ETV Bharat / state

ಕೆ.ಜಿ.ಹಳ್ಳಿ ಗಲಭೆ ಆರೋಪಿ ಬಿಜೆಪಿ ಬೆಂಬಲಿಗ, ಸತ್ಯಶೋಧನೆಗೆ ಕಾಂಗ್ರೆಸ್ ಸಮಿತಿ: ಡಿಕೆಶಿ

author img

By

Published : Aug 12, 2020, 6:43 PM IST

Updated : Aug 12, 2020, 7:05 PM IST

ಆರೋಪಿ ನವೀನ್, ಶ್ರೀನಿವಾಸ ಅವರ ಸಂಬಂಧಿಯಾಗಿದ್ದರೂ ಆತ ಮೊದಲಿನಿಂದಲೂ ಬಿಜೆಪಿಯ ಕಟ್ಟಾ ಬೆಂಬಲಿಗ. ಅವನಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಈ ಕೃತ್ಯ ಪೂರ್ವನಿಯೋಜಿತವಾಗಿದ್ದು, ಇದರ ಸತ್ಯಾಂಶ ಕಂಡುಕೊಳ್ಳಲು ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ಮೂವರು ಮಾಜಿ ಗೃಹ ಸಚಿವರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆ.ಜಿ. ಹಳ್ಳಿ ಘಟನೆಗೆ ಮೂಲ ಕಾರಣನಾದ ನವೀನ್ ಬಿಜೆಪಿ ಬೆಂಬಲಿಗನಾಗಿದ್ದು, ಇಡೀ ಪ್ರಕರಣದ ಸತ್ಯಶೋಧನೆಗೆ ಡಾ.ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ ಆರು ಹಿರಿಯ ಸದಸ್ಯರ ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, 'ಈ ಘಟನೆಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೂ ಯಾವುದೇ ಸಂಬಂಧವಿಲ್ಲ. ಆರೋಪಿ ನವೀನ್, ಶ್ರೀನಿವಾಸ ಅವರ ಸಂಬಂಧಿಯಾಗಿದ್ದರೂ ಆತ ಮೊದಲಿನಿಂದಲೂ ಬಿಜೆಪಿಯ ಕಟ್ಟಾ ಬೆಂಬಲಿಗ. ಅವನಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ' ಎಂದಿದ್ದಾರೆ.

ಕೆ.ಜಿ.ಹಳ್ಳಿ ಗಲಭೆ ಆರೋಪಿ ಬಿಜೆಪಿ ಬೆಂಬಲಿಗ-ಡಿಕೆಶಿ

ಇದು ಪೂರ್ವನಿಯೋಜಿತ ಕೃತ್ಯವಾಗಿದ್ದು, ಇದರ ಸತ್ಯಾಂಶ ಕಂಡುಕೊಳ್ಳಲು ಪರಮೇಶ್ವರ್ ಅವರ ನೇತೃತ್ವದಲ್ಲಿ ಮೂವರು ಮಾಜಿ ಗೃಹ ಸಚಿವರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಕೆ.ಜೆ ಜಾರ್ಜ್, ರಾಮಲಿಂಗಾರೆಡ್ಡಿ, ಬಿ.ಕೆ. ಹರಿಪ್ರಸಾದ್, ಕೃಷ್ಣಭೈರೇಗೌಡ, ನಾಸೀರ್ ಅಹಮದ್ ಇದ್ದಾರೆ ಎಂದರು.

'ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ ನಡೆದ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಅದೇ ರೀತಿ ಒಂದು ಧರ್ಮದ ವಿಚಾರವಾಗಿ ನೀಡಿರುವ ಹೇಳಿಕೆಯನ್ನೂ ಖಂಡಿಸುತ್ತೇವೆ. ಪ್ರಚೋದನಕಾರಿ ಹೇಳಿಕೆ ಪ್ರಕಟಿಸಿರುವ ನವೀನ್ ಬಿಜೆಪಿಯ ಬೆಂಬಲಿಗ. ಆತ ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ತಾನು ಬಿಜೆಪಿಗೆ ಮತ ಹಾಕಿದ್ದು, ಈ ಬಾರಿ ಬಿಜೆಪಿ ಜಯ ಗಳಿಸಿದೆ ಎಂದು ಬರೆದುಕೊಂಡಿದ್ದ. ಈತ ಶಾಸಕ ಶ್ರೀನಿವಾಸ ಅವರ ಸಂಬಂಧಿಯಾದರೂ, ಅವರೊಡನೆ ರಾಜಕೀಯ ಸಂಬಂಧ ಹೊಂದಿಲ್ಲ. ಈತನ ಹೇಳಿಕೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಅದನ್ನು ತೆಗೆದುಕೊಂಡಿಲ್ಲ. ಇತ್ತೀಚೆಗೆ ನಮ್ಮ ಕಾರ್ಯಕರ್ತ ಕೇಂದ್ರ ಗೃಹ ಸಚಿವರ ವಿರುದ್ಧ ಕಾಮೆಂಟ್ ಮಾಡಿದ್ದಕ್ಕೆ ಸುಮೋಟೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ರಾತ್ರೋರಾತ್ರಿ ಆತನನ್ನು ಬಂಧಿಸಿದ್ದರು. ನಾನು ಆತನ ಹೇಳಿಕೆಯನ್ನೂ ವಿರೋಧಿಸಿದ್ದೇನೆ. ಈಗ ದೂರು ಕೊಟ್ಟರೂ ಅದನ್ನು ತೆಗೆದುಕೊಂಡಿಲ್ಲ. ಪೊಲೀಸರು ಈ ವಿಚಾರದಲ್ಲಿ ಸರಿಯಾದ ಕ್ರಮ ಕೈಗೊಳ್ಳದಿರುವುದೇ ಈ ಎಲ್ಲ ಅನಾಹುತಕ್ಕೆ ಕಾರಣ' ಎಂದಿದ್ದಾರೆ.

ಪೊಲೀಸರು ರಕ್ಷಣೆಗೆ ಮುಂದಾಗಿಲ್ಲ:

ನಮ್ಮ ಶಾಸಕರ ಮನೆ ಮೇಲೆ ದಾಳಿ ನಡೆಯುತ್ತಿದ್ದರೂ ಅವರ ರಕ್ಷಣೆಗೆ ಪೊಲೀಸರು ಮುಂದಾಗಲಿಲ್ಲ. ನವೀನ್ ಬಿಜೆಪಿಯ ಬೆಂಬಲಿಗ ಎಂಬ ಕಾರಣಕ್ಕೆ ಆತನ ವಿರುದ್ಧ ಬಹಳ ಹೊತ್ತಿನವರೆಗೂ ಪ್ರಕರಣ ದಾಖಲಿಸಿಕೊಳ್ಳಲಿಲ್ಲ. ಮೇಲಾಗಿ ಪೊಲೀಸರು ಮೂರು ಗಂಟೆ ಅಮೂಲ್ಯ ಸಮಯವನ್ನು ಹಾಳು ಮಾಡಿದ್ದರಿಂದಾಗಿ ಇಷ್ಟೆಲ್ಲ ಅನಾಹುತವಾಗಿದೆ. ಇದು ಸಂಪೂರ್ಣ ಪೊಲೀಸ್‌ ವೈಫಲ್ಯ. ಸರ್ಕಾರದ ವೈಫಲ್ಯ. ಈ ಸರ್ಕಾರಕ್ಕೆ ನಮ್ಮ ಶಾಸಕರಿಗೆ ಹಾಗೂ ಸುತ್ತಮುತ್ತಲಿನ ಜನರಿಗೆ ರಕ್ಷಣೆ ನೀಡಲು ಆಗಲಿಲ್ಲ. ಪೊಲೀಸ್ ಠಾಣೆಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದ ಮೇಲೆ ಈ ಸರ್ಕಾರ ಯಾಕಿರಬೇಕು? ಈ ಪ್ರಕರಣಕ್ಕೆ ಯಾರು ಹೊಣೆ? ಕಾನೂನನ್ನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಜರುಗಿಸಿ. ನಾವು ಆಕ್ಷೇಪ ಮಾಡುವುದಿಲ್ಲ. ರಾಜ್ಯದಲ್ಲಿ ಶಾಂತಿ ಕಾಪಾಡಬೇಕು, ಯಾರೂ ಕೂಡ ಪ್ರಚೋದನೆಗೆ ಒಳಗಾಗಬಾರದು. ಇದು ಸೂಕ್ಷ್ಮ ವಿಚಾರವಾಗಿದ್ದು, ರಾಜ್ಯದ ಘನತೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು. ಹೀಗಾಗಿ ಪಕ್ಷ, ಜಾತಿ, ಧರ್ಮಬೇಧ ಮರೆತು ಶಾಂತಿ ಕಾಪಾಡಬೇಕು. ಶಾಂತಿ ಸ್ಥಾಪನೆಗಾಗಿ ನಾವು ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದರು.

