ಬೆಂಗಳೂರು: ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಿರುವುದಾಗಿ ವದಂತಿ ಸೃಷ್ಟಿಯಾಗಿದೆ. ಈ ಕುರಿತು ಸ್ವತಃ ಮುಖ್ಯಮಂತ್ರಿಗಳೇ ಸದನದಲ್ಲಿ ಸ್ಪಷ್ಟನೆ ನೀಡಿದರು.
ಸದನದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ನಾನು ರಾಜೀನಾಮೆ ನೀಡಿದ್ದೇನೆ ಎಂಬ ವದಂತಿ ಹಬ್ಬಿದೆ. ಈ ಸುದ್ದಿಯನ್ನು ಯಾರು ಹರಡಿದ್ದಾರೆಂದು ಗೊತ್ತಿಲ್ಲ. ಸಿಎಂ ಆಗಲು ಯಾರು ಕಾಯುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಯಾರೋ ನನ್ನ ಸಹಿಯನ್ನು ನಕಲಿ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ರಾಜೀನಾಮೆ ಪತ್ರ ಹರಿದಾಡುತ್ತದೆ. ಇದು ನನಗೆ ಆಘಾತ ತಂದಿದೆ ಎಂದು ತಿಳಿಸಿದರು.
ನಾನು ರಾಜೀನಾಮೆ ನೀಡಿಲ್ಲ. ಯಾರೋ ನನ್ನ ಸಹಿಯನ್ನು ನಕಲಿ ಮಾಡಿ, ವದಂತಿ ಹರಡುತ್ತಿದ್ದಾರೆ ಎಂದು ಇದೇ ವೇಳೆ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.