ETV Bharat / state

ಹಿಜಾಬ್​ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅಗತ್ಯತೆ ಅಲ್ಲ: ಹೈಕೋರ್ಟ್

author img

By

Published : Mar 15, 2022, 11:29 AM IST

ಉಡುಪಿ ಸರ್ಕಾರಿ ಕಾಲೇಜಿನಲ್ಲಿ ತರಗತಿಗೆ ಹಿಜಾಬ್ ಧರಿಸಿ ಹಾಜರಾಗುವುದಕ್ಕೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಆರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಅಲ್ಲಿಂದ ಆರಂಭವಾಗಿದ್ದ ಈ ವಿವಾದದ ಹಿನ್ನೆಲೆಯಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ಸಂಬಂಧ ಫೆ.5ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು..

Hijab
Hijab

ಬೆಂಗಳೂರು : ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್​ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್​​ನ ಮಹತ್ವದ ತೀರ್ಪು ಹೊರಬಿದ್ದಿದೆ. ತರಗತಿಗಳಲ್ಲಿ ಹಿಜಾಬ್​ ಧರಿಸುವ ಪರವಾಗಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶವನ್ನು ಉಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ.

ಅಲ್ಲದೇ, ಹಿಜಾಬ್​ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅಗತ್ಯತೆಯೂ ಅಲ್ಲ ಎಂದು ಹೈಕೋರ್ಟ್​​ ಹೇಳಿದೆ. ಈ ಮೂಲಕ ರಾಜ್ಯದಲ್ಲಿ ಎದ್ದಿದ್ದ ಹಿಜಾಬ್​ ವಿವಾದಕ್ಕೆ ನ್ಯಾಯಾಲಯ ತೆರೆ ಎಳೆದಿದೆ.

ಕಳೆದ ಜನವರಿ ತಿಂಗಳಿಂದಲೂ ಹಿಜಾಬ್​ ಪರ ಮತ್ತು ವಿರೋಧ ಚರ್ಚೆಗಳು ನಡೆಯುತ್ತಿದ್ದವು. ಹಿಜಾಬ್​ ಧರಿಸುವುದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿಕೊಂಡು ಬರುವ ಮೂಲಕ ವಿವಾದ ಮತ್ತಷ್ಟು ಕಾವು ಪಡೆದಿತ್ತು. ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಿಂದ ಆರಂಭವಾಗಿದ್ದ ಹಿಜಾಬ್​ ವಿವಾದ ದೇಶಾದ್ಯಂತ ವ್ಯಾಪಿಸಿತ್ತು.

ಉಡುಪಿ ಸರ್ಕಾರಿ ಕಾಲೇಜಿನಲ್ಲಿ ತರಗತಿಗೆ ಹಿಜಾಬ್ ಧರಿಸಿ ಹಾಜರಾಗುವುದಕ್ಕೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಆರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಅಲ್ಲಿಂದ ಆರಂಭವಾಗಿದ್ದ ಈ ವಿವಾದದ ಹಿನ್ನೆಲೆಯಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ಸಂಬಂಧ ಫೆ.5ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಅಲ್ಲದೇ, ಈ ವಿವಾದ ಹೈಕೋರ್ಟ್​ ಮೆಟ್ಟಿಲೇರಿತ್ತು. ಹಿಜಾಬ್ ನಿರ್ಬಂಧಿಸಿದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸೇರಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದ್ದವು. ಆರಂಭದಲ್ಲಿ ಈ ವಿವಾದ ವಿಚಾರಣೆಯನ್ನು ಏಕಸದಸ್ಯ ಪೀಠ ನಡೆಸುತ್ತಿತ್ತು.

