ETV Bharat / state

ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತ: ಆಗಸ್ಟ್ 26 ಮತ್ತು 27ರಂದು ರಾಜ್ಯದಲ್ಲಿ ಮಳೆ

author img

By

Published : Aug 23, 2021, 9:08 PM IST

ತಮಿಳುನಾಡಿನ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ಆಗಸ್ಟ್ 26 ಮತ್ತು 27ರಂದು ರಾಜ್ಯದ ಕರಾವಳಿ ಮತ್ತು ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

karnataka to receive rain on 26th and 27th august
ಆಗಸ್ಟ್ 26 ಮತ್ತು 27ರಂದು ರಾಜ್ಯದಲ್ಲಿ ಮಳೆ

ಬೆಂಗಳೂರು: ನೈರುತ್ಯ ಬಂಗಾಳ ಉಪಸಾಗರದ ತಮಿಳುನಾಡಿನ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿದೆ. ಈ ಪ್ರಭಾವದಿಂದ ಆಗಸ್ಟ್ 26 ಮತ್ತು 27ರಂದು ಕರಾವಳಿ ಮತ್ತು ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

ಆಗಸ್ಟ್ 24ರಿಂದ 25ರವರೆಗೆ ಕರಾವಳಿ ಮತ್ತು ಒಳನಾಡಿನ ಎಲ್ಲ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಆಗಸ್ಟ್ 24 ಮತ್ತು 25ರಂದು ಕೆಲವು ಕಡೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ನಿರೀಕ್ಷೆಯಿದೆ. ಆಗಸ್ಟ್ 26 ಮತ್ತು 27ರಂದು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಆಗಸ್ಟ್ 26 ಮತ್ತು 27ರಂದು ರಾಜ್ಯದಲ್ಲಿ ಮಳೆ

ರಾಜ್ಯಾದ್ಯಂತ ಸೋಮವಾರ ನೈರುತ್ಯ ಮುಂಗಾರು ಚುರುಕಾಗಿತ್ತು. ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ ಬಾಗಲಕೋಟೆಯಲ್ಲಿ 7 ಸೆಂ.ಮೀ., ಗದಗ ಜಿಲ್ಲೆಯ ನರಗುಂದದಲ್ಲಿ 6 ಸೆಂ.ಮೀ. ಹಾಗೂ ದಾವಣಗೆರೆಯಲ್ಲಿ 5 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಮುಂದಿನ ಎರಡು ದಿನ ಮಳೆ:

ರಾಜಧಾನಿಯಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್​​ ಇರಲಿದೆ ಎಂದು ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ನನ್ನ ತಾಯಿಗೂ ಮಾರಕ ಕ್ಯಾನ್ಸರ್ ಇತ್ತು.. ಆದರೆ, ಆಗ ಟೆಕ್ನಾಲಜಿ ಇರಲಿಲ್ಲ.. ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನೈರುತ್ಯ ಬಂಗಾಳ ಉಪಸಾಗರದ ತಮಿಳುನಾಡಿನ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿದೆ. ಈ ಪ್ರಭಾವದಿಂದ ಆಗಸ್ಟ್ 26 ಮತ್ತು 27ರಂದು ಕರಾವಳಿ ಮತ್ತು ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

ಆಗಸ್ಟ್ 24ರಿಂದ 25ರವರೆಗೆ ಕರಾವಳಿ ಮತ್ತು ಒಳನಾಡಿನ ಎಲ್ಲ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಆಗಸ್ಟ್ 24 ಮತ್ತು 25ರಂದು ಕೆಲವು ಕಡೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ನಿರೀಕ್ಷೆಯಿದೆ. ಆಗಸ್ಟ್ 26 ಮತ್ತು 27ರಂದು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಆಗಸ್ಟ್ 26 ಮತ್ತು 27ರಂದು ರಾಜ್ಯದಲ್ಲಿ ಮಳೆ

ರಾಜ್ಯಾದ್ಯಂತ ಸೋಮವಾರ ನೈರುತ್ಯ ಮುಂಗಾರು ಚುರುಕಾಗಿತ್ತು. ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ ಬಾಗಲಕೋಟೆಯಲ್ಲಿ 7 ಸೆಂ.ಮೀ., ಗದಗ ಜಿಲ್ಲೆಯ ನರಗುಂದದಲ್ಲಿ 6 ಸೆಂ.ಮೀ. ಹಾಗೂ ದಾವಣಗೆರೆಯಲ್ಲಿ 5 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಮುಂದಿನ ಎರಡು ದಿನ ಮಳೆ:

ರಾಜಧಾನಿಯಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್​​ ಇರಲಿದೆ ಎಂದು ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ನನ್ನ ತಾಯಿಗೂ ಮಾರಕ ಕ್ಯಾನ್ಸರ್ ಇತ್ತು.. ಆದರೆ, ಆಗ ಟೆಕ್ನಾಲಜಿ ಇರಲಿಲ್ಲ.. ಸಿಎಂ ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.