ETV Bharat / state

ಕೆಪಿಎಸ್​ಸಿ ವಿಳಂಬ ಧೋರಣೆ... ನಾಳೆ ಮಾಜಿ ಸಚಿವ ಸುರೇಶ್​ಕುಮಾರ್​ ಪ್ರತಿಭಟನೆ - Suresh kumar protest kpsc

2015ರ ಸಾಲಿನ ಕೆಪಿಎಸ್​ಸಿ ಪರೀಕ್ಷೆ ನಡೆದು ಫಲಿತಾಂಶ ಹೊರಬಿದ್ದರೂ,‌ ಅಭ್ಯರ್ಥಿಗಳ ಆಯ್ಕೆಗಾಗಿ ಸಂದರ್ಶನ ವೇಳಾಪಟ್ಟಿ ಪ್ರಕಟಿಸದೇ ಕೆಪಿಎಸ್​ಸಿ ವಿಳಂಬ ಧೋರಣೆ ಎದುರಿಸುತ್ತಿದ್ದು, ವೇಳಾಪಟ್ಟಿ ಪ್ರಕಟಿಸುವಂತೆ ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸೋದಾಗಿ ಮಾಜಿ ಸಚಿವ ಸುರೇಶ್​ಕುಮಾರ್ ತಿಳಿಸಿದ್ದಾರೆ.

ಮಾಜಿ ಸಚಿವ ಸುರೇಶ್​ಕುಮಾರ್
author img

By

Published : Jun 9, 2019, 12:30 PM IST


ಬೆಂಗಳೂರು : ಕೆಪಿಎಸ್​ಸಿ ವಿಳಂಬ ಧೋರಣೆ ಖಂಡಿಸಿ ನಾಳೆ ಕೆಪಿಎಸ್​ಸಿ ಕಚೇರಿ ಮುಂದೆ ಬಿಜೆಪಿ ಶಾಸಕರಾದ ಸುರೇಶ್ ಕುಮಾರ್ ಹಾಗೂ ರವಿ ಸುಬ್ರಮಣ್ಯ ಅವರು ಪ್ರತಿಭಟನೆ ನಡೆಸಲಿದ್ದಾರೆ.

2015ರ ಸಾಲಿನ ಕೆಪಿಎಸ್​ಸಿ ಪರೀಕ್ಷೆ ನಡೆದು ಫಲಿತಾಂಶ ಹೊರಬಿದ್ದರೂ,‌ ಅಭ್ಯರ್ಥಿಗಳ ಆಯ್ಕೆಗಾಗಿ ಸಂದರ್ಶನ ವೇಳಾಪಟ್ಟಿ ಪ್ರಕಟಿಸದೇ ಕೆಪಿಎಸ್​ಸಿ ವಿಳಂಬ ಧೋರಣೆ ಎದುರಿಸುತ್ತಿದೆ. ಹೀಗಾಗಿ ಶೀಘ್ರ ಸಂದರ್ಶನ ವೇಳಾಪಟ್ಟಿ ಪ್ರಕಟಿಸುವಂತೆ ಆಗ್ರಹಿಸಿ ಮತ್ತು ಸಂದರ್ಶನ ಪಾರದರ್ಶಕವಾಗಿರಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುವುದಾಗಿ ಮಾಜಿ ಸಚಿವ ಸುರೇಶ್​ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮತ್ತೊಮ್ಮೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಮುಂದೆ ಪ್ರತಿಭಟನೆ ಮಾಡುವ ಅಗತ್ಯತೆ ಉಂಟಾಗಿದೆ.‌ ನಾನು ಕಳೆದ ಏಳು ತಿಂಗಳಲ್ಲಿ‌ ಕನಿಷ್ಟ ಇಪ್ಪತೈದು ಬಾರಿಯಾದರೂ ಲೋಕಸೇವಾ ಆಯೋಗದ ಕಚೇರಿಗೆ ಹೋಗಿ ಸಂತ್ರಸ್ತ ಅಭ್ಯರ್ಥಿಗಳ‌ ಸಮಸ್ಯೆಗಳ ಪರಿಹಾರ ಕುರಿತು ಆಗ್ರಹಿಸಿದ್ದೇನೆ.‌ 27, ಡಿಸೆಂಬರ್ 2018ರಲ್ಲಿ ಒಮ್ಮೆ‌ ಕೆಪಿಎಸ್​ಸಿ ಕಟ್ಟಡದ "ಕದ ತಟ್ಟುವ ಕಾರ್ಯಕ್ರಮ"‌ವನ್ನೂ ಹಮ್ಮಿಕೊಂಡಿದ್ದೆ. ಕೆಲವು ಬೇಡಿಕೆಗಳಿಗೆ ಪರಿಹಾರ ದೊರಕಿರುವುದು ಸಮಾಧಾನ ತಂದಿದೆಯಾದರೂ ಬಹು ಮುಖ್ಯವಾದ ಕರ್ನಾಟಕ ರಾಜ್ಯದ ಆಡಳಿತಕ್ಕೆ ಸಂಬಂಧ ಪಟ್ಟ ಬೇಡಿಕೆ ಈವರೆಗೂ ಇತ್ಯರ್ಥವಾಗಿಲ್ಲ ಎಂದು ಸುರೇಶ್ ಕುಮಾರ್ ಆರೋಪಿಸಿದ್ದಾರೆ.

