೆ ಈ ಮೂಲಕ ಸಾಥ್​ ನೀಡಿದ್ದೇವೆ. ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ಬಸ್ ಪಾಸ್, ಮಹಿಳಾ ಉದ್ಯಮಿಗಳಿಗೆ ಶೇ. 4ರ ಬಡ್ಡಿದರದಲ್ಲಿ ಸಾಲ ಮತ್ತು ಕಷ್ಟದ ಸಮಯದಲ್ಲೂ ಸಂಬಳ, ಪಿಂಚಣಿ, ಸಬ್ಸಿಡಿ ಸಕಾಲದಲ್ಲಿ ನಿರ್ವಹಿಸಲಾಗಿದೆ ಎಂದು ಹೇಳಿದರು. 

14:16 March 08

ಬಜೆಟ್​ ಮಂಡನೆ ಅಧಿವೇಶನ ಮುಕ್ತಾಯ

ಬಜೆಟ್​ ಮಂಡನೆ ಅಧಿವೇಶನ ಮುಕ್ತಾಯಗೊಂಡಿದೆ.

13:53 March 08

ಪ್ರವಾಸೋದ್ಯಮ ಇಲಾಖೆಗೆ 500 ಕೋಟಿ ಅನುದಾನ

ಹೊಸ ಹೈಬ್ರಿಡ್ ಬೀಜ ನೀತಿ ಜಾರಿಗೆ ಕ್ರಮ, ಸಾವಯವ ಕೃಷಿ ಉತ್ತೇಜನಕ್ಕೆ 500 ಕೋಟಿ ರೂ, ಪ್ರವಾಸೋದ್ಯಮ ಇಲಾಖೆಗೆ 500 ಕೋಟಿ ಅನುದಾನ, ಕಡಲತೀರ ಅಭಿವೃದ್ಧಿ. ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ, ಅನುದಾನದ್ರಾಕ್ಷಿ ಕೃಷಿಯ ಉತ್ತೇಜನಕ್ಕೆ ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್ ರಚಿಸಲು ಕ್ರಮ ಕೈಗೊಳ್ಳಲಾಗುವುದ. 

13:49 March 08

ಪೆಟ್ರೋಲ್‌, ಡೀಸೆಲ್‌ ತೆರಿಗೆಯಲ್ಲಿ ಯಥಾಸ್ಥಿತಿ: ಮುದ್ರಾಂಕ ಶುಲ್ಕ ಇಳಿಕೆ

2021-22ನೇ ಸಾಲಿನ ಬಜೆಟ್ ಗಾತ್ರ ಎರಡೂವರೆ ಲಕ್ಷ ಕೋಟಿ ರೂ. ಆಗಿದೆ. 35 ಲಕ್ಷದಿಂದ 45 ಲಕ್ಷ ರೂ.ಗಳವರೆಗಿನ ಫ್ಲ್ಯಾಟ್‌ಗಳ ಮುದ್ರಾಂಕ ಶುಲ್ಕ ಇಳಿಕೆ. ಮುದ್ರಾಂಕ ಶುಲ್ಕ ಶೇ.5ರಿಂದ ಶೇ.3ಕ್ಕೆ ಇಳಿಸಿದ ಸರ್ಕಾರ. ಪೆಟ್ರೋಲ್‌, ಡೀಸೆಲ್‌ ದರ ಯಥಾಸ್ಥಿತಿಯಲ್ಲಿದೆ. ತೆರಿಗೆ ಇಳಿಸುವ ನಿರೀಕ್ಷೆಯಲ್ಲಿದ್ದ ಜನರಿಗೆ ನಿರಾಸೆ

ಕೋವಿಡ್ ಸಂಕಷ್ಟದ ಹಿನ್ನೆಲೆ ರಾಜ್ಯಗಳಿಗೆ ನೀಡುವ ತೆರಿಗೆ ಪಾಲು ಕಡಿಮೆ ಮಾಡಲಾಗಿದೆ. ರಾಜ್ಯದ ಜಿಎಸ್​ಟಿ ಸಂಗ್ರಹಣೆ ಇಳಿಕೆ ಆಗಿರುತ್ತದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಮೇಲೆ ರಾಜ್ಯ ಸರ್ಕಾರ ವಿಧಿಸುವ ವ್ಯಾಟ್​ನಲ್ಲಿ ಯಾವುದೇ ಬದಲಾವಣೆ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

13:49 March 08

ರೈಲ್ವೆ ಯೋಜನೆಗಳಿಗೆ 3,991 ಕೋಟಿ ರೂಪಾಯಿ ಅನುದಾನ

ರೈಲ್ವೆ ಯೋಜನೆಗಳಿಗೆ 3,991 ಕೋಟಿ ರೂಪಾಯಿ ಅನುದಾನ, ರೈಲ್ವೆ ಯೋಜನೆಗಳ ಭೂಸ್ವಾಧೀನಕ್ಕಾಗಿ 2,260 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 384 ಕೋಟಿ ರೂ., ಹಾಸನ ವಿಮಾನ ನಿಲ್ದಾಣಕ್ಕೆ 175 ಕೋಟಿ ರೂ. ವಿಜಯಪುರ ವಿಮಾನ ನಿಲ್ದಾಣಕ್ಕೆ 220 ಕೋಟಿ ರೂ. ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಹೊಸದಾಗಿ 52 ಬಸ್‌ ಸ್ಟ್ಯಾಂಡ್‌ಗಳನ್ನು ಸ್ಥಾಪಿಸುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದು, ಉಪನಗರ ರೈಲು ಯೋಜನೆಗೆ ಸಾವಿರಾರು ಕೋಟಿ ರೂ. ಮೀಸಲಿಡಲಾಗಿದೆ.

13:48 March 08

ಸಮಗ್ರ ಗೋಸ‌ಂಕುಲ ಸಮೃದ್ಧಿ ಯೋಜನೆ ಜಾರಿ

ಗೋವುಗಳಿಗೆ ಸಮರ್ಪಕ ನೀರು ಮತ್ತು ಮೇವು ಒದಗಿಸಲು ಸಾಧ್ಯವಾಗದೇ ರೈತರು ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಸಿಎಂ ರೈತರ ಪರವಾಗಿ ಹಾಗೂ ಸಮಗ್ರ ಗೋಸ‌ಂಕುಲ ಸಮೃದ್ಧಿಗೆ ಪೂರಕವಾಗುವಂತಹ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಹೊರ ರಾಜ್ಯದ ದೇಶಿ ತಳಿಗಳಾದ ಗಿರ್, ಸಾಹಿವಾಲ್, ಒಂಗೋಲ್, ಥಾರ್ ಪಾರ್ಕರ್ ಮತ್ತು ದೇವಣಿ ತಳಿಗಳನ್ನು ಅಭಿವೃದ್ಧಿಪಡಿಸಿ ರಾಜ್ಯದ ರೈತರಿಗೆ ಪರಿಚಯಿಸುವ ಉದ್ದೇಶದಿಂದ ಸಮಗ್ರ ಗೋಸ‌ಂಕುಲ ಸಮೃದ್ಧಿ ಯೋಜನೆ ಜಾರಿ ಮಾಡಲಾಗಿದೆ. ಜೊತೆಗೆ ಪ್ರತಿ ಜಿಲ್ಲೆಗೆ ಒಂದರಂತೆ ಗೋ ಶಾಲೆ ಸ್ಥಾಪನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

13:48 March 08

ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕ್ಷೇತ್ರದಲ್ಲಿ 75 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಹಸಿರೆಲೆ ಗೊಬ್ಬರಕ್ಕೆ 10 ಕೋಟಿ, ಸಾವಯವ, ಸಿರಿಧಾನ್ಯ ಮಾರಾಟಕ್ಕೆ ಇ ಮಾರುಕಟ್ಟೆ ಪ್ರೈ. ಲಿಮಿಟೆಡ್, ಅಡಕೆ ಪರಿಹಾರ ಬೆಲೆ ಪ್ರೋತ್ಸಾಹಕ್ಕೆ 25 ಕೋಟಿ ರೂಪಾಯಿ ಘೋಷಿಸಿದ್ದಾರೆ.

13:48 March 08

8 ಜ್ಞಾನಪೀಠ ಪುರಸ್ಕೃತರು ಕಲಿತ ಶಾಲೆಗಳ ಅಭಿವೃದ್ಧಿಗೆ ಆದ್ಯತೆ

ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪನವರು 2 ಲಕ್ಷದ 43 ಸಾವಿರದ 734 ಕೋಟಿಯ 8ನೇ ರಾಜ್ಯ ಬಜೆಟ್​ ಮಂಡಿಸುತ್ತಿದ್ದು, ಸರ್ಕಾರಿ ಶಾಲೆಗಳ ಪೀಠೋಪಕರಣಕ್ಕೆ 50 ಕೋಟಿ ರೂಪಾಯಿ ಹಾಗೂ ಸ್ಮಾರ್ಟ್ ಕ್ಲಾಸ್ ರೂಂಗಳಿಗಾಗಿ 50 ಕೋಟಿ ರೂ.ಅನುದಾನ ಘೋಷಿಸಿದ್ದಾರೆ.

ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗುವಂತಹ 'ಸಾಮರ್ಥ್ಯ ಸಾರಥ್ಯ ಯೋಜನೆ' ಘೋಷಣೆ ಮಾಡಿದ್ದಾರೆ. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ವಾರ್ಷಿಕ 5 ಕೋಟಿ ರೂ. ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು, ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಸ್ಥಾಪನೆ ಮತ್ತು 8 ಜ್ಞಾನಪೀಠ ಪುರಸ್ಕೃತರು ಕಲಿತ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಜೆಟ್​ ಭಾಷಣದಲ್ಲಿ ಹೇಳಿದ್ದಾರೆ.

13:41 March 08

ಸಿದ್ದರಾಮಯ್ಯ ಸರ್ಕಾರದ ಅನುಗ್ರಹ ಯೋಜನೆ ಮುಂದುವರಿಕೆ

ಚಿತ್ರೀಕರಣ ಅನುಮತಿಗಾಗಿ ಸೇವಾ ಸಿಂಧೂ ಪೋರ್ಟಲ್ ಸ್ಥಾಪನೆ, ಸಿದ್ದರಾಮಯ್ಯ ಸರ್ಕಾರದ ಅನುಗ್ರಹ ಯೋಜನೆ ಮುಂದುವರಿಕೆ, ರಾಯಚೂರಿನಲ್ಲಿ ಸುಗಮ ಸಂಚಾರಕ್ಕೆ ರಿಂಗ್ ರೋಡ್, ಸಿದ್ದರಾಮಯ್ಯ ಕ್ಷೇತ್ರದ ಗುಳೇದ ಗುಡ್ಡದಲ್ಲಿ ಜವಳಿ ಪಾರ್ಕ್ ನಿರ್ಮಾಣ, ಮಲೆನಾಡು, ಕರಾವಳಿ ಭಾಗದಲ್ಲಿ ಕಾಲು ದಾರಿ ನಿರ್ಮಾಣ, ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.   ಮುಂದಿನ 5 ವರ್ಷದಲ್ಲಿ 5ಸಾವಿರ ಕೋಟಿ ಬಂಡವಾಳ ನಿರೀಕ್ಷೆ, ಮುಂದಿನ 5 ವರ್ಷಗಳಲ್ಲಿ 43 ಸಾವಿರ ನೇರ ಉದ್ಯೋಗ ಸೃಷ್ಟಿ, 60 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಸಾಮರ್ಥ್ಯವುಳ್ಳ ಐಸಿಯು ಸ್ಥಾಪನೆ, ದತ್ತಾಂಶ ಕೇಂದ್ರ ಸೈಬರ್ ಸುರಕ್ಷತೆಗೆ ಆದ್ಯತೆ , 16 ಹೊಸ ಬಸ್ ಡಿಪೋ ನಿರ್ಮಾಣ ಮಾಡಲಾಗುವುದು.

13:38 March 08

ಪೆಟ್ರೋಲ್​ ಮತ್ತು ಡೀಸೆಲ್ ರಾಜ್ಯದ ತೆರಿಗೆ ಹೆಚ್ಚಿಸದಿರಲು ತೀರ್ಮಾನ

ಪೆಟ್ರೋಲ್​ ಮತ್ತು ಡೀಸೆಲ್​ ಮೇಲೆ ವಿಧಿಸುವ ಕರ್ನಾಟಕ ಮಾರಾಟ ತೆರಿಗೆ (KST) ಸೇರಿದಂತೆ ಯಾವುದೇ ತೆರಿಗೆಯನ್ನು 2021-22 ನೇ ಸಾಲಿನಲ್ಲಿ ಹೆಚ್ಚಿಸದಿರಲು ತೀರ್ಮಾನ.

13:30 March 08

ಹೊಸ ಏರೋಸ್ಪೇಸ್​ ಮತ್ತು ರಕ್ಷಣಾ ನೀತಿ ಜಾರಿಗೆ ಕ್ರಮ

ಹೊನ್ನಾವರದ ಕಾಸರಕೋಡ ಬಂದರು ಪ್ರದೇಶಕ್ಕೆ ರಾಷ್ಟ್ರೀಯ ಹೆದ್ದಾರಿ-66 ಭಾರತಮಾಲಾ ಯೋಜನೆಯಡಿ 100 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಚತುಷ್ಪಥ ಸಂಪರ್ಕ ರಸ್ತೆ ನಿರ್ಮಿಸಲು ಕ್ರಮ. ಮಂಗಳೂರು-ಪಣಜಿ ನಡುವೆ ಜಲಮಾರ್ಗಗಳ ಅಭಿವೃದ್ಧಿ. ಕೇಂದ್ರ ಸರ್ಕಾರದ ರಾಷ್ಟ್ರೀಯ ಜಲಮಾರ್ಗಗಳ ಅಭಿವೃದ್ಧಿ. ಕೇಂದ್ರ ಸರ್ಕಾರದ ರಾಷ್ಟ್ರೀಯ ಜಲಮಾರ್ಗಗಳ ಪ್ರಾಧಿಕಾರದ ಧನಸಹಾಯದೊಂದಿಗೆ ಒಟ್ಟು 60 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಜಲಮಾರ್ಗಗಳ ಅಭಿವೃದ್ಧಿಗೆ ಕ್ರಮ. ಹೊಸ ಏರೋಸ್ಪೇಸ್​ ಮತ್ತು ರಕ್ಷಣಾ ನೀತಿ ಜಾರಿಗೆ ಕ್ರಮ.ಯಾದಗಿರಿ ಜಿಲ್ಲೆಯ ಕೆಡಚೂರಿನಲ್ಲಿ 1,478 ಕೋಟಿ ರೂ. ವೆಚ್ಚದಲ್ಲಿ ‘ಬಲ್ಕ್​ ಡ್ರಗ್​ ಪಾರ್ಕ್​’ ಹಾಗೂ ಮಂಗಳೂರಿನ ಗಂಜಿಮಠದಲ್ಲಿ 66 ಕೋಟಿ ರೂ. ವೆಚ್ಚದಲ್ಲಿ ‘ಪ್ಲಾಸ್ಟಿಕ್​ ಪಾರ್ಕ್​’ ಅಭಿವೃದ್ಧಿ. ಬೀದರ್​ನ ಕೃಷಿ ಉಪಕರಣ ತಯಾರಿಕಾ ಕ್ಲಸ್ಟರ್​ನಲ್ಲಿ ಬರುವ ಕಯಗಾರಿಕೆಗಳಿಗೆ ವಿಶೇಷ ಪ್ರೋತ್ಸಾಹಕ ಪ್ಯಾಕೇಜ್​ ಘೋಷಣೆ.  

