ETV Bharat / state

ಬಂಡೇಮಠ ಕೆಎಚ್​ಬಿ ಬಡಾವಣೆ ಅಧಿಕೃತವಾಗಿ ಬಿಬಿಎಂಪಿಗೆ ಹಸ್ತಾಂತರ

author img

By

Published : Dec 31, 2022, 8:03 PM IST

ಕೆಎಚ್​ಬಿ ಬಡಾವಣೆಯನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಬೇಕು ಎಂಬ ಸ್ಥಳೀಯರ ಹೋರಾಟಕ್ಕೆ ಜಯ-ಮೂಲಸೌಕರ್ಯ ಕಲ್ಪಿಸಲು ಕರ್ನಾಟಕ ಗೃಹ ಮಂಡಳಿಯು ಬಿಬಿಎಂಪಿಗೆ 5 ಕೋಟಿ ರೂಪಾಯಿ ಪಾವತಿಸುವ ಮೂಲಕ ಹಸ್ತಾಂತರ ಮಾಡಿದೆ.

KHB layout officially handed over to BBMP
ಬಂಡೇಮಠ ಕೆಎಚ್​ಬಿ ಬಡಾವಣೆ ಅಧಿಕೃತವಾಗಿ ಬಿಬಿಎಂಪಿಗೆ ಹಸ್ತಾಂತರ

ಬೆಂಗಳೂರು: ಮೂಲಸೌಕರ್ಯ ಕೊರತೆಯಿಂದ ಅವ್ಯವಸ್ಥೆಯ ಆಗರವಾಗಿದ್ದ ಕೆಂಗೇರಿ ಬಂಡೇಮಠ ಕೆಎಚ್​ಬಿ ಬಡಾವಣೆಯನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಬೇಕು ಎಂಬ ಸ್ಥಳೀಯರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ.

ವಿಧಾನಸಭೆಯ ಅರ್ಜಿಗಳ ಸಮಿತಿಯಲ್ಲಿ ತೀರ್ಮಾನವಾಗಿದ್ದಂತೆ, ಬಂಡೇಮಠ ಕೆಎಚ್​ಬಿ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸಲು ಕರ್ನಾಟಕ ಗೃಹ ಮಂಡಳಿಯು ಬಿಬಿಎಂಪಿಗೆ 5 ಕೋಟಿ ರೂಪಾಯಿ ಪಾವತಿಸುವ ಮೂಲಕ ಈ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿದೆ.

ಈ ಬಡಾವಣೆಯ ಅಭಿವೃದ್ಧಿಯ ಜವಾಬ್ದಾರಿಯನ್ನು ಡಿಸೆಂಬರ್ 30ರಿಂದ ಅನ್ವಯವಾಗುವಂತೆ ಬಿಬಿಎಂಪಿಗೆ ವಹಿಸಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಕಾಯ್ದೆ 29ರನ್ವಯ ಪೂರ್ಣಗೊಳಿಸಿದ ವಸತಿ ಬಡಾವಣೆಗಳನ್ನು ಮುಂದಿನ ನಿರ್ವಹಣೆಗಾಗಿ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕು ಎಂಬ ನಿಯಮ ಇದೆ. 2016ರಿಂದ ಕೆಎಚ್​ಬಿ ಬಂಡೇಮಠ ಬಡಾವಣೆಯನ್ನು ಬಿಬಿಎಂಪಿಗೆ ಹಸ್ತಾಂತರಿಸಲು ಪ್ರಯತ್ನ ಮಾಡಿತ್ತಾದರೂ, ಅಭಿವೃದ್ಧಿ ವಿಚಾರದಲ್ಲಿ ಎರಡೂ ಸಂಸ್ಥೆಗಳ ಹಗ್ಗ ಜಗ್ಗಾಟದಿಂದ ನೆನೆಗುದಿಗೆ ಬಿದ್ದಿತ್ತು. ಇದರ ಪರಿಣಾಮವಾಗಿ, ನಾಗರಿಕರು ಮೂಲಸೌಕರ್ಯ ವಂಚಿತರಾಗಿ ಸಂಕಷ್ಟ ಪಡುವಂತಾಗಿತ್ತು.