2015ರ ಸಾಲಿನ ಕೆಎಎಸ್ ಪರೀಕ್ಷೆಯ ಅಧಿಸೂಚನೆ ಮೇ 12, 2017ಕ್ಕೆ ಪ್ರಕಟವಾಗಿತ್ತು. ಈ ಸಂಬಂಧ ಆಗಸ್ಟ್​​ 18, 2017ಕ್ಕೆ ಪ್ರಾಥಮಿಕ ಪರೀಕ್ಷೆ ನಡೆದಿತ್ತು. ಡಿಸೆಂಬರ್​ 22, 2017ಗೆ ಮುಖ್ಯ ಪರೀಕ್ಷೆ ನಡೆಸಲಾಗಿತ್ತು. ಆದರೆ, ಫಲಿತಾಂಶ ಪ್ರಕಟಿಸಲು ವಿಳಂಬವಾಗಿತ್ತು. 2018 ರ ಆಗಸ್ಟ್ ತಿಂಗಳಿನಿಂದ ನಾನು ಆಯೋಗದ ಅಧ್ಯಕ್ಷರು, ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ನಿರಂತರ ಮನವಿ ಸಲ್ಲಿಸಿದರೂ ಫಲಿತಾಂಶ ಪ್ರಕಟವಾಗಿದ್ದು ಜನವರಿ 28, 2019ಕ್ಕೆ. ಆದರೆ, ಈ ಆರು ತಿಂಗಳ ನಂತರವೂ ಸಂದರ್ಶನ ಪ್ರಕ್ರಿಯೆ ನಡೆಯಲೇ ಇಲ್ಲ. ಇದೀಗ ಅಭ್ಯರ್ಥಿಗಳೆಲ್ಲಾ ಆತಂಕ, ಹತಾಶೆ ಎದುರಿಸುತ್ತಿದ್ದಾರೆ ಎಂದು ಕಿಡಿ‌ಕಾರಿದ್ದಾರೆ.