ಸಿಎಂ ದಿಟ್ಟ ನಿರ್ಧಾರ ಕೈಗೊಳ್ಳಲಿ:

ಈ ವಿಚಾರದಲ್ಲಿ ಮುಖ್ಯಮಂತ್ರಿಗಳ ದಿಟ್ಟ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಅದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಆದರೆ ಅವರ ಸಂಪುಟದ ಮಂತ್ರಿಗಳು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಜನರನ್ನು ರೊಚ್ಚಿಗೇಳುವಂತೆ ಪ್ರೇರೇಪಿಸುತ್ತದೆ. ಅವರ ಹೇಳಿಕೆಗಳನ್ನು ಮುಖ್ಯಮಂತ್ರಿಗಳು ಗಮನಿಸಬೇಕು. ಕಾಂಗ್ರೆಸ್ ನಾಯಕರು ಎಲ್ಲಿದ್ದಾರೆ ಎಂದು ಬಿಜೆಪಿ ಮುಖಂಡರು ಕೇಳುತ್ತಿದ್ದಾರೆ. ಸರ್ಕಾರದಲ್ಲಿ ನಾವಿಲ್ಲ. ಆದರೆ ನಾವು ಶಾಂತಿ ಕಾಪಾಡಲು ಎಲ್ಲ ಸಹಕಾರ ನೀಡುತ್ತೇವೆ. ತಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ. ಆದರೆ ಅಮಾಯಕರಿಗೆ ತೊಂದರೆ ಕೊಡಬೇಡಿ. ನಾನು ಈಶ್ವರಪ್ಪಣ್ಣ, ಅಶೋಕಣ್ಣ, ಸಿ.ಟಿ. ರವಿಯಣ್ಣ, ಶೋಭಕ್ಕ ನೀಡಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಯಾರು ಬೆಂಕಿಗೆ ತುಪ್ಪ, ಸೀಮೆಎಣ್ಣೆ, ಪೆಟ್ರೋಲ್ ಸುರಿಯಿತ್ತಿದ್ದಾರೆ ಎಂಬುದನ್ನು ಜನ ಗಮನಿಸುತ್ತಿದ್ದಾರೆ. ಇದು ಶಾಂತಿ ಕಾಪಾಡಬೇಕಾದ ಸಮಯ. ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ರಾಜಕೀಯ ಮಾಡೋದಕ್ಕೆ ಬೇರೆ ಸಂದರ್ಭ, ವಿಚಾರಗಳಿವೆ ಎಂದರು.

ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ:

ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಬರೀ ಎಸ್‌ಡಿಪಿಐ, ಪಿಎಫ್ಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನಷ್ಟೆ ವಾಪಸ್​​ ಪಡೆದಿಲ್ಲ. ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳ ವಿರುದ್ಧವೂ ದಾಖಲಿಸಿದ್ದ ಬರೀ ರಾಜಕೀಯಪ್ರೇರಿತ ಮೊಕದ್ದಮೆಗಳನ್ನು ವಾಪಸ್​​ ಪಡೆದಿದೆ. ಈಗ ಯಾರಾದರೂ ತಪ್ಪು ಮಾಡಿದ್ದರೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿ. ನಾವೇನೂ ಬೇಡ ಅಂದಿಲ್ಲ. ತಪ್ಪು ಮಾಡಿದ ಯಾರನ್ನೂ ಕಾಂಗ್ರೆಸ್ ರಕ್ಷಿಸುವುದಿಲ್ಲ, ಬೆಂಬಲಿಸುವುದಿಲ್ಲ ಎಂದರು.

ಬೆಂಗಳೂರು: ಕೆ.ಜಿ. ಹಳ್ಳಿ ಘಟನೆಗೆ ಮೂಲ ಕಾರಣನಾದ ನವೀನ್ ಬಿಜೆಪಿ ಬೆಂಬಲಿಗನಾಗಿದ್ದು, ಇಡೀ ಪ್ರಕರಣದ ಸತ್ಯಶೋಧನೆಗೆ ಡಾ.ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ ಆರು ಹಿರಿಯ ಸದಸ್ಯರ ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, 'ಈ ಘಟನೆಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೂ ಯಾವುದೇ ಸಂಬಂಧವಿಲ್ಲ. ಆರೋಪಿ ನವೀನ್, ಶ್ರೀನಿವಾಸ ಅವರ ಸಂಬಂಧಿಯಾಗಿದ್ದರೂ ಆತ ಮೊದಲಿನಿಂದಲೂ ಬಿಜೆಪಿಯ ಕಟ್ಟಾ ಬೆಂಬಲಿಗ. ಅವನಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ' ಎಂದಿದ್ದಾರೆ.

ಕೆ.ಜಿ.ಹಳ್ಳಿ ಗಲಭೆ ಆರೋಪಿ ಬಿಜೆಪಿ ಬೆಂಬಲಿಗ-ಡಿಕೆಶಿ

ಇದು ಪೂರ್ವನಿಯೋಜಿತ ಕೃತ್ಯವಾಗಿದ್ದು, ಇದರ ಸತ್ಯಾಂಶ ಕಂಡುಕೊಳ್ಳಲು ಪರಮೇಶ್ವರ್ ಅವರ ನೇತೃತ್ವದಲ್ಲಿ ಮೂವರು ಮಾಜಿ ಗೃಹ ಸಚಿವರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಕೆ.ಜೆ ಜಾರ್ಜ್, ರಾಮಲಿಂಗಾರೆಡ್ಡಿ, ಬಿ.ಕೆ. ಹರಿಪ್ರಸಾದ್, ಕೃಷ್ಣಭೈರೇಗೌಡ, ನಾಸೀರ್ ಅಹಮದ್ ಇದ್ದಾರೆ ಎಂದರು.

'ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ ನಡೆದ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಅದೇ ರೀತಿ ಒಂದು ಧರ್ಮದ ವಿಚಾರವಾಗಿ ನೀಡಿರುವ ಹೇಳಿಕೆಯನ್ನೂ ಖಂಡಿಸುತ್ತೇವೆ. ಪ್ರಚೋದನಕಾರಿ ಹೇಳಿಕೆ ಪ್ರಕಟಿಸಿರುವ ನವೀನ್ ಬಿಜೆಪಿಯ ಬೆಂಬಲಿಗ. ಆತ ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ತಾನು ಬಿಜೆಪಿಗೆ ಮತ ಹಾಕಿದ್ದು, ಈ ಬಾರಿ ಬಿಜೆಪಿ ಜಯ ಗಳಿಸಿದೆ ಎಂದು ಬರೆದುಕೊಂಡಿದ್ದ. ಈತ ಶಾಸಕ ಶ್ರೀನಿವಾಸ ಅವರ ಸಂಬಂಧಿಯಾದರೂ, ಅವರೊಡನೆ ರಾಜಕೀಯ ಸಂಬಂಧ ಹೊಂದಿಲ್ಲ. ಈತನ ಹೇಳಿಕೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಅದನ್ನು ತೆಗೆದುಕೊಂಡಿಲ್ಲ. ಇತ್ತೀಚೆಗೆ ನಮ್ಮ ಕಾರ್ಯಕರ್ತ ಕೇಂದ್ರ ಗೃಹ ಸಚಿವರ ವಿರುದ್ಧ ಕಾಮೆಂಟ್ ಮಾಡಿದ್ದಕ್ಕೆ ಸುಮೋಟೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ರಾತ್ರೋರಾತ್ರಿ ಆತನನ್ನು ಬಂಧಿಸಿದ್ದರು. ನಾನು ಆತನ ಹೇಳಿಕೆಯನ್ನೂ ವಿರೋಧಿಸಿದ್ದೇನೆ. ಈಗ ದೂರು ಕೊಟ್ಟರೂ ಅದನ್ನು ತೆಗೆದುಕೊಂಡಿಲ್ಲ. ಪೊಲೀಸರು ಈ ವಿಚಾರದಲ್ಲಿ ಸರಿಯಾದ ಕ್ರಮ ಕೈಗೊಳ್ಳದಿರುವುದೇ ಈ ಎಲ್ಲ ಅನಾಹುತಕ್ಕೆ ಕಾರಣ' ಎಂದಿದ್ದಾರೆ.

ಪೊಲೀಸರು ರಕ್ಷಣೆಗೆ ಮುಂದಾಗಿಲ್ಲ:

ನಮ್ಮ ಶಾಸಕರ ಮನೆ ಮೇಲೆ ದಾಳಿ ನಡೆಯುತ್ತಿದ್ದರೂ ಅವರ ರಕ್ಷಣೆಗೆ ಪೊಲೀಸರು ಮುಂದಾಗಲಿಲ್ಲ. ನವೀನ್ ಬಿಜೆಪಿಯ ಬೆಂಬಲಿಗ ಎಂಬ ಕಾರಣಕ್ಕೆ ಆತನ ವಿರುದ್ಧ ಬಹಳ ಹೊತ್ತಿನವರೆಗೂ ಪ್ರಕರಣ ದಾಖಲಿಸಿಕೊಳ್ಳಲಿಲ್ಲ. ಮೇಲಾಗಿ ಪೊಲೀಸರು ಮೂರು ಗಂಟೆ ಅಮೂಲ್ಯ ಸಮಯವನ್ನು ಹಾಳು ಮಾಡಿದ್ದರಿಂದಾಗಿ ಇಷ್ಟೆಲ್ಲ ಅನಾಹುತವಾಗಿದೆ. ಇದು ಸಂಪೂರ್ಣ ಪೊಲೀಸ್‌ ವೈಫಲ್ಯ. ಸರ್ಕಾರದ ವೈಫಲ್ಯ. ಈ ಸರ್ಕಾರಕ್ಕೆ ನಮ್ಮ ಶಾಸಕರಿಗೆ ಹಾಗೂ ಸುತ್ತಮುತ್ತಲಿನ ಜನರಿಗೆ ರಕ್ಷಣೆ ನೀಡಲು ಆಗಲಿಲ್ಲ. ಪೊಲೀಸ್ ಠಾಣೆಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದ ಮೇಲೆ ಈ ಸರ್ಕಾರ ಯಾಕಿರಬೇಕು? ಈ ಪ್ರಕರಣಕ್ಕೆ ಯಾರು ಹೊಣೆ? ಕಾನೂನನ್ನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಜರುಗಿಸಿ. ನಾವು ಆಕ್ಷೇಪ ಮಾಡುವುದಿಲ್ಲ. ರಾಜ್ಯದಲ್ಲಿ ಶಾಂತಿ ಕಾಪಾಡಬೇಕು, ಯಾರೂ ಕೂಡ ಪ್ರಚೋದನೆಗೆ ಒಳಗಾಗಬಾರದು. ಇದು ಸೂಕ್ಷ್ಮ ವಿಚಾರವಾಗಿದ್ದು, ರಾಜ್ಯದ ಘನತೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು. ಹೀಗಾಗಿ ಪಕ್ಷ, ಜಾತಿ, ಧರ್ಮಬೇಧ ಮರೆತು ಶಾಂತಿ ಕಾಪಾಡಬೇಕು. ಶಾಂತಿ ಸ್ಥಾಪನೆಗಾಗಿ ನಾವು ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದರು.

