ETV Bharat / state

ಕೆಪಿಸಿಸಿ ಕಚೇರಿಯಲ್ಲಿ ನಾರಾಯಣಸ್ವಾಮಿ-ಮನೋಹರ್ ನಡುವೆ ಗಲಾಟೆ

author img

By

Published : Jan 22, 2021, 6:18 PM IST

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ಧ್ರುವನಾರಾಯಣ್ ಸಮ್ಮುಖದಲ್ಲಿ ನಡೆದ ಗಲಾಟೆಯನ್ನು ಕೊನೆಗೂ ನಿಯಂತ್ರಣ ಮಾಡಲಾಗಿದೆ.

kpcc office congress leaders Uproar news
ಕೆಪಿಸಿಸಿ ಕಚೇರಿಯಲ್ಲಿ ಮಾರಾಮಾರಿ

ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಬ್ಬರು ಕಾಂಗ್ರೆಸ್ ನಾಯಕರ ನಡುವೆ ದೊಡ್ಡ ಮಟ್ಟದ ವಾಕ್ಸಮರ, ಗದ್ದಲ ನಡೆದಿದೆ.

ಕೆಪಿಸಿಸಿ ಕಚೇರಿಯಲ್ಲಿ ಗಲಾಟೆ

ರಾಜಭವನ ಚಲೋ ಕಾರ್ಯಕ್ರಮದಲ್ಲಿ ಸಾವಿರಾರು ರೈತರು ಭಾಗವಹಿಸಿದ್ದು, ಎಲ್ಲರಿಗೂ ಕೆಪಿಸಿಸಿ ವತಿಯಿಂದ ಧನ್ಯವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ಎಂಎಲ್​​ಸಿ ನಾರಾಯಣಸ್ವಾಮಿ ಮತ್ತು ಮನೋಹರ್ ನಡುವೆ ಗದ್ದಲ ನಡೆದಿದೆ. ಉಭಯ ನಾಯಕರು ನಡೆಸುತ್ತಿದ್ದ ಗದ್ದಲ ನೋಡಿ, ಮಾಧ್ಯಮದವರು ಬರುತ್ತಿದ್ದಂತೆ ಬಾಗಿಲು ಬಂದ್ ಮಾಡಿಕೊಂಡು ಕೈ ಮುಖಂಡರು ಸಭೆ ನಡೆಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ದ್ರುವ ನಾರಾಯಣ್ ಸಮ್ಮುಖದಲ್ಲಿ ನಡೆದ ಗಲಾಟೆಯನ್ನು ಕೊನೆಗೆ ನಿಯಂತ್ರಣ ಮಾಡಲಾಗಿದೆ ಎನ್ನಲಾಗಿದೆ.

ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಬ್ಬರು ಕಾಂಗ್ರೆಸ್ ನಾಯಕರ ನಡುವೆ ದೊಡ್ಡ ಮಟ್ಟದ ವಾಕ್ಸಮರ, ಗದ್ದಲ ನಡೆದಿದೆ.

ಕೆಪಿಸಿಸಿ ಕಚೇರಿಯಲ್ಲಿ ಗಲಾಟೆ

ರಾಜಭವನ ಚಲೋ ಕಾರ್ಯಕ್ರಮದಲ್ಲಿ ಸಾವಿರಾರು ರೈತರು ಭಾಗವಹಿಸಿದ್ದು, ಎಲ್ಲರಿಗೂ ಕೆಪಿಸಿಸಿ ವತಿಯಿಂದ ಧನ್ಯವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ಎಂಎಲ್​​ಸಿ ನಾರಾಯಣಸ್ವಾಮಿ ಮತ್ತು ಮನೋಹರ್ ನಡುವೆ ಗದ್ದಲ ನಡೆದಿದೆ. ಉಭಯ ನಾಯಕರು ನಡೆಸುತ್ತಿದ್ದ ಗದ್ದಲ ನೋಡಿ, ಮಾಧ್ಯಮದವರು ಬರುತ್ತಿದ್ದಂತೆ ಬಾಗಿಲು ಬಂದ್ ಮಾಡಿಕೊಂಡು ಕೈ ಮುಖಂಡರು ಸಭೆ ನಡೆಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ದ್ರುವ ನಾರಾಯಣ್ ಸಮ್ಮುಖದಲ್ಲಿ ನಡೆದ ಗಲಾಟೆಯನ್ನು ಕೊನೆಗೆ ನಿಯಂತ್ರಣ ಮಾಡಲಾಗಿದೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.