ಮಾರ್ಚ್ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆಯ ಕಾರಣ ನೀಡಲಾಗಿತ್ತು.‌ ಚುನಾವಣಾ ನೀತಿ ಸಂಹಿತೆ ಅವಧಿ ಮುಗಿದಿದ್ದರೂ ಈಗಲೂ ಸಹ ಸಂದರ್ಶನದ ವೇಳಾಪಟ್ಟಿ ಘೋಷಣೆಯಾಗಿಲ್ಲ. ಈ ಎಲ್ಲಾ ಕಾರಣಗಳಿಂದ ಹತಾಶೆಯ ಅಂಚಿನಲ್ಲಿರುವ ಸಂತ್ರಸ್ತ ಅಭ್ಯರ್ಥಿಗಳ ಪರವಾಗಿ ನಾಳೆ ಬೆಳಿಗ್ಗೆ10.30ಕ್ಕೆ ಕೆಪಿಎಸ್​ಸಿ ಕಟ್ಟಡದ ಮುಂದೆ ಸಂದರ್ಶನ ವೇಳಾಪಟ್ಟಿಗೆ ಆಗ್ರಹಿಸಿ ಮತ್ತು ಸಂದರ್ಶನ ಪಾರದರ್ಶಕವಾಗಿರಬೇಕೆಂದು ಒತ್ತಾಯಿಸಿ ನಾನು ಮತ್ತು ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಇಬ್ಬರೂ ಹೋರಾಟ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಸುರೇಶ್​ಕುಮಾರ್​ ತಿಳಿಸಿದ್ದಾರೆ.


ಬೆಂಗಳೂರು : ಕೆಪಿಎಸ್​ಸಿ ವಿಳಂಬ ಧೋರಣೆ ಖಂಡಿಸಿ ನಾಳೆ ಕೆಪಿಎಸ್​ಸಿ ಕಚೇರಿ ಮುಂದೆ ಬಿಜೆಪಿ ಶಾಸಕರಾದ ಸುರೇಶ್ ಕುಮಾರ್ ಹಾಗೂ ರವಿ ಸುಬ್ರಮಣ್ಯ ಅವರು ಪ್ರತಿಭಟನೆ ನಡೆಸಲಿದ್ದಾರೆ.

2015ರ ಸಾಲಿನ ಕೆಪಿಎಸ್​ಸಿ ಪರೀಕ್ಷೆ ನಡೆದು ಫಲಿತಾಂಶ ಹೊರಬಿದ್ದರೂ,‌ ಅಭ್ಯರ್ಥಿಗಳ ಆಯ್ಕೆಗಾಗಿ ಸಂದರ್ಶನ ವೇಳಾಪಟ್ಟಿ ಪ್ರಕಟಿಸದೇ ಕೆಪಿಎಸ್​ಸಿ ವಿಳಂಬ ಧೋರಣೆ ಎದುರಿಸುತ್ತಿದೆ. ಹೀಗಾಗಿ ಶೀಘ್ರ ಸಂದರ್ಶನ ವೇಳಾಪಟ್ಟಿ ಪ್ರಕಟಿಸುವಂತೆ ಆಗ್ರಹಿಸಿ ಮತ್ತು ಸಂದರ್ಶನ ಪಾರದರ್ಶಕವಾಗಿರಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುವುದಾಗಿ ಮಾಜಿ ಸಚಿವ ಸುರೇಶ್​ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮತ್ತೊಮ್ಮೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಮುಂದೆ ಪ್ರತಿಭಟನೆ ಮಾಡುವ ಅಗತ್ಯತೆ ಉಂಟಾಗಿದೆ.‌ ನಾನು ಕಳೆದ ಏಳು ತಿಂಗಳಲ್ಲಿ‌ ಕನಿಷ್ಟ ಇಪ್ಪತೈದು ಬಾರಿಯಾದರೂ ಲೋಕಸೇವಾ ಆಯೋಗದ ಕಚೇರಿಗೆ ಹೋಗಿ ಸಂತ್ರಸ್ತ ಅಭ್ಯರ್ಥಿಗಳ‌ ಸಮಸ್ಯೆಗಳ ಪರಿಹಾರ ಕುರಿತು ಆಗ್ರಹಿಸಿದ್ದೇನೆ.‌ 27, ಡಿಸೆಂಬರ್ 2018ರಲ್ಲಿ ಒಮ್ಮೆ‌ ಕೆಪಿಎಸ್​ಸಿ ಕಟ್ಟಡದ "ಕದ ತಟ್ಟುವ ಕಾರ್ಯಕ್ರಮ"‌ವನ್ನೂ ಹಮ್ಮಿಕೊಂಡಿದ್ದೆ. ಕೆಲವು ಬೇಡಿಕೆಗಳಿಗೆ ಪರಿಹಾರ ದೊರಕಿರುವುದು ಸಮಾಧಾನ ತಂದಿದೆಯಾದರೂ ಬಹು ಮುಖ್ಯವಾದ ಕರ್ನಾಟಕ ರಾಜ್ಯದ ಆಡಳಿತಕ್ಕೆ ಸಂಬಂಧ ಪಟ್ಟ ಬೇಡಿಕೆ ಈವರೆಗೂ ಇತ್ಯರ್ಥವಾಗಿಲ್ಲ ಎಂದು ಸುರೇಶ್ ಕುಮಾರ್ ಆರೋಪಿಸಿದ್ದಾರೆ.