13:16 March 08

ವಿಜಯನಗರ ನೂತನ ಜಿಲ್ಲೆಗೆ ವಿಶೇಷ ಆದ್ಯತೆ

ವಿಜಯನಗರ ನೂತನ ಜಿಲ್ಲೆಗೆ ಬಜೆಟ್​ನಲ್ಲಿ ವಿಶೇಷ ಆದ್ಯತೆ ನೀಡಲಾಗಿದೆ. ಮೂಲಸೌಕರ್ಯ ಒದಗಿಸಲು ಅನುದಾನ ಜಾರಿ. ನೌಕರರಿಗೆ ಸಿಗುವ ಸೌಲಭ್ಯ ಮಾಹಿತಿಗೆ HRMS-2 ಜಾರಿ, ನೌಕರರು ಮತ್ತು ಅವಲಂಬಿತರಿಗೆ ನಗದು ರಹಿತ ಶಸ್ತ್ರಚಿಕಿತ್ಸೆಗೆ ಅನುದಾನ, ಜ್ಯೋತಿ ಸಂಜೀವಿನಿ ಅಡಿ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಲಾಗುವುದು.

13:16 March 08

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1500 ಕೋಟಿ ರೂ. ಘೋಷಣೆ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1500 ಕೋಟಿ ರೂ. ಘೋಷಣೆ, ಡಾ.ಡಿ.ಎಂ ನಂಜುಂಡಪ್ಪ ವರದಿಯಂತೆ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ 3000 ಕೋಟಿ, ಕೃಷ್ಣಾ ಭಾಗ್ಯ ಜಲನಿಗಮಕ್ಕೆ 5600 ಕೋಟಿ ರೂ. ಘೋಷಣೆ ಮಾಡಲಾಗಿದೆ.

13:10 March 08

ಖಾಸಗಿ ಸಹಭಾಗಿತ್ವದಲ್ಲಿ 2,500 ಕೋಟಿ ವೆಚ್ಚದಲ್ಲಿ ಬೇಲೆಕೇರಿ ಬಂದರು

ಶಿರಸಿ ಸರ್ಕಾರಿ ಆಸ್ಪತ್ರೆಯನ್ನು 200 ಹಾಸಿಗೆಗಳ ಮೇಲ್ದರ್ದೆಜೆಗೆ, ಸಿದ್ಧಾಪುರದಲ್ಲಿ ಕೈಗಾರಿಕಾ ವಸಾಹತು ಸ್ಥಾಪನೆ, ಖಾಸಗಿ ಸಹಭಾಗಿತ್ವದಲ್ಲಿ 2,500 ಕೋಟಿ ವೆಚ್ಚದಲ್ಲಿ ಬೇಲೆಕೇರಿ ಬಂದರು ಅಭಿವೃದ್ಧಿ, ಕಡಲಧಾಮ ಸ್ಥಾಪನೆಗೆ 1 ಕೋಟಿ ಅನುದಾನ, ಕಾರವಾರ ಬಂದರಿಗೆ ಶಾಶ್ವತ ಅಗ್ನಿಶಾಮಕ ಉಪಕರಣಕ್ಕೆ 19 ಕೋಟಿ ರೂ ನೀಡಲಾಗುವುದು. ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ 31,028 ಕೋಟಿ ರೂ., ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 62,150 ಕೋಟಿ, ಆರ್ಥಿಕ ಮತ್ತು ಅಭಿವೃದ್ಧಿ ವಲಯಕ್ಕೆ 52,529 ಕೋಟಿ, ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 7,795 ಕೋಟಿ ರೂ., ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ 2,645 ಕೋಟಿ ರೂ. ಅನುದಾನ ನೀಡಲಾಗುವುದು.

13:07 March 08

ರಾಜ್ಯಾದಲ್ಲಿ 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ ಸ್ಥಾಪನೆ

ರೈಲ್ವೆ ಯೋಜನೆಗಳಿಗೆ 3,991 ಕೋಟಿ ರೂಪಾಯಿ ಅನುದಾನ, ರೈಲ್ವೆ ಯೋಜನೆಗಳ ಭೂಸ್ವಾಧಿನಕ್ಕಾಗಿ 2,260 ಕೋಟಿ ರೂಪಾಯಿ, ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗಾಗಿ 100 ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ, ರಾಜ್ಯಾದಲ್ಲಿ 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ ಸ್ಥಾಪನೆ ಮಾಡಲಾಗುವುದು.

13:02 March 08

ಮುದ್ರಾಂಕ ಶುಲ್ಕ ಶೇ.5 ರಿಂದ ಶೇ.3 ಕ್ಕೆ ಇಳಿಕೆ

ಮುದ್ರಾಂಕ ಶುಲ್ಕವನ್ನು ಶೇ.5 ರಿಂದ ಶೇ.3 ಕ್ಕೆ ಇಳಿಕೆ ಮಾಡಲಾಗಿದೆ. 2021-22ನೇ ಆರ್ಥಿಕ ಸಾಲಿನಲ್ಲಿ ನೋಂದಣಿ ಹಾಗೂ ಮುದ್ರಾಂಕ ಶುಲ್ಕದಿಂದ 12,655 ಕೋಟಿ ರುಪಾಯಿಯಷ್ಟು ತೆರಿಗೆ ಸಂಗ್ರಹಿಸುವ ಗುರಿ ಇಟ್ಟುಕೊಳ್ಳಲಾಗಿದೆ.

13:02 March 08

ಮನೆ ಬಾಗಿಲಿಗೆ ಮಾಶಾಸನ ಅಭಿಯಾನ ಆರಂಭ

ಸ್ವಾಮಿತ್ವ ಯೋಜನೆಗೆ 25 ಕೋಟಿ ರೂ ಅನುದಾನ, ವಿಜಯನಗರ ಜಿಲ್ಲೆಗೆ ವಿಶೇಷ ಅನುದಾನ, ಮನೆ ಬಾಗಿಲಿಗೆ ಮಾಶಾಸನ ಅಭಿಯಾನ ಆರಂಭ ಮಾಡಲಾಗುವುದು. ಕೈಗಾರಿಕಾ ಕಾರಿಡಾರ್ ಗಳ ಅಭಿವೃದ್ಧಿ, ನಗರ ಸ್ಥಳೀಯ ಸಂಸ್ಥೆಗಳಿಗೆ ಪ್ರತ್ಯೇಕ ತೆರಿಗೆ ಸ್ಲ್ಯಾಬ್ ನೀತಿ, ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ.

12:59 March 08

ಪರಿಶಿಷ್ಟ ಪಂಗಡದ ಆಶ್ರಮದ ಶಾಲೆಗಳಿಗೆ ವಾಲ್ಮೀಕಿ ಶಾಲೆಗಳೆಂದು ಮರು ನಾಮಕರಣ

ಜಿಲ್ಲಾ ಕೇಂದ್ರಗಳಲ್ಲಿ ಮೆಟ್ರಿಕ್ ನಂತರದ 50 ಹಾಸ್ಟೆಲ್ಸ್ ಸ್ಥಾಪನೆ ಮಾಡಲು 50 ಕೋಟಿ ರೂಪಾಯಿ ಅನುದಾನ ಘೋಷಣೆ, ಈ ಯೋಜನೆಯಿಂದ 5 ಸಾವಿರ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ. ರಾಜ್ಯದ 4 ವಿಭಾಗಗಳಲ್ಲಿ ಮುರಾರ್ಜಿ ವಸತಿ ಶಾಲೆ ಆರಂಭ. ಎಸ್​ಸಿ/ಎಸ್​ಟಿ ಉದ್ಯಮಿಗಳ ಸಹಾಯ ಧನ ಯೋಜನೆ ವಿಸ್ತರಣೆ ಮಾಡಲಾಗುವುದು. ಹೋಟೆಲ್, ಮಳಿಗೆ, ಫ್ರಾಂಚೈಸಿ ಸ್ಥಾಪಿಸಲು ಶೆಡ್ಯೂಲ್ ಬ್ಯಾಂಕ್​ಗಳಿಂದ 1 ಕೋಟಿ ರೂ. ಸಾಲ ಪಡೆಯಲು ಅವಕಾಶ ನೀಡಲಾಗುವುದು. ಪರಿಶಿಷ್ಟ ಪಂಗಡದ ಆಶ್ರಮದ ಶಾಲೆಗಳಿಗೆ ವಾಲ್ಮೀಕಿ ಶಾಲೆಗಳೆಂದು ಮರು ನಾಮಕರಣ ಮಾಡಲಾಗುವುದು. ಹಾಸನದಲ್ಲಿ ಬಿ.ಆರ್ ಅಂಬೇಡ್ಕರ್ ಸ್ಮಾರಕ ಭವನ ಸ್ಥಾಪನೆ ಮಾಡಲಾಗುವುದು.

12:59 March 08

ಮಹದಾಯಿ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಗೆ ಅನುದಾನ

ಮಹದಾಯಿ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಗೆ ಅನುದಾನ. ಮಹದಾಯಿ ಯೋಜನೆಗೆ 1,677 ಕೋಟಿ ರೂಪಾಯಿ ಅನುದಾನ, ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು ಮೊತ್ತಕ್ಕೆ ಅನುಮೋದನೆ. 21,474 ಕೋಟಿ ರೂಪಾಯಿ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ. ರಾಷ್ಟ್ರೀಯ ಯೋಜನೆ ಎಂದು ಘೋಷಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ. ಅಂತೆಯೇ, ಕೃಷ್ಣಾ ಭಾಗ್ಯ ಜಲನಿಗಮ 5600 ಕೋಟಿ ರೂ. ಅನುದಾನ, ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆಗೆ ಸರ್ಕಾರದ ನೆರವಿನ ಘೋಷಣೆ. ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗೆ ಕ್ರಮ. ವಿಶ್ವಬ್ಯಾಂಕ್ ನೆರವಿನ ಡ್ರಿಪ್ ಯೋಜನೆ ಅಡಿ 1500 ಕೋಟಿ ವೆಚ್ಚ. 58 ಆಣೆಕಟ್ಟುಗಳ ಪುನಶ್ಚೇತನ ಮತ್ತು ಅಭಿವೃದ್ಧಿಗೆ ಅನುದಾನ ನೀಡಲು ನಿರ್ಧಾರ.

12:58 March 08

ವನ್ಯಜೀವಿಗಳ ಸಂರಕ್ಷಣೆಗೂ ಕ್ರಮ

ಲೆಸ್ಸರ್ ಫ್ಲೋರಿಕನ್ ಪಕ್ಷಿ ಪ್ರಭೇದ ಸಂರಕ್ಷಣೆಗೆ 50 ಲಕ್ಷ ರೂಪಾಯಿ, ವನ್ಯಜೀವಿ ಸಫಾರಿ ಯೋಜನೆಗೆ 5 ಕೋಟಿ ರೂಪಾಯಿ ಅನುದಾನ, ಚಾಮರಾಜನಗರ ಜಿಲ್ಲೆ ಗೋಪಿನಾಥಂ ಬಳಿ ವನ್ಯಜೀವಿ ಸಫಾರಿ ಆರಂಭ, ಚಾಮರಾಜನಗರ ಜಿಲ್ಲೆಯ ಬೂದಿಪಡಗದಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ಆನೆ ಶಿಬಿರ ಆರಂಭ.

12:58 March 08

ಹೂವು, ಅರಶಿನ, ಮೆಣಸಿನಕಾಯಿ ಮಾರುಕಟ್ಟೆಗೆ ಉತ್ತಮ ಅನುದಾನ

ಪಿಎಸಿಎಸ್​ ಕಾರ್ಯಕ್ಷಮತೆ ಹೆಚ್ಚಳಕ್ಕೆ 198 ಕೋಟಿ ರೂಪಾಯಿ ನೀಡಲು ನಿರ್ಧಾರ. ಬೈಯಪ್ಪನಹಳ್ಳಿಯ 8 ಎಕರೆ ಜಮೀನಿನಲ್ಲಿ ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ 50 ಕೋಟಿ ರೂಪಾಯಿ ಅನುದಾನ. ಸಿಂಗೇನ ಅಗ್ರಹಾರದ ಗುಳಿಮಂಗಳ ಗ್ರಾಮದಲ್ಲಿ 42 ಎಕರೆ ಪ್ರದೇಶದಲ್ಲಿ ತರಕಾರಿ ಮಾರುಕಟ್ಟೆ. ಬಳ್ಳಾರಿ ಜಿಲ್ಲೆಯ ಆಲದಹಳ್ಳಿ ಗ್ರಾಮದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ. ಮೆಣಸಿನಕಾಯಿ ಬೆಳೆಗಾರಿಗೆ ಸ್ಪರ್ಧಾತ್ಮಕ ದರ ಒದಗಿಸಲು ಕ್ರಮ. ಬ್ಯಾಡಗಿ ಎಪಿಎಂಸಿಯಲ್ಲಿ ಆಧುನಿಕ ಗುಣ ವಿಶ್ಲೇಷಣಾಘಟಕ ನಿರ್ಮಾಣ. ಚಾಮರಾಜನಗರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಅರಿಶಿಣ ಮಾರುಕಟ್ಟೆ ನಿರ್ಮಿಸಲು ಯೋಚನೆ.

12:55 March 08

ತಾಯಂದಿರ ಎದೆ ಹಾಲಿನ ಬ್ಯಾಂಕ್ ಸ್ಥಾಪನೆಗೆ 2.5 ಕೋಟಿ ರೂ.

ತಾಯಂದಿರ ಎದೆ ಹಾಲಿನ ಬ್ಯಾಂಕ್ ಸ್ಥಾಪನೆಗೆ 2.5 ಕೋಟಿ ರೂ. ಅನುದಾನ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರಗಳಲ್ಲಿ ಒಟ್ಟು 234 ಕೆರೆ ತುಂಬಿಸುವ ಯೋಜನೆಗೆ 500 ಕೋಟಿ ಅನುದಾನ, 58 ಡ್ಯಾಂ ಗಳ ಪುನಶ್ಚೇತನ ಮತ್ತು ಅಭಿವೃದ್ಧಿ, ಎತ್ತಿನ ಹೊಳೆ ಯೋಜನೆಗೆ ಭೂ ಸ್ವಾಧೀನ ಪ್ರಕ್ರಿಯೆ, ಬೆಂಗಳೂರಿನ ಹೆಸರುಘಟ್ಟದಲ್ಲಿ ಥೀಮ್ ಪಾರ್ಕ್ ನಿರ್ಮಾಣ, ಮಹಾದಾಯಿ ಯೋಜನೆಗೆ 1677 ಕೋಟಿ ರೂ. ಅನುದಾನ, ಬೆಂಗಳೂರಿನ ಹೆಸರುಘಟ್ಟದಲ್ಲಿ ಥೀಮ್ ಪಾರ್ಕ್ ನಿರ್ಮಾಣ, ಮಹಾದಾಯಿ ಯೋಜನೆಗೆ 1677 ಕೋಟಿ ರೂ. ಅನುದಾನ ನೀಡಲಾಗುವುದು. ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂಪಾಯಿ, ಜೈನ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಅನುದಾನ, ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ 50 ಕೋಟಿ, ಖಾಸಗಿ ಸಹಭಾಗಿತ್ವದಲ್ಲಿ ಬಳ್ಳಾರಿಯಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ, ಕಬಿನಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ, ಪ್ರತಿ ಜಿಲ್ಲೆಗೆ ಒಂದು ಗೋ ಶಾಲೆ, ಕೊಪ್ಪಳದಲ್ಲಿ ನಾರಿ ಸುವರ್ಣ ಕುರಿ ಸಂವರ್ಧನ ಕೇಂದ್ರ, ಚಾಮರಾಜನಗರದಲ್ಲಿ ಅರಿಶಿಣ ಮಾರುಕಟ್ಟೆ ಸ್ಥಾಪಿಸಲಾಗುವುದು.