ಬಡಾವಣೆ ನಾಗರಿಕರಿಂದ ಪ್ರತಿಭಟನೆ: ತಮ್ಮ ಬಡಾವಣೆಯನ್ನು ಬಿಬಿಎಂಪಿಗೆ ಹಸ್ತಾಂತರಿಸಬೇಕು ಮತ್ತು ಮೂಲಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಬಡಾವಣೆಯ ನಾಗರಿಕರು ಪ್ರತಿಭಟನೆಯನ್ನೂ ನಡೆಸಿದ್ದರು. ಮುಖ್ಯಮಂತ್ರಿಗಳಿಗೆ, ವಸತಿ ಸಚಿವರಿಗೆ, ಯಶವಂತಪುರ ಶಾಸಕರಿಗೆ ಹಲವು ಮನವಿಗಳನ್ನೂ ಸಲ್ಲಿಸಿದ್ದರು.

ಆದರೂ ಮೂಲಸೌಕರ್ಯ ದೊರೆಯದ ಹಿನ್ನೆಲೆಯಲ್ಲಿ, ದಾರಿ ಕಾಣದೆ ಬಡಾವಣೆಯ ನಿವಾಸಿಗಳು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಮಧ್ಯೆ ಕಳೆದ ಜುಲೈ 29ರಂದು ವಸತಿ ಸಚಿವ ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆದ ಉನ್ನತಾಧಿಕಾರಿಗಳ ಸಭೆಯಲ್ಲಿ ಕೆಎಚ್​ಬಿ 2 ಕೋಟಿ ರೂ. ಗಳನ್ನು ಬಿಬಿಎಂಪಿಗೆ ಪಾವತಿಸಬೇಕು ಮತ್ತು ಒಂದು ಸಿಎ ನಿವೇಶನ ನೀಡಬೇಕು ಹಾಗೂ ಬಿಬಿಎಂಪಿ ಬಡಾವಣೆಯ ಅಭಿವೃದ್ಧಿ ಪಡಿಸಬೇಕು ಎಂದು ನಿರ್ಣಯಿಸಲಾಗಿತ್ತು.

ಅದರಂತೆ ಕೆಎಚ್​ಬಿ ಸೆಪ್ಟೆಂಬರ್ 13ರಂದು 2 ಕೋಟಿ ರೂ ಆರ್​ಟಿಜಿಎಸ್ ಸಹ ಮಾಡಿತ್ತು ಆದರೆ, ಬಿಬಿಎಂಪಿ ಈ ಬಡಾವಣೆಯಲ್ಲಿ ಒಂದೇ ಒಂದು ಉದ್ಯಾನವನವೂ ಅಭಿವೃದ್ಧಿಯಾಗಿಲ್ಲ. ದಕ್ಷಿಣ ಬ್ಲಾಕ್ ನಲ್ಲಿ 2017ರಲ್ಲಿ ನೀರು ಮತ್ತು ಒಳಚರಂಡಿ ಕೊಳವೆ ಅಳವಡಿಸಲು ಅಗೆದ ಬಳಿಕ ಮರು ರಸ್ತೆ ಅಭಿವೃದ್ಧಿ ಮಾಡದ ಕಾರಣ ಹಾಗೂ ರಸ್ತೆಗಳು ಕಳಪೆ ಗುಣಮಟ್ಟದಿಂದ ಕಿತ್ತು ಹೋಗಿರುವ ಹಿನ್ನೆಲೆಯಲ್ಲಿ 10 ಕೋಟಿ ರೂ. ಕೊಡಬೇಕು ಎಂದು ಪಟ್ಟು ಹಿಡಿದಿತ್ತು.

