ETV Bharat / state

ಆನಂದ್​ ಸಿಂಗ್​ ರಾಜೀನಾಮೆ ಸಂಬಂಧ ಸ್ಪೀಕರ್​​​ ಜೊತೆ ಚರ್ಚಿಸಿದ ಖಂಡ್ರೆ, ಪರಮೇಶ್ವರ್​​​​​​

ವಿಧಾನಸೌಧದಲ್ಲಿ ಸ್ಪೀಕರ್ ಆರ್​.ರಮೇಶ್​ ಕುಮಾರ್ ಅವರನ್ನು ಭೇಟಿ ಮಾಡಿದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕ ಆನಂದ್ ​ಸಿಂಗ್ ರಾಜೀನಾಮೆ ನೀಡಿರುವ ಕುರಿತು ಚರ್ಚೆ ನಡೆಸಿದ್ದಾರೆ.

author img

By

Published : Jul 4, 2019, 5:23 PM IST

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಬೆಂಗಳೂರು: ವಿಧಾನಸೌಧದಲ್ಲಿ ಸ್ಪೀಕರ್ ಆರ್​.ರಮೇಶ್​ ಕುಮಾರ್ ಅವರನ್ನು ಭೇಟಿ ಮಾಡಿದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕ ಆನಂದ್ ​ಸಿಂಗ್ ರಾಜೀನಾಮೆ ನೀಡಿರುವ ಕುರಿತು ಚರ್ಚೆ ನಡೆಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಆನಂದ್ ಸಿಂಗ್ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆನಂದ್​ ಸಿಂಗ್​ ವಿರುದ್ಧ ದೂರು ಕೂಡ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಇದ್ದರು.

ಪಕ್ಷಕ್ಕೆ ಯಾವುದೇ ರಾಜೀನಾಮೆ ಪತ್ರ ಕೊಟ್ಟಿಲ್ಲ: ಸ್ಪೀಕರ್ ಭೇಟಿ ಬಳಿಕ ಈಶ್ವರ್ ಖಂಡ್ರೆ ಮಾತನಾಡಿ, ಆನಂದ್ ಸಿಂಗ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಪಕ್ಷಕ್ಕೆ ಅವರು ಯಾವುದೇ ರಾಜೀನಾಮೆ ಪತ್ರ ಕೊಟ್ಟಿಲ್ಲ. ಆನಂದ್ ​ಸಿಂ​ಗ್ ‌ರಾಜೀನಾಮೆ ಕೊಟ್ಟಿರುವುದು ಏಕೆ ಎಂಬ ಮಾಹಿತಿ ಪಡೆದಿದ್ದೇವೆ ಅಷ್ಟೇ. ಆದರೆ ರಾಜೀನಾಮೆ ಅಂಗೀಕಾರ ಮಾಡದಂತೆ ಸ್ಪೀಕರ್​​ಗೆ ದೂರು ಕೊಟ್ಟಿಲ್ಲ. ಈ ಬಗ್ಗೆ ಪಕ್ಷದ ‌ನಾಯಕರ ಜೊತೆ ಚರ್ಚಿಸಿ‌ ದೂರು ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ವಿವರಿಸಿದ್ದಾರೆ.

ಬೆಂಗಳೂರು: ವಿಧಾನಸೌಧದಲ್ಲಿ ಸ್ಪೀಕರ್ ಆರ್​.ರಮೇಶ್​ ಕುಮಾರ್ ಅವರನ್ನು ಭೇಟಿ ಮಾಡಿದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕ ಆನಂದ್ ​ಸಿಂಗ್ ರಾಜೀನಾಮೆ ನೀಡಿರುವ ಕುರಿತು ಚರ್ಚೆ ನಡೆಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಆನಂದ್ ಸಿಂಗ್ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆನಂದ್​ ಸಿಂಗ್​ ವಿರುದ್ಧ ದೂರು ಕೂಡ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಇದ್ದರು.

