ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಚಾಲಕರ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದು, ಚಾಲನೆಯಲ್ಲಿ ನಿಪುಣತೆ ಜೊತೆಗೆ ದಾಖಲಾತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಒಟ್ಟು 39 ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದ್ದು, ಇವುಗಳಲ್ಲಿ 2 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ. ಈ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ, ವಿದ್ಯಾರ್ಹತೆ ಸೇರಿದಂತೆ ಇನ್ನಿತರ ಮಾಹಿತಿಗಳು ಇಲ್ಲಿವೆ.
ಹುದ್ದೆಯ ವಿವರ: ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಚಾಲಕರಾಗಿ ಕಾರ್ಯ ನಿರ್ವಹಿಸಲು ಅಭ್ಯರ್ಥಿಗಳಿಗೆ ಅರ್ಜಿ ಕರೆಯಲಾಗಿದೆ. ಈ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳು ಧಾರವಾಡ/ ಕಲಬುರ್ಗಿ ಪೀಠದಲ್ಲಿ ಹಾಗೂ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಎಸ್ಎಸ್ಎಲ್ಸಿ ಮುಗಿಸಿರಬೇಕು.
ಅನುಭವ: ಅಭ್ಯರ್ಥಿಗಳು ಚಾಲನ ಪರವಾನಗಿ ಹೊಂದಿರುವುದು ಕಡ್ಡಾಯ. ಲಘು ಮತ್ತು ಭಾರಿ ಗಾತ್ರದ ವಾಹನ ಚಾಲನೆ ಮಾಡಿದ ಐದು ವರ್ಷದ ಅನುಭವ ಹೊಂದಿರಬೇಕಾಗಿದೆ. ಕನ್ನಡ ಮತ್ತು ಇಂಗ್ಲಿಷಿನ ಸಾಮಾನ್ಯ ಜ್ಞಾನ ಹೊಂದಿರಬೇಕು.
ವೇತನ: ಈ ಹುದ್ದೆಗೆ ಮಾಸಿಕ 25,500 ರಿಂದ 81,100 ರೂವರೆಗೆ ನಿಗದಿ ಮಾಡಲಾಗಿದೆ.
ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಟ 35 ವರ್ಷ ವಯಸ್ಸು ಮೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ವಿವರ: ಅಭ್ಯರ್ಥಿಗಳು ಕರ್ನಾಟಕ ಹೈ ಕೋರ್ಟ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ಆನ್ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ: ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಅಥವಾ ಚಲನ್ ಮೂಲಕ ಭರ್ತಿ ಮಾಡಬಹುದು. ಪ.ಜಾ, ಪ. ಪಂ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 250 ರೂ, ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು 500 ರೂ ಅರ್ಜಿ ಶುಲ್ಕ ಪಾವತಿಸಬೇಕು.
ಹುದ್ದೆ ಆಯ್ಕೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಯ ಚಾಲನೆ ಕೌಶಲ್ಯ ಪರಿಶೀಲನೆ ಮಾಡುವ ಮೂಲಕ ಆಯ್ಕೆ ನಡೆಯುತ್ತದೆ.
ಅರ್ಜಿ ಸಲ್ಲಿಕೆ ದಿನಾಂಕ: ಈ ಹುದ್ದೆಗೆ ಮಾರ್ಚ್ 6ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್ 6. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನ ಏಪ್ರಿಲ್ 12 ಆಗಿದೆ.
ಕರ್ನಾಟಕ ಉಚ್ಛ ನ್ಯಾಯಾಲಯ ಹೊರಡಿಸಿದ ಅಧಿಕೃತ ಅಧಿಸೂಚನೆ ಮತ್ತು ಸಂಪೂರ್ಣ ವಿವರವನ್ನು ಪರಿಶೀಲಿಸಲು ಅಭ್ಯರ್ಥಿಗಳು karnatakajudiciary.kar.nic.in ಜಾಲತಾಣಕ್ಕೆ ಭೇಟಿ ನೀಡಿ.
ಇದನ್ನೂ ಓದಿ: ಬೆಂಗಳೂರು ನಗರ ಡಿಸಿ ಕಚೇರಿಯಲ್ಲಿದೆ ನೌಕರಿ: 105 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