ತ್ರಿಶಂಕು ಸ್ಥಿತಿಯಲ್ಲಿದ್ದ ನಾಗರೀಕರು: ಬಿಬಿಎಂಪಿ-ಕೆಎಚ್​ಬಿ ನಡುವಿನ ಸಂಘರ್ಷದಿಂದಾಗಿ ಬಡಾವಣೆ ಹಸ್ತಾಂತರ ಆಗದೆ ನಾಗರಿಕರು ತ್ರಿಶಂಕು ಸ್ಥಿತಿಯಲ್ಲಿದ್ದರು. ಅಂತಿಮವಾಗಿ ಬಂಡೇಮಠ ಕೆಎಚ್​ಬಿ ಬಡಾವಣೆ ನಾಗರಿಕರು ಸಂಘಟಿತರಾಗಿ ವಿಧಾನಸಭೆಗಳ ಅರ್ಜಿಗಳ ಸಮಿತಿ ಮೊರೆ ಹೋಗಿದ್ದರು. ಶಾಸಕ ಎಸ್ ಸುರೇಶ್ ಕುಮಾರ್ ಅಧ್ಯಕ್ಷತೆಯ ಅರ್ಜಿಗಳ ಸಮಿತಿ ಬಿಬಿಎಂಪಿ ಮತ್ತು ಕೆಎಚ್​ಬಿ ನಡುವಿನ ತಿಕ್ಕಾಟ ಪರಿಹರಿಸುವ ಹೊಣೆಯನ್ನು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ರಿಗೆ ವಹಿಸಿತ್ತು.

ಅದರಂತೆ ರಾಕೇಶ್ ಸಿಂಗ್ ಅಧ್ಯಕ್ಷತೆಯಲ್ಲಿ ನವೆಂಬರ್ 28ರಂದು ನಡೆದ ಸಭೆಯಲ್ಲಿ ಬಂಡೇಮಠ ಕೆ.ಹೆಚ್.ಬಿ. ಬಡಾವಣೆ ಅಭಿವೃದ್ಧಿಗೆ 10 ಕೋಟಿ ರೂ. ಅಗತ್ಯವಿದ್ದು, ಇದರಲ್ಲಿ ಅರ್ಧ ಹಣವಾದ 5 ಕೋಟಿ ರೂ ಗಳನ್ನು ಬಿಬಿಎಂಪಿಗೆ ಕೆ.ಹೆಚ್.ಬಿ ಪಾವತಿಸಬೇಕು ಮತ್ತು ಉಳಿದ 5 ಕೋಟಿಯನ್ನು ಬಿಬಿಎಂಪಿಯೇ ಭರಿಸಬೇಕೆಂದು ತೀರ್ಮಾನಿಸಲಾಗಿತ್ತು.

ಡಿಸೆಂಬರ್ 30ರಂದು ಅಧಿಕೃತ ಹಸ್ತಾಂತರ: ಕೆಎಚ್​ಬಿ 2 ಕೋಟಿ ರೂ. ಪಾವತಿಸಿದ್ದು, 3 ಕೋಟಿ ಬಾಕಿ ಕಟ್ಟಿದ ದಿನದಿಂದಲೇ ಬಡಾವಣೆಯನ್ನು ಬಿಬಿಎಂಪಿ ಹಸ್ತಾಂತರಿಸಿಕೊಂಡು ಅಭಿವೃದ್ಧಿ ಪಡಿಸಬೇಕು ಎಂದು ನಿರ್ಣಯಿಸಲಾಗಿತ್ತು. ಅದರಂತೆ ಕೆಎಚ್​ಬಿ ಉಳಿದ 3 ಕೋಟಿ ರೂಪಾಯಿಗಳನ್ನು ಡಿಸೆಂಬರ್ 30ರಂದು ಪಾವತಿಸಿದ್ದು ಅಧಿಕೃತವಾಗಿ ಬಡಾವಣೆ ಬಿಬಿಎಂಪಿಗೆ ಹಸ್ತಾಂತರವಾಗಿದೆ.

ಪಾಲಿಕೆಯಿಂದ ಅಭಿವೃದ್ದಿಯ ನಿರೀಕ್ಷೆ: ಇದರೊಂದಿಗೆ ಬಡಾವಣೆಯಲ್ಲಿ ಮನೆ ಕಟ್ಟಿಕೊಂಡಿರುವ 480ಕ್ಕೂ ಹೆಚ್ಚು ನಿವಾಸಿಗಳು ಬಿಬಿಎಂಪಿ ತಮ್ಮ ಬಡಾವಣೆಯನ್ನು ಅಭಿವೃದ್ಧಿಪಡಿಸುತ್ತದೆ ಎಂಬ ಆಶಾ ಭಾವನೆ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯ ಅರ್ಜಿಗಳ ಸಮಿತಿಯ ಅಧ್ಯಕ್ಷ ಎಸ್. ಸುರೇಶ್ ಕುಮಾರ್ ಮತ್ತು ಸಮಿತಿಯ ಎಲ್ಲ ಸದಸ್ಯ ಶಾಸಕರಿಗೆ ಹಾಗೂ ಇದಕ್ಕಾಗಿ ಹೋರಾಟ ನಡೆಸಿದ ಬಂಡೇಮಠ ಕೆಎಚ್​ಬಿ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಮಹಾನಗರಗಳ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚಿಸಲು ಅಧ್ಯಯನ, ವಸತಿ ಸೌಕರ್ಯ ಅಭಿವೃದ್ಧಿ - ಅಮಿತ್ ಶಾ