ಪಕ್ಷಕ್ಕೆ ಯಾವುದೇ ರಾಜೀನಾಮೆ ಪತ್ರ ಕೊಟ್ಟಿಲ್ಲ: ಸ್ಪೀಕರ್ ಭೇಟಿ ಬಳಿಕ ಈಶ್ವರ್ ಖಂಡ್ರೆ ಮಾತನಾಡಿ, ಆನಂದ್ ಸಿಂಗ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಪಕ್ಷಕ್ಕೆ ಅವರು ಯಾವುದೇ ರಾಜೀನಾಮೆ ಪತ್ರ ಕೊಟ್ಟಿಲ್ಲ. ಆನಂದ್ ​ಸಿಂ​ಗ್ ‌ರಾಜೀನಾಮೆ ಕೊಟ್ಟಿರುವುದು ಏಕೆ ಎಂಬ ಮಾಹಿತಿ ಪಡೆದಿದ್ದೇವೆ ಅಷ್ಟೇ. ಆದರೆ ರಾಜೀನಾಮೆ ಅಂಗೀಕಾರ ಮಾಡದಂತೆ ಸ್ಪೀಕರ್​​ಗೆ ದೂರು ಕೊಟ್ಟಿಲ್ಲ. ಈ ಬಗ್ಗೆ ಪಕ್ಷದ ‌ನಾಯಕರ ಜೊತೆ ಚರ್ಚಿಸಿ‌ ದೂರು ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ವಿವರಿಸಿದ್ದಾರೆ.

