ETV Bharat / state

ಮರಾಠ ನಿಗಮದ ವಿರುದ್ಧ ಕನ್ನಡಿಗರ ಕಿಚ್ಚು: ಬಂದ್ ಯಶಸ್ವಿಯಾಗುತ್ತಾ? ಪ್ರತಿಭಟನೆಗೆ ಮಾತ್ರವೇ ಸೀಮಿತವಾಗುತ್ತಾ?

author img

By

Published : Dec 4, 2020, 7:04 PM IST

Updated : Dec 4, 2020, 8:29 PM IST

ಡಿಸೆಂಬರ್​ 5 ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್​ ನಡೆಸಲು ತೀರ್ಮಾನಿಸಿದೆ. ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ರಚಿಸಿರುವುದನ್ನು ವಿರೋಧಿಸಿ ಹೋರಾಟ ನಡೆಸಲು ಮುಂದಾದ ಸಂಘಟನೆಗಳಿಗೆ ಯಾವೆಲ್ಲ ಕ್ಷೇತ್ರಗಳು ಬೆಂಬಲ ಸೂಚಿಸುತ್ತವೆ, ಏನೆಲ್ಲಾ ಇರಲಿದೆ ಎಂಬುದರ ಮಾಹಿತಿ ಇಲ್ಲಿದೆ.

ಕರ್ನಾಟಕ ಬಂದ್​
ಕರ್ನಾಟಕ ಬಂದ್​

ಬೆಂಗಳೂರು: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ರಚಿಸಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್​ಗೆ ಕರೆ ನೀಡಿವೆ.‌ ಮರಾಠಿಗರಿಗೆ ನಿಗಮ ರಚಿಸಿರುವುದರಿಂದ ಕನ್ನಡಿಗರಿಗೆ, ಕನ್ನಡ ನಾಡಿಗೆ ಅನ್ಯಾಯ ಆಗಿದೆ. ಈ ನಿಗಮ ರದ್ದು ಮಾಡಬೇಕು ಎಂದು ಕನ್ನಡಪರ ಸಂಘಟನೆಗಳು ಆಗ್ರಹಿಸಿ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಬಂದ್ ನಡೆಸಲು ತೀರ್ಮಾನಿಸಿವೆ. ಆದರೆ, ಹೋಟೆಲ್, ಬ್ಯಾಂಕ್, ಸಂಚಾರ ವ್ಯವಸ್ಥೆ, ಸರ್ಕಾರಿ ಕಚೇರಿಗಳು, ಮಾರುಕಟ್ಟೆಗಳು ಎಂದಿನಂತೆ ತೆರೆಯಲಿರುವುದರಿಂದ ಬಂದ್​ಗೆ ಯಾವ ರೀತಿ ಪ್ರತಿಕ್ರಿಯೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಒಂದೆಡೆ ಬಂದ್ ಯಶಸ್ವಿಗೊಳಿಸಲು ಕನ್ನಡಪರ ಸಂಘಟನೆಗಳು ಮುಂದಾಗಿದ್ದರೆ, ಇನ್ನೊಂದೆಡೆ ಈಗಾಗಲೇ ಕೋವಿಡ್​ನಿಂದ ಸಾಕಷ್ಟು ನಷ್ಟ ಅನುಭವಿಸಿರುವ ಹೋಟೆಲ್ ಸಂಘ ಸೇರಿದಂತೆ ಅನೇಕ ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಘೋಷಿಸಿವೆ. ಆದರೆ, ಬಂದ್ ಯಶಸ್ವಿ ಮಾಡಲು ಗುರುವಾರದಿಂದಲೇ ನಗರದಾದ್ಯಂತ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರಚಾರ ಆಂದೋಲನ ನಡೆಯುತ್ತಿದೆ.

ಓದಿ: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ರಾಜ್ಯ ಬಂದ್: ನಾಳೆ ಏನಿರುತ್ತೆ, ಏನಿರಲ್ಲಾ?

