ಬೆಂಗಳೂರು: ಸಿದ್ದಾರ್ಥ್ ನಾಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಗೃಹದಲ್ಲಿ ನೀರವ ಮೌನವಿದೆ.
ಈ ಹಿನ್ನೆಲೆಯಲ್ಲಿ ರಾಜಕೀಯ ಮುಖಂಡರು ಹಾಗೂ ಸ್ನೇಹಿತರು ಬೆಂಗಳೂರಿನ ಎಂ ಎಸ್ ಕೃಷ್ಣ ನಿವಾಸಕ್ಕೆ ಭೇಟಿ ನೀಡುತ್ತಿದ್ದು ಸಾಂತ್ವನ ಹೇಳುತ್ತಿದ್ದಾರೆ.
ಇಂದು ಬೆಳಿಗ್ಗೆಯಿಂದಲೂ ಮುತ್ಸದ್ದಿ ರಾಜಕಾರಣಿಗಳಾದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಎಲ್ಲಾ ಪಕ್ಷದ ನಾಯಕರು ಮಾಜಿ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ತುಂಬುತ್ತಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ ಟಿ ದೇವೇಗೌಡ ತಮ್ಮ ಆಪ್ತರೊಡನೆ ಮಾತನಾಡುವ ಸಂದರ್ಭದಲ್ಲಿ ಎಸ್ ಎಂ ಕೃಷ್ಣ ಕಣ್ಣಿನಲ್ಲಿ ಬಹಳಷ್ಟು ನೋವಿದೆ ಎಂದು ಹೇಳಿದ್ರು.