2015ರ ಸಾಲಿನ ಕೆಎಎಸ್ ಪರೀಕ್ಷೆಯ ಅಧಿಸೂಚನೆ ಮೇ 12, 2017ಕ್ಕೆ ಪ್ರಕಟವಾಗಿತ್ತು. ಈ ಸಂಬಂಧ ಆಗಸ್ಟ್​​ 18, 2017ಕ್ಕೆ ಪ್ರಾಥಮಿಕ ಪರೀಕ್ಷೆ ನಡೆದಿತ್ತು. ಡಿಸೆಂಬರ್​ 22, 2017ಗೆ ಮುಖ್ಯ ಪರೀಕ್ಷೆ ನಡೆಸಲಾಗಿತ್ತು. ಆದರೆ, ಫಲಿತಾಂಶ ಪ್ರಕಟಿಸಲು ವಿಳಂಬವಾಗಿತ್ತು. 2018 ರ ಆಗಸ್ಟ್ ತಿಂಗಳಿನಿಂದ ನಾನು ಆಯೋಗದ ಅಧ್ಯಕ್ಷರು, ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ನಿರಂತರ ಮನವಿ ಸಲ್ಲಿಸಿದರೂ ಫಲಿತಾಂಶ ಪ್ರಕಟವಾಗಿದ್ದು ಜನವರಿ 28, 2019ಕ್ಕೆ. ಆದರೆ, ಈ ಆರು ತಿಂಗಳ ನಂತರವೂ ಸಂದರ್ಶನ ಪ್ರಕ್ರಿಯೆ ನಡೆಯಲೇ ಇಲ್ಲ. ಇದೀಗ ಅಭ್ಯರ್ಥಿಗಳೆಲ್ಲಾ ಆತಂಕ, ಹತಾಶೆ ಎದುರಿಸುತ್ತಿದ್ದಾರೆ ಎಂದು ಕಿಡಿ‌ಕಾರಿದ್ದಾರೆ.

ಮಾರ್ಚ್ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆಯ ಕಾರಣ ನೀಡಲಾಗಿತ್ತು.‌ ಚುನಾವಣಾ ನೀತಿ ಸಂಹಿತೆ ಅವಧಿ ಮುಗಿದಿದ್ದರೂ ಈಗಲೂ ಸಹ ಸಂದರ್ಶನದ ವೇಳಾಪಟ್ಟಿ ಘೋಷಣೆಯಾಗಿಲ್ಲ. ಈ ಎಲ್ಲಾ ಕಾರಣಗಳಿಂದ ಹತಾಶೆಯ ಅಂಚಿನಲ್ಲಿರುವ ಸಂತ್ರಸ್ತ ಅಭ್ಯರ್ಥಿಗಳ ಪರವಾಗಿ ನಾಳೆ ಬೆಳಿಗ್ಗೆ10.30ಕ್ಕೆ ಕೆಪಿಎಸ್​ಸಿ ಕಟ್ಟಡದ ಮುಂದೆ ಸಂದರ್ಶನ ವೇಳಾಪಟ್ಟಿಗೆ ಆಗ್ರಹಿಸಿ ಮತ್ತು ಸಂದರ್ಶನ ಪಾರದರ್ಶಕವಾಗಿರಬೇಕೆಂದು ಒತ್ತಾಯಿಸಿ ನಾನು ಮತ್ತು ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಇಬ್ಬರೂ ಹೋರಾಟ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಸುರೇಶ್​ಕುಮಾರ್​ ತಿಳಿಸಿದ್ದಾರೆ.

