ಬೆಂಗಳೂರು: ಕೊರೊನಾ ವೈರಸ್ ವಿರುದ್ಧ ಹೋರಾಡಲು ಸಂಘ ಸಂಸ್ಥೆಗಳು ದೇಣಿಗೆ ನೀಡಲು ಒಂದೊಂದಾಗಿ ಮುಂದೆ ಬರುತ್ತಿದ್ದು, ಇಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ವತಿಯಿಂದ 5 ಕೋಟಿ ರೂ. ದೇಣಿಗೆಯಾಗಿ ನೀಡಲಾಯಿತು.
![KMF donates Rs 5 crore to CM's relief fund](https://etvbharatimages.akamaized.net/etvbharat/prod-images/6712677_177_6712677_1586345321950.png)
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಕೆಎಂಎಫ್ ಸದಸ್ಯರು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವ್ಯವಸ್ಧಾಪಕ ನಿರ್ದೇಶಕ ಬಿ.ಸಿ.ಸತೀಶ್ ಮತ್ತಿತರರು ಹಾಜರಿದ್ದರು.