12:51 March 08

ಬೆಂಗಳೂರಿಗೆ ನೀರು, ವಿದ್ಯುತ್‌ಗಾಗಿ 9 ಕೋಟಿ ಅನುದಾನ

ಬೆಂಗಳೂರಿಗೆ ನೀರು, ವಿದ್ಯುತ್‌ಗಾಗಿ 9 ಕೋಟಿ ಅನುದಾನ. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ನೀಡಲಾಗುವುದು. ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ, ಮೂಲ್ಕಿಯಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರಕ್ಕೆ 2 ಕೋಟಿ, ಕುಳಾಯಿಯಲ್ಲಿ ಮೀನು ರಫ್ತು ಸ್ಥಾವರ ನಿರ್ಮಾಣಕ್ಕೆ 12.50 ಕೋಟಿ, ಹೆಜಮಾಡಿಯಲ್ಲಿ ಮೀನುಗಾರಿಕಾ ಬಂದರಿಗೆ 181 ಕೋಟಿ ರೂ., ಹಂಗಾರಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂ., ಕಾರ್ಕಳದಲ್ಲಿ ಜವಳಿ ಪಾರ್ಕ್‌ ನಿರ್ಮಾಣಕ್ಕೆ ಕ್ರಮ, ತೆಂಗಿನಗುಂಡಿ ಬಂದರಿನ ಅಳಿವೆ ಹೂಳೆತ್ತಲು 85 ಕೋಟಿ ರೂ., ಕೊಡೇರಿ ಬಂದರು ಅಭಿವೃದ್ಧಿಗೆ 2 ಕೋಟಿ ಅನುದಾನ ನೀಡಲಾಗುವುದು.

12:49 March 08

ಆದಾಯ ಸಂಗ್ರಹ ಗುರಿ:

ವಾಣಿಜ್ಯ ತೆರಿಗೆಗಳಿಂದ 76,473 ಸಾವಿರ ಕೋಟಿ ಆದಾಯ, ಅಬಕಾರಿ ಇಲಾಖೆಯಿಂದ 24,580 ಕೋಟಿ ರೂ., ನೋಂದಣಿ ಮತ್ತು ಮುದ್ರಾಂಕ ಶುಲ್ಕ ದಿಂದ 12,655 ಕೋಟಿ ರೂ., ಮೋಟಾರು ವಾಹನ ತೆರಿಗೆಯಿಂದ 7,515 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ಹೊಂದಲಾಗಿದೆ.

12:45 March 08

ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ

ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ಹೆಚ್ಚಳ, ಶೇಕಡಾ 40 ರಿಂದ 50ಕ್ಕೆ ಮೀಸಲಾತಿ ಹೆಚ್ಚಳ ಮಾಡಲಾಗುವುದು. 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು, ಮಹಿಳಾ ಸ್ವಯಂ ಸೇವಾ ಸಂಘಗಳ ಉತ್ಪನ್ನಗಳಿಗೆ ಮಾರುಕಟ್ಟೆ. 16 ಬಸ್‌ ಡಿಪೋಗಳನ್ನು ಆರಂಭಿಸಲಾಗುವುದು. ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ. ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು. ಜಗಜ್ಯೋತಿ ಬಸವಣ್ಣ ಜನ್ಮ ಸ್ಥಳ ಅಭಿವೃದ್ಧಿಗಾಗಿ 5 ಕೋಟಿ ಮೀಸಲು ಇಡಲಾಗುವುದು.

12:44 March 08

ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣ

ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುವುದು. ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣ ಮಾಡಲು 10 ಕೋಟಿ ರೂಪಾಯಿ, ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ. ನೀಡಲಾಗುವುದು. ಎಸ್.ಎಲ್.ಭೈರಪ್ಪ ಅವರ ಪರ್ವ ನಾಟಕವನ್ನು ರಾಜ್ಯಾದ್ಯಂತ ರಂಗಾಯಣಗಳ ಮೂಲಕ ನಾಟಕ ಪ್ರದರ್ಶನಕ್ಕೆ 1 ಕೋಟಿ ಘೋಷಿಸಲಾಗಿದೆ.

12:43 March 08

ಕ್ರಿಶ್ಚಿಯನ್​ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಒತ್ತು

ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ, ಅಲ್ಪಸಂಖ್ಯಾತರಿಗೆ 1,500 ಕೋಟಿ ರೂ ಮೀಸಲು ಇರಿಸಲಾಗುವುದು. ಅಂತೆಯೇ ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ ನಿಗಮ ಸ್ಥಾಪಿನೆ. ನಿಗಮದ ಚಟುವಟಿಕೆಗೆ 500 ಕೋಟಿ ರೂಪಾಯಿ ಮೀಸಲು ಇಡಲಾಗುವುದು.

12:42 March 08

ಬಜೆಟ್ ಇಲಾಖೆವಾರು ಅನುದಾನ ಹಂಚಿಕೆ ವಿವರ

ಶಿಕ್ಷಣ ಇಲಾಖೆಗೆ 29,688 ಕೋಟಿ, ಜಲಸಂಪನ್ಮೂಲಕ್ಕೆ 21ಸಾವಿರ ಕೋಟಿ, ಇಂಧನಕ್ಕೆ 16,515 ಕೋಟಿ, ಗ್ರಾಮೀಣ ಅಭಿವೃದ್ಧಿಗೆ 15 ಸಾವಿರ ಕೋಟಿ ರೂ, ನಗರಾಭಿವೃದ್ಧಿಗೆ 27,386 ಕೋಟಿ ರೂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 11,908 ಕೋಟಿ ರೂ., ಲೋಕೋಪಯೋಗಿ ಇಲಾಖೆಗೆ 10,256 ಕೋಟಿ ರೂ ಅನುದಾನ ಹಂಚಿಕೆ ಮಾಡಲಾಗಿದೆ. 

12:39 March 08

2021-22 ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ

2021-22 ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 2 ಲಕ್ಷದ 43 ಸಾವಿರದ 734 ಕೋಟಿ ಆಗಿದೆ. 5 ವಲಯಗಳಾಗಿ ವಿಂಗಡನೆ ಮಾಡಿ ಬಜೆಟ್​ ಮಂಡನೆ.

12:37 March 08

ಇಟ್ಟಂಗಿಹಾಳದಲ್ಲಿ ಆಹಾರ ಪಾರ್ಕ್ ನಿರ್ಮಾಣ

ಇಟ್ಟಂಗಿಹಾಳದಲ್ಲಿ ಆಹಾರ ಪಾರ್ಕ್ ನಿರ್ಮಾಣ, ಆದಿಚುಂಚನಗಿರಿ ಮಠಕ್ಕೆ 10 ಕೋಟಿ ರೂಪಾಯಿ, ಮಂಡ್ಯ ಸ್ಟೇಡಿಯಂಗೆ 10 ಕೋಟಿ ರೂಪಾಯಿ, ಬಸವಕಲ್ಯಾಣಕ್ಕೆ 200 ಕೋಟಿ ರೂ. ಆಧುನಿಕ ಕೃಷಿ, ಯಂತ್ರೋಪಕರಣ ಪೂರಯಸಲಾಗುವುದು. ಕೃಷಿ ಯಾಮತ್ರೀಕರಣ ಯೋಜನೆ ಅಡಿ ಟ್ರ್ಯಾಕ್ಟರ್​ ವಿತರಿಸಲಾಗುವುದು. ಇ ಮಾರುಕಟ್ಟೆ ಪೈ. ಲಿಮಿಟೆಡ್ ವ್ಯವಸ್ಥೆ. 

ಆತ್ಮನಿರ್ಭರ ಭಾರತದಡಿ ಶೆ 35 ಸಹಾಯಧನ ನೀಡಲಾಗುವುದು. ಶೇ 50 ಕ್ಕೆ ಸಹಾಯಧನ ಹೆಚ್ಚಳ. ಈ ಯೋಜನೆಗೆ 50 ಕೋಟಿ ಹಂಚಿಕೆ ಮಾಡಲಾಗುವುದು. ಬ್ಯಾಡಗಿ ಮೆಣಸಿನಕಾಯಿಗಾಗಿ ಗುಣ ವಿಶ್ಲೇಷಣಾ ಘಟಕ ಸ್ಥಾಪನೆ, ಸಾವಯವ ಕೃಷಿಗೆ 500 ಕೋಟಿ ರೂಪಾಯಿ.  

12:30 March 08

ಮಹಿಳೆಯರಿಗೆ ವಿಶೇಷ ಯೋಜನೆಗಳು

ಜಿಲ್ಲಾ ಕೇಂದ್ರಗಳಲ್ಲಿ 2 ಶಿಶುಪಾಲನಾ ಕೇಂದ್ರಗಳು, ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ ಒದಗಿಸಲಾಗುತ್ತದೆ. ಮಹಿಳಾ ಉದ್ಯಮಿಗಳಿಗೆ ಶೇ 4 ರ ಬಡ್ಡಿದರದಲ್ಲಿ 2 ಕೋಟಿ ವರೆಗೆ ಸಾಲ, ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್​ಲೈನ್​ ಮಾರುಕಟ್ಟೆ ವ್ಯವಸ್ಥೆ. ವನಿತಾ ಸಂಗಾತಿ ಹೆಸರಿನಲ್ಲಿ ಬಸ್​ಪಾಸ್​ ನೀಡಲಾಗುವುದು. ಮಹಿಳೆಯರ ಸುರಕ್ಷತೆ ಹೆಚ್ಚಳ ಮಾಡಲಾಗುವುದು. ನಿರ್ಭಯಾ ಯೋಜನೆ ಅಡಿಯಲ್ಲಿ 7,500 ಸಿಸಿಟಿವಿ ಅಳವಡಿಕೆ. ಮಹಿಳೆಯರ ಅಭಿವೃದ್ಧಿಗೆ 37,000 ಕೋಟಿ ಮೀಸಲು ನೀಡುತ್ತೇವೆ.

ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ. ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ. ಈ ಬಾರಿ ಯಾವುದೇ ತೆರಿಗೆ ವಿಧಿಸದಿರಲು ನಿರ್ಧಾರ. ನೋಂದಣಿ, ಮುದ್ರಾಂಕ ಶುಲ್ಕ ಶೇ.5ರಿಂದ 3ಕ್ಕೆ ಇಳಿಕೆ. ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ವನಿತಾ ಸಂಗಾತಿ ಬಸ್ ಪಾಸ್ ವ್ಯವಸ್ಥೆ. ಅಬಕಾರಿ ತೆರಿಗೆ ಹೆಚ್ಚಳ ಇಲ್ಲ. ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ ರೂಪಾಯಿವರೆಗಿನ ಫ್ಲ್ಯಾಟ್ ಖರೀದಿಗೆ ಮುದ್ರಾಂಕ ಶುಲ್ಕ ಇಲ್ಲ. ಯಶವಂತಪುರ ಎಪಿಎಂಸಿ ಮೇಲ್ದರ್ಜೆಗೆ ಏರಿಕೆ, ಭದ್ರಾ ಮೇಲ್ದಂಡೆ ಯೋಜನೆಗೆ 21,477 ಕೋಟಿ ರೂಪಾಯಿ ಅನುದಾನ. ಸಿಂಗೇನ ಅಗ್ರಹಾರದಲ್ಲಿ ತರಕಾರಿ ಮಾರುಕಟ್ಟೆ, ಗೋದಾಮು ಮತ್ತು ಅಂಗಡಿ ನಿರ್ಮಾಣಕ್ಕೆ ಅನುದಾನ. ಮಹಿಳಾ ಉದ್ಯೋಗಿಗಳಿಗೆ 6 ತಿಂಗಳು ಪ್ರಸೂತಿ ರಜೆ. 

12:23 March 08

2020-21 ರಲ್ಲಿ ಕೊರೊನಾ ಲಾಕ್​ಡೌನ್​ನಿಂದ ಆರ್ಥಿಕ ಚಟುವಟಿಕೆ ಸ್ತಬ್ಧ

  • 2020-21 ರಲ್ಲಿ ಕೊರೊನಾ ಲಾಕ್​ಡೌನ್​ನಿಂದ ಆರ್ಥಿಕ ಚಟುವಟಿಕೆ ಸ್ತಬ್ಧ
  • ರಾಜ್ಯಗಳಿಗೆ ಕಡಿಮೆ ತೆರಿಗೆ ಪಾಲಿ ನೀಡಿದ ಕೇಂದ್ರ ಸರ್ಕಾರ
  • ಜಿಎಸ್​ಟಿ ಸಂಗ್ರದಲ್ಲಿ ಇಳಿಕೆ ಕಂಡಿದೆ
  • ಕೇಂದ್ರ ರಾಜ್ಯಗಳಿಗೆ ಜಿಎಸ್​ಟಿ ಮೇಲೆ ಶೇ.5 ರ ವರೆಗೆ ಸಾಲಕ್ಕೆ ಅನುಕೂಲ
  • ಕೋವಿಡ್ ಕಾಲದಲ್ಲಿ ಕಲಿತ ಪಾಠ ಸ್ಮರಣೀಯವಾಗಿದೆ
  • ಕೋವಿಡ್ ವಾರಿಯರ್ಸ್​ಗೆ ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದ ಬಿ.ಎಸ್.ಯಡಿಯೂರಪ್ಪ
  • ಕೋವಿಡ್​ನಿಂದಾಗಿ ಇಡೀ ಆರ್ಥಿಕ ವ್ಯವಸ್ಥೆ ಬುಡಮೇಲಾಗಿದೆ
  • ಅತಿವೃಷ್ಠಿ, ಅನಾವೃಷ್ಠಿ ನಿರಂತರ ಸವಾಲಾಗಿದೆ
  • ಪಿಪಿಇ ಕಿಟ್ ಉತ್ಪಾದನೆಯಲ್ಲಿ ಹೆಚ್ಚಳ ಮಾಡಲಾಗಿದೆ
  • 2 ಕೋಟಿ ರೂಪಾಯಿಗಳವರೆಗೆ  ಮಹಿಳಾ ಉದ್ಯಮಿಗಳಿಗೆ ಶೇ. 4ರ ಬಡ್ಡಿದರದಲ್ಲಿ ಸಾಲ
  • ಜಿಲ್ಲಾ ಕೇಂದ್ರಗಳಲ್ಲಿ ಎರಡು ಶಿಶಿಪಾಲನಾ ಕೇಂದ್ರಗಳ ಸ್ಥಾಪನೆ
  • ಕೋವಿಡ್ ಗೆ ಉಚಿತ ಚಿಕಿತ್ಸೆ ನೀಡಲಾಗಿದೆ
  • ಕೋವಿಡ್ ಲಸಿಕೆ ಹಂಚಿಕೆಯಲ್ಲಿ ರಾಷ್ಟ್ರದ ಗಮನ ಸೆಳೆದಿದ್ದೇವೆ.
  • ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ
  • ಪೊಲೀಸ್ ಠಾಣೆಗಳಲ್ಲಿ 7,500 ಸಿಸಿ ಕ್ಯಾಮರಾ ಅಳವಡಿಕೆ  
  • ಕಲಾಪದಲ್ಲಿ ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿಕೆ

12:18 March 08

2021-22 ನೇ ಸಾಲಿನ ಬಜೆಟ್​ ಮಂಡನೆ

  • 2021-22 ನೇ ಸಾಲಿನ ಬಜೆಟ್​ ಮಂಡನೆ
  • ಸಿಎಂ ಯಡಿಯೂರಪ್ಪರಿಂದ ಆಯವ್ಯಯ ಮಂಡನೆ
  • ವಿಧಾನಸಭೆ ಬಜೆಟ್‌ ಅಧಿವೇಶನ ಆರಂಭ

