ETV Bharat / state

ಮಳೆಗೆ ಜನ‌ಜೀವನ, ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚನೆ: ಸಚಿವ ಕೃಷ್ಣ ಬೈರೇಗೌಡ

author img

By

Published : Jul 24, 2023, 7:03 PM IST

Heavy rain in Karnataka: ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಅಧಿಕಾರಿಗಳೊಂದಿಗೆ ಸಚಿವರ ಸಭೆ
ಅಧಿಕಾರಿಗಳೊಂದಿಗೆ ಸಚಿವರ ಸಭೆ

ಬೆಂಗಳೂರು: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನಜೀವನ ಹಾಗೂ ಆಸ್ತಿಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿರುವ ಸಚಿವರು, ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ ಶೇ.56ರಷ್ಟು ಕೊರತೆಯಾಗಿತ್ತು. ಆದರೆ ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಹೀಗಾಗಿ ಮಳೆ ಕೊರತೆಯ ಪ್ರಮಾಣ ಶೇ.56 ರಿಂದ ಶೇ.14ಕ್ಕೆ ಇಳಿದಿದೆ. ರಾಜ್ಯದಲ್ಲಿ ಒಟ್ಟಾರೆ ಶೇ.80 ರಷ್ಟು ಮಳೆಯಾಗಿದೆ. ಕಳೆದ ಒಂದು ವಾರದಿಂದ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಭಾಗಗಳಾದ ಬೀದರ್ ಹಾಗೂ ಕಲಬುರಗಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿ ನಷ್ಟವಾಗದಂತೆ ಮುಂಜಾಗ್ರತಾ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಉತ್ತರ ಒಳನಾಡು ಭಾಗಗಳಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ವಾಡಿಕೆಗಿಂತ ಶೇ.170 ರಷ್ಟು ಅಧಿಕ ಮಳೆಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಶೇ. 300, ಯಾದಗಿರಿ ಶೇ.160, ಬೀದರ್ ಶೇ.155, ಬೆಳಗಾವಿಯಲ್ಲಿ ಶೇ.186, ಬಾಗಲಕೋಟೆ ಶೇ.174, ವಿಜಯಪುರ ಶೇ.185 ಹಾಗೂ ಗದಗ ಜಿಲ್ಲೆಯಲ್ಲಿ ಶೇ.166 ರಷ್ಟು ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದರು.

ಕೆಲವೆಡೆ ಮಳೆ ಕೊರತೆ: ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದರೂ, ಬೆಂಗಳೂರು ನಗರ, ಬೆಂ-ಗ್ರಾಮೀಣ, ರಾಮನಗರ, ಕೋಲಾರ, ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದರೂ, ಅಲ್ಲಿನ ವಾಡಿಕೆ ಮಳೆಗಿಂತ ಈಗಿನ ಒಟ್ಟಾರೆ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೆ, ಜುಲೈ 28ರ ವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆ ವರದಿ ಇದ್ದು, ಮಳೆ ಕೊರತೆ ನೀಗುವ ವಿಶ್ವಾಸವಿದೆ ಎಂದು ತಿಳಿಸಿದರು.