Intro:newsBody:ಸ್ಪೀಕರ್ ಭೇಟಿ ಮಾಡಿ ಚರ್ಚಿಸಿದ ಡಿಸಿಎಂ ಹಾಗೂ ಈಶ್ವರ್ ಖಂಡ್ರೆ


ಬೆಂಗಳೂರು: ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಿಧಾನಸೌಧದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಆನಂದ್ ಸಿಂಗ್ ವಿರುದ್ಧ ಕಾಂಗ್ರೆಸ್ ನಾಯಕರು ಇದೇ ಸಂದರ್ಭ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇವರ ವಿರುದ್ಧ ದೂರು ಕೂಡ ಸಲಿಕೆ ಮಾಡಿದ್ದಾರೆ ಎನ್ನಲಾಗಿದೆ. ದೂರು ನೀಡುವ ವೇಳೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಕೂಡ ಭಾಗಿಯಾಗಿದ್ದರು.
ಯಾವುದೇ ರಾಜೀನಾಮೆ ಪತ್ರ ಕೊಟ್ಟಿಲ್ಲ
ಸ್ಪೀಕರ್ ಭೇಟಿ ಬಳಿಕ ಈಶ್ವರ್ ಖಂಡ್ರೆ ಮಾತನಾಡಿ, ತಮ್ಮ ಪಕ್ಷದ ಶಾಸಕ ಅನಂದ್ ಸಿಂಗ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಆದ್ರೆ ನಮ್ಮ ಪಕ್ಷಕ್ಕೆ ಅವರು ಯಾವುದೇ ರಾಜೀನಾಮೆ ಪತ್ರ ಕೊಟ್ಟಿಲ್ಲ. ವಿಜಯನಗರ ಕ್ಷೇತ್ರದಿಂದ ನಮ್ಮ ಪಕ್ಷದಿಂದ ಆಯ್ಕೆ ಆಗಿದ್ದರು. ನಾವು ಕಳೆದ ಚುನಾವಣೆ ವೇಳೆ ಅವರಿಗೆ ನಮ್ಮ ಪಕ್ಷದಿಂದ ಬಿ ಫಾರಂ ಕೊಟ್ಟಿದ್ದೆವು. ಆ ಮೇಲೆ ನಮ್ಮ ಪಕ್ಷದಿಂದ ಅವರು ಗೆದ್ದಿದ್ದಾರೆ. ಆದ್ರೆ ಈಗ ಅವರು ಸ್ಪೀಕರ್ ಗೆ ರಾಜೀನಾಮೆ ಕೊಟ್ಟಿದ್ದಾರೆ. ನಾವು ಇವಾಗ ಅವರ ವಿರುದ್ಧ ಸ್ಪೀಕರ್ ಗೆ ದೂರು ಕೊಟ್ಟಿಲ್ಲ. ಆದ್ರೆ ಆನಂದ್ ಸಿಂಗ್ ಯಾಕೆ ‌ರಾಜೀನಾಮೆ ಕೊಟ್ಟಿದ್ದಾರೆ ಎಂಬ ಮಾಹಿತಿ ಪಡೆದಿದ್ದೇವೆ ಅಷ್ಟೇ ಎಂದರು.
ಸ್ಪೀಕರ್ ಗೆ ಅವರು ರಾಜೀನಾಮೆ ಕೊಟ್ಟಿರೋದು ಯಾಕೆ ಎಂಬ ಮಾಹಿತಿ ಪಡೆದಿದ್ದೇವೆ. ಆದರೆ ಅವರ ರಾಜೀನಾಮೆ ಅಂಗೀಕಾರ ಮಾಡದಂತೆ ಇಂದು ನಾವು, ಸ್ಪೀಕರ್ ಗೆ ದೂರು ನೀಡಿಲ್ಲ. ಸದ್ಯ ಅವರ ರಾಜೀನಾಮೆ ಕುರಿತು ಮಾಹಿತಿ ಪಡೆದಿದ್ದೇವೆ ಅಷ್ಟೇ. ಮುಂದೆ ಈ ಬಗ್ಗೆ ನಮ್ಮ ಪಕ್ಷದ ‌ನಾಯಕರ ಜೊತೆ ಚರ್ಚಿಸುತ್ತೇವೆ. ನಂತರ ಅವರ ರಾಜೀನಾಮೆ ಅಂಗೀಕಾರ, ಮಾಡದಂತೆ ಸ್ಪೀಕರ್ ಗೆ‌ ದೂರು ನೀಡುವ ಬಗ್ಗೆ ನಿರ್ಧಾರ ಕೈಗೊಳ್ತೇವೆ ಎಂದು ವಿವರಿಸಿದರು.
ಅಧಿವೇಶನ ಸಂಬಂಧ ಚರ್ಚೆ
ಸ್ಪೀಕರ್ ಭೇಟಿ ಬಳಿಕ ಡಿಸಿಎಂ ಪರಮೇಶ್ವರ್ ಮಾತನಾಡಿ, ಜುಲೈ 12ರಿಂದ‌ ಮಳೆಗಾಲದ ಅಧಿವೇಶನ ಆರಂಭವಾಗಲಿದೆ. ಹೀಗಾಗಿ ಅಧಿವೇಶನ ಬಗ್ಗೆ ಸ್ಪೀಕರ್ ಜೊತೆ ಚರ್ಚೆ ಮಾಡಿದ್ದೇನೆ. ಸಂಸದೀಯ ಸಚಿವನಾದ ನಾನು ಸ್ಪೀಕರ್ ಜೊತೆ ಚರ್ಚಿಸಿದ್ದೇನೆ. ಅಧಿವೇಶನ ನಡೆಸಲು ರಾಜ್ಯಪಾಲರಿಂದ ಅನುಮತಿ ಸಿಕ್ಕಿದೆ. ಹೀಗಾಗಿ ಈ ಬಗ್ಗೆ ಸ್ಪೀಕರ್ ಗಮನಕ್ಕೆ ತರಲು ನಾನು ಬಂದಿದ್ದೆ. ಆದರೆ ಬೇರೆ ಯಾವುದೇ ವಿಷಯಗಳ ಬಗ್ಗೆ ಸ್ಪೀಕರ ಜೊತೆ ನಾನು ಚರ್ಚೆ ಮಾಡಿಲ್ಲ ಎಂದರು.
Conclusion:news

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.