12:13 March 08

ಸರ್ಕಾರದ ಸಾಧನೆಗಳನ್ನು ವಿವರಿಸುತ್ತಿರುವ ಸಿಎಂ ಯಡಿಯೂರಪ್ಪ

  • ಬಜೆಟ್​ ಮಂಡನೆ ಆರಂಭಿಸಿದ ಸಿಎಂ ಯಡಿಯೂರಪ್ಪ
  • ಕೊರೊನಾ ಸಂಕಷ್ಟ ಒಂದು ದುಃಸ್ವಪ್ನ
  • ಸಂಕಷ್ಟದ ನಡುವೆಯೂ ಸರ್ಕಾರ ಕೆಲಸ ಮಾಡಿದೆ
  • ಸರ್ಕಾರದ ಸಾಧನೆಗಳನ್ನು ವಿವರಿಸುತ್ತಿರುವ ಸಿಎಂ ಯಡಿಯೂರಪ್ಪ

12:08 March 08

ಸಭಾತ್ಯಾಗ ಮಾಡಿದ ಕಾಂಗ್ರೆಸ್​ ಸದಸ್ಯರು

  • ಸಿಎಂ ಯಡಿಯೂರಪ್ಪರಿಂದ ಬಜೆಟ್​ ಮಂಡನೆ ಆರಂಭ
  • ಸಭಾತ್ಯಾಗ ಮಾಡಿದ ಕಾಂಗ್ರೆಸ್​ ಸದಸ್ಯರು
  • ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಭಾತ್ಯಾಗ
  • ಕಾಂಗ್ರೆಸ್​ ಸಭಾತ್ಯಾಗಕ್ಕೆ ಬಿಜೆಪಿ ಸದಸ್ಯರ ಆಕ್ರೋಶ

12:05 March 08

ಕರ್ನಾಟಕ ಬಜೆಟ್​ ಅಧಿವೇಶನ ಆರಂಭ: ಕಪ್ಪುಪಟ್ಟಿಕೊಂಡು ಸದನಕ್ಕೆ ಬಂದ ಕೈ ನಾಯಕರು

  • ಕರ್ನಾಟಕ ಬಜೆಟ್​ ಅಧಿವೇಶನ ಆರಂಭ
  • ಕಪ್ಪುಪಟ್ಟಿಕೊಂಡು ಸದನಕ್ಕೆ ಬಂದ ಕೈ ನಾಯಕರು
  • ವಿರೋಧದ ನಡುವೆಯೂ ಬಜೆಟ್​ ಮಂಡಿಸುತ್ತಿರುವ ಸಿಎಂ

11:47 March 08

ಸಚಿವ ಸಂಪುಟ ಸಭೆಯಲ್ಲಿ ಬಜೆಟ್​ಗೆ ಅನುಮೋದನೆ

  • ಸಚಿವ ಸಂಪುಟ ಸಭೆಯಲ್ಲಿ ಬಜೆಟ್​ಗೆ ಅನುಮೋದನೆ 
  • ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆ
  • ಬಜೆಟ್​ಗೂ ಮುನ್ನ ನಡೆದ ಸಚಿವ ಸಂಪುಟ ಸಭೆ
  • ಸಭೆಯಲ್ಲಿ ಬಜೆಟ್​ಗೆ ಅನುಮೋದನೆ ಪಡೆದ ಸಿಎಂ ಯಡಿಯೂರಪ್ಪ
  • ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ

11:38 March 08

ಬಜೆಟ್​ನಿಂದ ಸಭಾತ್ಯಾಗ ಮಾಡುತ್ತೇವೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: 2021-22 ಕ್ಕೆ ರಾಜ್ಯ ಬಜೆಟ್​ ಮಂಡಿಸಲು ಅಧಿವೇಶನ ಕರೆದಿದ್ದಾರೆ. ಈ ರಾಜ್ಯ ಸರ್ಕಾರಕ್ಕೆ ಆಯವ್ಯಯ ಮಂಡಿಸಲು ಯಾವುದೇ ನೈತಿಕತೆ ಇಲ್ಲ. ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಸಿಎಂ ಯಡಿಯೂರಪ್ಪ ಮತ್ತು ಸಚಿವ ನಿರಾಣಿ ಹೌಸಿಂಗ್​ ಬೋರ್ಡ್​  ಪ್ರಕರಣವೊಂದರ ಸಂಬಂಧ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಪ್ರಕರಣದ ತನಿಖೆಗೆ ಹೈಕೋರ್ಟ್​ ಆದೇಶಿಸಿತ್ತು. ಇದಕ್ಕೆ ಜ.27 ರಂದು  ಸುಪ್ರೀಂ ಕೋರ್ಟ್​ನಲ್ಲಿ ಹೈಕೋರ್ಟ್​ ಆದೇಶಕ್ಕೆ ಸ್ಟೇ ಕೇಳಿ ಅಪೀಲು ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಇದನ್ನು​ ನಿರಾಕರಿಸಿತು. ಈ ವೇಳೆ ಪೊಲೀಸರು ಇವರನ್ನು ಬಂಧಿಸಬಹುದಿತ್ತು. ಆದರೆ, ಸಿಎಂ ಅವರನ್ನು ಬಂಧಿಸಲು ಸಾಧ್ಯವೇ ಎಂದು ಸುಪ್ರೀಂ ನ್ಯಾಯಮೂರ್ತಿ ಹೇಳಿದರು. ಹೀಗಾಗಿ ಸದನದಲ್ಲಿ ಸಿಎಂ ಬೇಲ್​ ಮೇಲಿದ್ದಾರೆ ಎಂದಿದ್ದು. ಅದಕ್ಕೆ ಬಿಎಸ್​ವೈ ನನ್ನ ಪ್ರಕಾರ ಇಬ್ಬರು ಸದ್ಯ ನಿರೀಕ್ಷಣಾ ಜಾಮೀನಿನ ಮೇಲಿದ್ದಾರೆ ಎಂದರು.  

ಸಚಿವ ಹೆಬ್ಬಾರ್, ಬಿ.ಸಿ.ಪಾಟೀಲ್. ಬೈರತಿ ಬಸವರಾಜ್, ಸುಧಾಕರ್, ಸೋಮಶೇಖರ್, ನಾರಾಯಣ ಗೌಡ ಸೇರಿ 6 ಮಂತ್ರಿಗಳು ಸಿಡಿ ಪ್ರಕರಣದ ಬಳಿಕ ಭಯದಿಂದ ಓಡಿಹೋಗಿದ್ದಾರೆ. ಯಾಕೆ ಇವರಿಗೆ ಭಯ. ಹೆದರಿಕೆ ಬರಬೇಕೆಂದರೆ ಇವರು ಗಿಲ್ಟಿಯಾಗಿರಬೇಕು. ಏನೋ ಇರಬಹುದು. ಕುಂಬಳ ಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಳ್ಳುವ ಹಾಗೆ, ಇವರು ಮಾಧ್ಯಮಗಳಲ್ಲಿ ಸುದ್ದಿ ಪ್ರಚಾರ ಮಾಡದಂತೆ ನ್ಯಾಯಾಯಕ್ಕೆ ಮನವಿ ಮಾಡಿದ್ದಾರೆ. ಇದು ಮಾಧ್ಯಮಗಳ ಸ್ವಾತಂತ್ರ್ಯ ಹರಣ. ಸಿಡಿ ಇವೆ ಸಿಕ್ಕು ಬಿಡುತ್ತವೆ ಟೆಲಿಕಾಸ್ಟ್​ ಮಾಡಬೇಡಿ ಎಂಬುದೇ ಅವರ ಉದ್ದೇಶ ಎಂದು ವ್ಯಂಗ್ಯವಾಡಿದರು.

ಈ ಸರ್ಕಾರ ಅನೈತಿಕತೆಯ ಮೂಟೆ ಹೊತ್ತುಕೊಂಡಿದೆ. ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ಯಡಿಯೂರಪ್ಪ ಸೇರಿ ಅನೇಕ ಸಚಿವರಿಗೆ ನೈತಿಕತೆಯಿಲ್ಲ. ಸರ್ಕಾರದಲ್ಲಿ ಸಿಎಂ ಹಾಗೂ ಮಂತ್ರಿ ಸ್ಥಾನಗಳಲ್ಲಿ ಮುಂದುವರೆಯಲು ನೈತಿಕತೆಯಿಲ್ಲ. ಎಲ್ಲರೂ ರಾಜೀನಾಮೆ ನೀಡಬೇಕು. ನಾವು ಬಜೆಟ್​ ವೇಳೆ ಸಭಾತ್ಯಾಗ ಮಾಡುತ್ತೇವೆ ಎಂದರು.

11:13 March 08

ಸಿಎಂ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ

  • ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭ
  • ಸಿಎಂ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ  
  • ಬಜೆಟ್​ಗೆ ಅನುಮೋದನೆ ಪಡೆಯಲಿರುವ ಸಿಎಂ

11:06 March 08

ಬಜೆಟ್ ಪ್ರತಿಯ ಸೂಟ್​​​ಕೇಸ್ ಜತೆ ವಿಧಾನಸೌಧಕ್ಕೆ ತೆರಳಿದ ಸಿಎಂ

ಬಜೆಟ್ ಪ್ರತಿಯ ಸೂಟ್ ಕೇಸ್ ಜತೆ ವಿಧಾನಸೌಧಕ್ಕೆ ತೆರಳಿದ ಸಿಎಂ
ಬಜೆಟ್ ಪ್ರತಿಯ ಸೂಟ್ ಕೇಸ್ ಜತೆ ವಿಧಾನಸೌಧಕ್ಕೆ ತೆರಳಿದ ಸಿಎಂ

ಬೆಂಗಳೂರು: ಆರ್ಥಿಕ ಇಲಾಖೆಯಿಂದ ಬಜೆಟ್ ಪ್ರತಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ವೀಕಾರ ಮಾಡಿದ್ದು, ಬಜೆಟ್ ಪ್ರತಿಯ ಸೂಟ್​​​​ಕೇಸ್ ಅನ್ನು ನಗುಮೊಗದೊಂದಿಗೆ ಮಾಧ್ಯಮಗಳತ್ತ ತೋರಿಸಿ ಉತ್ತಮ ಬಜೆಟ್ ನೀಡುವ ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ನಿವಾಸ ಕಾವೇರಿಗೆ ಆರ್ಥಿಕ ಇಲಾಖೆ ಅಧಿಕಾರಿ ಐಎನ್​ಎಸ್ ಪ್ರಸಾದ್ ಆಗಮಿಸಿ, ಬಜೆಟ್ ಪ್ರತಿಯನ್ನು ಹೊಂದಿದ್ದ ಸೂಟ್ ಕೇಸ್ ಅನ್ನು ಸಿಎಂ‌ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು. ಬಜೆಟ್ ಪ್ರತಿಯನ್ನು ಸಂಪ್ರದಾಯದಂತೆ ಸ್ವೀಕಾರ ಮಾಡಿದ ಸಿಎಂ ನಂತರ ಮಾಧ್ಯಮಗಳತ್ತ ತೋರಿಸಿದರು.

ಸರಿಯಾಗಿ 12.05 ಕ್ಕೆ ಬಜೆಟ್ ಮಂಡಿಸುತ್ತೇನೆ. ಅದಕ್ಕೂ 15 ನಿಮಿಷ ಮೊದಲು ಸಚಿವ ಸಂಪುಟ ಸಭೆ ನಡೆಸಿ, ಅನುಮೋದನೆ ಪಡೆಯುತ್ತೇನೆ. ಬಜೆಟ್ ಅಂಗವಾಗಿ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ. ಉತ್ತಮ ಬಜೆಟ್ ಮಂಡಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.  

ದೇಗುಲ ಭೇಟಿ: ಬಜೆಟ್ ಪ್ರತಿಯೊಂದಿಗೆ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಿಎಂ ನಂತರ ವಿಧಾನಸೌಧಕ್ಕೆ ತೆರಳಿದರು. 

10:40 March 08

ಬಜೆಟ್‌ನಲ್ಲಿ ವಿಶೇಷವಾಗಿ ಮಹಿಳೆಯರಿಗೆ ಆದ್ಯತೆ ನೀಡಿದ್ದೇವೆ - ಸಿಎಂ

ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಿಎಂ
ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಿಎಂ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಸಿಎಂ ಶುಭಾಶಯ

ಬಜೆಟ್‌ನಲ್ಲಿ ವಿಶೇಷವಾಗಿ ಮಹಿಳೆಯರಿಗೆ ಆದ್ಯತೆ ನೀಡಿದ್ದೇವೆ  

ಬಜೆಟ್ ಅಂಗವಾಗಿ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ  

ಉತ್ತಮ ಬಜೆಟ್ ಮಂಡಿಸುತ್ತೇವೆ  

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ

10:26 March 08

ಬಜೆಟ್ ಕರಡು ಪ್ರತಿಯೊಂದಿಗೆ ಸಿಎಂ ನಿವಾಸಕ್ಕೆ ಅಧಿಕಾರಿಗಳ ಆಗಮನ

ಸಿಎಂ ನಿವಾಸಕ್ಕೆ ಅಧಿಕಾರಿಗಳ ಆಗಮನ
  • ರಾಜ್ಯ ಬಜೆಟ್ ಮಂಡಿಸಲಿರುವ ಸಿಎಂ ಬಿಎಸ್​ವೈ
  • ಕಾವೇರಿ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು
  • ಬಜೆಟ್ ಕರುಡು ಪ್ರತಿಯೊಂದಿಗೆ ಸಿಎಂ ನಿವಾಸಕ್ಕೆ ಅಧಿಕಾರಿಗಳ ಆಗಮನ
  • ಆರ್ಥಿಕ ಇಲಾಖೆ ಹಿರಿಯ ಅಧಿಕಾರಿ ಐಎನ್​ಎಸ್​ ಪ್ರಸಾದ್
  • ಬಜೆಟ್ ಕರುಡು ಪ್ರತಿಯೊಂದಿಗೆ ಸಿಎಂ ನಿವಾಸಕ್ಕೆ ಬಂದ ಪ್ರಸಾದ್​
  • 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರ ಮಂಡನೆಗೆ ಕ್ಷಣಗಣನೆ
  • 8ನೇ ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಯಡಿಯೂರಪ್ಪ 

15:35 March 08

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದು ಪೈಸೆಯೂ ಹೆಚ್ಚುವರಿ ತೆರಿಗೆ ಹಾಕದೆ ಬಜೆಟ್​ ಮಂಡನೆ: ಸಿಎಂ

ಪ್ರವಾಹ, ಕೊರೊನಾ ಕಾರಣ ಇಡೀ ರಾಜ್ಯ ತಲ್ಲಣಗೊಂಡಿತ್ತು. ಲಾಕ್​ಡೌನ್​ನಿಂದ ಆರ್ಥಿಕ ಚಟುವಟಿಕೆ ನಡೆಯದೇ ಆದಾಯ ಸಂಗ್ರಹಣೆಗೂ ದೊಡ್ಡ ಪೆಟ್ಟು ಬಿದ್ದಿದೆ. 2020-21 ನೇ ಸಾಲಿನ ಆರ್ಥಿಕ ಸಾಧನೆ ಮಾರ್ಚ್​ ಕೊನೆಯವರೆಗೆ ಅಂದಾಜು ಶೇ. 94 ರಷ್ಟಾಗುತ್ತೆ. ನಮ್ಮ ನಿರೀಕ್ಷೆ ಶೇ 80 ಇದೆ. ಆರ್ಥಿ ಇಲಾಖೆ ಪ್ರಕಾರ ಶೇ 94 ಎಂದಿದೆ. ವಿತ್ತೀಯ ಶಿಸ್ತಿನ ಜತೆ ಆರ್ಥಿಕ ಸ್ಥಿತಿ ಕಳೆದ ತ್ರೈ ಮಾಸಿಕದಲ್ಲಿ ಸುಧಾರಿಸಿದೆ. ಸಂಕಷ್ಟದ ಸವಾಲುಗಳಿಗೆ ಪರಿಹಾರವಾಗಬಲ್ಲ ಸಮತೋಲಿತ ಬಜೆಟ್ ಇದಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಪ್ರತಿಕೂಲ ಸ್ಥಿತಿಯಲ್ಲೂ ಸರ್ವ ವ್ಯಾಪಿ, ಸರ್ವ ಸ್ವರೂಪಿ ಬಜೆಟ್​ ನಿರ್ಮಿಸಲು ಪ್ರಯತ್ನಿಸಿದೆ. ಈ ವರ್ಷದ ಬಜೆಟ್​ ಗಾತ್ರ ಶೇ.3 ಕ್ಕಿಂತ ಹೆಚ್ಚಳವಾಗಿದೆ. ಇದೊಂದು ಜನಸ್ನೇಹಿ ಬಜೆಟ್​. ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಪೈಸೆಯೂ ಹೆಚ್ಚುವರಿ ತೆರಿಗೆ ಹಾಕದೆ ಬಜೆಟ್​ ಮಂಡಿಸಿದ್ದೇವೆ. ಎಲ್ಲ ವಲಯ, ಜಿಲ್ಲೆಗಳಿಗೆ ವಿಶೇಷ ಕಾರ್ಯಕ್ರಮ ನೀಡಿ ಸಮತೋಲನ ಕಾಯ್ದುಕೊಳ್ಳಲು ಪ್ರಯತ್ನಿಸಿದ್ದೇನೆ. ಯಾರಿಗೂ ಹೊರೆಯಾಗದ ಜನಸ್ನೇಹಿ ಬಜೆಟ್​ ಇದಾಗಿದೆ ಎಂದು ತಿಳಿಸಿದರು.