ನಂತರ ವಿಸ್ತೃತ ಪೀಠಕ್ಕೆ ವಿಚಾರಣೆಯನ್ನು ವರ್ಗಾವಣೆ ಮಾಡಲಾಗಿತ್ತು. ಮುಖ್ಯನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್​ ಮತ್ತು ಜೆ ಎಂ ಖಾಜಿ ಅವರನ್ನೊಳಗೊಂಡ ನ್ಯಾಯಪೀಠವು ಫೆ.25ಕ್ಕೆ ವಿಚಾರಣೆ ಮುಗಿಸಿ ತೀರ್ಪು ಕಾಯ್ದಿರಿಸಿತ್ತು.

ಬೆಂಗಳೂರು : ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್​ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್​​ನ ಮಹತ್ವದ ತೀರ್ಪು ಹೊರಬಿದ್ದಿದೆ. ತರಗತಿಗಳಲ್ಲಿ ಹಿಜಾಬ್​ ಧರಿಸುವ ಪರವಾಗಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶವನ್ನು ಉಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ.

ಅಲ್ಲದೇ, ಹಿಜಾಬ್​ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅಗತ್ಯತೆಯೂ ಅಲ್ಲ ಎಂದು ಹೈಕೋರ್ಟ್​​ ಹೇಳಿದೆ. ಈ ಮೂಲಕ ರಾಜ್ಯದಲ್ಲಿ ಎದ್ದಿದ್ದ ಹಿಜಾಬ್​ ವಿವಾದಕ್ಕೆ ನ್ಯಾಯಾಲಯ ತೆರೆ ಎಳೆದಿದೆ.

ಕಳೆದ ಜನವರಿ ತಿಂಗಳಿಂದಲೂ ಹಿಜಾಬ್​ ಪರ ಮತ್ತು ವಿರೋಧ ಚರ್ಚೆಗಳು ನಡೆಯುತ್ತಿದ್ದವು. ಹಿಜಾಬ್​ ಧರಿಸುವುದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿಕೊಂಡು ಬರುವ ಮೂಲಕ ವಿವಾದ ಮತ್ತಷ್ಟು ಕಾವು ಪಡೆದಿತ್ತು. ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಿಂದ ಆರಂಭವಾಗಿದ್ದ ಹಿಜಾಬ್​ ವಿವಾದ ದೇಶಾದ್ಯಂತ ವ್ಯಾಪಿಸಿತ್ತು.

ಉಡುಪಿ ಸರ್ಕಾರಿ ಕಾಲೇಜಿನಲ್ಲಿ ತರಗತಿಗೆ ಹಿಜಾಬ್ ಧರಿಸಿ ಹಾಜರಾಗುವುದಕ್ಕೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಆರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಅಲ್ಲಿಂದ ಆರಂಭವಾಗಿದ್ದ ಈ ವಿವಾದದ ಹಿನ್ನೆಲೆಯಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ಸಂಬಂಧ ಫೆ.5ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಅಲ್ಲದೇ, ಈ ವಿವಾದ ಹೈಕೋರ್ಟ್​ ಮೆಟ್ಟಿಲೇರಿತ್ತು. ಹಿಜಾಬ್ ನಿರ್ಬಂಧಿಸಿದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸೇರಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದ್ದವು. ಆರಂಭದಲ್ಲಿ ಈ ವಿವಾದ ವಿಚಾರಣೆಯನ್ನು ಏಕಸದಸ್ಯ ಪೀಠ ನಡೆಸುತ್ತಿತ್ತು.

ನಂತರ ವಿಸ್ತೃತ ಪೀಠಕ್ಕೆ ವಿಚಾರಣೆಯನ್ನು ವರ್ಗಾವಣೆ ಮಾಡಲಾಗಿತ್ತು. ಮುಖ್ಯನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್​ ಮತ್ತು ಜೆ ಎಂ ಖಾಜಿ ಅವರನ್ನೊಳಗೊಂಡ ನ್ಯಾಯಪೀಠವು ಫೆ.25ಕ್ಕೆ ವಿಚಾರಣೆ ಮುಗಿಸಿ ತೀರ್ಪು ಕಾಯ್ದಿರಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.