ETV Bharat / state

ಕೃಷಿಕ ಸಮಾಜಗಳ ಬಲವರ್ಧನೆಗೆ ಕೇಂದ್ರದಿಂದಲೂ‌ ಹೆಚ್ಚಿನ ನೆರವು ಕೋರಿ ಪ್ರಸ್ತಾವನೆ: ಸಚಿವ ಚೆಲುವರಾಯಸ್ವಾಮಿ

ಬೆಂಗಳೂರಿನ ಕೃಷಿ ಭವನದಲ್ಲಿಂದು ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.

author img

By ETV Bharat Karnataka Team

Published : Nov 20, 2023, 8:30 PM IST

ಸಚಿವ ಚೆಲುವರಾಯಸ್ವಾಮಿ
ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು: ಕೃಷಿಕ ಸಮಾಜ ಜಿಲ್ಲಾ ಮಟ್ಟದಲ್ಲಿ ರೈತರ ಅಭ್ಯುದಯಕ್ಕೆ ನಿರಂತರವಾಗಿ ಶ್ರಮಿಸಬೇಕು ಎಂದು ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ತಿಳಿಸಿದರು. ನಗರದ‌ ಕೃಷಿ ಭವನದಲ್ಲಿ ಇಂದು ಕರ್ನಾಟಕ ಪ್ರದೇಶ ಕೃಷಿಕ‌ ಸಮಾಜದ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೃಷಿಕ ಸಮಾಜ ರೈತರ ಪರವಾದ ಸಂಸ್ಥೆ. ಹಾಗಾಗಿ ಅದರ ಮೂಲ ಆಶಯಕ್ಕೆ ತಕ್ಕಂತೆ ಕಾರ್ಯಕಾರಿ ಸಮಿತಿ‌ ಕೆಲಸ ಮಾಡಬೇಕು. ಕೃಷಿಕ ಸಮಾಜದ ಸದಸ್ಯರ ನಡುವೆ ಪರಸ್ಪರ ಸಹಕಾರ ಸಮನ್ವಯ ಅಗತ್ಯ. ಯೋಜಿತ ಹಾಗೂ ರಚನಾತ್ಮಕವಾಗಿ ಕೆಲಸ‌ ಮಾಡಿ ಎಂದು ಸಚಿವರು ಸಲಹೆ ನೀಡಿದರು.

ಕೃಷಿಕ ಸಮಾಜದ ಆಡಳಿತಾತ್ಮಕ ಸುಧಾರಣೆಗಾಗಿ ತಜ್ಞರ ಅಭಿಪ್ರಾಯ ಪಡೆದು ಸೇವಾ ನಿಯಮಗಳನ್ನು ಸರಿಯಾಗಿ ರೂಪಿಸಿ ಜಾರಿಗೊಳಿಸಬೇಕಿದೆ. ನ್ಯಾಯಾಲಯದ ತೀರ್ಪಿಗೆ ಅನುಗುಣವಾಗಿ ಕೃಷಿಕ‌ ಸಮಾಜದ ಚುನಾವಣೆ ನಿರ್ಧಾರವಾಗಲಿದೆ. ಅದಕ್ಕೆ ಎಲ್ಲ ಸದಸ್ಯರು ಸಹಕರಿಸಬೇಕು. ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ಟಾರ್ಪಲ್​ಗಳ ಗುಣಮಟ್ಟ ವೃದ್ದಿಗೆ ಕ್ರಮ ವಹಿಸಲಾಗುವುದು. ಕೃಷಿಕ ಸಮಾಜಗಳ ಬಲ ವರ್ಧನೆಗೆ ಕೇಂದ್ರದಿಂದಲೂ‌ ಹೆಚ್ಚಿನ ನೆರವು ಒದಿಗಿಸಲು ಪ್ರಸ್ತಾವನೆ ಕಳಿಸಲಾಗುವುದು ಎಂದು ಅವರು ತಿಳಿಸಿದರು.