ಸಿಎಂ ದಿಟ್ಟ ನಿರ್ಧಾರ ಕೈಗೊಳ್ಳಲಿ:

ಈ ವಿಚಾರದಲ್ಲಿ ಮುಖ್ಯಮಂತ್ರಿಗಳ ದಿಟ್ಟ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಅದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಆದರೆ ಅವರ ಸಂಪುಟದ ಮಂತ್ರಿಗಳು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಜನರನ್ನು ರೊಚ್ಚಿಗೇಳುವಂತೆ ಪ್ರೇರೇಪಿಸುತ್ತದೆ. ಅವರ ಹೇಳಿಕೆಗಳನ್ನು ಮುಖ್ಯಮಂತ್ರಿಗಳು ಗಮನಿಸಬೇಕು. ಕಾಂಗ್ರೆಸ್ ನಾಯಕರು ಎಲ್ಲಿದ್ದಾರೆ ಎಂದು ಬಿಜೆಪಿ ಮುಖಂಡರು ಕೇಳುತ್ತಿದ್ದಾರೆ. ಸರ್ಕಾರದಲ್ಲಿ ನಾವಿಲ್ಲ. ಆದರೆ ನಾವು ಶಾಂತಿ ಕಾಪಾಡಲು ಎಲ್ಲ ಸಹಕಾರ ನೀಡುತ್ತೇವೆ. ತಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ. ಆದರೆ ಅಮಾಯಕರಿಗೆ ತೊಂದರೆ ಕೊಡಬೇಡಿ. ನಾನು ಈಶ್ವರಪ್ಪಣ್ಣ, ಅಶೋಕಣ್ಣ, ಸಿ.ಟಿ. ರವಿಯಣ್ಣ, ಶೋಭಕ್ಕ ನೀಡಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಯಾರು ಬೆಂಕಿಗೆ ತುಪ್ಪ, ಸೀಮೆಎಣ್ಣೆ, ಪೆಟ್ರೋಲ್ ಸುರಿಯಿತ್ತಿದ್ದಾರೆ ಎಂಬುದನ್ನು ಜನ ಗಮನಿಸುತ್ತಿದ್ದಾರೆ. ಇದು ಶಾಂತಿ ಕಾಪಾಡಬೇಕಾದ ಸಮಯ. ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ರಾಜಕೀಯ ಮಾಡೋದಕ್ಕೆ ಬೇರೆ ಸಂದರ್ಭ, ವಿಚಾರಗಳಿವೆ ಎಂದರು.

ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ:

ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಬರೀ ಎಸ್‌ಡಿಪಿಐ, ಪಿಎಫ್ಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನಷ್ಟೆ ವಾಪಸ್​​ ಪಡೆದಿಲ್ಲ. ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳ ವಿರುದ್ಧವೂ ದಾಖಲಿಸಿದ್ದ ಬರೀ ರಾಜಕೀಯಪ್ರೇರಿತ ಮೊಕದ್ದಮೆಗಳನ್ನು ವಾಪಸ್​​ ಪಡೆದಿದೆ. ಈಗ ಯಾರಾದರೂ ತಪ್ಪು ಮಾಡಿದ್ದರೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿ. ನಾವೇನೂ ಬೇಡ ಅಂದಿಲ್ಲ. ತಪ್ಪು ಮಾಡಿದ ಯಾರನ್ನೂ ಕಾಂಗ್ರೆಸ್ ರಕ್ಷಿಸುವುದಿಲ್ಲ, ಬೆಂಬಲಿಸುವುದಿಲ್ಲ ಎಂದರು.

Last Updated : Aug 12, 2020, 7:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.