ಮಹಿಳಾ ದಿನದಂದು ಮಂಡಿಸಲಾಗದ ಬಜೆಟ್​ನಲ್ಲಿ ಅವರ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ. ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲ ಕಲ್ಪಿಸಿದ್ದೇವೆ. ದೇಶ ಕಟ್ಟುವ ಕಾಯಕಕ್ಕೆ ಈ ಮೂಲಕ ಸಾಥ್​ ನೀಡಿದ್ದೇವೆ. ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ಬಸ್ ಪಾಸ್, ಮಹಿಳಾ ಉದ್ಯಮಿಗಳಿಗೆ ಶೇ. 4ರ ಬಡ್ಡಿದರದಲ್ಲಿ ಸಾಲ ಮತ್ತು ಕಷ್ಟದ ಸಮಯದಲ್ಲೂ ಸಂಬಳ, ಪಿಂಚಣಿ, ಸಬ್ಸಿಡಿ ಸಕಾಲದಲ್ಲಿ ನಿರ್ವಹಿಸಲಾಗಿದೆ ಎಂದು ಹೇಳಿದರು. 

14:16 March 08

ಬಜೆಟ್​ ಮಂಡನೆ ಅಧಿವೇಶನ ಮುಕ್ತಾಯ

ಬಜೆಟ್​ ಮಂಡನೆ ಅಧಿವೇಶನ ಮುಕ್ತಾಯಗೊಂಡಿದೆ.

13:53 March 08

ಪ್ರವಾಸೋದ್ಯಮ ಇಲಾಖೆಗೆ 500 ಕೋಟಿ ಅನುದಾನ

ಹೊಸ ಹೈಬ್ರಿಡ್ ಬೀಜ ನೀತಿ ಜಾರಿಗೆ ಕ್ರಮ, ಸಾವಯವ ಕೃಷಿ ಉತ್ತೇಜನಕ್ಕೆ 500 ಕೋಟಿ ರೂ, ಪ್ರವಾಸೋದ್ಯಮ ಇಲಾಖೆಗೆ 500 ಕೋಟಿ ಅನುದಾನ, ಕಡಲತೀರ ಅಭಿವೃದ್ಧಿ. ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ, ಅನುದಾನದ್ರಾಕ್ಷಿ ಕೃಷಿಯ ಉತ್ತೇಜನಕ್ಕೆ ಕರ್ನಾಟಕ ದ್ರಾಕ್ಷಾರಸ ಮಂಡಳಿಯನ್ನು ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿಯನ್ನಾಗಿ ಪುನರ್ ರಚಿಸಲು ಕ್ರಮ ಕೈಗೊಳ್ಳಲಾಗುವುದ. 

13:49 March 08

ಪೆಟ್ರೋಲ್‌, ಡೀಸೆಲ್‌ ತೆರಿಗೆಯಲ್ಲಿ ಯಥಾಸ್ಥಿತಿ: ಮುದ್ರಾಂಕ ಶುಲ್ಕ ಇಳಿಕೆ

2021-22ನೇ ಸಾಲಿನ ಬಜೆಟ್ ಗಾತ್ರ ಎರಡೂವರೆ ಲಕ್ಷ ಕೋಟಿ ರೂ. ಆಗಿದೆ. 35 ಲಕ್ಷದಿಂದ 45 ಲಕ್ಷ ರೂ.ಗಳವರೆಗಿನ ಫ್ಲ್ಯಾಟ್‌ಗಳ ಮುದ್ರಾಂಕ ಶುಲ್ಕ ಇಳಿಕೆ. ಮುದ್ರಾಂಕ ಶುಲ್ಕ ಶೇ.5ರಿಂದ ಶೇ.3ಕ್ಕೆ ಇಳಿಸಿದ ಸರ್ಕಾರ. ಪೆಟ್ರೋಲ್‌, ಡೀಸೆಲ್‌ ದರ ಯಥಾಸ್ಥಿತಿಯಲ್ಲಿದೆ. ತೆರಿಗೆ ಇಳಿಸುವ ನಿರೀಕ್ಷೆಯಲ್ಲಿದ್ದ ಜನರಿಗೆ ನಿರಾಸೆ

ಕೋವಿಡ್ ಸಂಕಷ್ಟದ ಹಿನ್ನೆಲೆ ರಾಜ್ಯಗಳಿಗೆ ನೀಡುವ ತೆರಿಗೆ ಪಾಲು ಕಡಿಮೆ ಮಾಡಲಾಗಿದೆ. ರಾಜ್ಯದ ಜಿಎಸ್​ಟಿ ಸಂಗ್ರಹಣೆ ಇಳಿಕೆ ಆಗಿರುತ್ತದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಮೇಲೆ ರಾಜ್ಯ ಸರ್ಕಾರ ವಿಧಿಸುವ ವ್ಯಾಟ್​ನಲ್ಲಿ ಯಾವುದೇ ಬದಲಾವಣೆ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

13:49 March 08

ರೈಲ್ವೆ ಯೋಜನೆಗಳಿಗೆ 3,991 ಕೋಟಿ ರೂಪಾಯಿ ಅನುದಾನ

ರೈಲ್ವೆ ಯೋಜನೆಗಳಿಗೆ 3,991 ಕೋಟಿ ರೂಪಾಯಿ ಅನುದಾನ, ರೈಲ್ವೆ ಯೋಜನೆಗಳ ಭೂಸ್ವಾಧೀನಕ್ಕಾಗಿ 2,260 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 384 ಕೋಟಿ ರೂ., ಹಾಸನ ವಿಮಾನ ನಿಲ್ದಾಣಕ್ಕೆ 175 ಕೋಟಿ ರೂ. ವಿಜಯಪುರ ವಿಮಾನ ನಿಲ್ದಾಣಕ್ಕೆ 220 ಕೋಟಿ ರೂ. ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಹೊಸದಾಗಿ 52 ಬಸ್‌ ಸ್ಟ್ಯಾಂಡ್‌ಗಳನ್ನು ಸ್ಥಾಪಿಸುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದು, ಉಪನಗರ ರೈಲು ಯೋಜನೆಗೆ ಸಾವಿರಾರು ಕೋಟಿ ರೂ. ಮೀಸಲಿಡಲಾಗಿದೆ.

13:48 March 08

ಸಮಗ್ರ ಗೋಸ‌ಂಕುಲ ಸಮೃದ್ಧಿ ಯೋಜನೆ ಜಾರಿ

ಗೋವುಗಳಿಗೆ ಸಮರ್ಪಕ ನೀರು ಮತ್ತು ಮೇವು ಒದಗಿಸಲು ಸಾಧ್ಯವಾಗದೇ ರೈತರು ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಸಿಎಂ ರೈತರ ಪರವಾಗಿ ಹಾಗೂ ಸಮಗ್ರ ಗೋಸ‌ಂಕುಲ ಸಮೃದ್ಧಿಗೆ ಪೂರಕವಾಗುವಂತಹ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಹೊರ ರಾಜ್ಯದ ದೇಶಿ ತಳಿಗಳಾದ ಗಿರ್, ಸಾಹಿವಾಲ್, ಒಂಗೋಲ್, ಥಾರ್ ಪಾರ್ಕರ್ ಮತ್ತು ದೇವಣಿ ತಳಿಗಳನ್ನು ಅಭಿವೃದ್ಧಿಪಡಿಸಿ ರಾಜ್ಯದ ರೈತರಿಗೆ ಪರಿಚಯಿಸುವ ಉದ್ದೇಶದಿಂದ ಸಮಗ್ರ ಗೋಸ‌ಂಕುಲ ಸಮೃದ್ಧಿ ಯೋಜನೆ ಜಾರಿ ಮಾಡಲಾಗಿದೆ. ಜೊತೆಗೆ ಪ್ರತಿ ಜಿಲ್ಲೆಗೆ ಒಂದರಂತೆ ಗೋ ಶಾಲೆ ಸ್ಥಾಪನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

13:48 March 08

ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕ್ಷೇತ್ರದಲ್ಲಿ 75 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಹಸಿರೆಲೆ ಗೊಬ್ಬರಕ್ಕೆ 10 ಕೋಟಿ, ಸಾವಯವ, ಸಿರಿಧಾನ್ಯ ಮಾರಾಟಕ್ಕೆ ಇ ಮಾರುಕಟ್ಟೆ ಪ್ರೈ. ಲಿಮಿಟೆಡ್, ಅಡಕೆ ಪರಿಹಾರ ಬೆಲೆ ಪ್ರೋತ್ಸಾಹಕ್ಕೆ 25 ಕೋಟಿ ರೂಪಾಯಿ ಘೋಷಿಸಿದ್ದಾರೆ.

13:48 March 08

8 ಜ್ಞಾನಪೀಠ ಪುರಸ್ಕೃತರು ಕಲಿತ ಶಾಲೆಗಳ ಅಭಿವೃದ್ಧಿಗೆ ಆದ್ಯತೆ

ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪನವರು 2 ಲಕ್ಷದ 43 ಸಾವಿರದ 734 ಕೋಟಿಯ 8ನೇ ರಾಜ್ಯ ಬಜೆಟ್​ ಮಂಡಿಸುತ್ತಿದ್ದು, ಸರ್ಕಾರಿ ಶಾಲೆಗಳ ಪೀಠೋಪಕರಣಕ್ಕೆ 50 ಕೋಟಿ ರೂಪಾಯಿ ಹಾಗೂ ಸ್ಮಾರ್ಟ್ ಕ್ಲಾಸ್ ರೂಂಗಳಿಗಾಗಿ 50 ಕೋಟಿ ರೂ.ಅನುದಾನ ಘೋಷಿಸಿದ್ದಾರೆ.

ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗುವಂತಹ 'ಸಾಮರ್ಥ್ಯ ಸಾರಥ್ಯ ಯೋಜನೆ' ಘೋಷಣೆ ಮಾಡಿದ್ದಾರೆ. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ವಾರ್ಷಿಕ 5 ಕೋಟಿ ರೂ. ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು, ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಸ್ಥಾಪನೆ ಮತ್ತು 8 ಜ್ಞಾನಪೀಠ ಪುರಸ್ಕೃತರು ಕಲಿತ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಜೆಟ್​ ಭಾಷಣದಲ್ಲಿ ಹೇಳಿದ್ದಾರೆ.

13:41 March 08

ಸಿದ್ದರಾಮಯ್ಯ ಸರ್ಕಾರದ ಅನುಗ್ರಹ ಯೋಜನೆ ಮುಂದುವರಿಕೆ

ಚಿತ್ರೀಕರಣ ಅನುಮತಿಗಾಗಿ ಸೇವಾ ಸಿಂಧೂ ಪೋರ್ಟಲ್ ಸ್ಥಾಪನೆ, ಸಿದ್ದರಾಮಯ್ಯ ಸರ್ಕಾರದ ಅನುಗ್ರಹ ಯೋಜನೆ ಮುಂದುವರಿಕೆ, ರಾಯಚೂರಿನಲ್ಲಿ ಸುಗಮ ಸಂಚಾರಕ್ಕೆ ರಿಂಗ್ ರೋಡ್, ಸಿದ್ದರಾಮಯ್ಯ ಕ್ಷೇತ್ರದ ಗುಳೇದ ಗುಡ್ಡದಲ್ಲಿ ಜವಳಿ ಪಾರ್ಕ್ ನಿರ್ಮಾಣ, ಮಲೆನಾಡು, ಕರಾವಳಿ ಭಾಗದಲ್ಲಿ ಕಾಲು ದಾರಿ ನಿರ್ಮಾಣ, ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.   ಮುಂದಿನ 5 ವರ್ಷದಲ್ಲಿ 5ಸಾವಿರ ಕೋಟಿ ಬಂಡವಾಳ ನಿರೀಕ್ಷೆ, ಮುಂದಿನ 5 ವರ್ಷಗಳಲ್ಲಿ 43 ಸಾವಿರ ನೇರ ಉದ್ಯೋಗ ಸೃಷ್ಟಿ, 60 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಸಾಮರ್ಥ್ಯವುಳ್ಳ ಐಸಿಯು ಸ್ಥಾಪನೆ, ದತ್ತಾಂಶ ಕೇಂದ್ರ ಸೈಬರ್ ಸುರಕ್ಷತೆಗೆ ಆದ್ಯತೆ , 16 ಹೊಸ ಬಸ್ ಡಿಪೋ ನಿರ್ಮಾಣ ಮಾಡಲಾಗುವುದು.

13:38 March 08

ಪೆಟ್ರೋಲ್​ ಮತ್ತು ಡೀಸೆಲ್ ರಾಜ್ಯದ ತೆರಿಗೆ ಹೆಚ್ಚಿಸದಿರಲು ತೀರ್ಮಾನ

ಪೆಟ್ರೋಲ್​ ಮತ್ತು ಡೀಸೆಲ್​ ಮೇಲೆ ವಿಧಿಸುವ ಕರ್ನಾಟಕ ಮಾರಾಟ ತೆರಿಗೆ (KST) ಸೇರಿದಂತೆ ಯಾವುದೇ ತೆರಿಗೆಯನ್ನು 2021-22 ನೇ ಸಾಲಿನಲ್ಲಿ ಹೆಚ್ಚಿಸದಿರಲು ತೀರ್ಮಾನ.