ಬೆಂಗಳೂರು: ಮೂಲಸೌಕರ್ಯ ಕೊರತೆಯಿಂದ ಅವ್ಯವಸ್ಥೆಯ ಆಗರವಾಗಿದ್ದ ಕೆಂಗೇರಿ ಬಂಡೇಮಠ ಕೆಎಚ್​ಬಿ ಬಡಾವಣೆಯನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಬೇಕು ಎಂಬ ಸ್ಥಳೀಯರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ.

ವಿಧಾನಸಭೆಯ ಅರ್ಜಿಗಳ ಸಮಿತಿಯಲ್ಲಿ ತೀರ್ಮಾನವಾಗಿದ್ದಂತೆ, ಬಂಡೇಮಠ ಕೆಎಚ್​ಬಿ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸಲು ಕರ್ನಾಟಕ ಗೃಹ ಮಂಡಳಿಯು ಬಿಬಿಎಂಪಿಗೆ 5 ಕೋಟಿ ರೂಪಾಯಿ ಪಾವತಿಸುವ ಮೂಲಕ ಈ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿದೆ.

ಈ ಬಡಾವಣೆಯ ಅಭಿವೃದ್ಧಿಯ ಜವಾಬ್ದಾರಿಯನ್ನು ಡಿಸೆಂಬರ್ 30ರಿಂದ ಅನ್ವಯವಾಗುವಂತೆ ಬಿಬಿಎಂಪಿಗೆ ವಹಿಸಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಕಾಯ್ದೆ 29ರನ್ವಯ ಪೂರ್ಣಗೊಳಿಸಿದ ವಸತಿ ಬಡಾವಣೆಗಳನ್ನು ಮುಂದಿನ ನಿರ್ವಹಣೆಗಾಗಿ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕು ಎಂಬ ನಿಯಮ ಇದೆ. 2016ರಿಂದ ಕೆಎಚ್​ಬಿ ಬಂಡೇಮಠ ಬಡಾವಣೆಯನ್ನು ಬಿಬಿಎಂಪಿಗೆ ಹಸ್ತಾಂತರಿಸಲು ಪ್ರಯತ್ನ ಮಾಡಿತ್ತಾದರೂ, ಅಭಿವೃದ್ಧಿ ವಿಚಾರದಲ್ಲಿ ಎರಡೂ ಸಂಸ್ಥೆಗಳ ಹಗ್ಗ ಜಗ್ಗಾಟದಿಂದ ನೆನೆಗುದಿಗೆ ಬಿದ್ದಿತ್ತು. ಇದರ ಪರಿಣಾಮವಾಗಿ, ನಾಗರಿಕರು ಮೂಲಸೌಕರ್ಯ ವಂಚಿತರಾಗಿ ಸಂಕಷ್ಟ ಪಡುವಂತಾಗಿತ್ತು.

ಬಡಾವಣೆ ನಾಗರಿಕರಿಂದ ಪ್ರತಿಭಟನೆ: ತಮ್ಮ ಬಡಾವಣೆಯನ್ನು ಬಿಬಿಎಂಪಿಗೆ ಹಸ್ತಾಂತರಿಸಬೇಕು ಮತ್ತು ಮೂಲಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಬಡಾವಣೆಯ ನಾಗರಿಕರು ಪ್ರತಿಭಟನೆಯನ್ನೂ ನಡೆಸಿದ್ದರು. ಮುಖ್ಯಮಂತ್ರಿಗಳಿಗೆ, ವಸತಿ ಸಚಿವರಿಗೆ, ಯಶವಂತಪುರ ಶಾಸಕರಿಗೆ ಹಲವು ಮನವಿಗಳನ್ನೂ ಸಲ್ಲಿಸಿದ್ದರು.