Intro:Kpsc protestBody:ಕೆಪಿಎಸ್ ಸಿ ವಿಳಂಬ ಧೋರಣೆ: ನಾಳೆ ಮಾಜಿ ಸಚಿವ ಸುರೇಶ್ ಕುಮಾರ್ ಪ್ರತಿಭಟನೆ

ಬೆಂಗಳೂರು: ಕೆಪಿಎಸ್ ಸಿ ವಿಳಂಬ ಧೋರಣೆ ಖಂಡಿಸಿ ನಾಳೆ ಕೆಪಿಎಸ್ ಸಿ ಕಚೇರಿ ಮುಂದೆ ಬಿಜೆಪಿ ಶಾಸಕರಾದ ಸುರೇಶ್ ಕುಮಾರ್ ಹಾಗೂ ರವಿ ಸುಬ್ರಮಣ್ಯ ಅವರು ಪ್ರತಿಭಟನೆ ನಡೆಸಲಿದ್ದಾರೆ.

2015ರ ಸಾಲಿನ ಕೆಪಿಎಸ್ ಸಿ ಪರೀಕ್ಷೆ ನಡೆದು ಫಲಿತಾಂಶ ಹೊರಬಿದ್ದರೂ‌ ಅಭ್ಯರ್ಥಿಗಳ ಆಯ್ಕೆಗಾಗಿನ ಸಂದರ್ಶನ ವೇಳಾಪಟ್ಟಿ ಪ್ರಕಟಿಸದೆ ಕೆಪಿಎಸ್ ಸಿ ವಿಳಂಬ ಧೋರಣೆ ಎದುರಿಸುತ್ತಿದೆ. ಹೀಗಾಗಿ ಶೀಘ್ರ ಸಂದರ್ಶನ ವೇಳಾಪಟ್ಟಿ ಪ್ರಕಟಿಸುವಂತೆ ಆಗ್ರಹಿಸಿ ಮತ್ತು ಸಂದರ್ಶನ ಪಾರದರ್ಶಕವಾಗಿರಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುವುದಾಗಿ ಮಾಜಿ ಸಚಿವ ಸುರೇಶ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮತ್ತೊಮ್ಮೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಮುಂದೆ ಪ್ರತಿಭಟನೆ ಮಾಡುವ ಅಗತ್ಯತೆ ಉಂಟಾಗಿದೆ.‌ ನಾನು ಕಳೆದ ಏಳು ತಿಂಗಳಲ್ಲಿ‌ ಕನಿಷ್ಟ ಇಪ್ಪತೈದು ಬಾರಿಯಾದರೂ ಲೋಕಸೇವಾ ಆಯೋಗದ ಕಛೇರಿಗೆ ಹೋಗಿ ಸಂತ್ರಸ್ಥ ಅಭ್ಯರ್ಥಿಗಳ‌ ಸಮಸ್ಯೆಗಳ ಪರಿಹಾರ ಕುರಿತು ಆಗ್ರಹಿಸಿದ್ದೇನೆ.‌ 27, ಡಿಸೆಂಬರ್ 2018 ರಲ್ಲಿ ಒಮ್ಮೆ‌ ಕೆಪಿಎಸ್ ಸಿ ಕಟ್ಟಡದ "ಕದ ತಟ್ಟುವ ಕಾರ್ಯಕ್ರಮ"‌ವನ್ನೂ ಹಮ್ಮಿಕೊಂಡಿದ್ದೆ. ಕೆಲವು ಬೇಡಿಕೆಗಳಿಗೆ ಪರಿಹಾರ ದೊರಕಿರುವುದು ಸಮಾಧಾನ ತಂದಿದೆಯಾದರೂ ಬಹು ಮುಖ್ಯವಾದ, ಕರ್ನಾಟಕ ರಾಜ್ಯದ ಆಡಳಿತಕ್ಕೆ ಸಂಬಂಧ ಪಟ್ಟ ಬೇಡಿಕೆ ಇದುವರೆಗೂ ಇತ್ಯರ್ಥವಾಗಿಲ್ಲ ಎಂದು ಸುರೇಶ್ ಕುಮಾರ್ ಆರೋಪಿಸಿದ್ದಾರೆ.