13:30 March 08

ಹೊಸ ಏರೋಸ್ಪೇಸ್​ ಮತ್ತು ರಕ್ಷಣಾ ನೀತಿ ಜಾರಿಗೆ ಕ್ರಮ

ಹೊನ್ನಾವರದ ಕಾಸರಕೋಡ ಬಂದರು ಪ್ರದೇಶಕ್ಕೆ ರಾಷ್ಟ್ರೀಯ ಹೆದ್ದಾರಿ-66 ಭಾರತಮಾಲಾ ಯೋಜನೆಯಡಿ 100 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಚತುಷ್ಪಥ ಸಂಪರ್ಕ ರಸ್ತೆ ನಿರ್ಮಿಸಲು ಕ್ರಮ. ಮಂಗಳೂರು-ಪಣಜಿ ನಡುವೆ ಜಲಮಾರ್ಗಗಳ ಅಭಿವೃದ್ಧಿ. ಕೇಂದ್ರ ಸರ್ಕಾರದ ರಾಷ್ಟ್ರೀಯ ಜಲಮಾರ್ಗಗಳ ಅಭಿವೃದ್ಧಿ. ಕೇಂದ್ರ ಸರ್ಕಾರದ ರಾಷ್ಟ್ರೀಯ ಜಲಮಾರ್ಗಗಳ ಪ್ರಾಧಿಕಾರದ ಧನಸಹಾಯದೊಂದಿಗೆ ಒಟ್ಟು 60 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಜಲಮಾರ್ಗಗಳ ಅಭಿವೃದ್ಧಿಗೆ ಕ್ರಮ. ಹೊಸ ಏರೋಸ್ಪೇಸ್​ ಮತ್ತು ರಕ್ಷಣಾ ನೀತಿ ಜಾರಿಗೆ ಕ್ರಮ.ಯಾದಗಿರಿ ಜಿಲ್ಲೆಯ ಕೆಡಚೂರಿನಲ್ಲಿ 1,478 ಕೋಟಿ ರೂ. ವೆಚ್ಚದಲ್ಲಿ ‘ಬಲ್ಕ್​ ಡ್ರಗ್​ ಪಾರ್ಕ್​’ ಹಾಗೂ ಮಂಗಳೂರಿನ ಗಂಜಿಮಠದಲ್ಲಿ 66 ಕೋಟಿ ರೂ. ವೆಚ್ಚದಲ್ಲಿ ‘ಪ್ಲಾಸ್ಟಿಕ್​ ಪಾರ್ಕ್​’ ಅಭಿವೃದ್ಧಿ. ಬೀದರ್​ನ ಕೃಷಿ ಉಪಕರಣ ತಯಾರಿಕಾ ಕ್ಲಸ್ಟರ್​ನಲ್ಲಿ ಬರುವ ಕಯಗಾರಿಕೆಗಳಿಗೆ ವಿಶೇಷ ಪ್ರೋತ್ಸಾಹಕ ಪ್ಯಾಕೇಜ್​ ಘೋಷಣೆ.  

13:16 March 08

ವಿಜಯನಗರ ನೂತನ ಜಿಲ್ಲೆಗೆ ವಿಶೇಷ ಆದ್ಯತೆ

ವಿಜಯನಗರ ನೂತನ ಜಿಲ್ಲೆಗೆ ಬಜೆಟ್​ನಲ್ಲಿ ವಿಶೇಷ ಆದ್ಯತೆ ನೀಡಲಾಗಿದೆ. ಮೂಲಸೌಕರ್ಯ ಒದಗಿಸಲು ಅನುದಾನ ಜಾರಿ. ನೌಕರರಿಗೆ ಸಿಗುವ ಸೌಲಭ್ಯ ಮಾಹಿತಿಗೆ HRMS-2 ಜಾರಿ, ನೌಕರರು ಮತ್ತು ಅವಲಂಬಿತರಿಗೆ ನಗದು ರಹಿತ ಶಸ್ತ್ರಚಿಕಿತ್ಸೆಗೆ ಅನುದಾನ, ಜ್ಯೋತಿ ಸಂಜೀವಿನಿ ಅಡಿ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಲಾಗುವುದು.

13:16 March 08

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1500 ಕೋಟಿ ರೂ. ಘೋಷಣೆ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1500 ಕೋಟಿ ರೂ. ಘೋಷಣೆ, ಡಾ.ಡಿ.ಎಂ ನಂಜುಂಡಪ್ಪ ವರದಿಯಂತೆ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ 3000 ಕೋಟಿ, ಕೃಷ್ಣಾ ಭಾಗ್ಯ ಜಲನಿಗಮಕ್ಕೆ 5600 ಕೋಟಿ ರೂ. ಘೋಷಣೆ ಮಾಡಲಾಗಿದೆ.

13:10 March 08

ಖಾಸಗಿ ಸಹಭಾಗಿತ್ವದಲ್ಲಿ 2,500 ಕೋಟಿ ವೆಚ್ಚದಲ್ಲಿ ಬೇಲೆಕೇರಿ ಬಂದರು

ಶಿರಸಿ ಸರ್ಕಾರಿ ಆಸ್ಪತ್ರೆಯನ್ನು 200 ಹಾಸಿಗೆಗಳ ಮೇಲ್ದರ್ದೆಜೆಗೆ, ಸಿದ್ಧಾಪುರದಲ್ಲಿ ಕೈಗಾರಿಕಾ ವಸಾಹತು ಸ್ಥಾಪನೆ, ಖಾಸಗಿ ಸಹಭಾಗಿತ್ವದಲ್ಲಿ 2,500 ಕೋಟಿ ವೆಚ್ಚದಲ್ಲಿ ಬೇಲೆಕೇರಿ ಬಂದರು ಅಭಿವೃದ್ಧಿ, ಕಡಲಧಾಮ ಸ್ಥಾಪನೆಗೆ 1 ಕೋಟಿ ಅನುದಾನ, ಕಾರವಾರ ಬಂದರಿಗೆ ಶಾಶ್ವತ ಅಗ್ನಿಶಾಮಕ ಉಪಕರಣಕ್ಕೆ 19 ಕೋಟಿ ರೂ ನೀಡಲಾಗುವುದು. ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ 31,028 ಕೋಟಿ ರೂ., ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 62,150 ಕೋಟಿ, ಆರ್ಥಿಕ ಮತ್ತು ಅಭಿವೃದ್ಧಿ ವಲಯಕ್ಕೆ 52,529 ಕೋಟಿ, ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 7,795 ಕೋಟಿ ರೂ., ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ 2,645 ಕೋಟಿ ರೂ. ಅನುದಾನ ನೀಡಲಾಗುವುದು.

13:07 March 08

ರಾಜ್ಯಾದಲ್ಲಿ 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ ಸ್ಥಾಪನೆ

ರೈಲ್ವೆ ಯೋಜನೆಗಳಿಗೆ 3,991 ಕೋಟಿ ರೂಪಾಯಿ ಅನುದಾನ, ರೈಲ್ವೆ ಯೋಜನೆಗಳ ಭೂಸ್ವಾಧಿನಕ್ಕಾಗಿ 2,260 ಕೋಟಿ ರೂಪಾಯಿ, ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗಾಗಿ 100 ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ, ರಾಜ್ಯಾದಲ್ಲಿ 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ ಸ್ಥಾಪನೆ ಮಾಡಲಾಗುವುದು.

13:02 March 08

ಮುದ್ರಾಂಕ ಶುಲ್ಕ ಶೇ.5 ರಿಂದ ಶೇ.3 ಕ್ಕೆ ಇಳಿಕೆ

ಮುದ್ರಾಂಕ ಶುಲ್ಕವನ್ನು ಶೇ.5 ರಿಂದ ಶೇ.3 ಕ್ಕೆ ಇಳಿಕೆ ಮಾಡಲಾಗಿದೆ. 2021-22ನೇ ಆರ್ಥಿಕ ಸಾಲಿನಲ್ಲಿ ನೋಂದಣಿ ಹಾಗೂ ಮುದ್ರಾಂಕ ಶುಲ್ಕದಿಂದ 12,655 ಕೋಟಿ ರುಪಾಯಿಯಷ್ಟು ತೆರಿಗೆ ಸಂಗ್ರಹಿಸುವ ಗುರಿ ಇಟ್ಟುಕೊಳ್ಳಲಾಗಿದೆ.

13:02 March 08

ಮನೆ ಬಾಗಿಲಿಗೆ ಮಾಶಾಸನ ಅಭಿಯಾನ ಆರಂಭ

ಸ್ವಾಮಿತ್ವ ಯೋಜನೆಗೆ 25 ಕೋಟಿ ರೂ ಅನುದಾನ, ವಿಜಯನಗರ ಜಿಲ್ಲೆಗೆ ವಿಶೇಷ ಅನುದಾನ, ಮನೆ ಬಾಗಿಲಿಗೆ ಮಾಶಾಸನ ಅಭಿಯಾನ ಆರಂಭ ಮಾಡಲಾಗುವುದು. ಕೈಗಾರಿಕಾ ಕಾರಿಡಾರ್ ಗಳ ಅಭಿವೃದ್ಧಿ, ನಗರ ಸ್ಥಳೀಯ ಸಂಸ್ಥೆಗಳಿಗೆ ಪ್ರತ್ಯೇಕ ತೆರಿಗೆ ಸ್ಲ್ಯಾಬ್ ನೀತಿ, ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ.

12:59 March 08

ಪರಿಶಿಷ್ಟ ಪಂಗಡದ ಆಶ್ರಮದ ಶಾಲೆಗಳಿಗೆ ವಾಲ್ಮೀಕಿ ಶಾಲೆಗಳೆಂದು ಮರು ನಾಮಕರಣ

ಜಿಲ್ಲಾ ಕೇಂದ್ರಗಳಲ್ಲಿ ಮೆಟ್ರಿಕ್ ನಂತರದ 50 ಹಾಸ್ಟೆಲ್ಸ್ ಸ್ಥಾಪನೆ ಮಾಡಲು 50 ಕೋಟಿ ರೂಪಾಯಿ ಅನುದಾನ ಘೋಷಣೆ, ಈ ಯೋಜನೆಯಿಂದ 5 ಸಾವಿರ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ. ರಾಜ್ಯದ 4 ವಿಭಾಗಗಳಲ್ಲಿ ಮುರಾರ್ಜಿ ವಸತಿ ಶಾಲೆ ಆರಂಭ. ಎಸ್​ಸಿ/ಎಸ್​ಟಿ ಉದ್ಯಮಿಗಳ ಸಹಾಯ ಧನ ಯೋಜನೆ ವಿಸ್ತರಣೆ ಮಾಡಲಾಗುವುದು. ಹೋಟೆಲ್, ಮಳಿಗೆ, ಫ್ರಾಂಚೈಸಿ ಸ್ಥಾಪಿಸಲು ಶೆಡ್ಯೂಲ್ ಬ್ಯಾಂಕ್​ಗಳಿಂದ 1 ಕೋಟಿ ರೂ. ಸಾಲ ಪಡೆಯಲು ಅವಕಾಶ ನೀಡಲಾಗುವುದು. ಪರಿಶಿಷ್ಟ ಪಂಗಡದ ಆಶ್ರಮದ ಶಾಲೆಗಳಿಗೆ ವಾಲ್ಮೀಕಿ ಶಾಲೆಗಳೆಂದು ಮರು ನಾಮಕರಣ ಮಾಡಲಾಗುವುದು. ಹಾಸನದಲ್ಲಿ ಬಿ.ಆರ್ ಅಂಬೇಡ್ಕರ್ ಸ್ಮಾರಕ ಭವನ ಸ್ಥಾಪನೆ ಮಾಡಲಾಗುವುದು.

12:59 March 08

ಮಹದಾಯಿ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಗೆ ಅನುದಾನ

ಮಹದಾಯಿ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಗೆ ಅನುದಾನ. ಮಹದಾಯಿ ಯೋಜನೆಗೆ 1,677 ಕೋಟಿ ರೂಪಾಯಿ ಅನುದಾನ, ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು ಮೊತ್ತಕ್ಕೆ ಅನುಮೋದನೆ. 21,474 ಕೋಟಿ ರೂಪಾಯಿ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ. ರಾಷ್ಟ್ರೀಯ ಯೋಜನೆ ಎಂದು ಘೋಷಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ. ಅಂತೆಯೇ, ಕೃಷ್ಣಾ ಭಾಗ್ಯ ಜಲನಿಗಮ 5600 ಕೋಟಿ ರೂ. ಅನುದಾನ, ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆಗೆ ಸರ್ಕಾರದ ನೆರವಿನ ಘೋಷಣೆ. ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗೆ ಕ್ರಮ. ವಿಶ್ವಬ್ಯಾಂಕ್ ನೆರವಿನ ಡ್ರಿಪ್ ಯೋಜನೆ ಅಡಿ 1500 ಕೋಟಿ ವೆಚ್ಚ. 58 ಆಣೆಕಟ್ಟುಗಳ ಪುನಶ್ಚೇತನ ಮತ್ತು ಅಭಿವೃದ್ಧಿಗೆ ಅನುದಾನ ನೀಡಲು ನಿರ್ಧಾರ.

12:58 March 08

ವನ್ಯಜೀವಿಗಳ ಸಂರಕ್ಷಣೆಗೂ ಕ್ರಮ

ಲೆಸ್ಸರ್ ಫ್ಲೋರಿಕನ್ ಪಕ್ಷಿ ಪ್ರಭೇದ ಸಂರಕ್ಷಣೆಗೆ 50 ಲಕ್ಷ ರೂಪಾಯಿ, ವನ್ಯಜೀವಿ ಸಫಾರಿ ಯೋಜನೆಗೆ 5 ಕೋಟಿ ರೂಪಾಯಿ ಅನುದಾನ, ಚಾಮರಾಜನಗರ ಜಿಲ್ಲೆ ಗೋಪಿನಾಥಂ ಬಳಿ ವನ್ಯಜೀವಿ ಸಫಾರಿ ಆರಂಭ, ಚಾಮರಾಜನಗರ ಜಿಲ್ಲೆಯ ಬೂದಿಪಡಗದಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ಆನೆ ಶಿಬಿರ ಆರಂಭ.

12:58 March 08

ಹೂವು, ಅರಶಿನ, ಮೆಣಸಿನಕಾಯಿ ಮಾರುಕಟ್ಟೆಗೆ ಉತ್ತಮ ಅನುದಾನ

ಪಿಎಸಿಎಸ್​ ಕಾರ್ಯಕ್ಷಮತೆ ಹೆಚ್ಚಳಕ್ಕೆ 198 ಕೋಟಿ ರೂಪಾಯಿ ನೀಡಲು ನಿರ್ಧಾರ. ಬೈಯಪ್ಪನಹಳ್ಳಿಯ 8 ಎಕರೆ ಜಮೀನಿನಲ್ಲಿ ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ 50 ಕೋಟಿ ರೂಪಾಯಿ ಅನುದಾನ. ಸಿಂಗೇನ ಅಗ್ರಹಾರದ ಗುಳಿಮಂಗಳ ಗ್ರಾಮದಲ್ಲಿ 42 ಎಕರೆ ಪ್ರದೇಶದಲ್ಲಿ ತರಕಾರಿ ಮಾರುಕಟ್ಟೆ. ಬಳ್ಳಾರಿ ಜಿಲ್ಲೆಯ ಆಲದಹಳ್ಳಿ ಗ್ರಾಮದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ. ಮೆಣಸಿನಕಾಯಿ ಬೆಳೆಗಾರಿಗೆ ಸ್ಪರ್ಧಾತ್ಮಕ ದರ ಒದಗಿಸಲು ಕ್ರಮ. ಬ್ಯಾಡಗಿ ಎಪಿಎಂಸಿಯಲ್ಲಿ ಆಧುನಿಕ ಗುಣ ವಿಶ್ಲೇಷಣಾಘಟಕ ನಿರ್ಮಾಣ. ಚಾಮರಾಜನಗರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಅರಿಶಿಣ ಮಾರುಕಟ್ಟೆ ನಿರ್ಮಿಸಲು ಯೋಚನೆ.

12:55 March 08

ತಾಯಂದಿರ ಎದೆ ಹಾಲಿನ ಬ್ಯಾಂಕ್ ಸ್ಥಾಪನೆಗೆ 2.5 ಕೋಟಿ ರೂ.