ಬರ ಮಾನದಂಡ ಬದಲಿಸಲು ಕೇಂದ್ರಕ್ಕೆ ಪತ್ರ: ರಾಜ್ಯದ 85 ತಾಲೂಕುಗಳಲ್ಲಿ ಶೇ.20ರಷ್ಟು ಮಳೆ ಕೊರತೆಯಾಗಿದೆ. ಈ ತಾಲೂಕುಗಳಲ್ಲಿ ಬರ ಘೋಷಣೆ ಸಂಬಂಧ ಚಿಂತನೆ ನಡೆಸಲಾಗುತ್ತಿದೆ. ಆದರೆ, ಕೇಂದ್ರದ “ಬರ ಮಾನದಂಡ” ಕಠಿಣವಾಗಿದ್ದು, ಇದನ್ನು ಬದಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಜಲಾಶಯಗಳಲ್ಲಿ ನೀರಿನ ಮಟ್ಟ ಸುಧಾರಣೆ: ಜೂನ್ ತಿಂಗಳಲ್ಲಿ ಮಳೆಯಾಗಿದ್ದ ಪರಿಣಾಮ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಶೇ.20 ರಷ್ಟು ಮಾತ್ರ ಇತ್ತು. ಆದರೆ, ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಜಲಾಶಯಗಳಲ್ಲಿನ ನೀರಿನ ಸಂಗ್ರಹ ಪ್ರಮಾಣ ಶೇ.40 ರಿಂದ ಶೇ.50 ಕ್ಕೆ ಏರಿಕೆಯಾಗಿದೆ ಎಂದರು.

ಜಿಲ್ಲಾಧಿಕಾರಿಗಳಿಗೆ ಹೈ-ಅಲರ್ಟ್ ಸೂಚನೆ: ಕಲಬುರಗಿ- ಬೀದರ್ ಜಿಲ್ಲೆಗಳಲ್ಲಿ ವಾಡಿಕೆಗಿಂತ ಈಗಾಗಲೇ ಅಧಿಕ ಮಳೆಯಾಗಿದೆ. ಅಲ್ಲದೆ, ಮುಂದಿನ ನಾಲ್ಕು ದಿನಗಳಲ್ಲಿ ಬೀದರ್, ಕಲಬುರಗಿ, ಯಾದಗಿರಿ ಬಿಜಾಪುರ ಭಾಗದಲ್ಲಿ ತೀವ್ರ ಮಳೆಯಾಗಲಿದೆ ಎಂಬ ಸೂಚನೆ ಇದೆ. ಬೆಳಗಾವಿ ಭಾಗದಲ್ಲೂ ಉತ್ತಮ ಮಳೆಯಾಗಲಿದೆ ಎಂದರು.

ಇದನ್ನೂ ಓದಿ: ಉಕ್ಕಿದ ಗಂಗಾವಳಿ ನದಿ: ಅಂಕೋಲಾದಲ್ಲಿ ಮನೆಗಳಿಗೆ ನುಗ್ಗುತ್ತಿರುವ ನೆರೆ!

ಬೆಂಗಳೂರು: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನಜೀವನ ಹಾಗೂ ಆಸ್ತಿಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿರುವ ಸಚಿವರು, ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ ಶೇ.56ರಷ್ಟು ಕೊರತೆಯಾಗಿತ್ತು. ಆದರೆ ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಹೀಗಾಗಿ ಮಳೆ ಕೊರತೆಯ ಪ್ರಮಾಣ ಶೇ.56 ರಿಂದ ಶೇ.14ಕ್ಕೆ ಇಳಿದಿದೆ. ರಾಜ್ಯದಲ್ಲಿ ಒಟ್ಟಾರೆ ಶೇ.80 ರಷ್ಟು ಮಳೆಯಾಗಿದೆ. ಕಳೆದ ಒಂದು ವಾರದಿಂದ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಭಾಗಗಳಾದ ಬೀದರ್ ಹಾಗೂ ಕಲಬುರಗಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿ ನಷ್ಟವಾಗದಂತೆ ಮುಂಜಾಗ್ರತಾ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಉತ್ತರ ಒಳನಾಡು ಭಾಗಗಳಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ವಾಡಿಕೆಗಿಂತ ಶೇ.170 ರಷ್ಟು ಅಧಿಕ ಮಳೆಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಶೇ. 300, ಯಾದಗಿರಿ ಶೇ.160, ಬೀದರ್ ಶೇ.155, ಬೆಳಗಾವಿಯಲ್ಲಿ ಶೇ.186, ಬಾಗಲಕೋಟೆ ಶೇ.174, ವಿಜಯಪುರ ಶೇ.185 ಹಾಗೂ ಗದಗ ಜಿಲ್ಲೆಯಲ್ಲಿ ಶೇ.166 ರಷ್ಟು ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದರು.