2015ರ ಸಾಲಿನ ಕೆಎಎಸ್ ಪರೀಕ್ಷೆಯ ಅಧಿಸೂಚನೆ ಮೇ 12, 2017ಕ್ಕೆ ಪ್ರಕಟವಾಗಿತ್ತು. ಈ ಸಂಬಂಧ ಆ.18, 2017ಕ್ಕೆ ಪ್ರಾಥಮಿಕ ಪರೀಕ್ಷೆ ನಡೆದಿತ್ತು. ಡಿ. 22, 2017ಗೆ ಮುಖ್ಯ (Mains) ಪರೀಕ್ಷೆ ನಡೆಸಲಾಗಿತ್ತು. ಆದರೆ ಫಲಿತಾಂಶ ಪ್ರಕಟಿಸಲು ವಿಳಂಬವಾಗಿತ್ತು. 2018 ರ ಆಗಸ್ಟ್ ತಿಂಗಳಿನಿಂದ ನಾನು ಆಯೋಗದ ಅಧ್ಯಕ್ಷರು, ರಾಜ್ಯದ ಮುಖ್ಯ ಕಾರ್ಯದರ್ಶಿ ಗಳಿಗೆ ನಿರಂತರ ಮನವಿ ಸಲ್ಲಿಸಿದರೂ ಫಲಿತಾಂಶ ಪ್ರಕಟವಾಗಿದ್ದು ಜ.28, 2019ಕ್ಕೆ. ಆದರೆ, ಈ ಆರು ತಿಂಗಳ ನಂತರವೂ ಸಂದರ್ಶನ ಪ್ರಕ್ರಿಯೆ ನಡೆಯಲೇ ಇಲ್ಲ. ಇದೀಗ ಅಭ್ಯರ್ಥಿಗಳೆಲ್ಲಾ ಆತಂಕ, ಹತಾಶೆ ಎದುರಿಸುತ್ತಿದ್ದಾರೆ ಎಂದು ಕಿಡಿ‌ಕಾರಿದ್ದಾರೆ.

ಮಾರ್ಚ್ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆಯ ಕಾರಣ ನೀಡಲಾಗಿತ್ತು.‌ ಚುನಾವಣಾ ನೀತಿ ಸಂಹಿತೆ ಅವಧಿ ಮುಗಿದಿದ್ದರೂ ಈಗಲೂ ಸಹ ಸಂದರ್ಶನದ ವೇಳಾಪಟ್ಟಿ ಘೋಷಣೆಯಾಗಿಲ್ಲ. ಈ ಎಲ್ಲಾ ಕಾರಣಗಳಿಂದ ಹತಾಶೆಯ ಅಂಚಿನಲ್ಲಿರುವ ಸಂತ್ರಸ್ಥ ಅಭ್ಯರ್ಥಿಗಳ ಪರವಾಗಿ ನಾಳೆ ಬೆಳಿಗ್ಗೆ 10.30 ಗಂಟೆಗೆ ಕೆಪಿಎಸ್ ಸಿ ಕಟ್ಟಡದ ಮುಂದೆ ಸಂದರ್ಶನ ವೇಳಾಪಟ್ಟಿಗೆ ಆಗ್ರಹಿಸಿ ಮತ್ತು ಸಂದರ್ಶನ ಪಾರದರ್ಶಕವಾಗಿರಬೇಕೆಂದು ಒತ್ತಾಯಿಸಿ ನಾನು ಮತ್ತು ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಇಬ್ಬರೂ ಹೋರಾಟ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಎಸ್.ಸುರೇಶ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.Conclusion:Suresh kumar kpsc

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.