ಬೆಂಗಳೂರು: ದೆಹಲಿಯ ಫ್ಲಾಟ್ನಲ್ಲಿ ಹಣ ಪತ್ತೆಯಾದ ಪ್ರಕರಣ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮುಳುವಾಗುವ ಸಾಧ್ಯತೆ ದಟ್ಟವಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಜಾರಿಗೊಳಿಸಿದ ಸಮನ್ಸ್ ಅನ್ನು ರದ್ದು ಪಡಿಸಬೇಕೆಂದು ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು ತೀರ್ಪಿಗೆ ಸಂಬಂಧ ಪಟ್ಟಂತೆ ಉಕ್ತಲೇಖನ ನೀಡಿದ್ದು, ಇಂದು ಅರ್ಜಿ ವಜಾಗೊಳಿಸಿದೆ. ದೆಹಲಿಯ ಫ್ಲಾಟ್ವೊಂದರಲ್ಲಿ 8.59 ಕೋಟಿ ರೂ. ಹಣ ಸಿಕ್ಕ ಬಗ್ಗೆ ಇಡಿ ಸಮನ್ಸ್ ಜಾರಿ ಮಾಡಿದ್ದು, ಹೈಕೋರ್ಟ್ ನಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಇದನ್ನು ಪ್ರಶ್ನಿಸಿದ್ದರು. ಪ್ರಸಿದ್ಧ ವಕೀಲ ಕಪಿಲ್ ಸಿಬಲ್ ಡಿಕೆಶಿ ಪರ ವಾದ ಮಂಡಿಸಿದ್ದರು.