ತಾಯಂದಿರ ಎದೆ ಹಾಲಿನ ಬ್ಯಾಂಕ್ ಸ್ಥಾಪನೆಗೆ 2.5 ಕೋಟಿ ರೂ. ಅನುದಾನ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರಗಳಲ್ಲಿ ಒಟ್ಟು 234 ಕೆರೆ ತುಂಬಿಸುವ ಯೋಜನೆಗೆ 500 ಕೋಟಿ ಅನುದಾನ, 58 ಡ್ಯಾಂ ಗಳ ಪುನಶ್ಚೇತನ ಮತ್ತು ಅಭಿವೃದ್ಧಿ, ಎತ್ತಿನ ಹೊಳೆ ಯೋಜನೆಗೆ ಭೂ ಸ್ವಾಧೀನ ಪ್ರಕ್ರಿಯೆ, ಬೆಂಗಳೂರಿನ ಹೆಸರುಘಟ್ಟದಲ್ಲಿ ಥೀಮ್ ಪಾರ್ಕ್ ನಿರ್ಮಾಣ, ಮಹಾದಾಯಿ ಯೋಜನೆಗೆ 1677 ಕೋಟಿ ರೂ. ಅನುದಾನ, ಬೆಂಗಳೂರಿನ ಹೆಸರುಘಟ್ಟದಲ್ಲಿ ಥೀಮ್ ಪಾರ್ಕ್ ನಿರ್ಮಾಣ, ಮಹಾದಾಯಿ ಯೋಜನೆಗೆ 1677 ಕೋಟಿ ರೂ. ಅನುದಾನ ನೀಡಲಾಗುವುದು. ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂಪಾಯಿ, ಜೈನ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಅನುದಾನ, ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ 50 ಕೋಟಿ, ಖಾಸಗಿ ಸಹಭಾಗಿತ್ವದಲ್ಲಿ ಬಳ್ಳಾರಿಯಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ, ಕಬಿನಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ, ಪ್ರತಿ ಜಿಲ್ಲೆಗೆ ಒಂದು ಗೋ ಶಾಲೆ, ಕೊಪ್ಪಳದಲ್ಲಿ ನಾರಿ ಸುವರ್ಣ ಕುರಿ ಸಂವರ್ಧನ ಕೇಂದ್ರ, ಚಾಮರಾಜನಗರದಲ್ಲಿ ಅರಿಶಿಣ ಮಾರುಕಟ್ಟೆ ಸ್ಥಾಪಿಸಲಾಗುವುದು.

12:51 March 08

ಬೆಂಗಳೂರಿಗೆ ನೀರು, ವಿದ್ಯುತ್‌ಗಾಗಿ 9 ಕೋಟಿ ಅನುದಾನ

ಬೆಂಗಳೂರಿಗೆ ನೀರು, ವಿದ್ಯುತ್‌ಗಾಗಿ 9 ಕೋಟಿ ಅನುದಾನ. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ನೀಡಲಾಗುವುದು. ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ, ಮೂಲ್ಕಿಯಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರಕ್ಕೆ 2 ಕೋಟಿ, ಕುಳಾಯಿಯಲ್ಲಿ ಮೀನು ರಫ್ತು ಸ್ಥಾವರ ನಿರ್ಮಾಣಕ್ಕೆ 12.50 ಕೋಟಿ, ಹೆಜಮಾಡಿಯಲ್ಲಿ ಮೀನುಗಾರಿಕಾ ಬಂದರಿಗೆ 181 ಕೋಟಿ ರೂ., ಹಂಗಾರಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂ., ಕಾರ್ಕಳದಲ್ಲಿ ಜವಳಿ ಪಾರ್ಕ್‌ ನಿರ್ಮಾಣಕ್ಕೆ ಕ್ರಮ, ತೆಂಗಿನಗುಂಡಿ ಬಂದರಿನ ಅಳಿವೆ ಹೂಳೆತ್ತಲು 85 ಕೋಟಿ ರೂ., ಕೊಡೇರಿ ಬಂದರು ಅಭಿವೃದ್ಧಿಗೆ 2 ಕೋಟಿ ಅನುದಾನ ನೀಡಲಾಗುವುದು.

12:49 March 08

ಆದಾಯ ಸಂಗ್ರಹ ಗುರಿ:

ವಾಣಿಜ್ಯ ತೆರಿಗೆಗಳಿಂದ 76,473 ಸಾವಿರ ಕೋಟಿ ಆದಾಯ, ಅಬಕಾರಿ ಇಲಾಖೆಯಿಂದ 24,580 ಕೋಟಿ ರೂ., ನೋಂದಣಿ ಮತ್ತು ಮುದ್ರಾಂಕ ಶುಲ್ಕ ದಿಂದ 12,655 ಕೋಟಿ ರೂ., ಮೋಟಾರು ವಾಹನ ತೆರಿಗೆಯಿಂದ 7,515 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ಹೊಂದಲಾಗಿದೆ.

12:45 March 08

ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ

ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ಹೆಚ್ಚಳ, ಶೇಕಡಾ 40 ರಿಂದ 50ಕ್ಕೆ ಮೀಸಲಾತಿ ಹೆಚ್ಚಳ ಮಾಡಲಾಗುವುದು. 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು, ಮಹಿಳಾ ಸ್ವಯಂ ಸೇವಾ ಸಂಘಗಳ ಉತ್ಪನ್ನಗಳಿಗೆ ಮಾರುಕಟ್ಟೆ. 16 ಬಸ್‌ ಡಿಪೋಗಳನ್ನು ಆರಂಭಿಸಲಾಗುವುದು. ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ. ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು. ಜಗಜ್ಯೋತಿ ಬಸವಣ್ಣ ಜನ್ಮ ಸ್ಥಳ ಅಭಿವೃದ್ಧಿಗಾಗಿ 5 ಕೋಟಿ ಮೀಸಲು ಇಡಲಾಗುವುದು.

12:44 March 08

ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣ

ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುವುದು. ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣ ಮಾಡಲು 10 ಕೋಟಿ ರೂಪಾಯಿ, ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ. ನೀಡಲಾಗುವುದು. ಎಸ್.ಎಲ್.ಭೈರಪ್ಪ ಅವರ ಪರ್ವ ನಾಟಕವನ್ನು ರಾಜ್ಯಾದ್ಯಂತ ರಂಗಾಯಣಗಳ ಮೂಲಕ ನಾಟಕ ಪ್ರದರ್ಶನಕ್ಕೆ 1 ಕೋಟಿ ಘೋಷಿಸಲಾಗಿದೆ.

12:43 March 08

ಕ್ರಿಶ್ಚಿಯನ್​ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಒತ್ತು

ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ, ಅಲ್ಪಸಂಖ್ಯಾತರಿಗೆ 1,500 ಕೋಟಿ ರೂ ಮೀಸಲು ಇರಿಸಲಾಗುವುದು. ಅಂತೆಯೇ ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ ನಿಗಮ ಸ್ಥಾಪಿನೆ. ನಿಗಮದ ಚಟುವಟಿಕೆಗೆ 500 ಕೋಟಿ ರೂಪಾಯಿ ಮೀಸಲು ಇಡಲಾಗುವುದು.

12:42 March 08

ಬಜೆಟ್ ಇಲಾಖೆವಾರು ಅನುದಾನ ಹಂಚಿಕೆ ವಿವರ

ಶಿಕ್ಷಣ ಇಲಾಖೆಗೆ 29,688 ಕೋಟಿ, ಜಲಸಂಪನ್ಮೂಲಕ್ಕೆ 21ಸಾವಿರ ಕೋಟಿ, ಇಂಧನಕ್ಕೆ 16,515 ಕೋಟಿ, ಗ್ರಾಮೀಣ ಅಭಿವೃದ್ಧಿಗೆ 15 ಸಾವಿರ ಕೋಟಿ ರೂ, ನಗರಾಭಿವೃದ್ಧಿಗೆ 27,386 ಕೋಟಿ ರೂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 11,908 ಕೋಟಿ ರೂ., ಲೋಕೋಪಯೋಗಿ ಇಲಾಖೆಗೆ 10,256 ಕೋಟಿ ರೂ ಅನುದಾನ ಹಂಚಿಕೆ ಮಾಡಲಾಗಿದೆ. 

12:39 March 08

2021-22 ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ

2021-22 ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 2 ಲಕ್ಷದ 43 ಸಾವಿರದ 734 ಕೋಟಿ ಆಗಿದೆ. 5 ವಲಯಗಳಾಗಿ ವಿಂಗಡನೆ ಮಾಡಿ ಬಜೆಟ್​ ಮಂಡನೆ.

12:37 March 08

ಇಟ್ಟಂಗಿಹಾಳದಲ್ಲಿ ಆಹಾರ ಪಾರ್ಕ್ ನಿರ್ಮಾಣ

ಇಟ್ಟಂಗಿಹಾಳದಲ್ಲಿ ಆಹಾರ ಪಾರ್ಕ್ ನಿರ್ಮಾಣ, ಆದಿಚುಂಚನಗಿರಿ ಮಠಕ್ಕೆ 10 ಕೋಟಿ ರೂಪಾಯಿ, ಮಂಡ್ಯ ಸ್ಟೇಡಿಯಂಗೆ 10 ಕೋಟಿ ರೂಪಾಯಿ, ಬಸವಕಲ್ಯಾಣಕ್ಕೆ 200 ಕೋಟಿ ರೂ. ಆಧುನಿಕ ಕೃಷಿ, ಯಂತ್ರೋಪಕರಣ ಪೂರಯಸಲಾಗುವುದು. ಕೃಷಿ ಯಾಮತ್ರೀಕರಣ ಯೋಜನೆ ಅಡಿ ಟ್ರ್ಯಾಕ್ಟರ್​ ವಿತರಿಸಲಾಗುವುದು. ಇ ಮಾರುಕಟ್ಟೆ ಪೈ. ಲಿಮಿಟೆಡ್ ವ್ಯವಸ್ಥೆ. 

ಆತ್ಮನಿರ್ಭರ ಭಾರತದಡಿ ಶೆ 35 ಸಹಾಯಧನ ನೀಡಲಾಗುವುದು. ಶೇ 50 ಕ್ಕೆ ಸಹಾಯಧನ ಹೆಚ್ಚಳ. ಈ ಯೋಜನೆಗೆ 50 ಕೋಟಿ ಹಂಚಿಕೆ ಮಾಡಲಾಗುವುದು. ಬ್ಯಾಡಗಿ ಮೆಣಸಿನಕಾಯಿಗಾಗಿ ಗುಣ ವಿಶ್ಲೇಷಣಾ ಘಟಕ ಸ್ಥಾಪನೆ, ಸಾವಯವ ಕೃಷಿಗೆ 500 ಕೋಟಿ ರೂಪಾಯಿ.  

12:30 March 08

ಮಹಿಳೆಯರಿಗೆ ವಿಶೇಷ ಯೋಜನೆಗಳು

ಜಿಲ್ಲಾ ಕೇಂದ್ರಗಳಲ್ಲಿ 2 ಶಿಶುಪಾಲನಾ ಕೇಂದ್ರಗಳು, ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ ಒದಗಿಸಲಾಗುತ್ತದೆ. ಮಹಿಳಾ ಉದ್ಯಮಿಗಳಿಗೆ ಶೇ 4 ರ ಬಡ್ಡಿದರದಲ್ಲಿ 2 ಕೋಟಿ ವರೆಗೆ ಸಾಲ, ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್​ಲೈನ್​ ಮಾರುಕಟ್ಟೆ ವ್ಯವಸ್ಥೆ. ವನಿತಾ ಸಂಗಾತಿ ಹೆಸರಿನಲ್ಲಿ ಬಸ್​ಪಾಸ್​ ನೀಡಲಾಗುವುದು. ಮಹಿಳೆಯರ ಸುರಕ್ಷತೆ ಹೆಚ್ಚಳ ಮಾಡಲಾಗುವುದು. ನಿರ್ಭಯಾ ಯೋಜನೆ ಅಡಿಯಲ್ಲಿ 7,500 ಸಿಸಿಟಿವಿ ಅಳವಡಿಕೆ. ಮಹಿಳೆಯರ ಅಭಿವೃದ್ಧಿಗೆ 37,000 ಕೋಟಿ ಮೀಸಲು ನೀಡುತ್ತೇವೆ.

ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ. ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ. ಈ ಬಾರಿ ಯಾವುದೇ ತೆರಿಗೆ ವಿಧಿಸದಿರಲು ನಿರ್ಧಾರ. ನೋಂದಣಿ, ಮುದ್ರಾಂಕ ಶುಲ್ಕ ಶೇ.5ರಿಂದ 3ಕ್ಕೆ ಇಳಿಕೆ. ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ವನಿತಾ ಸಂಗಾತಿ ಬಸ್ ಪಾಸ್ ವ್ಯವಸ್ಥೆ. ಅಬಕಾರಿ ತೆರಿಗೆ ಹೆಚ್ಚಳ ಇಲ್ಲ. ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ ರೂಪಾಯಿವರೆಗಿನ ಫ್ಲ್ಯಾಟ್ ಖರೀದಿಗೆ ಮುದ್ರಾಂಕ ಶುಲ್ಕ ಇಲ್ಲ. ಯಶವಂತಪುರ ಎಪಿಎಂಸಿ ಮೇಲ್ದರ್ಜೆಗೆ ಏರಿಕೆ, ಭದ್ರಾ ಮೇಲ್ದಂಡೆ ಯೋಜನೆಗೆ 21,477 ಕೋಟಿ ರೂಪಾಯಿ ಅನುದಾನ. ಸಿಂಗೇನ ಅಗ್ರಹಾರದಲ್ಲಿ ತರಕಾರಿ ಮಾರುಕಟ್ಟೆ, ಗೋದಾಮು ಮತ್ತು ಅಂಗಡಿ ನಿರ್ಮಾಣಕ್ಕೆ ಅನುದಾನ. ಮಹಿಳಾ ಉದ್ಯೋಗಿಗಳಿಗೆ 6 ತಿಂಗಳು ಪ್ರಸೂತಿ ರಜೆ. 

12:23 March 08

2020-21 ರಲ್ಲಿ ಕೊರೊನಾ ಲಾಕ್​ಡೌನ್​ನಿಂದ ಆರ್ಥಿಕ ಚಟುವಟಿಕೆ ಸ್ತಬ್ಧ

  • 2020-21 ರಲ್ಲಿ ಕೊರೊನಾ ಲಾಕ್​ಡೌನ್​ನಿಂದ ಆರ್ಥಿಕ ಚಟುವಟಿಕೆ ಸ್ತಬ್ಧ
  • ರಾಜ್ಯಗಳಿಗೆ ಕಡಿಮೆ ತೆರಿಗೆ ಪಾಲಿ ನೀಡಿದ ಕೇಂದ್ರ ಸರ್ಕಾರ
  • ಜಿಎಸ್​ಟಿ ಸಂಗ್ರದಲ್ಲಿ ಇಳಿಕೆ ಕಂಡಿದೆ
  • ಕೇಂದ್ರ ರಾಜ್ಯಗಳಿಗೆ ಜಿಎಸ್​ಟಿ ಮೇಲೆ ಶೇ.5 ರ ವರೆಗೆ ಸಾಲಕ್ಕೆ ಅನುಕೂಲ
  • ಕೋವಿಡ್ ಕಾಲದಲ್ಲಿ ಕಲಿತ ಪಾಠ ಸ್ಮರಣೀಯವಾಗಿದೆ
  • ಕೋವಿಡ್ ವಾರಿಯರ್ಸ್​ಗೆ ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದ ಬಿ.ಎಸ್.ಯಡಿಯೂರಪ್ಪ
  • ಕೋವಿಡ್​ನಿಂದಾಗಿ ಇಡೀ ಆರ್ಥಿಕ ವ್ಯವಸ್ಥೆ ಬುಡಮೇಲಾಗಿದೆ
  • ಅತಿವೃಷ್ಠಿ, ಅನಾವೃಷ್ಠಿ ನಿರಂತರ ಸವಾಲಾಗಿದೆ
  • ಪಿಪಿಇ ಕಿಟ್ ಉತ್ಪಾದನೆಯಲ್ಲಿ ಹೆಚ್ಚಳ ಮಾಡಲಾಗಿದೆ
  • 2 ಕೋಟಿ ರೂಪಾಯಿಗಳವರೆಗೆ  ಮಹಿಳಾ ಉದ್ಯಮಿಗಳಿಗೆ ಶೇ. 4ರ ಬಡ್ಡಿದರದಲ್ಲಿ ಸಾಲ
  • ಜಿಲ್ಲಾ ಕೇಂದ್ರಗಳಲ್ಲಿ ಎರಡು ಶಿಶಿಪಾಲನಾ ಕೇಂದ್ರಗಳ ಸ್ಥಾಪನೆ
  • ಕೋವಿಡ್ ಗೆ ಉಚಿತ ಚಿಕಿತ್ಸೆ ನೀಡಲಾಗಿದೆ
  • ಕೋವಿಡ್ ಲಸಿಕೆ ಹಂಚಿಕೆಯಲ್ಲಿ ರಾಷ್ಟ್ರದ ಗಮನ ಸೆಳೆದಿದ್ದೇವೆ.
  • ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ
  • ಪೊಲೀಸ್ ಠಾಣೆಗಳಲ್ಲಿ 7,500 ಸಿಸಿ ಕ್ಯಾಮರಾ ಅಳವಡಿಕೆ  
  • ಕಲಾಪದಲ್ಲಿ ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿಕೆ

12:18 March 08

2021-22 ನೇ ಸಾಲಿನ ಬಜೆಟ್​ ಮಂಡನೆ

  • 2021-22 ನೇ ಸಾಲಿನ ಬಜೆಟ್​ ಮಂಡನೆ
  • ಸಿಎಂ ಯಡಿಯೂರಪ್ಪರಿಂದ ಆಯವ್ಯಯ ಮಂಡನೆ
  • ವಿಧಾನಸಭೆ ಬಜೆಟ್‌ ಅಧಿವೇಶನ ಆರಂಭ

12:13 March 08

ಸರ್ಕಾರದ ಸಾಧನೆಗಳನ್ನು ವಿವರಿಸುತ್ತಿರುವ ಸಿಎಂ ಯಡಿಯೂರಪ್ಪ

  • ಬಜೆಟ್​ ಮಂಡನೆ ಆರಂಭಿಸಿದ ಸಿಎಂ ಯಡಿಯೂರಪ್ಪ
  • ಕೊರೊನಾ ಸಂಕಷ್ಟ ಒಂದು ದುಃಸ್ವಪ್ನ
  • ಸಂಕಷ್ಟದ ನಡುವೆಯೂ ಸರ್ಕಾರ ಕೆಲಸ ಮಾಡಿದೆ
  • ಸರ್ಕಾರದ ಸಾಧನೆಗಳನ್ನು ವಿವರಿಸುತ್ತಿರುವ ಸಿಎಂ ಯಡಿಯೂರಪ್ಪ

12:08 March 08

ಸಭಾತ್ಯಾಗ ಮಾಡಿದ ಕಾಂಗ್ರೆಸ್​ ಸದಸ್ಯರು

  • ಸಿಎಂ ಯಡಿಯೂರಪ್ಪರಿಂದ ಬಜೆಟ್​ ಮಂಡನೆ ಆರಂಭ
  • ಸಭಾತ್ಯಾಗ ಮಾಡಿದ ಕಾಂಗ್ರೆಸ್​ ಸದಸ್ಯರು
  • ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಭಾತ್ಯಾಗ
  • ಕಾಂಗ್ರೆಸ್​ ಸಭಾತ್ಯಾಗಕ್ಕೆ ಬಿಜೆಪಿ ಸದಸ್ಯರ ಆಕ್ರೋಶ

12:05 March 08

ಕರ್ನಾಟಕ ಬಜೆಟ್​ ಅಧಿವೇಶನ ಆರಂಭ: ಕಪ್ಪುಪಟ್ಟಿಕೊಂಡು ಸದನಕ್ಕೆ ಬಂದ ಕೈ ನಾಯಕರು

  • ಕರ್ನಾಟಕ ಬಜೆಟ್​ ಅಧಿವೇಶನ ಆರಂಭ
  • ಕಪ್ಪುಪಟ್ಟಿಕೊಂಡು ಸದನಕ್ಕೆ ಬಂದ ಕೈ ನಾಯಕರು
  • ವಿರೋಧದ ನಡುವೆಯೂ ಬಜೆಟ್​ ಮಂಡಿಸುತ್ತಿರುವ ಸಿಎಂ

11:47 March 08

ಸಚಿವ ಸಂಪುಟ ಸಭೆಯಲ್ಲಿ ಬಜೆಟ್​ಗೆ ಅನುಮೋದನೆ

  • ಸಚಿವ ಸಂಪುಟ ಸಭೆಯಲ್ಲಿ ಬಜೆಟ್​ಗೆ ಅನುಮೋದನೆ 
  • ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆ
  • ಬಜೆಟ್​ಗೂ ಮುನ್ನ ನಡೆದ ಸಚಿವ ಸಂಪುಟ ಸಭೆ
  • ಸಭೆಯಲ್ಲಿ ಬಜೆಟ್​ಗೆ ಅನುಮೋದನೆ ಪಡೆದ ಸಿಎಂ ಯಡಿಯೂರಪ್ಪ
  • ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ

11:38 March 08

ಬಜೆಟ್​ನಿಂದ ಸಭಾತ್ಯಾಗ ಮಾಡುತ್ತೇವೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: 2021-22 ಕ್ಕೆ ರಾಜ್ಯ ಬಜೆಟ್​ ಮಂಡಿಸಲು ಅಧಿವೇಶನ ಕರೆದಿದ್ದಾರೆ. ಈ ರಾಜ್ಯ ಸರ್ಕಾರಕ್ಕೆ ಆಯವ್ಯಯ ಮಂಡಿಸಲು ಯಾವುದೇ ನೈತಿಕತೆ ಇಲ್ಲ. ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಸಿಎಂ ಯಡಿಯೂರಪ್ಪ ಮತ್ತು ಸಚಿವ ನಿರಾಣಿ ಹೌಸಿಂಗ್​ ಬೋರ್ಡ್​  ಪ್ರಕರಣವೊಂದರ ಸಂಬಂಧ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಪ್ರಕರಣದ ತನಿಖೆಗೆ ಹೈಕೋರ್ಟ್​ ಆದೇಶಿಸಿತ್ತು. ಇದಕ್ಕೆ ಜ.27 ರಂದು  ಸುಪ್ರೀಂ ಕೋರ್ಟ್​ನಲ್ಲಿ ಹೈಕೋರ್ಟ್​ ಆದೇಶಕ್ಕೆ ಸ್ಟೇ ಕೇಳಿ ಅಪೀಲು ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಇದನ್ನು​ ನಿರಾಕರಿಸಿತು. ಈ ವೇಳೆ ಪೊಲೀಸರು ಇವರನ್ನು ಬಂಧಿಸಬಹುದಿತ್ತು. ಆದರೆ, ಸಿಎಂ ಅವರನ್ನು ಬಂಧಿಸಲು ಸಾಧ್ಯವೇ ಎಂದು ಸುಪ್ರೀಂ ನ್ಯಾಯಮೂರ್ತಿ ಹೇಳಿದರು. ಹೀಗಾಗಿ ಸದನದಲ್ಲಿ ಸಿಎಂ ಬೇಲ್​ ಮೇಲಿದ್ದಾರೆ ಎಂದಿದ್ದು. ಅದಕ್ಕೆ ಬಿಎಸ್​ವೈ ನನ್ನ ಪ್ರಕಾರ ಇಬ್ಬರು ಸದ್ಯ ನಿರೀಕ್ಷಣಾ ಜಾಮೀನಿನ ಮೇಲಿದ್ದಾರೆ ಎಂದರು.  

ಸಚಿವ ಹೆಬ್ಬಾರ್, ಬಿ.ಸಿ.ಪಾಟೀಲ್. ಬೈರತಿ ಬಸವರಾಜ್, ಸುಧಾಕರ್, ಸೋಮಶೇಖರ್, ನಾರಾಯಣ ಗೌಡ ಸೇರಿ 6 ಮಂತ್ರಿಗಳು ಸಿಡಿ ಪ್ರಕರಣದ ಬಳಿಕ ಭಯದಿಂದ ಓಡಿಹೋಗಿದ್ದಾರೆ. ಯಾಕೆ ಇವರಿಗೆ ಭಯ. ಹೆದರಿಕೆ ಬರಬೇಕೆಂದರೆ ಇವರು ಗಿಲ್ಟಿಯಾಗಿರಬೇಕು. ಏನೋ ಇರಬಹುದು. ಕುಂಬಳ ಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಳ್ಳುವ ಹಾಗೆ, ಇವರು ಮಾಧ್ಯಮಗಳಲ್ಲಿ ಸುದ್ದಿ ಪ್ರಚಾರ ಮಾಡದಂತೆ ನ್ಯಾಯಾಯಕ್ಕೆ ಮನವಿ ಮಾಡಿದ್ದಾರೆ. ಇದು ಮಾಧ್ಯಮಗಳ ಸ್ವಾತಂತ್ರ್ಯ ಹರಣ. ಸಿಡಿ ಇವೆ ಸಿಕ್ಕು ಬಿಡುತ್ತವೆ ಟೆಲಿಕಾಸ್ಟ್​ ಮಾಡಬೇಡಿ ಎಂಬುದೇ ಅವರ ಉದ್ದೇಶ ಎಂದು ವ್ಯಂಗ್ಯವಾಡಿದರು.

ಈ ಸರ್ಕಾರ ಅನೈತಿಕತೆಯ ಮೂಟೆ ಹೊತ್ತುಕೊಂಡಿದೆ. ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ಯಡಿಯೂರಪ್ಪ ಸೇರಿ ಅನೇಕ ಸಚಿವರಿಗೆ ನೈತಿಕತೆಯಿಲ್ಲ. ಸರ್ಕಾರದಲ್ಲಿ ಸಿಎಂ ಹಾಗೂ ಮಂತ್ರಿ ಸ್ಥಾನಗಳಲ್ಲಿ ಮುಂದುವರೆಯಲು ನೈತಿಕತೆಯಿಲ್ಲ. ಎಲ್ಲರೂ ರಾಜೀನಾಮೆ ನೀಡಬೇಕು. ನಾವು ಬಜೆಟ್​ ವೇಳೆ ಸಭಾತ್ಯಾಗ ಮಾಡುತ್ತೇವೆ ಎಂದರು.

11:13 March 08

ಸಿಎಂ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ

  • ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭ
  • ಸಿಎಂ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ  
  • ಬಜೆಟ್​ಗೆ ಅನುಮೋದನೆ ಪಡೆಯಲಿರುವ ಸಿಎಂ

11:06 March 08

ಬಜೆಟ್ ಪ್ರತಿಯ ಸೂಟ್​​​ಕೇಸ್ ಜತೆ ವಿಧಾನಸೌಧಕ್ಕೆ ತೆರಳಿದ ಸಿಎಂ

ಬಜೆಟ್ ಪ್ರತಿಯ ಸೂಟ್ ಕೇಸ್ ಜತೆ ವಿಧಾನಸೌಧಕ್ಕೆ ತೆರಳಿದ ಸಿಎಂ
ಬಜೆಟ್ ಪ್ರತಿಯ ಸೂಟ್ ಕೇಸ್ ಜತೆ ವಿಧಾನಸೌಧಕ್ಕೆ ತೆರಳಿದ ಸಿಎಂ

ಬೆಂಗಳೂರು: ಆರ್ಥಿಕ ಇಲಾಖೆಯಿಂದ ಬಜೆಟ್ ಪ್ರತಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ವೀಕಾರ ಮಾಡಿದ್ದು, ಬಜೆಟ್ ಪ್ರತಿಯ ಸೂಟ್​​​​ಕೇಸ್ ಅನ್ನು ನಗುಮೊಗದೊಂದಿಗೆ ಮಾಧ್ಯಮಗಳತ್ತ ತೋರಿಸಿ ಉತ್ತಮ ಬಜೆಟ್ ನೀಡುವ ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ನಿವಾಸ ಕಾವೇರಿಗೆ ಆರ್ಥಿಕ ಇಲಾಖೆ ಅಧಿಕಾರಿ ಐಎನ್​ಎಸ್ ಪ್ರಸಾದ್ ಆಗಮಿಸಿ, ಬಜೆಟ್ ಪ್ರತಿಯನ್ನು ಹೊಂದಿದ್ದ ಸೂಟ್ ಕೇಸ್ ಅನ್ನು ಸಿಎಂ‌ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು. ಬಜೆಟ್ ಪ್ರತಿಯನ್ನು ಸಂಪ್ರದಾಯದಂತೆ ಸ್ವೀಕಾರ ಮಾಡಿದ ಸಿಎಂ ನಂತರ ಮಾಧ್ಯಮಗಳತ್ತ ತೋರಿಸಿದರು.

ಸರಿಯಾಗಿ 12.05 ಕ್ಕೆ ಬಜೆಟ್ ಮಂಡಿಸುತ್ತೇನೆ. ಅದಕ್ಕೂ 15 ನಿಮಿಷ ಮೊದಲು ಸಚಿವ ಸಂಪುಟ ಸಭೆ ನಡೆಸಿ, ಅನುಮೋದನೆ ಪಡೆಯುತ್ತೇನೆ. ಬಜೆಟ್ ಅಂಗವಾಗಿ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ. ಉತ್ತಮ ಬಜೆಟ್ ಮಂಡಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.  

ದೇಗುಲ ಭೇಟಿ: ಬಜೆಟ್ ಪ್ರತಿಯೊಂದಿಗೆ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಿಎಂ ನಂತರ ವಿಧಾನಸೌಧಕ್ಕೆ ತೆರಳಿದರು. 

10:40 March 08

ಬಜೆಟ್‌ನಲ್ಲಿ ವಿಶೇಷವಾಗಿ ಮಹಿಳೆಯರಿಗೆ ಆದ್ಯತೆ ನೀಡಿದ್ದೇವೆ - ಸಿಎಂ

ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಿಎಂ
ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಿಎಂ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಸಿಎಂ ಶುಭಾಶಯ

ಬಜೆಟ್‌ನಲ್ಲಿ ವಿಶೇಷವಾಗಿ ಮಹಿಳೆಯರಿಗೆ ಆದ್ಯತೆ ನೀಡಿದ್ದೇವೆ  

ಬಜೆಟ್ ಅಂಗವಾಗಿ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ  

ಉತ್ತಮ ಬಜೆಟ್ ಮಂಡಿಸುತ್ತೇವೆ  

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ

10:26 March 08

ಬಜೆಟ್ ಕರಡು ಪ್ರತಿಯೊಂದಿಗೆ ಸಿಎಂ ನಿವಾಸಕ್ಕೆ ಅಧಿಕಾರಿಗಳ ಆಗಮನ

ಸಿಎಂ ನಿವಾಸಕ್ಕೆ ಅಧಿಕಾರಿಗಳ ಆಗಮನ
  • ರಾಜ್ಯ ಬಜೆಟ್ ಮಂಡಿಸಲಿರುವ ಸಿಎಂ ಬಿಎಸ್​ವೈ
  • ಕಾವೇರಿ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು
  • ಬಜೆಟ್ ಕರುಡು ಪ್ರತಿಯೊಂದಿಗೆ ಸಿಎಂ ನಿವಾಸಕ್ಕೆ ಅಧಿಕಾರಿಗಳ ಆಗಮನ
  • ಆರ್ಥಿಕ ಇಲಾಖೆ ಹಿರಿಯ ಅಧಿಕಾರಿ ಐಎನ್​ಎಸ್​ ಪ್ರಸಾದ್
  • ಬಜೆಟ್ ಕರುಡು ಪ್ರತಿಯೊಂದಿಗೆ ಸಿಎಂ ನಿವಾಸಕ್ಕೆ ಬಂದ ಪ್ರಸಾದ್​
  • 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರ ಮಂಡನೆಗೆ ಕ್ಷಣಗಣನೆ
  • 8ನೇ ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಯಡಿಯೂರಪ್ಪ 
Last Updated : Mar 8, 2021, 3:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.