ಆದರೂ ಮೂಲಸೌಕರ್ಯ ದೊರೆಯದ ಹಿನ್ನೆಲೆಯಲ್ಲಿ, ದಾರಿ ಕಾಣದೆ ಬಡಾವಣೆಯ ನಿವಾಸಿಗಳು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಮಧ್ಯೆ ಕಳೆದ ಜುಲೈ 29ರಂದು ವಸತಿ ಸಚಿವ ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆದ ಉನ್ನತಾಧಿಕಾರಿಗಳ ಸಭೆಯಲ್ಲಿ ಕೆಎಚ್​ಬಿ 2 ಕೋಟಿ ರೂ. ಗಳನ್ನು ಬಿಬಿಎಂಪಿಗೆ ಪಾವತಿಸಬೇಕು ಮತ್ತು ಒಂದು ಸಿಎ ನಿವೇಶನ ನೀಡಬೇಕು ಹಾಗೂ ಬಿಬಿಎಂಪಿ ಬಡಾವಣೆಯ ಅಭಿವೃದ್ಧಿ ಪಡಿಸಬೇಕು ಎಂದು ನಿರ್ಣಯಿಸಲಾಗಿತ್ತು.

ಅದರಂತೆ ಕೆಎಚ್​ಬಿ ಸೆಪ್ಟೆಂಬರ್ 13ರಂದು 2 ಕೋಟಿ ರೂ ಆರ್​ಟಿಜಿಎಸ್ ಸಹ ಮಾಡಿತ್ತು ಆದರೆ, ಬಿಬಿಎಂಪಿ ಈ ಬಡಾವಣೆಯಲ್ಲಿ ಒಂದೇ ಒಂದು ಉದ್ಯಾನವನವೂ ಅಭಿವೃದ್ಧಿಯಾಗಿಲ್ಲ. ದಕ್ಷಿಣ ಬ್ಲಾಕ್ ನಲ್ಲಿ 2017ರಲ್ಲಿ ನೀರು ಮತ್ತು ಒಳಚರಂಡಿ ಕೊಳವೆ ಅಳವಡಿಸಲು ಅಗೆದ ಬಳಿಕ ಮರು ರಸ್ತೆ ಅಭಿವೃದ್ಧಿ ಮಾಡದ ಕಾರಣ ಹಾಗೂ ರಸ್ತೆಗಳು ಕಳಪೆ ಗುಣಮಟ್ಟದಿಂದ ಕಿತ್ತು ಹೋಗಿರುವ ಹಿನ್ನೆಲೆಯಲ್ಲಿ 10 ಕೋಟಿ ರೂ. ಕೊಡಬೇಕು ಎಂದು ಪಟ್ಟು ಹಿಡಿದಿತ್ತು.

ತ್ರಿಶಂಕು ಸ್ಥಿತಿಯಲ್ಲಿದ್ದ ನಾಗರೀಕರು: ಬಿಬಿಎಂಪಿ-ಕೆಎಚ್​ಬಿ ನಡುವಿನ ಸಂಘರ್ಷದಿಂದಾಗಿ ಬಡಾವಣೆ ಹಸ್ತಾಂತರ ಆಗದೆ ನಾಗರಿಕರು ತ್ರಿಶಂಕು ಸ್ಥಿತಿಯಲ್ಲಿದ್ದರು. ಅಂತಿಮವಾಗಿ ಬಂಡೇಮಠ ಕೆಎಚ್​ಬಿ ಬಡಾವಣೆ ನಾಗರಿಕರು ಸಂಘಟಿತರಾಗಿ ವಿಧಾನಸಭೆಗಳ ಅರ್ಜಿಗಳ ಸಮಿತಿ ಮೊರೆ ಹೋಗಿದ್ದರು. ಶಾಸಕ ಎಸ್ ಸುರೇಶ್ ಕುಮಾರ್ ಅಧ್ಯಕ್ಷತೆಯ ಅರ್ಜಿಗಳ ಸಮಿತಿ ಬಿಬಿಎಂಪಿ ಮತ್ತು ಕೆಎಚ್​ಬಿ ನಡುವಿನ ತಿಕ್ಕಾಟ ಪರಿಹರಿಸುವ ಹೊಣೆಯನ್ನು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ರಿಗೆ ವಹಿಸಿತ್ತು.