ರೈತರಿಗೆ 2500 ಕೋಟಿ‌ ರೂ. ವರಗೆ ವಿಮೆ ಹಣ ದೊರೆಯುವ ಸಾಧ್ಯತೆ ಇದೆ. ಈಗಾಗಲೇ ಪ್ರಿವೆಂಟಿವ್ ಸೋಯಿಂಗ್ ಹಾಗೂ‌ ಮಧ್ಯಂತರ ಪರಿಹಾರ ಸೇರಿದಂತೆ 230 ಕೋಟಿ ರೂ. ರಾಜ್ಯ ಸರ್ಕಾರದಿಂದ ಬಿಡುಗಡೆ ‌ಮಾಡಲಾಗಿದೆ. ಕೇಂದ್ರದಿಂದಲೂ ಬರ ಪರಿಹಾರಕ್ಕೆ 18 ಸಾವಿರ ಕೋಟಿ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ, ಇದುವರೆಗೂ ಯಾವುದೇ ಅನುದಾನ ಬಂದಿಲ್ಲ ಎಂದು ಸಚಿವರು ಹೇಳಿದರು.

ರೈತರ ವಿಚಾರದಲ್ಲಿ ರಾಜ್ಯ ಸರ್ಕಾರದ ಹಿಂದೆ‌ ಮುಂದೆ ನೋಡುವ ಪ್ರಶ್ನೆ ಇಲ್ಲ. ಕೃಷಿಕರ ಹಿತ ಕಾಯಲು ಸದಾಸಿದ್ದ ಎಂದ ಸಚಿವರು, ಫ್ರೋಟ್ಸ್ ಐಡಿ ಹಾಗೂ ಇ.ಕೆ.ವೈ.ಸಿ ಶೇ 100 ನೋಂದಣಿಗೆ ಕೃಷಿಕ‌ ಸಮಾಜಗಳೂ ಅರಿವು ಮೂಡಿಸಬೇಕು ಎಂದು ಕರೆ ನೀಡಿದರು. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿಕ ಸಮಾಜ ಕಟ್ಟಡಗಳ ನಿರ್ಮಾಣ ನಿರ್ವಹಣೆಗೆ ಅದ್ಯತೆ ಮೇರೆಗೆ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರ ಮನವಿಯಂತೆ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ನಡೆಯುವ ಕೆ.ಡಿ.ಪಿ ಸಭೆಗಳಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಕೃಷಿಕ‌ ಸಮಾಜ ಅಧ್ಯಕ್ಷರನ್ನು ಆಹ್ವಾನಿಸುವಂತೆ ಕೋರಿ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಕೃಷಿ ಸಚಿವರು ಇದೇ ವೇಳೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಘಟಕಗಳ ಹೊಸ ಅಧ್ಯಕ್ಷರನ್ನು ಅಭಿನಂದಿಸಲಾಯಿತು. ಹಿಂದಿನ‌ ಕಾರ್ಯಕಾರಿ ಸಮಿತಿ ಸಭೆ ನಡಾವಳಿ ಬಗ್ಗೆ ಚರ್ಚೆ ನಡೆಸಿ ಅಂಗೀಕರಿಸಲಾಯಿತು.

ಹಿಂದಿನ ಸಂದರ್ಭಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ಆಗಿರುವ ದುರ್ಬಳಕೆ, ಅವ್ಯವಹಾರಗಳ ಬಗ್ಗೆ ಕಾನೂನಿನ ವ್ಯಾಪ್ತಿಯಲ್ಲಿ ತನಿಖೆ ನಡೆಸಿ ಕ್ರಮ ವಹಿಸಲು ಸಚಿವರು ಸೂಚನೆ ‌ನೀಡಿದರು. ಕೃಷಿ ಇಲಾಖೆಯ ನಿರ್ದೇಶಕರು ಕೃಷಿಕ ಸಮಾಜದ ಉಪಾಧ್ಯಕ್ಷರು ಆದ ಜಿ.ಟಿ.ಪುತ್ರ, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್, ನೂತನ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಸಿ.ಪಾಪಣ್ಣ, ಕೃಷಿಕ ಸಮಾಜದ ಕಾರ್ಯದರ್ಶಿ ಜಯಸ್ವಾಮಿ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಬರಗಾಲದ ನಡುವೆ ರಾಜ್ಯದಲ್ಲಿ ಬಿತ್ತನೆಯಾಗಿದ್ದೆಷ್ಟು, ಫಸಲು ನಷ್ಟವಾಗಿದ್ದೆಷ್ಟು?