ಏನಿಲ್ಲ:

ಕರ್ನಾಟಕ ಬಂದ್​ಗೆ ಬೆಂಬಲ
ಕರ್ನಾಟಕ ಬಂದ್​ಗೆ ಬೆಂಬಲ
  • ನಾಳೆ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಓಲಾ, ಊಬರ್, ಟ್ಯಾಕ್ಸಿ ಸೇವೆ ಇರುವುದಿಲ್ಲ ಎಂದು ಸಂಘದ ಅಧ್ಯಕ್ಷ ತನ್ವೀರ್ ಪಾಷಾ ತಿಳಿಸಿದ್ದಾರೆ.
  • ಜೊತೆಗೆ ಆಟೋ ರಿಕ್ಷಾ ಸೇವೆ ಸಿಗುವುದೂ ಅನುಮಾನ. ಆದರ್ಶ ಆಟೋ ಸಂಘಟನೆ ಬಂದ್ ಬೆಂಬಲಿಸಿ ರಸ್ತೆಗಿಳಿಯದಿರಲು ತೀರ್ಮಾನಿಸಿವೆ.
    ಬಂದ್​ ವೇಳೆ ಏನಿರುತ್ತೆ
    ಬಂದ್​ ವೇಳೆ ಏನಿರುತ್ತೆ

ಎಲ್ಲೆಲ್ಲಿ ಪ್ರತಿಭಟನೆ :ನಾಳೆ ನಗರದ ಹಲವೆಡೆ ಪ್ರತಿಭಟನಾ ಮೆರವಣಿಗೆಗಳು ನಡೆಯಲಿವೆ. ಸರ್ಕಾರಿ ಕಚೇರಿ, ರೈಲ್ವೆ ನಿಲ್ದಾಣಗಳಿಗೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಿವೆ. ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳು, ತಹಶೀಲ್ದಾರ್, ಕಚೇರಿಗಳಿಗೆ ಮುತ್ತಿಗೆ ಹಾಕಲಿವೆ. ರಾಜ್ಯದಲ್ಲಿ ಸಿಎಂ ನಿವಾಸ ಹಾಗೂ ಹೆದ್ದಾರಿ ತಡೆ ನಡೆಸಲು ಸಂಘಟನೆಗಳು ಸಜ್ಜಾಗಿವೆ.

  • ಮೈಸೂರು ಬ್ಯಾಂಕ್ ಸರ್ಕಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ವಾಟಾಳ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
  • ಗಾಂಧಿನಗರ ಕರವೇ ಕಚೇರಿಯಿಂದ ಸಿಎಂ ನಿವಾಸದವರೆಗೆ ಪ್ರತಿಭಟನೆ
  • ಮೌರ್ಯ ಸರ್ಕಲ್​ನಿಂದ ಸಿಎಂ ನಿವಾಸದವರೆಗೆ ಕರವೇ ಪ್ರವೀಣ್ ಶೆಟ್ಟಿ ಬಣ ಪ್ರತಿಭಟನೆ
  • ನಾಳೆ ಬೆಳಗ್ಗೆ 10-30 ಕ್ಕೆ ನಗರದ ಟೌನ್ ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಸಾವಿರಾರು ಸಂಖ್ಯೆಯಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಲಿವೆ ಎಂದು ಸಾ.ರಾ.ಗೋವಿಂದು ತಿಳಿಸಿದ್ದಾರೆ.
    ಎಲ್ಲೆಲ್ಲಿ ನಡೆಯಲಿದೆ ಪ್ರತಿಭಟನೆ
    ಎಲ್ಲೆಲ್ಲಿ ನಡೆಯಲಿದೆ ಪ್ರತಿಭಟನೆ

ಪೊಲೀಸ್ ಬಂದೋಬಸ್ತ್: ಮರಾಠ ಸಮುದಾಯ ಅಭಿವೃದ್ಧಿ ನಿಗಮ ವಿರುದ್ಧ ಬಂದ್ ಹಿನ್ನೆಲೆ ನಾಳೆ ಮುಂಜಾಗ್ರತಾ ಕ್ರಮವಾಗಿ ಸುಮಾರು 16,000 ಪೊಲೀಸರನ್ನು ಭದ್ರತೆಗೆ ನಿಯೋಜಿಸಲು ನಿರ್ಧರಿಸಿದೆ. ಪ್ರತಿಭಟನೆ ಅಥವಾ ಬಂದ್ ಆಚರಣೆಗೆ ಯಾರಿಗೂ ಅನುಮತಿ ನೀಡಿಲ್ಲ. ಶಾಂತಿ ಭಂಗಕ್ಕೆ ಯತ್ನಿಸಿದರೆ ಮುಲಾಜಿಲ್ಲದೇ ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದು ನಗರದ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಇಬ್ಬರು ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು, ಡಿಸಿಪಿಗಳು, ಹಾಗೂ 16 ಸಾವಿರ ಪೊಲೀಸರು ಭದ್ರತಾ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ 30 ಕೆಎಸ್ಆರ್​ಪಿ ಹಾಗೂ 30 ನಗರ ಸಶಸ್ತ್ರ ಮೀಸಲು ಪಡೆಗಳನ್ನು ಬಂದೋಬಸ್ತ್​ಗೆ ಬಳಸಿಕೊಳ್ಳಲಾಗ್ತಿದೆ.