ಅದರಂತೆ ರಾಕೇಶ್ ಸಿಂಗ್ ಅಧ್ಯಕ್ಷತೆಯಲ್ಲಿ ನವೆಂಬರ್ 28ರಂದು ನಡೆದ ಸಭೆಯಲ್ಲಿ ಬಂಡೇಮಠ ಕೆ.ಹೆಚ್.ಬಿ. ಬಡಾವಣೆ ಅಭಿವೃದ್ಧಿಗೆ 10 ಕೋಟಿ ರೂ. ಅಗತ್ಯವಿದ್ದು, ಇದರಲ್ಲಿ ಅರ್ಧ ಹಣವಾದ 5 ಕೋಟಿ ರೂ ಗಳನ್ನು ಬಿಬಿಎಂಪಿಗೆ ಕೆ.ಹೆಚ್.ಬಿ ಪಾವತಿಸಬೇಕು ಮತ್ತು ಉಳಿದ 5 ಕೋಟಿಯನ್ನು ಬಿಬಿಎಂಪಿಯೇ ಭರಿಸಬೇಕೆಂದು ತೀರ್ಮಾನಿಸಲಾಗಿತ್ತು.

ಡಿಸೆಂಬರ್ 30ರಂದು ಅಧಿಕೃತ ಹಸ್ತಾಂತರ: ಕೆಎಚ್​ಬಿ 2 ಕೋಟಿ ರೂ. ಪಾವತಿಸಿದ್ದು, 3 ಕೋಟಿ ಬಾಕಿ ಕಟ್ಟಿದ ದಿನದಿಂದಲೇ ಬಡಾವಣೆಯನ್ನು ಬಿಬಿಎಂಪಿ ಹಸ್ತಾಂತರಿಸಿಕೊಂಡು ಅಭಿವೃದ್ಧಿ ಪಡಿಸಬೇಕು ಎಂದು ನಿರ್ಣಯಿಸಲಾಗಿತ್ತು. ಅದರಂತೆ ಕೆಎಚ್​ಬಿ ಉಳಿದ 3 ಕೋಟಿ ರೂಪಾಯಿಗಳನ್ನು ಡಿಸೆಂಬರ್ 30ರಂದು ಪಾವತಿಸಿದ್ದು ಅಧಿಕೃತವಾಗಿ ಬಡಾವಣೆ ಬಿಬಿಎಂಪಿಗೆ ಹಸ್ತಾಂತರವಾಗಿದೆ.

ಪಾಲಿಕೆಯಿಂದ ಅಭಿವೃದ್ದಿಯ ನಿರೀಕ್ಷೆ: ಇದರೊಂದಿಗೆ ಬಡಾವಣೆಯಲ್ಲಿ ಮನೆ ಕಟ್ಟಿಕೊಂಡಿರುವ 480ಕ್ಕೂ ಹೆಚ್ಚು ನಿವಾಸಿಗಳು ಬಿಬಿಎಂಪಿ ತಮ್ಮ ಬಡಾವಣೆಯನ್ನು ಅಭಿವೃದ್ಧಿಪಡಿಸುತ್ತದೆ ಎಂಬ ಆಶಾ ಭಾವನೆ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯ ಅರ್ಜಿಗಳ ಸಮಿತಿಯ ಅಧ್ಯಕ್ಷ ಎಸ್. ಸುರೇಶ್ ಕುಮಾರ್ ಮತ್ತು ಸಮಿತಿಯ ಎಲ್ಲ ಸದಸ್ಯ ಶಾಸಕರಿಗೆ ಹಾಗೂ ಇದಕ್ಕಾಗಿ ಹೋರಾಟ ನಡೆಸಿದ ಬಂಡೇಮಠ ಕೆಎಚ್​ಬಿ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಮಹಾನಗರಗಳ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚಿಸಲು ಅಧ್ಯಯನ, ವಸತಿ ಸೌಕರ್ಯ ಅಭಿವೃದ್ಧಿ - ಅಮಿತ್ ಶಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.