ಬೆಂಗಳೂರು: ಕೃಷಿಕ ಸಮಾಜ ಜಿಲ್ಲಾ ಮಟ್ಟದಲ್ಲಿ ರೈತರ ಅಭ್ಯುದಯಕ್ಕೆ ನಿರಂತರವಾಗಿ ಶ್ರಮಿಸಬೇಕು ಎಂದು ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ತಿಳಿಸಿದರು. ನಗರದ‌ ಕೃಷಿ ಭವನದಲ್ಲಿ ಇಂದು ಕರ್ನಾಟಕ ಪ್ರದೇಶ ಕೃಷಿಕ‌ ಸಮಾಜದ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೃಷಿಕ ಸಮಾಜ ರೈತರ ಪರವಾದ ಸಂಸ್ಥೆ. ಹಾಗಾಗಿ ಅದರ ಮೂಲ ಆಶಯಕ್ಕೆ ತಕ್ಕಂತೆ ಕಾರ್ಯಕಾರಿ ಸಮಿತಿ‌ ಕೆಲಸ ಮಾಡಬೇಕು. ಕೃಷಿಕ ಸಮಾಜದ ಸದಸ್ಯರ ನಡುವೆ ಪರಸ್ಪರ ಸಹಕಾರ ಸಮನ್ವಯ ಅಗತ್ಯ. ಯೋಜಿತ ಹಾಗೂ ರಚನಾತ್ಮಕವಾಗಿ ಕೆಲಸ‌ ಮಾಡಿ ಎಂದು ಸಚಿವರು ಸಲಹೆ ನೀಡಿದರು.

ಕೃಷಿಕ ಸಮಾಜದ ಆಡಳಿತಾತ್ಮಕ ಸುಧಾರಣೆಗಾಗಿ ತಜ್ಞರ ಅಭಿಪ್ರಾಯ ಪಡೆದು ಸೇವಾ ನಿಯಮಗಳನ್ನು ಸರಿಯಾಗಿ ರೂಪಿಸಿ ಜಾರಿಗೊಳಿಸಬೇಕಿದೆ. ನ್ಯಾಯಾಲಯದ ತೀರ್ಪಿಗೆ ಅನುಗುಣವಾಗಿ ಕೃಷಿಕ‌ ಸಮಾಜದ ಚುನಾವಣೆ ನಿರ್ಧಾರವಾಗಲಿದೆ. ಅದಕ್ಕೆ ಎಲ್ಲ ಸದಸ್ಯರು ಸಹಕರಿಸಬೇಕು. ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ಟಾರ್ಪಲ್​ಗಳ ಗುಣಮಟ್ಟ ವೃದ್ದಿಗೆ ಕ್ರಮ ವಹಿಸಲಾಗುವುದು. ಕೃಷಿಕ ಸಮಾಜಗಳ ಬಲ ವರ್ಧನೆಗೆ ಕೇಂದ್ರದಿಂದಲೂ‌ ಹೆಚ್ಚಿನ ನೆರವು ಒದಿಗಿಸಲು ಪ್ರಸ್ತಾವನೆ ಕಳಿಸಲಾಗುವುದು ಎಂದು ಅವರು ತಿಳಿಸಿದರು.