ಕೆಲವೆಡೆ ಮಳೆ ಕೊರತೆ: ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದರೂ, ಬೆಂಗಳೂರು ನಗರ, ಬೆಂ-ಗ್ರಾಮೀಣ, ರಾಮನಗರ, ಕೋಲಾರ, ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದರೂ, ಅಲ್ಲಿನ ವಾಡಿಕೆ ಮಳೆಗಿಂತ ಈಗಿನ ಒಟ್ಟಾರೆ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೆ, ಜುಲೈ 28ರ ವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆ ವರದಿ ಇದ್ದು, ಮಳೆ ಕೊರತೆ ನೀಗುವ ವಿಶ್ವಾಸವಿದೆ ಎಂದು ತಿಳಿಸಿದರು.

ಬರ ಮಾನದಂಡ ಬದಲಿಸಲು ಕೇಂದ್ರಕ್ಕೆ ಪತ್ರ: ರಾಜ್ಯದ 85 ತಾಲೂಕುಗಳಲ್ಲಿ ಶೇ.20ರಷ್ಟು ಮಳೆ ಕೊರತೆಯಾಗಿದೆ. ಈ ತಾಲೂಕುಗಳಲ್ಲಿ ಬರ ಘೋಷಣೆ ಸಂಬಂಧ ಚಿಂತನೆ ನಡೆಸಲಾಗುತ್ತಿದೆ. ಆದರೆ, ಕೇಂದ್ರದ “ಬರ ಮಾನದಂಡ” ಕಠಿಣವಾಗಿದ್ದು, ಇದನ್ನು ಬದಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಜಲಾಶಯಗಳಲ್ಲಿ ನೀರಿನ ಮಟ್ಟ ಸುಧಾರಣೆ: ಜೂನ್ ತಿಂಗಳಲ್ಲಿ ಮಳೆಯಾಗಿದ್ದ ಪರಿಣಾಮ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಶೇ.20 ರಷ್ಟು ಮಾತ್ರ ಇತ್ತು. ಆದರೆ, ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಜಲಾಶಯಗಳಲ್ಲಿನ ನೀರಿನ ಸಂಗ್ರಹ ಪ್ರಮಾಣ ಶೇ.40 ರಿಂದ ಶೇ.50 ಕ್ಕೆ ಏರಿಕೆಯಾಗಿದೆ ಎಂದರು.

ಜಿಲ್ಲಾಧಿಕಾರಿಗಳಿಗೆ ಹೈ-ಅಲರ್ಟ್ ಸೂಚನೆ: ಕಲಬುರಗಿ- ಬೀದರ್ ಜಿಲ್ಲೆಗಳಲ್ಲಿ ವಾಡಿಕೆಗಿಂತ ಈಗಾಗಲೇ ಅಧಿಕ ಮಳೆಯಾಗಿದೆ. ಅಲ್ಲದೆ, ಮುಂದಿನ ನಾಲ್ಕು ದಿನಗಳಲ್ಲಿ ಬೀದರ್, ಕಲಬುರಗಿ, ಯಾದಗಿರಿ ಬಿಜಾಪುರ ಭಾಗದಲ್ಲಿ ತೀವ್ರ ಮಳೆಯಾಗಲಿದೆ ಎಂಬ ಸೂಚನೆ ಇದೆ. ಬೆಳಗಾವಿ ಭಾಗದಲ್ಲೂ ಉತ್ತಮ ಮಳೆಯಾಗಲಿದೆ ಎಂದರು.

ಇದನ್ನೂ ಓದಿ: ಉಕ್ಕಿದ ಗಂಗಾವಳಿ ನದಿ: ಅಂಕೋಲಾದಲ್ಲಿ ಮನೆಗಳಿಗೆ ನುಗ್ಗುತ್ತಿರುವ ನೆರೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.