ಒಟ್ಟಿನಲ್ಲಿ ಚುನಾವಣೆ ಓಲೈಕೆಗೆ ಮರಾಠಿಗರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಕನ್ನಡಿಗರಿಗೆ ಅನ್ಯಾಯ ಮಾಡ್ತಿದೆ ಎಂದು ಕನ್ನಡ ಹೋರಾಟಗಾರರು ಕರೆ ನೀಡಿರುವ ಬಂದ್ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂದು ಕಾದು ನೋಡಬೇಕಿದೆ.

ಬೆಂಗಳೂರು: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ರಚಿಸಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್​ಗೆ ಕರೆ ನೀಡಿವೆ.‌ ಮರಾಠಿಗರಿಗೆ ನಿಗಮ ರಚಿಸಿರುವುದರಿಂದ ಕನ್ನಡಿಗರಿಗೆ, ಕನ್ನಡ ನಾಡಿಗೆ ಅನ್ಯಾಯ ಆಗಿದೆ. ಈ ನಿಗಮ ರದ್ದು ಮಾಡಬೇಕು ಎಂದು ಕನ್ನಡಪರ ಸಂಘಟನೆಗಳು ಆಗ್ರಹಿಸಿ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಬಂದ್ ನಡೆಸಲು ತೀರ್ಮಾನಿಸಿವೆ. ಆದರೆ, ಹೋಟೆಲ್, ಬ್ಯಾಂಕ್, ಸಂಚಾರ ವ್ಯವಸ್ಥೆ, ಸರ್ಕಾರಿ ಕಚೇರಿಗಳು, ಮಾರುಕಟ್ಟೆಗಳು ಎಂದಿನಂತೆ ತೆರೆಯಲಿರುವುದರಿಂದ ಬಂದ್​ಗೆ ಯಾವ ರೀತಿ ಪ್ರತಿಕ್ರಿಯೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಒಂದೆಡೆ ಬಂದ್ ಯಶಸ್ವಿಗೊಳಿಸಲು ಕನ್ನಡಪರ ಸಂಘಟನೆಗಳು ಮುಂದಾಗಿದ್ದರೆ, ಇನ್ನೊಂದೆಡೆ ಈಗಾಗಲೇ ಕೋವಿಡ್​ನಿಂದ ಸಾಕಷ್ಟು ನಷ್ಟ ಅನುಭವಿಸಿರುವ ಹೋಟೆಲ್ ಸಂಘ ಸೇರಿದಂತೆ ಅನೇಕ ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಘೋಷಿಸಿವೆ. ಆದರೆ, ಬಂದ್ ಯಶಸ್ವಿ ಮಾಡಲು ಗುರುವಾರದಿಂದಲೇ ನಗರದಾದ್ಯಂತ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರಚಾರ ಆಂದೋಲನ ನಡೆಯುತ್ತಿದೆ.

ಓದಿ: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ರಾಜ್ಯ ಬಂದ್: ನಾಳೆ ಏನಿರುತ್ತೆ, ಏನಿರಲ್ಲಾ?

ಏನಿಲ್ಲ:

ಕರ್ನಾಟಕ ಬಂದ್​ಗೆ ಬೆಂಬಲ
ಕರ್ನಾಟಕ ಬಂದ್​ಗೆ ಬೆಂಬಲ
  • ನಾಳೆ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಓಲಾ, ಊಬರ್, ಟ್ಯಾಕ್ಸಿ ಸೇವೆ ಇರುವುದಿಲ್ಲ ಎಂದು ಸಂಘದ ಅಧ್ಯಕ್ಷ ತನ್ವೀರ್ ಪಾಷಾ ತಿಳಿಸಿದ್ದಾರೆ.
  • ಜೊತೆಗೆ ಆಟೋ ರಿಕ್ಷಾ ಸೇವೆ ಸಿಗುವುದೂ ಅನುಮಾನ. ಆದರ್ಶ ಆಟೋ ಸಂಘಟನೆ ಬಂದ್ ಬೆಂಬಲಿಸಿ ರಸ್ತೆಗಿಳಿಯದಿರಲು ತೀರ್ಮಾನಿಸಿವೆ.
    ಬಂದ್​ ವೇಳೆ ಏನಿರುತ್ತೆ
    ಬಂದ್​ ವೇಳೆ ಏನಿರುತ್ತೆ