ರೈತರಿಗೆ 2500 ಕೋಟಿ‌ ರೂ. ವರಗೆ ವಿಮೆ ಹಣ ದೊರೆಯುವ ಸಾಧ್ಯತೆ ಇದೆ. ಈಗಾಗಲೇ ಪ್ರಿವೆಂಟಿವ್ ಸೋಯಿಂಗ್ ಹಾಗೂ‌ ಮಧ್ಯಂತರ ಪರಿಹಾರ ಸೇರಿದಂತೆ 230 ಕೋಟಿ ರೂ. ರಾಜ್ಯ ಸರ್ಕಾರದಿಂದ ಬಿಡುಗಡೆ ‌ಮಾಡಲಾಗಿದೆ. ಕೇಂದ್ರದಿಂದಲೂ ಬರ ಪರಿಹಾರಕ್ಕೆ 18 ಸಾವಿರ ಕೋಟಿ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ, ಇದುವರೆಗೂ ಯಾವುದೇ ಅನುದಾನ ಬಂದಿಲ್ಲ ಎಂದು ಸಚಿವರು ಹೇಳಿದರು.

ರೈತರ ವಿಚಾರದಲ್ಲಿ ರಾಜ್ಯ ಸರ್ಕಾರದ ಹಿಂದೆ‌ ಮುಂದೆ ನೋಡುವ ಪ್ರಶ್ನೆ ಇಲ್ಲ. ಕೃಷಿಕರ ಹಿತ ಕಾಯಲು ಸದಾಸಿದ್ದ ಎಂದ ಸಚಿವರು, ಫ್ರೋಟ್ಸ್ ಐಡಿ ಹಾಗೂ ಇ.ಕೆ.ವೈ.ಸಿ ಶೇ 100 ನೋಂದಣಿಗೆ ಕೃಷಿಕ‌ ಸಮಾಜಗಳೂ ಅರಿವು ಮೂಡಿಸಬೇಕು ಎಂದು ಕರೆ ನೀಡಿದರು. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿಕ ಸಮಾಜ ಕಟ್ಟಡಗಳ ನಿರ್ಮಾಣ ನಿರ್ವಹಣೆಗೆ ಅದ್ಯತೆ ಮೇರೆಗೆ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರ ಮನವಿಯಂತೆ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ನಡೆಯುವ ಕೆ.ಡಿ.ಪಿ ಸಭೆಗಳಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಕೃಷಿಕ‌ ಸಮಾಜ ಅಧ್ಯಕ್ಷರನ್ನು ಆಹ್ವಾನಿಸುವಂತೆ ಕೋರಿ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಕೃಷಿ ಸಚಿವರು ಇದೇ ವೇಳೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಘಟಕಗಳ ಹೊಸ ಅಧ್ಯಕ್ಷರನ್ನು ಅಭಿನಂದಿಸಲಾಯಿತು. ಹಿಂದಿನ‌ ಕಾರ್ಯಕಾರಿ ಸಮಿತಿ ಸಭೆ ನಡಾವಳಿ ಬಗ್ಗೆ ಚರ್ಚೆ ನಡೆಸಿ ಅಂಗೀಕರಿಸಲಾಯಿತು.

ಹಿಂದಿನ ಸಂದರ್ಭಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ಆಗಿರುವ ದುರ್ಬಳಕೆ, ಅವ್ಯವಹಾರಗಳ ಬಗ್ಗೆ ಕಾನೂನಿನ ವ್ಯಾಪ್ತಿಯಲ್ಲಿ ತನಿಖೆ ನಡೆಸಿ ಕ್ರಮ ವಹಿಸಲು ಸಚಿವರು ಸೂಚನೆ ‌ನೀಡಿದರು. ಕೃಷಿ ಇಲಾಖೆಯ ನಿರ್ದೇಶಕರು ಕೃಷಿಕ ಸಮಾಜದ ಉಪಾಧ್ಯಕ್ಷರು ಆದ ಜಿ.ಟಿ.ಪುತ್ರ, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್, ನೂತನ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಸಿ.ಪಾಪಣ್ಣ, ಕೃಷಿಕ ಸಮಾಜದ ಕಾರ್ಯದರ್ಶಿ ಜಯಸ್ವಾಮಿ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಬರಗಾಲದ ನಡುವೆ ರಾಜ್ಯದಲ್ಲಿ ಬಿತ್ತನೆಯಾಗಿದ್ದೆಷ್ಟು, ಫಸಲು ನಷ್ಟವಾಗಿದ್ದೆಷ್ಟು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.