ಎಲ್ಲೆಲ್ಲಿ ಪ್ರತಿಭಟನೆ :ನಾಳೆ ನಗರದ ಹಲವೆಡೆ ಪ್ರತಿಭಟನಾ ಮೆರವಣಿಗೆಗಳು ನಡೆಯಲಿವೆ. ಸರ್ಕಾರಿ ಕಚೇರಿ, ರೈಲ್ವೆ ನಿಲ್ದಾಣಗಳಿಗೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಿವೆ. ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳು, ತಹಶೀಲ್ದಾರ್, ಕಚೇರಿಗಳಿಗೆ ಮುತ್ತಿಗೆ ಹಾಕಲಿವೆ. ರಾಜ್ಯದಲ್ಲಿ ಸಿಎಂ ನಿವಾಸ ಹಾಗೂ ಹೆದ್ದಾರಿ ತಡೆ ನಡೆಸಲು ಸಂಘಟನೆಗಳು ಸಜ್ಜಾಗಿವೆ.

  • ಮೈಸೂರು ಬ್ಯಾಂಕ್ ಸರ್ಕಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ವಾಟಾಳ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
  • ಗಾಂಧಿನಗರ ಕರವೇ ಕಚೇರಿಯಿಂದ ಸಿಎಂ ನಿವಾಸದವರೆಗೆ ಪ್ರತಿಭಟನೆ
  • ಮೌರ್ಯ ಸರ್ಕಲ್​ನಿಂದ ಸಿಎಂ ನಿವಾಸದವರೆಗೆ ಕರವೇ ಪ್ರವೀಣ್ ಶೆಟ್ಟಿ ಬಣ ಪ್ರತಿಭಟನೆ
  • ನಾಳೆ ಬೆಳಗ್ಗೆ 10-30 ಕ್ಕೆ ನಗರದ ಟೌನ್ ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಸಾವಿರಾರು ಸಂಖ್ಯೆಯಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಲಿವೆ ಎಂದು ಸಾ.ರಾ.ಗೋವಿಂದು ತಿಳಿಸಿದ್ದಾರೆ.
    ಎಲ್ಲೆಲ್ಲಿ ನಡೆಯಲಿದೆ ಪ್ರತಿಭಟನೆ
    ಎಲ್ಲೆಲ್ಲಿ ನಡೆಯಲಿದೆ ಪ್ರತಿಭಟನೆ

ಪೊಲೀಸ್ ಬಂದೋಬಸ್ತ್: ಮರಾಠ ಸಮುದಾಯ ಅಭಿವೃದ್ಧಿ ನಿಗಮ ವಿರುದ್ಧ ಬಂದ್ ಹಿನ್ನೆಲೆ ನಾಳೆ ಮುಂಜಾಗ್ರತಾ ಕ್ರಮವಾಗಿ ಸುಮಾರು 16,000 ಪೊಲೀಸರನ್ನು ಭದ್ರತೆಗೆ ನಿಯೋಜಿಸಲು ನಿರ್ಧರಿಸಿದೆ. ಪ್ರತಿಭಟನೆ ಅಥವಾ ಬಂದ್ ಆಚರಣೆಗೆ ಯಾರಿಗೂ ಅನುಮತಿ ನೀಡಿಲ್ಲ. ಶಾಂತಿ ಭಂಗಕ್ಕೆ ಯತ್ನಿಸಿದರೆ ಮುಲಾಜಿಲ್ಲದೇ ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದು ನಗರದ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಇಬ್ಬರು ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು, ಡಿಸಿಪಿಗಳು, ಹಾಗೂ 16 ಸಾವಿರ ಪೊಲೀಸರು ಭದ್ರತಾ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ 30 ಕೆಎಸ್ಆರ್​ಪಿ ಹಾಗೂ 30 ನಗರ ಸಶಸ್ತ್ರ ಮೀಸಲು ಪಡೆಗಳನ್ನು ಬಂದೋಬಸ್ತ್​ಗೆ ಬಳಸಿಕೊಳ್ಳಲಾಗ್ತಿದೆ.

ಒಟ್ಟಿನಲ್ಲಿ ಚುನಾವಣೆ ಓಲೈಕೆಗೆ ಮರಾಠಿಗರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಕನ್ನಡಿಗರಿಗೆ ಅನ್ಯಾಯ ಮಾಡ್ತಿದೆ ಎಂದು ಕನ್ನಡ ಹೋರಾಟಗಾರರು ಕರೆ ನೀಡಿರುವ ಬಂದ್ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂದು ಕಾದು ನೋಡಬೇಕಿದೆ.

Last Updated : Dec 4, 2020, 8:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.